Homeಮುಖಪುಟಉತ್ತರ ರೈಲ್ವೆಗೆ 13 ಸಾವಿರ ಕೋಟಿ ರೂ., ದಕ್ಷಿಣಕ್ಕೆ ಕೇವಲ 59 ಕೋಟಿ ರೂ.: ಸದನದಲ್ಲಿ...

ಉತ್ತರ ರೈಲ್ವೆಗೆ 13 ಸಾವಿರ ಕೋಟಿ ರೂ., ದಕ್ಷಿಣಕ್ಕೆ ಕೇವಲ 59 ಕೋಟಿ ರೂ.: ಸದನದಲ್ಲಿ ಒಕ್ಕೂಟ ಸರ್ಕಾರದ ಅನ್ಯಾಯ ಬಿಚ್ಚಿಟ್ಟ ಸಂಸದೆ ಕನಿಮೋಳಿ

- Advertisement -
- Advertisement -

ತಮಿಳುನಾಡು ಸಂಸದೆ ಕನಿಮೋಳಿ ಅವರು ಒಕ್ಕೂಟ ಸರ್ಕಾರವು ದಕ್ಷಿಣ ಭಾರತಕ್ಕೆ ನೀಡುತ್ತಿರುವ ‘ಕಡಿಮೆ’ ಹಣ ಹಂಚಿಕೆ ಕುರಿತು ವ್ಯಂಗ್ಯವಾಡಿರುವ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ವೀಡಿಯೊದಲ್ಲಿ ಅವರು 2022 ರ ಬಜೆಟ್ ಮೇಲಿನ ಚರ್ಚೆಯ ಬಗ್ಗೆ ಮಾತನಾಡುತ್ತಾ, “ಉತ್ತರ ಭಾರತದ ರೈಲ್ವೆಗೆ 13,200 ಕೋಟಿ ರೂ.ಗಳನ್ನು ಬಜೆಟ್‌ನಲ್ಲಿ ನಿಗದಿಪಡಿಸಲಾಗಿದೆ, ಆದರೆ ದಕ್ಷಿಣಕ್ಕೆ 59 ಕೋಟಿ ರೂ ಮಾತ್ರ ನೀಡಲಾಗಿದೆ” ಎಂದು ಕಳವಳ ವ್ಯಕ್ತಪಡಿಸಿದ್ದಾರೆ.

ಕನಿಮೋಳಿ ಅವರು ದಕ್ಷಿಣ ಮತ್ತು ಉತ್ತರ ಭಾರತಕ್ಕೆ ಬಜೆಟ್ ಹಂಚಿಕೆಯಲ್ಲಿ ಮಾಡಿರುವ ವ್ಯತ್ಯಾಸವನ್ನು ಹೇಳುತ್ತಿದ್ದಂತೆ, ಉಳಿದ ಸಂಸದರು “ನಾಚಿಕೆ, ಅವಮಾನ” ಎಂದು ಕೂಗುವ ಮೂಲಕ ಅವರ ಮಾತುಗಳಿಗೆ ಧ್ವನಿ ಸೇರಿಸಿ ಒಕ್ಕೂಟ ಸರ್ಕಾರ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ದಕ್ಷಿಣ ಭಾಗಕ್ಕೆ ನೀಡಿದ ಮೊತ್ತ ಮತ್ತು ಅದಕ್ಕೆ ವಿರುದ್ಧವಾಗಿ ಉತ್ತರಕ್ಕೆ ನೀಡಿರುವ ಮೂಲಸೌಕರ್ಯ ಸೌಲಭ್ಯಗಳಿಗೆ ನೀಡಲಾದ ಮೊತ್ತದ ನಡುವೆ ಭಾರಿ ವ್ಯತ್ಯಾಸವಿದೆ.

ಇದನ್ನೂ ಓದಿ: “ಹಿಂದಿ ತೆರಿಯಾದು ಪೊಡಾ (ಹಿಂದಿ ಗೊತ್ತಿಲ್ಲ, ಹೋಗೋ)” ಟೀಶರ್ಟ್ ವೈರಲ್;‌ ತಯಾರಿಕರಿಗೆ ಬೆದರಿಕೆ!‌ 

“ಉತ್ತರ ರೈಲ್ವೆಗೆ ಏನು ನೀಡಲಾಗಿದೆ ಮತ್ತು ದಕ್ಷಿಣವನ್ನು ಹೇಗೆ ಪರಿಗಣಿಸಲಾಗುತ್ತಿದೆ ಎಂಬುದರ ನಡುವಿನ ಅಸಮಾನತೆ ಮತ್ತು ವ್ಯತ್ಯಾಸಗಳನ್ನು ಪರಿಶೀಲಿಸಲು ನಾನು ಸಚಿವರನ್ನು ಕೇಳುತ್ತೇನೆ” ಎಂದು ಕನಿಮೋಳಿ ನೇರವಾಗಿ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರನ್ನು ಉದ್ದೇಶಿಸಿ ಟೀಕಿಸಿದ್ದಾರೆ.

“ನೀವು ಭಾರತವನ್ನು ಒಂದು ರಾಷ್ಟ್ರ ಎಂದು ಹೇಳುತ್ತಲೇ ಇರುತ್ತೀರಿ. ರೈಲ್ವೇ ಕೂಡ ಒಂದು ರಾಷ್ಟ್ರ ಎಂಬುದನ್ನು ಅರ್ಥಮಾಡಿಕೊಳ್ಳಬೇಕು” ಎಂದು ಅವರು ಲೋಕಸಭೆಯಲ್ಲಿ ಮಾತನಾಡುತ್ತಾ ಹೇಳಿದ್ದಾರೆ. ಅವರ ಮಾತುಗಳು ಈಗ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ.

2022-23ನೇ ಸಾಲಿನ ಬಜೆಟ್ ಕೇವಲ ಮೂಲಸೌಕರ್ಯಗಳ ಮೇಲೆ ಕೇಂದ್ರೀಕರಿಸಿದೆ ಎಂದು ಹಲವರು ಟೀಕಿಸಿದ್ದಾರೆ. ಆದಾಗ್ಯೂ, ಮೂಲಸೌಕರ್ಯ ನಿಧಿಗಳನ್ನು ಸಮಾನ ರೀತಿಯಲ್ಲಿ ವಿತರಿಸಲಾಗುತ್ತಿಲ್ಲ ಎಂಬುದು ಗಮನಾರ್ಹ ಸಂಗತಿಯಾಗಿದೆ.

ಡಿಎಂಕೆ ಸಂಸದೆಯೂ ಆಗಿರುವ ಕನಿಮೋಳಿ ಅವರು, ರೈಲ್ವೇಯಲ್ಲಿ ಖಾಲಿ ಇರುವ ದೊಡ್ಡ ಹುದ್ದೆಗಳ ಬಗ್ಗೆ ಕಳವಳ ವ್ಯಕ್ತಪಡಿಸಿದ್ದು, ದಕ್ಷಿಣ ಭಾರತೀಯರಿಗೆ ಈ ಉದ್ಯೋಗಗಳು ಸಿಗುವುದಿಲ್ಲ ಎಂದು ಹೇಳಿದ್ದಾರೆ. “ಅವರನ್ನು ದೂರವಿಡುವ ಪ್ರಯತ್ನ ನಡೆಯುತ್ತಿದೆ ಎಂದು ತೋರುತ್ತದೆ” ಎಂದು ಅವರು ಹೇಳಿದ್ದಾರೆ.

ಬಜೆಟ್ ಅಧಿವೇಶನದ ದ್ವಿತೀಯಾರ್ಧದ ಎರಡನೇ ದಿನದಂದು ಲೋಕಸಭೆಯಲ್ಲಿ ರೈಲ್ವೆ ಸಚಿವಾಲಯದ ಅನುದಾನದ ಬೇಡಿಕೆಗಳ ಕುರಿತು ಚರ್ಚೆಗಳು ನಡೆದವು. ಸದನದ ಕಲಾಪವನ್ನು ರಾತ್ರಿ 11 ಗಂಟೆಯವರೆಗೆ ವಿಸ್ತರಿಸಲಾಯಿತು.

ಇದನ್ನೂ ಓದಿ: ಬಿಜೆಪಿ ಎಂದಿಗೂ ತಮಿಳು ಕೋಟೆಯನ್ನು ಭೇದಿಸಲು ಸಾಧ್ಯವಿಲ್ಲ: ಕನಿಮೋಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...