Homeಮುಖಪುಟಗೋಧ್ರೋತ್ತರ ಗಲಭೆ: 131 ಸಾಕ್ಷಿಗಳ ಭದ್ರತೆ ವಾಪಸ್

ಗೋಧ್ರೋತ್ತರ ಗಲಭೆ: 131 ಸಾಕ್ಷಿಗಳ ಭದ್ರತೆ ವಾಪಸ್

- Advertisement -
- Advertisement -

2002ರಲ್ಲಿ ಗುಜರಾತ್‌ನಲ್ಲಿ ನಡೆದಿದ್ದ ಗೋಧ್ರಾ ರೈಲು ದಹನ ಮತ್ತು ನಂತರದ ದಂಗೆ ಪ್ರಕರಣಗಳಲ್ಲಿನ ಎಲ್ಲಾ 131 ಸಾಕ್ಷಿಗಳಿಗೆ ನೀಡಿದ್ದ ಭದ್ರತೆಯನ್ನು ವಿಶೇಷ ತನಿಖಾ ತಂಡ (SIT) ಹಿಂತೆಗೆದುಕೊಂಡಿದೆ ಮತ್ತು ಸಾಕ್ಷಿಗಳಿಗೆ ಯಾವುದೇ ಬೆದರಿಕೆಗಳು ಸುದೀರ್ಘ ಅವಧಿಯಲ್ಲಿ ಬಂದಿಲ್ಲ ಎಂದು ಹೇಳಿಕೊಂಡಿದೆ.

ಸಾಕ್ಷಿಗಳ ಜೊತೆಗೆ ಸಂತ್ರಸ್ತರಿಗೆ ಕಾನೂನು ಹೋರಾಟದಲ್ಲಿ ಸಹಾಯ ಮಾಡಿದ ಇಬ್ಬರು ವಕೀಲರಾದ ಎಂ ಎಂ ತಿರ್ಮಿಜಿ ಮತ್ತು ಎಸ್ ಎಂ ವೋಹ್ರಾ  ಮತ್ತು ಪ್ರಕರಣದಲ್ಲಿ ತೀರ್ಪನ್ನು ನೀಡಿದ್ದ ನ್ಯಾಯಾದೀಶರ ತಂಡದಲ್ಲಿದ್ದ ಜಡ್ಜ್‌ ಜ್ಯೋತ್ಸ್ನಾ ಯಾಗ್ನಿಕ್‌ ಅವರ ಭದ್ರತೆಯನ್ನು ಕೂಡ ಹಿಂಪಡೆಯಲಾಗಿದೆ.

ಈ ಬಗ್ಗೆ ಎಸ್‌ಐಟಿ ಮಾಹಿತಿಯನ್ನು ನೀಡಿದ್ದು, ಬೆದರಿಕೆ ಬಗ್ಗೆ ಪರಿಶೀಲನೆಯ ನಂತರ ಡಿ.13ರಂದು ಭದ್ರತೆಯನ್ನು ಹಿಂಪಡೆಯಲಾಗಿದೆ. ಬಹುಪಾಲು ಸಾಕ್ಷಿಗಳಿಗೆ 2003ರಿಂದ ರಾಜ್ಯ ಸರ್ಕಾರದಿಂದ ರಕ್ಷಣೆ ನೀಡಲಾಗಿತ್ತು. ನ್ಯಾಯಾಲಯದ ಮುಂದೆ ಸಾಕ್ಷಿ ಹೇಳುವ ವಿಚಾರದಲ್ಲಿ ಯಾವುದೇ ಸಾಕ್ಷಿಗಳಿಗೆ ಬೆದರಿಕೆ ಅಥವಾ ಒತ್ತಡವನ್ನು ಹಾಕಲಾಗಿಲ್ಲ ಎಂದು ಎಸ್‌ಐಟಿ ಅಧಿಕಾರಿಗಳು ಕಂಡುಕೊಂಡ ಬಳಿಕ ಈ ನಿರ್ಧಾರಕ್ಕೆ ಬರಲಾಗಿದೆ ಎಂದು ಹೇಳಿದೆ.

ಸಾಕ್ಷಿಗಳಿಗೆ ಯಾವುದೇ ಬೆದರಿಕೆ ಹಾಕಲಾಗಿಲ್ಲ ಎಂದು ಖಚಿತಪಡಿಸಿದ ನಂತರ ನಾವು ಸಾಕ್ಷಿಗಳಿಂದ ಭದ್ರತೆಯನ್ನು ತೆಗೆದುಹಾಕಿದ್ದೇವೆ. ಅವರಲ್ಲಿ ಯಾರೂ ಬೆದರಿಕೆ ಅಥವಾ ಹಲ್ಲೆಯನ್ನು ಎದುರಿಸಿಲ್ಲ ಎಂದು ಎಸ್‌ಐಟಿ ತಂಡದ ಸದಸ್ಯ ಎ ಕೆ ಮಲ್ಹೋತ್ರಾ ಹೇಳಿದ್ದಾರೆ.

ಈ ಹಿಂದೆ ಆ.2021ರಲ್ಲಿ ಎಸ್‌ಐಟಿ 25 ಸಾಕ್ಷಿಗಳಿಗೆ ಯಾವುದೇ ಬೆದರಿಕೆ ಇಲ್ಲ ಎಂದು ಉಲ್ಲೇಖಿಸಿ ಅವರಿಗೆ ನೀಡಿದ್ದ ಭದ್ರತೆಯನ್ನು ಹಿಂತೆಗೆದುಕೊಂಡಿತ್ತು. ಇವರಿಗೆ ಸಿಐಎಸ್ಎಫ್ ಸಿಬ್ಬಂದಿ ಮತ್ತು ಸ್ಥಳೀಯ ಪೊಲೀಸರು ಭದ್ರತೆ ನೀಡುತ್ತಿದ್ದರು.

ಗೃಹ ಸಚಿವ ಹರ್ಷ ಸಾಂಘವಿ, ರಾಜ್ಯ ಪೊಲೀಸ್ ಮಹಾನಿರ್ದೇಶಕ ವಿಕಾಸ್ ಸಹಾಯ್ ಮತ್ತು ಎಸ್‌ಐಟಿಯ ಮಾತುಕತೆ ಬಳಿಕ ಸಾಕ್ಷಿಗಳಿಗೆ ರಕ್ಷಣೆಯನ್ನು ತೆಗೆದುಹಾಕಲು ಡಿ.13ರಂದು ಆದೇಶವನ್ನು ನೀಡಲಾಯಿತು. ಇದಲ್ಲದೆ ಹತ್ಯೆಗೀಡಾದ ಕಾಂಗ್ರೆಸ್ ಸಂಸದ ಅಹ್ಸಾನ್ ಜಾಫ್ರಿ ಅವರ ಪತ್ನಿ ಜಾಕಿಯಾ ಜಾಫ್ರಿ ಅವರ ಭದ್ರತೆಯನ್ನು ಕೂಡ ಸಿಐಎಸ್‌ಎಫ್‌ನಿಂದ ಸ್ಥಳೀಯ ಪೊಲೀಸರಿಗೆ ಇಳಿಸಲಾಗಿದೆ.

ಸಾಕ್ಷಿಗಳ ರಕ್ಷಣೆಗಾಗಿ ಒಟ್ಟು 156 ಪೊಲೀಸರು ಮತ್ತು 98 ಸಿಐಎಸ್ಎಫ್ ಸಿಬ್ಬಂದಿಗಳನ್ನು ನೇಮಿಸಲಾಗಿತ್ತು. ನರೋಡಾ ಪಾಟಿಯಾ ಹತ್ಯಾಕಾಂಡದ ತೀರ್ಪು ನೀಡಿ 12 ವರ್ಷಗಳು ಕಳೆದಿವೆ ಎಂಬ ಕಾರಣಕ್ಕಾಗಿ ನ್ಯಾಯಾಧೀಶೆ ಯಾಗ್ನಿಕ್ ಅವರ ಭದ್ರತೆಯನ್ನು ತೆಗೆದುಹಾಕಲಾಗಿದೆ ಎಂದು ಎಸ್‌ಐಟಿ ಹೇಳಿದೆ. ಬಿಜೆಪಿಯ ಮಾಜಿ ಸಚಿವೆ ಮಾಯಾ ಕೊಡ್ನಾನಿ ಮತ್ತು ವಿಎಚ್‌ಪಿ ನಾಯಕ ಬಾಬು ಬಜರಂಗಿ ಸೇರಿದಂತೆ 32 ಆರೋಪಿಗಳನ್ನು ಅವರು ತಪ್ಪಿತಸ್ಥರೆಂದು ಘೋಷಿಸಿದ್ದರು. 2018ರಲ್ಲಿ ಕೊಡ್ನಾನಿ ಸೇರಿದಂತೆ 18 ಮಂದಿಯನ್ನು ಹೈಕೋರ್ಟ್ ಖುಲಾಸೆಗೊಳಿಸಿತ್ತು. ಗಲಭೆ ಪ್ರಕರಣಗಳ ತೀರ್ಪು ನೀಡಿದ್ದ 9 ನ್ಯಾಯಾಧೀಶರ ಪೈಕಿ ರಕ್ಷಣೆ ಕೋರಿದ ನ್ಯಾಯಾಧೀಶರಲ್ಲಿ ಯಾಗ್ನಿಕ್ ಒಬ್ಬರೇ ಆಗಿದ್ದರು ಎಂದು ಎಸ್‌ಐಟಿ ಅಧಿಕಾರಿಗಳು ತಿಳಿಸಿದ್ದಾರೆ. ತನಗೆ ಹಲವಾರು ಬೆದರಿಕೆ ಪತ್ರಗಳು ಮತ್ತು ಫೋನ್ ಕರೆಗಳು ಬಂದಿವೆ ಎಂದು ಯಾಗ್ನಿಕ್ ರಕ್ಷಣೆ ಕೋರಿದ್ದರು.

ಡಿ.13ರಂದು ರಕ್ಷಣೆಯನ್ನು ತೆಗೆದುಹಾಕುವ ಆದೇಶವನ್ನು ಹೊರಡಿಸುವವರೆಗೂ ಸಿಐಎಸ್ಎಫ್ ಸಿಬ್ಬಂದಿ ಗಲಭೆ ಪೀಡಿತ ಪ್ರದೇಶಗಳಲ್ಲಿ ಗಸ್ತು ತಿರುಗುತ್ತಿದ್ದರು. ಭದ್ರತಾ ಶಾಶ್ವತವಾಗಿ ಮುಂದುವರಿಸಲು ಸಾಧ್ಯವಿಲ್ಲ. ಎಲ್ಲಾ 9 ಪ್ರಮುಖ ಗಲಭೆ ಪ್ರಕರಣಗಳ (ನರೋಡಾ ಪಾಟಿಯಾ, ನರೋಡಾ ಗಾಮ್, ಗುಲ್ಬರ್ಗ್ ಸೊಸೈಟಿ, ದೀಪ್ದಾ ದರ್ವಾಜಾ, ಸರ್ದಾರ್‌ಪುರ) ವಿಚಾರಣೆಗಳು ಈಗಾಗಲೇ ಮುಗಿದಿವೆ. ಕೆಲವು ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟ್‌ನಲ್ಲಿ ಬಾಕಿ ಇವೆ. ಈ ಬಗ್ಗೆ ಯಾವುದೇ ಸಾಕ್ಷಿಗಳು ಬೆದರಿಕೆ ಅಥವಾ ಹಲ್ಲೆಯ ಬಗ್ಗೆ ದೂರು ನೀಡಿಲ್ಲ ಎಂದು ಎಸ್‌ಐಟಿ ಅಧಿಕಾರಿಗಳು ಹೇಳಿದ್ದಾರೆ.

2002ರ ಫೆ.27ರಂದು ಅಯೋಧ್ಯೆಯಿಂದ ಕರಸೇವಕರು ಬರುವಾಗ ಸಬರಮತಿ ಎಕ್ಸ್‌ಪ್ರೆಸ್ ರೈಲು ಗುಜರಾತ್‌ನ ಗೋಧ್ರಾ ರೈಲ್ವೆ ನಿಲ್ದಾಣದ ಬಳಿ ನಿಲ್ಲಿಸಿತ್ತು. ಆಗ ರೈಲಿನ ನಾಲ್ಕು ಬೋಗಿಗಳಿಗೆ ಬೆಂಕಿ ತಗುಲಿ 59 ಮಂದಿ ಮೃತಪಟ್ಟಿದ್ದರು. ಅವರಲ್ಲಿ 29 ಮಂದಿ ಪುರುಷರು, 22 ಮಂದಿ ಮಹಿಳೆಯರು ಹಾಗೂ 8 ಮಕ್ಕಳು ಸೇರಿದ್ದರು.

ಗೋಧ್ರಾ ರೈಲು ದರುಂತ ಘಟನೆಯನ್ನು ವಿಶ್ವ ಹಿಂದೂ ಪರಿಷತ್ ಮತ್ತಿತರ ಬಲಪಂಥೀಯ ಸಂಘಟನೆಗಳು ಬಲವಾಗಿ ಖಂಡಿಸಿದ್ದವು. ಗುಜರಾತ್ ಬಂದ್‌ಗೆ ಕರೆಕೊಡಲಾಯಿತು. ಫೆ.28ರಂದು ಗುಜರಾತ್‌ನಾದ್ಯಂತ ಕೋಮುಗಲಭೆಗಳು ನಡೆದವು. ಅಂದು ಸಂಜೆ 27 ನಗರ ಮತ್ತು ಪಟ್ಟಣಗಳಲ್ಲಿ ಕರ್ಫ್ಯೂ ಹಾಕಲಾಯಿತು. ರಾಜ್ಯ ಸರಕಾರ ಮತ್ತು ಪೊಲೀಸ್ ಇಲಾಖೆ ಈ ಗಲಭೆ ತಡೆಯಲು ಮನಃಪೂರ್ವಕವಾಗಿ ಕೆಲಸ ಮಾಡಲಿಲ್ಲ ಎಂಬ ಆರೋಪ ಕೇಳಿ ಬಂದಿತ್ತು. ರಾಜ್ಯ ಸರಕಾರದ ಮುಂದಾಳುಗಳು ನೀಡಿದರೆನ್ನಲಾದ ಪ್ರಚೋದನಕಾರಿ ಹೇಳಿಕೆಗಳು ಗಲಭೆಕೋರರಿಗೆ ಇನ್ನಷ್ಟು ಪ್ರಚೋದನೆ ನೀಡಿದವು. ಮುಸ್ಲಿಮ್ ಸಮುದಾಯದವರನ್ನು ಗುರಿ ಮಾಡಿ ಹಲವೆಡೆ ಭೀಕರ ಹತ್ಯಾಕಾಂಡವೇ ನಡೆದಿದೆ. ಆ ಬಳಿಕದ ಗಲಭೆಗಳಲ್ಲಿ 1,044 ಮಂದಿ ಸಾವನ್ನಪ್ಪಿರುವುದು ಅಧಿಕೃತವಾಗಿ ದಾಖಲಾಗಿರುವ ಮಾಹಿತಿ. 2,500 ಜನರು ಗಾಯಗೊಂಡಿದ್ದಾರೆ. ಇನ್ನೂರಕ್ಕೂ ಹೆಚ್ಚು ಮಂದಿ ನಾಪತ್ತೆಯಾಗಿದ್ದರು.

ಅಹ್ಮದಾಬಾದ್‌ನ ಗುಲ್‌ಬರ್ಗ್ ಸೊಸೈಟಿ ಹತ್ಯಾಕಾಂಡಾದಲ್ಲಿ ಫೆ. 28ರಂದು 69 ಮಂದಿ ಹತ್ಯೆಯಾಗಿದ್ದರು. ಅದರಲ್ಲಿ ಕಾಂಗ್ರೆಸ್ ಮುಖಂಡ ಮತ್ತು ಮಾಜಿ ಸಂಸದರಾಗಿದ್ದ ಎಹ್ಸಾನ್ ಜಫ್ರಿ ಕೂಡ ಸೇರಿದ್ದರು. ಗುಲ್ಬರ್ಗ್ ಸೊಸೈಟಿ ಹತ್ಯಾಕಾಂಡದಷ್ಟೇ ಭೀಕರವಾದ ಹಲವು ಹತ್ಯಾಕಾಂಡಗಳು ಗುಜರಾತ್‌ನ ವಿವಿಧೆಡೆ ಸಂಭವಿಸಿವೆ. ಬೆಸ್ಟ್ ಬೇಕರಿ, ಬಿಲ್ಕಿಸ್ ಬಾನೋ, ಅವಧೂತ್‌ನಗರ್, ದನಿಲಿಮಡಾ, ಎರಾಲ್, ಪವಗಡ್ ಧಿಕ್ವಾ, ದಿಪ್ಡ ದರವಾಜ, ನರೋಡ ಪಾಟಿಯಾ ಹತ್ಯಾಕಾಂಡಗಳು ಘೋರ ದುರಂತದ ಘಟನೆಗಳಾಗಿವೆ.

ಇದನ್ನು ಓದಿ: ಚುನಾವಣಾ ಆಯುಕ್ತರ ನೇಮಕಾತಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಿರಿಯಾದ ಐಸಿಸ್ ಅಡಗುತಾಣಗಳ ಮೇಲೆ ಅಮೆರಿಕ ವಾಯುದಾಳಿ

ಕಳೆದ ವಾರ ಅಮೆರಿಕದ ಸಿಬ್ಬಂದಿ ಮೇಲೆ ನಡೆದ ಮಾರಕ ದಾಳಿಗೆ ಪ್ರತೀಕಾರವಾಗಿ ಅಮೆರಿಕವು ಮಧ್ಯ ಸಿರಿಯಾದಾದ್ಯಂತ ಡಜನ್‌ಗಟ್ಟಲೆ ಇಸ್ಲಾಮಿಕ್ ಸ್ಟೇಟ್ (ಐಎಸ್) ನೆಲೆಗಳ ಮೇಲೆ ವಾಯುದಾಳಿ ನಡೆಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 'ಆಪರೇಷನ್ ಹಾಕೈ...

16 ಲಕ್ಷಕ್ಕೂ ಹೆಚ್ಚು ಕಾರ್ಮಿಕರನ್ನು ‘ಮನರೇಗಾ’ ಪಟ್ಟಿಯಿಂದ ಕೈಬಿಟ್ಟ ಕೇಂದ್ರ ಸರ್ಕಾರ: ವರದಿ

ಯುಪಿಎ ಸರ್ಕಾರದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (ಮನರೇಗಾ) ಹೆಸರನ್ನು ಬದಲಿಸಲು ಪ್ರಯತ್ನಿಸುವ 'ವಿಕ್ಷಿತ್ ಭಾರತ್ - ಗ್ಯಾರಂಟಿ ಫಾರ್ ರೋಜ್‌ಗಾರ್ ಮತ್ತು ಅಜೀವಿಕಾ ಮಿಷನ್ (ಗ್ರಾಮೀಣ) (ವಿಬಿ–ಜಿ...

ಅಮೆರಿಕದ ಬಹು ನಿರೀಕ್ಷಿತ ‘ಎಪ್‌ಸ್ಟೀನ್ ಫೈಲ್ಸ್’ ಬಿಡುಗಡೆ : ಬಿಲ್ ಕ್ಲಿಂಟನ್, ಮೈಕಲ್ ಜಾಕ್ಸನ್ ಸೇರಿದಂತೆ ಪ್ರಮುಖರ ಫೋಟೋಗಳು ಬಹಿರಂಗ

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ(ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಕೆಲ ದಾಖಲೆಗಳನ್ನು...

ಕೋಮು ಸಾಮರಸ್ಯಕ್ಕಾಗಿ ಭಾರತದ ಮುಸ್ಲಿಮರು ಸಾಮೂಹಿಕ ಪ್ರಯತ್ನಗಳೊಂದಿಗೆ ಮುಂದೆ ಬರಬೇಕು: ಜಮಾಅತ್ ಅಧ್ಯಕ್ಷ

'ಭಾರತದ ಮುಸ್ಲಿಮರು, ದೇಶದಲ್ಲಿ ಕೋಮು ಸಾಮರಸ್ಯಕ್ಕಾಗಿ ವೈಯಕ್ತಿಕ ಮತ್ತು ಸಾಮೂಹಿಕ ಪ್ರಯತ್ನಗಳೊಂದಿಗೆ ಮುಂದೆ ಬರಬೇಕು' ಎಂದು ಜಮಾಅತೆ-ಇ-ಇಸ್ಲಾಮಿ ಹಿಂದ್ ಅಧ್ಯಕ್ಷ ಸೈಯದ್ ಸಾದತುಲ್ಲಾ ಹುಸೈನಿ ಅವರು ಒತ್ತಾಯಿಸಿದರು. ಕೋಮು ಸಾಮರಸ್ಯ ಇಲಾಖೆಯು ಆಯೋಜಿಸಿದ್ದ 'ಅಖಿಲ...

3 ವರ್ಷಗಳಲ್ಲಿ ರಷ್ಯಾ ಸೇನೆ ಸೇರಿದ 200 ಕ್ಕೂ ಹೆಚ್ಚು ಭಾರತೀಯರು; 26 ಮಂದಿ ಸಾವು: ವಿದೇಶಾಂಗ ಸಚಿವಾಲಯ

2022 ರಿಂದ ಕನಿಷ್ಠ 202 ಭಾರತೀಯ ಪ್ರಜೆಗಳು ರಷ್ಯಾದ ಸಶಸ್ತ್ರ ಪಡೆಗಳಿಗೆ ಸೇರಿದ್ದಾರೆ ಎಂದು ವರದಿಯಾಗಿದೆ. ಇದರಲ್ಲಿ 26 ಮಂದಿ ಸಾವನ್ನಪ್ಪಿದ್ದು, ಇಬ್ಬರನ್ನು ರಷ್ಯಾದಲ್ಲಿ ಅಂತ್ಯಕ್ರಿಯೆ ಮಾಡಲಾಗಿದೆ ಎಂದು ವಿದೇಶಾಂಗ ಸಚಿವಾಲಯ (ಎಂಇಎ)...

ಎಸ್‌ಐಆರ್‌ ಬಳಿಕ ಕರಡು ಮತದಾರರ ಪಟ್ಟಿ ಪ್ರಕಟ : ತಮಿಳುನಾಡಿನಲ್ಲಿ 97 ಲಕ್ಷ, ಗುಜರಾತ್‌ನಲ್ಲಿ 73 ಲಕ್ಷ ಹೆಸರು ಡಿಲೀಟ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಬಳಿಕ ತಮಿಳುನಾಡು ಮತ್ತು ಗುಜರಾತ್‌ನ ಕರಡು ಮತದಾರರ ಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಪ್ರಕಟಿಸಿದ್ದು, ಕ್ರಮವಾಗಿ 97.3 ಮತ್ತು 73.7 ಲಕ್ಷ ಮತದಾರರ...

ಅಸ್ಸಾಂ | ರಾಜಧಾನಿ ಎಕ್ಸ್ ಪ್ರೆಸ್ ರೈಲು ಢಿಕ್ಕಿ : 8 ಆನೆಗಳು ಸಾವು

ಶನಿವಾರ (ಡಿಸೆಂಬರ್ 20, 2025) ಬೆಳಗಿನ ಜಾವ ಅಸ್ಸಾಂನ ಹೊಜೈ ಜಿಲ್ಲೆಯಲ್ಲಿ ಸಾಯಿರಂಗ್-ನವದೆಹಲಿ ರಾಜಧಾನಿ ಎಕ್ಸ್‌ಪ್ರೆಸ್‌ ರೈಲು ಡಿಕ್ಕಿ ಹೊಡೆದ ಪರಿಣಾಮ ಎಂಟು ಆನೆಗಳು ಸಾವನ್ನಪ್ಪಿದ್ದು, ಒಂದು ಗಾಯಗೊಂಡಿದೆ ಎಂದು ವರದಿಯಾಗಿದೆ. ಘಟನೆಯಲ್ಲಿ ಐದು...

ಮಲಯಾಳಂ ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಶ್ರೀನಿವಾಸನ್ ನಿಧನ

ಮಲಯಾಳಂ ಚಿತ್ರರಂಗದ ಹಿರಿಯ ನಟ, ಚಿತ್ರಕಥೆಗಾರ, ನಿರ್ದೇಶಕ ಹಾಗೂ ನಿರ್ಮಾಪಕ ಶ್ರೀನಿವಾಸನ್ ಶನಿವಾರ (ಡಿ.20) ನಿಧನರಾದರು. ಅವರಿಗೆ 69 ವರ್ಷ ವಯಸ್ಸಾಗಿತ್ತು. ದೀರ್ಘ ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಶ್ರೀನಿವಾಸನ್ ಅವರು, ಚಿಕಿತ್ಸೆ...

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...