Homeಮುಖಪುಟಗೋಧ್ರೋತ್ತರ ಗಲಭೆ: 131 ಸಾಕ್ಷಿಗಳ ಭದ್ರತೆ ವಾಪಸ್

ಗೋಧ್ರೋತ್ತರ ಗಲಭೆ: 131 ಸಾಕ್ಷಿಗಳ ಭದ್ರತೆ ವಾಪಸ್

- Advertisement -
- Advertisement -

2002ರಲ್ಲಿ ಗುಜರಾತ್‌ನಲ್ಲಿ ನಡೆದಿದ್ದ ಗೋಧ್ರಾ ರೈಲು ದಹನ ಮತ್ತು ನಂತರದ ದಂಗೆ ಪ್ರಕರಣಗಳಲ್ಲಿನ ಎಲ್ಲಾ 131 ಸಾಕ್ಷಿಗಳಿಗೆ ನೀಡಿದ್ದ ಭದ್ರತೆಯನ್ನು ವಿಶೇಷ ತನಿಖಾ ತಂಡ (SIT) ಹಿಂತೆಗೆದುಕೊಂಡಿದೆ ಮತ್ತು ಸಾಕ್ಷಿಗಳಿಗೆ ಯಾವುದೇ ಬೆದರಿಕೆಗಳು ಸುದೀರ್ಘ ಅವಧಿಯಲ್ಲಿ ಬಂದಿಲ್ಲ ಎಂದು ಹೇಳಿಕೊಂಡಿದೆ.

ಸಾಕ್ಷಿಗಳ ಜೊತೆಗೆ ಸಂತ್ರಸ್ತರಿಗೆ ಕಾನೂನು ಹೋರಾಟದಲ್ಲಿ ಸಹಾಯ ಮಾಡಿದ ಇಬ್ಬರು ವಕೀಲರಾದ ಎಂ ಎಂ ತಿರ್ಮಿಜಿ ಮತ್ತು ಎಸ್ ಎಂ ವೋಹ್ರಾ  ಮತ್ತು ಪ್ರಕರಣದಲ್ಲಿ ತೀರ್ಪನ್ನು ನೀಡಿದ್ದ ನ್ಯಾಯಾದೀಶರ ತಂಡದಲ್ಲಿದ್ದ ಜಡ್ಜ್‌ ಜ್ಯೋತ್ಸ್ನಾ ಯಾಗ್ನಿಕ್‌ ಅವರ ಭದ್ರತೆಯನ್ನು ಕೂಡ ಹಿಂಪಡೆಯಲಾಗಿದೆ.

ಈ ಬಗ್ಗೆ ಎಸ್‌ಐಟಿ ಮಾಹಿತಿಯನ್ನು ನೀಡಿದ್ದು, ಬೆದರಿಕೆ ಬಗ್ಗೆ ಪರಿಶೀಲನೆಯ ನಂತರ ಡಿ.13ರಂದು ಭದ್ರತೆಯನ್ನು ಹಿಂಪಡೆಯಲಾಗಿದೆ. ಬಹುಪಾಲು ಸಾಕ್ಷಿಗಳಿಗೆ 2003ರಿಂದ ರಾಜ್ಯ ಸರ್ಕಾರದಿಂದ ರಕ್ಷಣೆ ನೀಡಲಾಗಿತ್ತು. ನ್ಯಾಯಾಲಯದ ಮುಂದೆ ಸಾಕ್ಷಿ ಹೇಳುವ ವಿಚಾರದಲ್ಲಿ ಯಾವುದೇ ಸಾಕ್ಷಿಗಳಿಗೆ ಬೆದರಿಕೆ ಅಥವಾ ಒತ್ತಡವನ್ನು ಹಾಕಲಾಗಿಲ್ಲ ಎಂದು ಎಸ್‌ಐಟಿ ಅಧಿಕಾರಿಗಳು ಕಂಡುಕೊಂಡ ಬಳಿಕ ಈ ನಿರ್ಧಾರಕ್ಕೆ ಬರಲಾಗಿದೆ ಎಂದು ಹೇಳಿದೆ.

ಸಾಕ್ಷಿಗಳಿಗೆ ಯಾವುದೇ ಬೆದರಿಕೆ ಹಾಕಲಾಗಿಲ್ಲ ಎಂದು ಖಚಿತಪಡಿಸಿದ ನಂತರ ನಾವು ಸಾಕ್ಷಿಗಳಿಂದ ಭದ್ರತೆಯನ್ನು ತೆಗೆದುಹಾಕಿದ್ದೇವೆ. ಅವರಲ್ಲಿ ಯಾರೂ ಬೆದರಿಕೆ ಅಥವಾ ಹಲ್ಲೆಯನ್ನು ಎದುರಿಸಿಲ್ಲ ಎಂದು ಎಸ್‌ಐಟಿ ತಂಡದ ಸದಸ್ಯ ಎ ಕೆ ಮಲ್ಹೋತ್ರಾ ಹೇಳಿದ್ದಾರೆ.

ಈ ಹಿಂದೆ ಆ.2021ರಲ್ಲಿ ಎಸ್‌ಐಟಿ 25 ಸಾಕ್ಷಿಗಳಿಗೆ ಯಾವುದೇ ಬೆದರಿಕೆ ಇಲ್ಲ ಎಂದು ಉಲ್ಲೇಖಿಸಿ ಅವರಿಗೆ ನೀಡಿದ್ದ ಭದ್ರತೆಯನ್ನು ಹಿಂತೆಗೆದುಕೊಂಡಿತ್ತು. ಇವರಿಗೆ ಸಿಐಎಸ್ಎಫ್ ಸಿಬ್ಬಂದಿ ಮತ್ತು ಸ್ಥಳೀಯ ಪೊಲೀಸರು ಭದ್ರತೆ ನೀಡುತ್ತಿದ್ದರು.

ಗೃಹ ಸಚಿವ ಹರ್ಷ ಸಾಂಘವಿ, ರಾಜ್ಯ ಪೊಲೀಸ್ ಮಹಾನಿರ್ದೇಶಕ ವಿಕಾಸ್ ಸಹಾಯ್ ಮತ್ತು ಎಸ್‌ಐಟಿಯ ಮಾತುಕತೆ ಬಳಿಕ ಸಾಕ್ಷಿಗಳಿಗೆ ರಕ್ಷಣೆಯನ್ನು ತೆಗೆದುಹಾಕಲು ಡಿ.13ರಂದು ಆದೇಶವನ್ನು ನೀಡಲಾಯಿತು. ಇದಲ್ಲದೆ ಹತ್ಯೆಗೀಡಾದ ಕಾಂಗ್ರೆಸ್ ಸಂಸದ ಅಹ್ಸಾನ್ ಜಾಫ್ರಿ ಅವರ ಪತ್ನಿ ಜಾಕಿಯಾ ಜಾಫ್ರಿ ಅವರ ಭದ್ರತೆಯನ್ನು ಕೂಡ ಸಿಐಎಸ್‌ಎಫ್‌ನಿಂದ ಸ್ಥಳೀಯ ಪೊಲೀಸರಿಗೆ ಇಳಿಸಲಾಗಿದೆ.

ಸಾಕ್ಷಿಗಳ ರಕ್ಷಣೆಗಾಗಿ ಒಟ್ಟು 156 ಪೊಲೀಸರು ಮತ್ತು 98 ಸಿಐಎಸ್ಎಫ್ ಸಿಬ್ಬಂದಿಗಳನ್ನು ನೇಮಿಸಲಾಗಿತ್ತು. ನರೋಡಾ ಪಾಟಿಯಾ ಹತ್ಯಾಕಾಂಡದ ತೀರ್ಪು ನೀಡಿ 12 ವರ್ಷಗಳು ಕಳೆದಿವೆ ಎಂಬ ಕಾರಣಕ್ಕಾಗಿ ನ್ಯಾಯಾಧೀಶೆ ಯಾಗ್ನಿಕ್ ಅವರ ಭದ್ರತೆಯನ್ನು ತೆಗೆದುಹಾಕಲಾಗಿದೆ ಎಂದು ಎಸ್‌ಐಟಿ ಹೇಳಿದೆ. ಬಿಜೆಪಿಯ ಮಾಜಿ ಸಚಿವೆ ಮಾಯಾ ಕೊಡ್ನಾನಿ ಮತ್ತು ವಿಎಚ್‌ಪಿ ನಾಯಕ ಬಾಬು ಬಜರಂಗಿ ಸೇರಿದಂತೆ 32 ಆರೋಪಿಗಳನ್ನು ಅವರು ತಪ್ಪಿತಸ್ಥರೆಂದು ಘೋಷಿಸಿದ್ದರು. 2018ರಲ್ಲಿ ಕೊಡ್ನಾನಿ ಸೇರಿದಂತೆ 18 ಮಂದಿಯನ್ನು ಹೈಕೋರ್ಟ್ ಖುಲಾಸೆಗೊಳಿಸಿತ್ತು. ಗಲಭೆ ಪ್ರಕರಣಗಳ ತೀರ್ಪು ನೀಡಿದ್ದ 9 ನ್ಯಾಯಾಧೀಶರ ಪೈಕಿ ರಕ್ಷಣೆ ಕೋರಿದ ನ್ಯಾಯಾಧೀಶರಲ್ಲಿ ಯಾಗ್ನಿಕ್ ಒಬ್ಬರೇ ಆಗಿದ್ದರು ಎಂದು ಎಸ್‌ಐಟಿ ಅಧಿಕಾರಿಗಳು ತಿಳಿಸಿದ್ದಾರೆ. ತನಗೆ ಹಲವಾರು ಬೆದರಿಕೆ ಪತ್ರಗಳು ಮತ್ತು ಫೋನ್ ಕರೆಗಳು ಬಂದಿವೆ ಎಂದು ಯಾಗ್ನಿಕ್ ರಕ್ಷಣೆ ಕೋರಿದ್ದರು.

ಡಿ.13ರಂದು ರಕ್ಷಣೆಯನ್ನು ತೆಗೆದುಹಾಕುವ ಆದೇಶವನ್ನು ಹೊರಡಿಸುವವರೆಗೂ ಸಿಐಎಸ್ಎಫ್ ಸಿಬ್ಬಂದಿ ಗಲಭೆ ಪೀಡಿತ ಪ್ರದೇಶಗಳಲ್ಲಿ ಗಸ್ತು ತಿರುಗುತ್ತಿದ್ದರು. ಭದ್ರತಾ ಶಾಶ್ವತವಾಗಿ ಮುಂದುವರಿಸಲು ಸಾಧ್ಯವಿಲ್ಲ. ಎಲ್ಲಾ 9 ಪ್ರಮುಖ ಗಲಭೆ ಪ್ರಕರಣಗಳ (ನರೋಡಾ ಪಾಟಿಯಾ, ನರೋಡಾ ಗಾಮ್, ಗುಲ್ಬರ್ಗ್ ಸೊಸೈಟಿ, ದೀಪ್ದಾ ದರ್ವಾಜಾ, ಸರ್ದಾರ್‌ಪುರ) ವಿಚಾರಣೆಗಳು ಈಗಾಗಲೇ ಮುಗಿದಿವೆ. ಕೆಲವು ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟ್‌ನಲ್ಲಿ ಬಾಕಿ ಇವೆ. ಈ ಬಗ್ಗೆ ಯಾವುದೇ ಸಾಕ್ಷಿಗಳು ಬೆದರಿಕೆ ಅಥವಾ ಹಲ್ಲೆಯ ಬಗ್ಗೆ ದೂರು ನೀಡಿಲ್ಲ ಎಂದು ಎಸ್‌ಐಟಿ ಅಧಿಕಾರಿಗಳು ಹೇಳಿದ್ದಾರೆ.

2002ರ ಫೆ.27ರಂದು ಅಯೋಧ್ಯೆಯಿಂದ ಕರಸೇವಕರು ಬರುವಾಗ ಸಬರಮತಿ ಎಕ್ಸ್‌ಪ್ರೆಸ್ ರೈಲು ಗುಜರಾತ್‌ನ ಗೋಧ್ರಾ ರೈಲ್ವೆ ನಿಲ್ದಾಣದ ಬಳಿ ನಿಲ್ಲಿಸಿತ್ತು. ಆಗ ರೈಲಿನ ನಾಲ್ಕು ಬೋಗಿಗಳಿಗೆ ಬೆಂಕಿ ತಗುಲಿ 59 ಮಂದಿ ಮೃತಪಟ್ಟಿದ್ದರು. ಅವರಲ್ಲಿ 29 ಮಂದಿ ಪುರುಷರು, 22 ಮಂದಿ ಮಹಿಳೆಯರು ಹಾಗೂ 8 ಮಕ್ಕಳು ಸೇರಿದ್ದರು.

ಗೋಧ್ರಾ ರೈಲು ದರುಂತ ಘಟನೆಯನ್ನು ವಿಶ್ವ ಹಿಂದೂ ಪರಿಷತ್ ಮತ್ತಿತರ ಬಲಪಂಥೀಯ ಸಂಘಟನೆಗಳು ಬಲವಾಗಿ ಖಂಡಿಸಿದ್ದವು. ಗುಜರಾತ್ ಬಂದ್‌ಗೆ ಕರೆಕೊಡಲಾಯಿತು. ಫೆ.28ರಂದು ಗುಜರಾತ್‌ನಾದ್ಯಂತ ಕೋಮುಗಲಭೆಗಳು ನಡೆದವು. ಅಂದು ಸಂಜೆ 27 ನಗರ ಮತ್ತು ಪಟ್ಟಣಗಳಲ್ಲಿ ಕರ್ಫ್ಯೂ ಹಾಕಲಾಯಿತು. ರಾಜ್ಯ ಸರಕಾರ ಮತ್ತು ಪೊಲೀಸ್ ಇಲಾಖೆ ಈ ಗಲಭೆ ತಡೆಯಲು ಮನಃಪೂರ್ವಕವಾಗಿ ಕೆಲಸ ಮಾಡಲಿಲ್ಲ ಎಂಬ ಆರೋಪ ಕೇಳಿ ಬಂದಿತ್ತು. ರಾಜ್ಯ ಸರಕಾರದ ಮುಂದಾಳುಗಳು ನೀಡಿದರೆನ್ನಲಾದ ಪ್ರಚೋದನಕಾರಿ ಹೇಳಿಕೆಗಳು ಗಲಭೆಕೋರರಿಗೆ ಇನ್ನಷ್ಟು ಪ್ರಚೋದನೆ ನೀಡಿದವು. ಮುಸ್ಲಿಮ್ ಸಮುದಾಯದವರನ್ನು ಗುರಿ ಮಾಡಿ ಹಲವೆಡೆ ಭೀಕರ ಹತ್ಯಾಕಾಂಡವೇ ನಡೆದಿದೆ. ಆ ಬಳಿಕದ ಗಲಭೆಗಳಲ್ಲಿ 1,044 ಮಂದಿ ಸಾವನ್ನಪ್ಪಿರುವುದು ಅಧಿಕೃತವಾಗಿ ದಾಖಲಾಗಿರುವ ಮಾಹಿತಿ. 2,500 ಜನರು ಗಾಯಗೊಂಡಿದ್ದಾರೆ. ಇನ್ನೂರಕ್ಕೂ ಹೆಚ್ಚು ಮಂದಿ ನಾಪತ್ತೆಯಾಗಿದ್ದರು.

ಅಹ್ಮದಾಬಾದ್‌ನ ಗುಲ್‌ಬರ್ಗ್ ಸೊಸೈಟಿ ಹತ್ಯಾಕಾಂಡಾದಲ್ಲಿ ಫೆ. 28ರಂದು 69 ಮಂದಿ ಹತ್ಯೆಯಾಗಿದ್ದರು. ಅದರಲ್ಲಿ ಕಾಂಗ್ರೆಸ್ ಮುಖಂಡ ಮತ್ತು ಮಾಜಿ ಸಂಸದರಾಗಿದ್ದ ಎಹ್ಸಾನ್ ಜಫ್ರಿ ಕೂಡ ಸೇರಿದ್ದರು. ಗುಲ್ಬರ್ಗ್ ಸೊಸೈಟಿ ಹತ್ಯಾಕಾಂಡದಷ್ಟೇ ಭೀಕರವಾದ ಹಲವು ಹತ್ಯಾಕಾಂಡಗಳು ಗುಜರಾತ್‌ನ ವಿವಿಧೆಡೆ ಸಂಭವಿಸಿವೆ. ಬೆಸ್ಟ್ ಬೇಕರಿ, ಬಿಲ್ಕಿಸ್ ಬಾನೋ, ಅವಧೂತ್‌ನಗರ್, ದನಿಲಿಮಡಾ, ಎರಾಲ್, ಪವಗಡ್ ಧಿಕ್ವಾ, ದಿಪ್ಡ ದರವಾಜ, ನರೋಡ ಪಾಟಿಯಾ ಹತ್ಯಾಕಾಂಡಗಳು ಘೋರ ದುರಂತದ ಘಟನೆಗಳಾಗಿವೆ.

ಇದನ್ನು ಓದಿ: ಚುನಾವಣಾ ಆಯುಕ್ತರ ನೇಮಕಾತಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆಪರೇಷನ್ ಡೆಮಾಲಿಶ್‌ಮೆಂಟ್ ಅಡಿಯಲ್ಲಿ 200ಕ್ಕೂ ಹೆಚ್ಚು ನಕ್ಸಲ್ ಸ್ಮಾರಕಗಳನ್ನು ನೆಲಸಮಗೊಳಿಸಿದ ಭದ್ರತಾ ಪಡೆಗಳು 

ನವದೆಹಲಿ: ನಕ್ಸಲ್ ಚಟುವಟಿಕೆಗಳ ವಿರುದ್ಧ ತೀವ್ರಗೊಂಡ ಕಾರ್ಯಾಚರಣೆ ನಿರ್ಣಾಯಕ ಹಂತವನ್ನು ಪ್ರವೇಶಿಸಿರುವುದಾಗಿ ಭದ್ರತಾಪಡೆಯ ಅಧಿಕಾರಿಗಳು ತಿಳಿಸಿದ್ದಾರೆ.  ಆಪರೇಷನ್ ಡೆಮಾಲಿಶ್‌ಮೆಂಟ್ ಎಂದು ಕರೆಯಲ್ಪಡುವ ಇತ್ತೀಚಿನ ಕಾರ್ಯಾಚರಣೆಯ ಅಡಿಯಲ್ಲಿ ನಕ್ಸಲ್ ಕಾರ್ಯಕರ್ತರು ತಮ್ಮ ನಾಯಕರನ್ನು ಸ್ಮರಿಸಲು ಮತ್ತು...

ಮುಸ್ಲಿಮರಿಗೆ ನೀಡಿದ್ದ 5% ಮೀಸಲಾತಿ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಕ್ರಮ ಪ್ರಶ್ನಿಸಿ ಬಾಂಬೆ ಹೈಕೋರ್ಟ್ ಗೆ ಅರ್ಜಿ 

ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮುಸ್ಲಿಮರಿಗೆ 5% ಮೀಸಲಾತಿಯನ್ನು ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಇತ್ತೀಚಿನ ನಿರ್ಧಾರವನ್ನು ಮುಂಬೈ ಮೂಲದ ವಕೀಲರು ಬಾಂಬೆ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ. ವಕೀಲ ಸೈಯದ್ ಎಜಾಜ್ ಅಬ್ಬಾಸ್ ನಖ್ವಿ ಅವರು ವಕೀಲ...

ವಿಧಾನಸಭಾ ಚುನಾವಣೆಯಲ್ಲಿ ನೇಮಮ್ ನಿಂದ ಸ್ಪರ್ಧಿಸುವ ಬಯಕೆಯನ್ನು ಪುನರುಚ್ಚರಿಸಿದ ಬಿಜೆಪಿ ಕೇರಳ ಅಧ್ಯಕ್ಷ ರಾಜೀವ್ ಚಂದ್ರಶೇಖರ್ 

ತಿರುವನಂತಪುರಂ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೇರಳದ ನೇಮಮ್ ಕ್ಷೇತ್ರದಿಂದ ಸ್ಪರ್ಧಿಸುವ ತಮ್ಮ ಇಚ್ಛೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ಭಾನುವಾರ ಪುನರುಚ್ಚರಿಸಿದ್ದಾರೆ. ನೇಮಮ್‌ನಲ್ಲಿ ಬಿಜೆಪಿಯ ಚುನಾವಣಾ ಗೋಡೆ ಬರಹ ಅಭಿಯಾನಕ್ಕೆ ಚಾಲನೆ ನೀಡಿದ ನಂತರ...

ಯುವತಿಯನ್ನು ಬಂಧಿಸಿಟ್ಟು ಚಿತ್ರಹಿಂಸೆ : ಆರೋಪಿಯ ಬಂಧನ

ಯುವಕನೋರ್ವ ತನ್ನ ಲಿವ್-ಇನ್ ಸಂಗಾತಿಯಾದ 19 ವರ್ಷದ ಯುವತಿಯನ್ನು ಕೊಠಡಿಯಲ್ಲಿ ಬಂಧಿಸಿಟ್ಟು ಚಿತ್ರಹಿಂಸೆ ನೀಡಿರುವ ಘಟನೆ ಗುರುಗಾಂವ್‌ನ ಸೆಕ್ಟರ್ 69ರಲ್ಲಿ ನಡೆದಿದೆ. ಆರೋಪಿಯನ್ನು ದೆಹಲಿಯ ನರೇಲಾ ನಿವಾಸಿ 19 ವರ್ಷದ ಶಿವಂ ಎಂದು ಗುರುತಿಸಲಾಗಿದೆ....

ಕೋಝಿಕ್ಕೋಡ್‌: ಆಹಾರ ಸೇವಿಸಿ, ಬಿಲ್ ಪಾವತಿಸಲು ನಿರಾಕರಿಸಿದ ಮೂವರ ತಂಡದಿಂದ ರೆಸ್ಟೋರೆಂಟ್ ಧ್ವಂಸ

ಕೋಝಿಕ್ಕೋಡ್ (ಕೇರಳ): ಆಹಾರ ಸೇವಿಸಿ, ಹಣ ನೀಡಲು ನಿರಾಕರಿಸಿದ ಮೂವರು ಸದಸ್ಯರ ಗುಂಪೊಂದು ಬಿಲ್ ಕೇಳಿದ್ದಕ್ಕೆ ರೆಸ್ಟೋರೆಂಟ್ ಅನ್ನು ಧ್ವಂಸಗೊಳಿಸಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಪ್ರಕರಣ ಸಂಬಂಧ ಒಬ್ಬ ವ್ಯಕ್ತಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದ್ದು,...

ಲೈಂಗಿಕ ದೌರ್ಜನ್ಯ ಆರೋಪ : ಸ್ವಾಮಿ ಅವಿಮುಕ್ತೇಶ್ವರಾನಂದ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ

ಇಬ್ಬರು ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಜ್ಯೋತಿಷ್ ಪೀಠದ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಮತ್ತು ಅವರ ಶಿಷ್ಯ ಮುಕುಂದಾನಂದ ಬ್ರಹ್ಮಚಾರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ವಿಶೇಷ ಪೋಕ್ಸೋ ನ್ಯಾಯಾಲಯ...

ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಶಿಕ್ಷಕಿಯಿಂದ ಹಲ್ಲೆ

ಶಾಲಾ ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಹಲ್ಲೆ ನಡೆಸಿದ ಶಿಕ್ಷಕಿ, ಆಕೆಯ ಹೆಸರನ್ನು ದಾಖಲಾತಿಯಿಂದ ತೆಗೆದು ಹಾಕುವುದಾಗಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಉತ್ತರ ಪ್ರದೇಶದ ಅಲೀಗಢ ಜಿಲ್ಲೆಯ...

ಚಿಕ್ಕಮಗಳೂರಿನಲ್ಲಿ ಒಂದೇ ವಾರದಲ್ಲಿ ಕಾಡಾನೆ ದಾಳಿಗೆ ಎರಡನೇ ಸಾವು; ಆನೆ ಸೆರೆ; ಸರ್ಕಾರದ ವಿರುದ್ಧ ಸ್ಥಳೀಯರ ಪ್ರತಿಭಟನೆ

ಚಿಕ್ಕಮಗಳೂರಿನ ವ್ಯಾಪ್ತಿಯಲ್ಲಿ ದಿನದಿಂದ ದಿನಕ್ಕೆ ಮಾನವ ಹಾಗೂ ಪ್ರಾಣಿಗಳ ಸಂಘರ್ಷ ಹೆಚ್ಚಾಗುತ್ತಿದ್ದು, ಒಂದೇ ವಾರದಲ್ಲಿ ಕಾಡಾನೆ ದಾಳಿಯಿಂದ ಇಬ್ಬರು ಮೃತಪಟ್ಟಿದ್ದಾರೆ. ಭಾನುವಾರ ಬೆಳಗ್ಗೆ ತೋಟದ ಕೆಲಸಕ್ಕೆ ತೆರಳಿದಾಗ ಹೊಸಪೇಟೆ ಮೂಲದ ಬೋರಮ್ಮ(34), ಕಾಡಾನೆ...

ಬಿಜೆಪಿ ಸೇರ್ಪಡೆಯಾದ ಅಸ್ಸಾಂ ಕಾಂಗ್ರೆಸ್ ಮಾಜಿ ಅಧ್ಯಕ್ಷ ಭೂಪೇನ್ ಬೋರಾ

ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಮಾಜಿ ರಾಜ್ಯಾಧ್ಯಕ್ಷ ಭೂಪೇನ್ ಬೋರಾ ಭಾನುವಾರ (ಫೆ.22) ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಬೋರಾ ಫೆ. 16ರಂದು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಪಕ್ಷದಲ್ಲಿ ತಮ್ಮನ್ನು ನಿರ್ಲಕ್ಷಿಸಲಾಗುತ್ತಿದೆ...

ದೆಹಲಿಯಲ್ಲಿ ಭಯೋತ್ಪಾದನಾ ಸಂಚು ಆರೋಪ: ಬಾಂಗ್ಲಾದೇಶಿ ಪ್ರಜೆಗಳು ಸೇರಿ ಎಂಟು ಮಂದಿ ಬಂಧನ

ನವದೆಹಲಿ: ಪಾಕಿಸ್ತಾನದ ಐಎಸ್‌ಐ ಮತ್ತು ಬಾಂಗ್ಲಾದೇಶ ಮೂಲದ ಉಗ್ರಗಾಮಿ ಸಂಘಟನೆಗಳ ಸೂಚನೆಯ ಮೇರೆಗೆ ದೆಹಲಿಯಲ್ಲಿ ಪ್ರಮುಖ ಭಯೋತ್ಪಾದಕ ಪಿತೂರಿ ನಡೆಸಲು ಸಂಚು ರೂಪಿಸಿದ್ದ ಆರೋಪದ ಮೇಲೆ ಎಂಟು ಶಂಕಿತರನ್ನು ಬಂಧಿಸಲಾಗಿದೆ ಎಂದು ಪೊಲೀಸ್...