Homeಮುಖಪುಟಗೋಧ್ರೋತ್ತರ ಗಲಭೆ: 131 ಸಾಕ್ಷಿಗಳ ಭದ್ರತೆ ವಾಪಸ್

ಗೋಧ್ರೋತ್ತರ ಗಲಭೆ: 131 ಸಾಕ್ಷಿಗಳ ಭದ್ರತೆ ವಾಪಸ್

- Advertisement -
- Advertisement -

2002ರಲ್ಲಿ ಗುಜರಾತ್‌ನಲ್ಲಿ ನಡೆದಿದ್ದ ಗೋಧ್ರಾ ರೈಲು ದಹನ ಮತ್ತು ನಂತರದ ದಂಗೆ ಪ್ರಕರಣಗಳಲ್ಲಿನ ಎಲ್ಲಾ 131 ಸಾಕ್ಷಿಗಳಿಗೆ ನೀಡಿದ್ದ ಭದ್ರತೆಯನ್ನು ವಿಶೇಷ ತನಿಖಾ ತಂಡ (SIT) ಹಿಂತೆಗೆದುಕೊಂಡಿದೆ ಮತ್ತು ಸಾಕ್ಷಿಗಳಿಗೆ ಯಾವುದೇ ಬೆದರಿಕೆಗಳು ಸುದೀರ್ಘ ಅವಧಿಯಲ್ಲಿ ಬಂದಿಲ್ಲ ಎಂದು ಹೇಳಿಕೊಂಡಿದೆ.

ಸಾಕ್ಷಿಗಳ ಜೊತೆಗೆ ಸಂತ್ರಸ್ತರಿಗೆ ಕಾನೂನು ಹೋರಾಟದಲ್ಲಿ ಸಹಾಯ ಮಾಡಿದ ಇಬ್ಬರು ವಕೀಲರಾದ ಎಂ ಎಂ ತಿರ್ಮಿಜಿ ಮತ್ತು ಎಸ್ ಎಂ ವೋಹ್ರಾ  ಮತ್ತು ಪ್ರಕರಣದಲ್ಲಿ ತೀರ್ಪನ್ನು ನೀಡಿದ್ದ ನ್ಯಾಯಾದೀಶರ ತಂಡದಲ್ಲಿದ್ದ ಜಡ್ಜ್‌ ಜ್ಯೋತ್ಸ್ನಾ ಯಾಗ್ನಿಕ್‌ ಅವರ ಭದ್ರತೆಯನ್ನು ಕೂಡ ಹಿಂಪಡೆಯಲಾಗಿದೆ.

ಈ ಬಗ್ಗೆ ಎಸ್‌ಐಟಿ ಮಾಹಿತಿಯನ್ನು ನೀಡಿದ್ದು, ಬೆದರಿಕೆ ಬಗ್ಗೆ ಪರಿಶೀಲನೆಯ ನಂತರ ಡಿ.13ರಂದು ಭದ್ರತೆಯನ್ನು ಹಿಂಪಡೆಯಲಾಗಿದೆ. ಬಹುಪಾಲು ಸಾಕ್ಷಿಗಳಿಗೆ 2003ರಿಂದ ರಾಜ್ಯ ಸರ್ಕಾರದಿಂದ ರಕ್ಷಣೆ ನೀಡಲಾಗಿತ್ತು. ನ್ಯಾಯಾಲಯದ ಮುಂದೆ ಸಾಕ್ಷಿ ಹೇಳುವ ವಿಚಾರದಲ್ಲಿ ಯಾವುದೇ ಸಾಕ್ಷಿಗಳಿಗೆ ಬೆದರಿಕೆ ಅಥವಾ ಒತ್ತಡವನ್ನು ಹಾಕಲಾಗಿಲ್ಲ ಎಂದು ಎಸ್‌ಐಟಿ ಅಧಿಕಾರಿಗಳು ಕಂಡುಕೊಂಡ ಬಳಿಕ ಈ ನಿರ್ಧಾರಕ್ಕೆ ಬರಲಾಗಿದೆ ಎಂದು ಹೇಳಿದೆ.

ಸಾಕ್ಷಿಗಳಿಗೆ ಯಾವುದೇ ಬೆದರಿಕೆ ಹಾಕಲಾಗಿಲ್ಲ ಎಂದು ಖಚಿತಪಡಿಸಿದ ನಂತರ ನಾವು ಸಾಕ್ಷಿಗಳಿಂದ ಭದ್ರತೆಯನ್ನು ತೆಗೆದುಹಾಕಿದ್ದೇವೆ. ಅವರಲ್ಲಿ ಯಾರೂ ಬೆದರಿಕೆ ಅಥವಾ ಹಲ್ಲೆಯನ್ನು ಎದುರಿಸಿಲ್ಲ ಎಂದು ಎಸ್‌ಐಟಿ ತಂಡದ ಸದಸ್ಯ ಎ ಕೆ ಮಲ್ಹೋತ್ರಾ ಹೇಳಿದ್ದಾರೆ.

ಈ ಹಿಂದೆ ಆ.2021ರಲ್ಲಿ ಎಸ್‌ಐಟಿ 25 ಸಾಕ್ಷಿಗಳಿಗೆ ಯಾವುದೇ ಬೆದರಿಕೆ ಇಲ್ಲ ಎಂದು ಉಲ್ಲೇಖಿಸಿ ಅವರಿಗೆ ನೀಡಿದ್ದ ಭದ್ರತೆಯನ್ನು ಹಿಂತೆಗೆದುಕೊಂಡಿತ್ತು. ಇವರಿಗೆ ಸಿಐಎಸ್ಎಫ್ ಸಿಬ್ಬಂದಿ ಮತ್ತು ಸ್ಥಳೀಯ ಪೊಲೀಸರು ಭದ್ರತೆ ನೀಡುತ್ತಿದ್ದರು.

ಗೃಹ ಸಚಿವ ಹರ್ಷ ಸಾಂಘವಿ, ರಾಜ್ಯ ಪೊಲೀಸ್ ಮಹಾನಿರ್ದೇಶಕ ವಿಕಾಸ್ ಸಹಾಯ್ ಮತ್ತು ಎಸ್‌ಐಟಿಯ ಮಾತುಕತೆ ಬಳಿಕ ಸಾಕ್ಷಿಗಳಿಗೆ ರಕ್ಷಣೆಯನ್ನು ತೆಗೆದುಹಾಕಲು ಡಿ.13ರಂದು ಆದೇಶವನ್ನು ನೀಡಲಾಯಿತು. ಇದಲ್ಲದೆ ಹತ್ಯೆಗೀಡಾದ ಕಾಂಗ್ರೆಸ್ ಸಂಸದ ಅಹ್ಸಾನ್ ಜಾಫ್ರಿ ಅವರ ಪತ್ನಿ ಜಾಕಿಯಾ ಜಾಫ್ರಿ ಅವರ ಭದ್ರತೆಯನ್ನು ಕೂಡ ಸಿಐಎಸ್‌ಎಫ್‌ನಿಂದ ಸ್ಥಳೀಯ ಪೊಲೀಸರಿಗೆ ಇಳಿಸಲಾಗಿದೆ.

ಸಾಕ್ಷಿಗಳ ರಕ್ಷಣೆಗಾಗಿ ಒಟ್ಟು 156 ಪೊಲೀಸರು ಮತ್ತು 98 ಸಿಐಎಸ್ಎಫ್ ಸಿಬ್ಬಂದಿಗಳನ್ನು ನೇಮಿಸಲಾಗಿತ್ತು. ನರೋಡಾ ಪಾಟಿಯಾ ಹತ್ಯಾಕಾಂಡದ ತೀರ್ಪು ನೀಡಿ 12 ವರ್ಷಗಳು ಕಳೆದಿವೆ ಎಂಬ ಕಾರಣಕ್ಕಾಗಿ ನ್ಯಾಯಾಧೀಶೆ ಯಾಗ್ನಿಕ್ ಅವರ ಭದ್ರತೆಯನ್ನು ತೆಗೆದುಹಾಕಲಾಗಿದೆ ಎಂದು ಎಸ್‌ಐಟಿ ಹೇಳಿದೆ. ಬಿಜೆಪಿಯ ಮಾಜಿ ಸಚಿವೆ ಮಾಯಾ ಕೊಡ್ನಾನಿ ಮತ್ತು ವಿಎಚ್‌ಪಿ ನಾಯಕ ಬಾಬು ಬಜರಂಗಿ ಸೇರಿದಂತೆ 32 ಆರೋಪಿಗಳನ್ನು ಅವರು ತಪ್ಪಿತಸ್ಥರೆಂದು ಘೋಷಿಸಿದ್ದರು. 2018ರಲ್ಲಿ ಕೊಡ್ನಾನಿ ಸೇರಿದಂತೆ 18 ಮಂದಿಯನ್ನು ಹೈಕೋರ್ಟ್ ಖುಲಾಸೆಗೊಳಿಸಿತ್ತು. ಗಲಭೆ ಪ್ರಕರಣಗಳ ತೀರ್ಪು ನೀಡಿದ್ದ 9 ನ್ಯಾಯಾಧೀಶರ ಪೈಕಿ ರಕ್ಷಣೆ ಕೋರಿದ ನ್ಯಾಯಾಧೀಶರಲ್ಲಿ ಯಾಗ್ನಿಕ್ ಒಬ್ಬರೇ ಆಗಿದ್ದರು ಎಂದು ಎಸ್‌ಐಟಿ ಅಧಿಕಾರಿಗಳು ತಿಳಿಸಿದ್ದಾರೆ. ತನಗೆ ಹಲವಾರು ಬೆದರಿಕೆ ಪತ್ರಗಳು ಮತ್ತು ಫೋನ್ ಕರೆಗಳು ಬಂದಿವೆ ಎಂದು ಯಾಗ್ನಿಕ್ ರಕ್ಷಣೆ ಕೋರಿದ್ದರು.

ಡಿ.13ರಂದು ರಕ್ಷಣೆಯನ್ನು ತೆಗೆದುಹಾಕುವ ಆದೇಶವನ್ನು ಹೊರಡಿಸುವವರೆಗೂ ಸಿಐಎಸ್ಎಫ್ ಸಿಬ್ಬಂದಿ ಗಲಭೆ ಪೀಡಿತ ಪ್ರದೇಶಗಳಲ್ಲಿ ಗಸ್ತು ತಿರುಗುತ್ತಿದ್ದರು. ಭದ್ರತಾ ಶಾಶ್ವತವಾಗಿ ಮುಂದುವರಿಸಲು ಸಾಧ್ಯವಿಲ್ಲ. ಎಲ್ಲಾ 9 ಪ್ರಮುಖ ಗಲಭೆ ಪ್ರಕರಣಗಳ (ನರೋಡಾ ಪಾಟಿಯಾ, ನರೋಡಾ ಗಾಮ್, ಗುಲ್ಬರ್ಗ್ ಸೊಸೈಟಿ, ದೀಪ್ದಾ ದರ್ವಾಜಾ, ಸರ್ದಾರ್‌ಪುರ) ವಿಚಾರಣೆಗಳು ಈಗಾಗಲೇ ಮುಗಿದಿವೆ. ಕೆಲವು ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟ್‌ನಲ್ಲಿ ಬಾಕಿ ಇವೆ. ಈ ಬಗ್ಗೆ ಯಾವುದೇ ಸಾಕ್ಷಿಗಳು ಬೆದರಿಕೆ ಅಥವಾ ಹಲ್ಲೆಯ ಬಗ್ಗೆ ದೂರು ನೀಡಿಲ್ಲ ಎಂದು ಎಸ್‌ಐಟಿ ಅಧಿಕಾರಿಗಳು ಹೇಳಿದ್ದಾರೆ.

2002ರ ಫೆ.27ರಂದು ಅಯೋಧ್ಯೆಯಿಂದ ಕರಸೇವಕರು ಬರುವಾಗ ಸಬರಮತಿ ಎಕ್ಸ್‌ಪ್ರೆಸ್ ರೈಲು ಗುಜರಾತ್‌ನ ಗೋಧ್ರಾ ರೈಲ್ವೆ ನಿಲ್ದಾಣದ ಬಳಿ ನಿಲ್ಲಿಸಿತ್ತು. ಆಗ ರೈಲಿನ ನಾಲ್ಕು ಬೋಗಿಗಳಿಗೆ ಬೆಂಕಿ ತಗುಲಿ 59 ಮಂದಿ ಮೃತಪಟ್ಟಿದ್ದರು. ಅವರಲ್ಲಿ 29 ಮಂದಿ ಪುರುಷರು, 22 ಮಂದಿ ಮಹಿಳೆಯರು ಹಾಗೂ 8 ಮಕ್ಕಳು ಸೇರಿದ್ದರು.

ಗೋಧ್ರಾ ರೈಲು ದರುಂತ ಘಟನೆಯನ್ನು ವಿಶ್ವ ಹಿಂದೂ ಪರಿಷತ್ ಮತ್ತಿತರ ಬಲಪಂಥೀಯ ಸಂಘಟನೆಗಳು ಬಲವಾಗಿ ಖಂಡಿಸಿದ್ದವು. ಗುಜರಾತ್ ಬಂದ್‌ಗೆ ಕರೆಕೊಡಲಾಯಿತು. ಫೆ.28ರಂದು ಗುಜರಾತ್‌ನಾದ್ಯಂತ ಕೋಮುಗಲಭೆಗಳು ನಡೆದವು. ಅಂದು ಸಂಜೆ 27 ನಗರ ಮತ್ತು ಪಟ್ಟಣಗಳಲ್ಲಿ ಕರ್ಫ್ಯೂ ಹಾಕಲಾಯಿತು. ರಾಜ್ಯ ಸರಕಾರ ಮತ್ತು ಪೊಲೀಸ್ ಇಲಾಖೆ ಈ ಗಲಭೆ ತಡೆಯಲು ಮನಃಪೂರ್ವಕವಾಗಿ ಕೆಲಸ ಮಾಡಲಿಲ್ಲ ಎಂಬ ಆರೋಪ ಕೇಳಿ ಬಂದಿತ್ತು. ರಾಜ್ಯ ಸರಕಾರದ ಮುಂದಾಳುಗಳು ನೀಡಿದರೆನ್ನಲಾದ ಪ್ರಚೋದನಕಾರಿ ಹೇಳಿಕೆಗಳು ಗಲಭೆಕೋರರಿಗೆ ಇನ್ನಷ್ಟು ಪ್ರಚೋದನೆ ನೀಡಿದವು. ಮುಸ್ಲಿಮ್ ಸಮುದಾಯದವರನ್ನು ಗುರಿ ಮಾಡಿ ಹಲವೆಡೆ ಭೀಕರ ಹತ್ಯಾಕಾಂಡವೇ ನಡೆದಿದೆ. ಆ ಬಳಿಕದ ಗಲಭೆಗಳಲ್ಲಿ 1,044 ಮಂದಿ ಸಾವನ್ನಪ್ಪಿರುವುದು ಅಧಿಕೃತವಾಗಿ ದಾಖಲಾಗಿರುವ ಮಾಹಿತಿ. 2,500 ಜನರು ಗಾಯಗೊಂಡಿದ್ದಾರೆ. ಇನ್ನೂರಕ್ಕೂ ಹೆಚ್ಚು ಮಂದಿ ನಾಪತ್ತೆಯಾಗಿದ್ದರು.

ಅಹ್ಮದಾಬಾದ್‌ನ ಗುಲ್‌ಬರ್ಗ್ ಸೊಸೈಟಿ ಹತ್ಯಾಕಾಂಡಾದಲ್ಲಿ ಫೆ. 28ರಂದು 69 ಮಂದಿ ಹತ್ಯೆಯಾಗಿದ್ದರು. ಅದರಲ್ಲಿ ಕಾಂಗ್ರೆಸ್ ಮುಖಂಡ ಮತ್ತು ಮಾಜಿ ಸಂಸದರಾಗಿದ್ದ ಎಹ್ಸಾನ್ ಜಫ್ರಿ ಕೂಡ ಸೇರಿದ್ದರು. ಗುಲ್ಬರ್ಗ್ ಸೊಸೈಟಿ ಹತ್ಯಾಕಾಂಡದಷ್ಟೇ ಭೀಕರವಾದ ಹಲವು ಹತ್ಯಾಕಾಂಡಗಳು ಗುಜರಾತ್‌ನ ವಿವಿಧೆಡೆ ಸಂಭವಿಸಿವೆ. ಬೆಸ್ಟ್ ಬೇಕರಿ, ಬಿಲ್ಕಿಸ್ ಬಾನೋ, ಅವಧೂತ್‌ನಗರ್, ದನಿಲಿಮಡಾ, ಎರಾಲ್, ಪವಗಡ್ ಧಿಕ್ವಾ, ದಿಪ್ಡ ದರವಾಜ, ನರೋಡ ಪಾಟಿಯಾ ಹತ್ಯಾಕಾಂಡಗಳು ಘೋರ ದುರಂತದ ಘಟನೆಗಳಾಗಿವೆ.

ಇದನ್ನು ಓದಿ: ಚುನಾವಣಾ ಆಯುಕ್ತರ ನೇಮಕಾತಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...

‘ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ’: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ: ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.  ಮಾರ್ಚ್ 14ರಂದು, ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ...

ಮಣಿಪುರ ಹಿಂಸಾಚಾರ: ಕಾಮ್ಜಾಂಗ್‌ನಲ್ಲಿ ಇಬ್ಬರು ಕುಕಿ ಪುರುಷರು ಶವವಾಗಿ ಪತ್ತೆ; ಹೆಚ್ಚಿದ ಉದ್ವಿಗ್ನತೆ 

ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಬುಧವಾರದಿಂದ ನಾಪತ್ತೆಯಾಗಿದ್ದ ಇಬ್ಬರು ಕುಕಿ ಪುರುಷರು ಗುರುವಾರ ಥವಾಯ್ ಕುಕಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದರಿಂದ ಉದ್ವಿಗ್ನತೆ ಹೆಚ್ಚಾಗಿದೆ. ಜಿಲ್ಲೆಯ ಥಾವಾಯಿ ಕುಕಿ ಗ್ರಾಮದ 42 ವರ್ಷದ ಥೇಂಗಿನ್...

ಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ ‘ಇರಾನ್‌ಗೆ ಹೋಗಿ’ ಎಂದ ಪೊಲೀಸ್‌ ಅಧಿಕಾರಿ : ತೀವ್ರ ಆಕ್ರೋಶ

ಉತ್ತರ ಪ್ರದೇಶದಲ್ಲಿ ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಂಭಾಲ್ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ ರಂಝಾನ್ ತಿಂಗಳ ಕೊನೆಯ...

ಪಶ್ಚಿಮ ಏಷ್ಯಾ ಸಂಘರ್ಷ: ಲೆಬನಾನ್‌ನಲ್ಲಿ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ದಾಳಿ: ವೈದ್ಯರು, ದಾದಿಯರು ಸೇರಿ 12 ಮಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿರುವ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ 12 ವೈದ್ಯಕೀಯ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ ಎಂದು ಲೆಬನಾನಿನ ಸಾರ್ವಜನಿಕ ಆರೋಗ್ಯ ಸಚಿವಾಲಯ ವರದಿ ಮಾಡಿದೆ.  ಲೆಬನಾನ್‌ನಾದ್ಯಂತ ಇಸ್ರೇಲಿ ದಾಳಿಯಲ್ಲಿ ಈವರೆಗೂ 103 ಮಕ್ಕಳು...

ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನಕ್ಕೆ ಎಲ್ಲರೂ ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ ಮನವಿ

ಬೆಂಗಳೂರು: ಒಳಮೀಸಲಾತಿ ಜಾರಿ ಮಾಡುವ ಪ್ರಕ್ರಿಯೆಯು ಕೊನೆಯ ಹಂತಕ್ಕೆ ತಲುಪಿದ್ದು, ಇದನ್ನು ಸುಲಲಿತವಾಗಿ ಬಗೆಹರಿಸಿ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಆಗ್ರಹಿಸಿ ಇಂದು (14 ಮಾರ್ಚ್)‌ ನಗರದ ಪ್ರೆಸ್‌ ಕ್ಲಬ್‌ನಲ್ಲಿ ಒಳಮೀಸಲಾತಿ ಹೋರಾಟಗಾರರು...

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅಕ್ರಮ ನೇಮಕಾತಿ; ರೋಸ್ಟರ್ ಮೀಸಲು ಕ್ರಮ ಉಲ್ಲಂಘನೆ ಆರೋಪ: ನ್ಯಾಯಾಂಗ ತನಿಖೆಗೆ ಆಗ್ರಹ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿರುವ Central University of Karnataka ದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲು ಕ್ರಮ ಉಲ್ಲಂಘನೆ ಹಾಗೂ ಅಕ್ರಮ ನೇಮಕಾತಿಗಳು ನಡೆದಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ...

ಸಂಭಾಲ್ | ಮಸೀದಿಯಲ್ಲಿ ನಮಾಝ್ ಮಾಡುವವರ ಸಂಖ್ಯೆ ಮಿತಿಗೊಳಿಸಲು ಸಾಧ್ಯವಿಲ್ಲ; ಕಾನೂನು ಸುವ್ಯವಸ್ಥೆ ಕಾಪಾಡಲು ಆಗದಿದ್ದರೆ ರಾಜೀನಾಮೆ ನೀಡಿ: ಅಧಿಕಾರಿಗಳಿಗೆ ಅಲಹಾಬಾದ್ ಹೈಕೋರ್ಟ್ ತರಾಟೆ

ಸಂಭಾಲ್ ಜಿಲ್ಲೆಯ ಮಸೀದಿಯೊಂದರಲ್ಲಿ ರಂಝಾನ್ ಸಮಯದಲ್ಲಿ ನಮಾಝ್ ಮಾಡುವವರ ಸಂಖ್ಯೆಯನ್ನು ಮಿತಿಗೊಳಿಸುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರವನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿ ಎಂದಿದೆ. ಫೆಬ್ರವರಿ 27ರಂದು...

ಇರಾನ್ ‘ಭಯೋತ್ಪಾದಕ ಆಡಳಿತ’ ಎಂದು ಕರೆದ NDTV ಹಿರಿಯ ಸಂಪಾದಕ: ವ್ಯಾಪಕ ಟೀಕೆಯ ನಂತರ ಪೋಸ್ಟ್ ಡಿಲಿಟ್ 

ಹೊಸದಿಲ್ಲಿ: ಅಮೆರಿಕ-ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧದಿಂದಾಗಿ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಸಂದರ್ಭದಲ್ಲಿ ಭಾರತದ ಮುಖ್ಯ ಮಾಧ್ಯಮ ಸಂಸ್ಥೆ NDTV ಹಿರಿಯ ಸಂಪಾದಕ ಆದಿತ್ಯ ರಾಜ್ ಕೌಲ್ ಅವರು ಇರಾನ್ “ಭಯೋತ್ಪಾದಕ...

ಎಲ್‌ಪಿಜಿ ಬಿಕ್ಕಟ್ಟು: ಹೋಟೆಲ್ ಮಾಲೀಕರಿಗೆ ವಿದ್ಯುತ್ ಒಲೆಗಳನ್ನು ಬಳಸಲು ಸೂಚಿಸಿದ ಸಚಿವ ಕೆ.ಎಚ್. ​​ಮುನಿಯಪ್ಪ

ಬೆಂಗಳೂರು: ಪಶ್ಚಿಮ ಏಷ್ಯಾ ಸಂಘರ್ಷದ ಪ್ರಭಾವ ಭಾರತೀಯರ ಅಡುಗೆ ಮನೆಯನ್ನು ಪ್ರವೇಶಿಸಿದ್ದು, ಎಲ್‌ಪಿಜಿ  ಬಿಕ್ಕಟ್ಟಿನಿಂದ ನಾಗರೀಕರು, ಸೇರಿದಂತೆ ಹೋಟೆಲ್ ಉಧ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಈ ನಡುವೆ ಯುದ್ಧದ ಪರಿಣಾಮ ಭಾರತದ ಮೇಲೆ...