Homeಮುಖಪುಟಗೋಧ್ರೋತ್ತರ ಗಲಭೆ: 131 ಸಾಕ್ಷಿಗಳ ಭದ್ರತೆ ವಾಪಸ್

ಗೋಧ್ರೋತ್ತರ ಗಲಭೆ: 131 ಸಾಕ್ಷಿಗಳ ಭದ್ರತೆ ವಾಪಸ್

- Advertisement -
- Advertisement -

2002ರಲ್ಲಿ ಗುಜರಾತ್‌ನಲ್ಲಿ ನಡೆದಿದ್ದ ಗೋಧ್ರಾ ರೈಲು ದಹನ ಮತ್ತು ನಂತರದ ದಂಗೆ ಪ್ರಕರಣಗಳಲ್ಲಿನ ಎಲ್ಲಾ 131 ಸಾಕ್ಷಿಗಳಿಗೆ ನೀಡಿದ್ದ ಭದ್ರತೆಯನ್ನು ವಿಶೇಷ ತನಿಖಾ ತಂಡ (SIT) ಹಿಂತೆಗೆದುಕೊಂಡಿದೆ ಮತ್ತು ಸಾಕ್ಷಿಗಳಿಗೆ ಯಾವುದೇ ಬೆದರಿಕೆಗಳು ಸುದೀರ್ಘ ಅವಧಿಯಲ್ಲಿ ಬಂದಿಲ್ಲ ಎಂದು ಹೇಳಿಕೊಂಡಿದೆ.

ಸಾಕ್ಷಿಗಳ ಜೊತೆಗೆ ಸಂತ್ರಸ್ತರಿಗೆ ಕಾನೂನು ಹೋರಾಟದಲ್ಲಿ ಸಹಾಯ ಮಾಡಿದ ಇಬ್ಬರು ವಕೀಲರಾದ ಎಂ ಎಂ ತಿರ್ಮಿಜಿ ಮತ್ತು ಎಸ್ ಎಂ ವೋಹ್ರಾ  ಮತ್ತು ಪ್ರಕರಣದಲ್ಲಿ ತೀರ್ಪನ್ನು ನೀಡಿದ್ದ ನ್ಯಾಯಾದೀಶರ ತಂಡದಲ್ಲಿದ್ದ ಜಡ್ಜ್‌ ಜ್ಯೋತ್ಸ್ನಾ ಯಾಗ್ನಿಕ್‌ ಅವರ ಭದ್ರತೆಯನ್ನು ಕೂಡ ಹಿಂಪಡೆಯಲಾಗಿದೆ.

ಈ ಬಗ್ಗೆ ಎಸ್‌ಐಟಿ ಮಾಹಿತಿಯನ್ನು ನೀಡಿದ್ದು, ಬೆದರಿಕೆ ಬಗ್ಗೆ ಪರಿಶೀಲನೆಯ ನಂತರ ಡಿ.13ರಂದು ಭದ್ರತೆಯನ್ನು ಹಿಂಪಡೆಯಲಾಗಿದೆ. ಬಹುಪಾಲು ಸಾಕ್ಷಿಗಳಿಗೆ 2003ರಿಂದ ರಾಜ್ಯ ಸರ್ಕಾರದಿಂದ ರಕ್ಷಣೆ ನೀಡಲಾಗಿತ್ತು. ನ್ಯಾಯಾಲಯದ ಮುಂದೆ ಸಾಕ್ಷಿ ಹೇಳುವ ವಿಚಾರದಲ್ಲಿ ಯಾವುದೇ ಸಾಕ್ಷಿಗಳಿಗೆ ಬೆದರಿಕೆ ಅಥವಾ ಒತ್ತಡವನ್ನು ಹಾಕಲಾಗಿಲ್ಲ ಎಂದು ಎಸ್‌ಐಟಿ ಅಧಿಕಾರಿಗಳು ಕಂಡುಕೊಂಡ ಬಳಿಕ ಈ ನಿರ್ಧಾರಕ್ಕೆ ಬರಲಾಗಿದೆ ಎಂದು ಹೇಳಿದೆ.

ಸಾಕ್ಷಿಗಳಿಗೆ ಯಾವುದೇ ಬೆದರಿಕೆ ಹಾಕಲಾಗಿಲ್ಲ ಎಂದು ಖಚಿತಪಡಿಸಿದ ನಂತರ ನಾವು ಸಾಕ್ಷಿಗಳಿಂದ ಭದ್ರತೆಯನ್ನು ತೆಗೆದುಹಾಕಿದ್ದೇವೆ. ಅವರಲ್ಲಿ ಯಾರೂ ಬೆದರಿಕೆ ಅಥವಾ ಹಲ್ಲೆಯನ್ನು ಎದುರಿಸಿಲ್ಲ ಎಂದು ಎಸ್‌ಐಟಿ ತಂಡದ ಸದಸ್ಯ ಎ ಕೆ ಮಲ್ಹೋತ್ರಾ ಹೇಳಿದ್ದಾರೆ.

ಈ ಹಿಂದೆ ಆ.2021ರಲ್ಲಿ ಎಸ್‌ಐಟಿ 25 ಸಾಕ್ಷಿಗಳಿಗೆ ಯಾವುದೇ ಬೆದರಿಕೆ ಇಲ್ಲ ಎಂದು ಉಲ್ಲೇಖಿಸಿ ಅವರಿಗೆ ನೀಡಿದ್ದ ಭದ್ರತೆಯನ್ನು ಹಿಂತೆಗೆದುಕೊಂಡಿತ್ತು. ಇವರಿಗೆ ಸಿಐಎಸ್ಎಫ್ ಸಿಬ್ಬಂದಿ ಮತ್ತು ಸ್ಥಳೀಯ ಪೊಲೀಸರು ಭದ್ರತೆ ನೀಡುತ್ತಿದ್ದರು.

ಗೃಹ ಸಚಿವ ಹರ್ಷ ಸಾಂಘವಿ, ರಾಜ್ಯ ಪೊಲೀಸ್ ಮಹಾನಿರ್ದೇಶಕ ವಿಕಾಸ್ ಸಹಾಯ್ ಮತ್ತು ಎಸ್‌ಐಟಿಯ ಮಾತುಕತೆ ಬಳಿಕ ಸಾಕ್ಷಿಗಳಿಗೆ ರಕ್ಷಣೆಯನ್ನು ತೆಗೆದುಹಾಕಲು ಡಿ.13ರಂದು ಆದೇಶವನ್ನು ನೀಡಲಾಯಿತು. ಇದಲ್ಲದೆ ಹತ್ಯೆಗೀಡಾದ ಕಾಂಗ್ರೆಸ್ ಸಂಸದ ಅಹ್ಸಾನ್ ಜಾಫ್ರಿ ಅವರ ಪತ್ನಿ ಜಾಕಿಯಾ ಜಾಫ್ರಿ ಅವರ ಭದ್ರತೆಯನ್ನು ಕೂಡ ಸಿಐಎಸ್‌ಎಫ್‌ನಿಂದ ಸ್ಥಳೀಯ ಪೊಲೀಸರಿಗೆ ಇಳಿಸಲಾಗಿದೆ.

ಸಾಕ್ಷಿಗಳ ರಕ್ಷಣೆಗಾಗಿ ಒಟ್ಟು 156 ಪೊಲೀಸರು ಮತ್ತು 98 ಸಿಐಎಸ್ಎಫ್ ಸಿಬ್ಬಂದಿಗಳನ್ನು ನೇಮಿಸಲಾಗಿತ್ತು. ನರೋಡಾ ಪಾಟಿಯಾ ಹತ್ಯಾಕಾಂಡದ ತೀರ್ಪು ನೀಡಿ 12 ವರ್ಷಗಳು ಕಳೆದಿವೆ ಎಂಬ ಕಾರಣಕ್ಕಾಗಿ ನ್ಯಾಯಾಧೀಶೆ ಯಾಗ್ನಿಕ್ ಅವರ ಭದ್ರತೆಯನ್ನು ತೆಗೆದುಹಾಕಲಾಗಿದೆ ಎಂದು ಎಸ್‌ಐಟಿ ಹೇಳಿದೆ. ಬಿಜೆಪಿಯ ಮಾಜಿ ಸಚಿವೆ ಮಾಯಾ ಕೊಡ್ನಾನಿ ಮತ್ತು ವಿಎಚ್‌ಪಿ ನಾಯಕ ಬಾಬು ಬಜರಂಗಿ ಸೇರಿದಂತೆ 32 ಆರೋಪಿಗಳನ್ನು ಅವರು ತಪ್ಪಿತಸ್ಥರೆಂದು ಘೋಷಿಸಿದ್ದರು. 2018ರಲ್ಲಿ ಕೊಡ್ನಾನಿ ಸೇರಿದಂತೆ 18 ಮಂದಿಯನ್ನು ಹೈಕೋರ್ಟ್ ಖುಲಾಸೆಗೊಳಿಸಿತ್ತು. ಗಲಭೆ ಪ್ರಕರಣಗಳ ತೀರ್ಪು ನೀಡಿದ್ದ 9 ನ್ಯಾಯಾಧೀಶರ ಪೈಕಿ ರಕ್ಷಣೆ ಕೋರಿದ ನ್ಯಾಯಾಧೀಶರಲ್ಲಿ ಯಾಗ್ನಿಕ್ ಒಬ್ಬರೇ ಆಗಿದ್ದರು ಎಂದು ಎಸ್‌ಐಟಿ ಅಧಿಕಾರಿಗಳು ತಿಳಿಸಿದ್ದಾರೆ. ತನಗೆ ಹಲವಾರು ಬೆದರಿಕೆ ಪತ್ರಗಳು ಮತ್ತು ಫೋನ್ ಕರೆಗಳು ಬಂದಿವೆ ಎಂದು ಯಾಗ್ನಿಕ್ ರಕ್ಷಣೆ ಕೋರಿದ್ದರು.

ಡಿ.13ರಂದು ರಕ್ಷಣೆಯನ್ನು ತೆಗೆದುಹಾಕುವ ಆದೇಶವನ್ನು ಹೊರಡಿಸುವವರೆಗೂ ಸಿಐಎಸ್ಎಫ್ ಸಿಬ್ಬಂದಿ ಗಲಭೆ ಪೀಡಿತ ಪ್ರದೇಶಗಳಲ್ಲಿ ಗಸ್ತು ತಿರುಗುತ್ತಿದ್ದರು. ಭದ್ರತಾ ಶಾಶ್ವತವಾಗಿ ಮುಂದುವರಿಸಲು ಸಾಧ್ಯವಿಲ್ಲ. ಎಲ್ಲಾ 9 ಪ್ರಮುಖ ಗಲಭೆ ಪ್ರಕರಣಗಳ (ನರೋಡಾ ಪಾಟಿಯಾ, ನರೋಡಾ ಗಾಮ್, ಗುಲ್ಬರ್ಗ್ ಸೊಸೈಟಿ, ದೀಪ್ದಾ ದರ್ವಾಜಾ, ಸರ್ದಾರ್‌ಪುರ) ವಿಚಾರಣೆಗಳು ಈಗಾಗಲೇ ಮುಗಿದಿವೆ. ಕೆಲವು ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟ್‌ನಲ್ಲಿ ಬಾಕಿ ಇವೆ. ಈ ಬಗ್ಗೆ ಯಾವುದೇ ಸಾಕ್ಷಿಗಳು ಬೆದರಿಕೆ ಅಥವಾ ಹಲ್ಲೆಯ ಬಗ್ಗೆ ದೂರು ನೀಡಿಲ್ಲ ಎಂದು ಎಸ್‌ಐಟಿ ಅಧಿಕಾರಿಗಳು ಹೇಳಿದ್ದಾರೆ.

2002ರ ಫೆ.27ರಂದು ಅಯೋಧ್ಯೆಯಿಂದ ಕರಸೇವಕರು ಬರುವಾಗ ಸಬರಮತಿ ಎಕ್ಸ್‌ಪ್ರೆಸ್ ರೈಲು ಗುಜರಾತ್‌ನ ಗೋಧ್ರಾ ರೈಲ್ವೆ ನಿಲ್ದಾಣದ ಬಳಿ ನಿಲ್ಲಿಸಿತ್ತು. ಆಗ ರೈಲಿನ ನಾಲ್ಕು ಬೋಗಿಗಳಿಗೆ ಬೆಂಕಿ ತಗುಲಿ 59 ಮಂದಿ ಮೃತಪಟ್ಟಿದ್ದರು. ಅವರಲ್ಲಿ 29 ಮಂದಿ ಪುರುಷರು, 22 ಮಂದಿ ಮಹಿಳೆಯರು ಹಾಗೂ 8 ಮಕ್ಕಳು ಸೇರಿದ್ದರು.

ಗೋಧ್ರಾ ರೈಲು ದರುಂತ ಘಟನೆಯನ್ನು ವಿಶ್ವ ಹಿಂದೂ ಪರಿಷತ್ ಮತ್ತಿತರ ಬಲಪಂಥೀಯ ಸಂಘಟನೆಗಳು ಬಲವಾಗಿ ಖಂಡಿಸಿದ್ದವು. ಗುಜರಾತ್ ಬಂದ್‌ಗೆ ಕರೆಕೊಡಲಾಯಿತು. ಫೆ.28ರಂದು ಗುಜರಾತ್‌ನಾದ್ಯಂತ ಕೋಮುಗಲಭೆಗಳು ನಡೆದವು. ಅಂದು ಸಂಜೆ 27 ನಗರ ಮತ್ತು ಪಟ್ಟಣಗಳಲ್ಲಿ ಕರ್ಫ್ಯೂ ಹಾಕಲಾಯಿತು. ರಾಜ್ಯ ಸರಕಾರ ಮತ್ತು ಪೊಲೀಸ್ ಇಲಾಖೆ ಈ ಗಲಭೆ ತಡೆಯಲು ಮನಃಪೂರ್ವಕವಾಗಿ ಕೆಲಸ ಮಾಡಲಿಲ್ಲ ಎಂಬ ಆರೋಪ ಕೇಳಿ ಬಂದಿತ್ತು. ರಾಜ್ಯ ಸರಕಾರದ ಮುಂದಾಳುಗಳು ನೀಡಿದರೆನ್ನಲಾದ ಪ್ರಚೋದನಕಾರಿ ಹೇಳಿಕೆಗಳು ಗಲಭೆಕೋರರಿಗೆ ಇನ್ನಷ್ಟು ಪ್ರಚೋದನೆ ನೀಡಿದವು. ಮುಸ್ಲಿಮ್ ಸಮುದಾಯದವರನ್ನು ಗುರಿ ಮಾಡಿ ಹಲವೆಡೆ ಭೀಕರ ಹತ್ಯಾಕಾಂಡವೇ ನಡೆದಿದೆ. ಆ ಬಳಿಕದ ಗಲಭೆಗಳಲ್ಲಿ 1,044 ಮಂದಿ ಸಾವನ್ನಪ್ಪಿರುವುದು ಅಧಿಕೃತವಾಗಿ ದಾಖಲಾಗಿರುವ ಮಾಹಿತಿ. 2,500 ಜನರು ಗಾಯಗೊಂಡಿದ್ದಾರೆ. ಇನ್ನೂರಕ್ಕೂ ಹೆಚ್ಚು ಮಂದಿ ನಾಪತ್ತೆಯಾಗಿದ್ದರು.

ಅಹ್ಮದಾಬಾದ್‌ನ ಗುಲ್‌ಬರ್ಗ್ ಸೊಸೈಟಿ ಹತ್ಯಾಕಾಂಡಾದಲ್ಲಿ ಫೆ. 28ರಂದು 69 ಮಂದಿ ಹತ್ಯೆಯಾಗಿದ್ದರು. ಅದರಲ್ಲಿ ಕಾಂಗ್ರೆಸ್ ಮುಖಂಡ ಮತ್ತು ಮಾಜಿ ಸಂಸದರಾಗಿದ್ದ ಎಹ್ಸಾನ್ ಜಫ್ರಿ ಕೂಡ ಸೇರಿದ್ದರು. ಗುಲ್ಬರ್ಗ್ ಸೊಸೈಟಿ ಹತ್ಯಾಕಾಂಡದಷ್ಟೇ ಭೀಕರವಾದ ಹಲವು ಹತ್ಯಾಕಾಂಡಗಳು ಗುಜರಾತ್‌ನ ವಿವಿಧೆಡೆ ಸಂಭವಿಸಿವೆ. ಬೆಸ್ಟ್ ಬೇಕರಿ, ಬಿಲ್ಕಿಸ್ ಬಾನೋ, ಅವಧೂತ್‌ನಗರ್, ದನಿಲಿಮಡಾ, ಎರಾಲ್, ಪವಗಡ್ ಧಿಕ್ವಾ, ದಿಪ್ಡ ದರವಾಜ, ನರೋಡ ಪಾಟಿಯಾ ಹತ್ಯಾಕಾಂಡಗಳು ಘೋರ ದುರಂತದ ಘಟನೆಗಳಾಗಿವೆ.

ಇದನ್ನು ಓದಿ: ಚುನಾವಣಾ ಆಯುಕ್ತರ ನೇಮಕಾತಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...

ದಾವಣಗೆರೆ ಉಪ ಚುನಾವಣೆ ಅಡ್ಡ ಪರಿಣಾಮ: ಮುಸ್ಲಿಮ್ ಮುಖಂಡರ ಮೇಲೆ ಖರ್ಗೆ-ಡಿಕೆಶಿ ಶಿಸ್ತು ಪ್ರಹಾರ ಕಾಂಗ್ರೆಸ್‌ನ ಆತ್ಮಹತ್ಯಾತ್ಮಕ ರಾಜಕಾರಣ!!

ದಾವಣಗೆರೆ ದಕ್ಷಿಣ ಉಪ ಚುನಾವಣೆ ರಾಜ್ಯದ ಆಡಳಿತಾರೂಢ ಕಾಂಗ್ರೆಸ್‌ನ ಗದ್ದುಗೆ ಗುದ್ದಾಟಕ್ಕೆ ರೋಚಕ ಆಯಾಮ ನೀಡಿಬಿಟ್ಟಿದೆ. ಅಹಿಂದ ಸಮುದಾಯವೇ ಬಹುಜನರಾಗಿರುವ ದಾವಣಗೆರೆ ದಕ್ಷಿಣ ಅಸೆಂಬ್ಲಿ ಕ್ಷೇತ್ರದಲ್ಲಿ ಕಾಂಗ್ರೆಸ್ ನ್ಯಾಯವಾಗಿ ಆ ವರ್ಗದ ಅರ್ಹರೊಬ್ಬರಿಗೆ...

ನೀಟ್ ವಿವಾದ: ಪ್ರಶ್ನೆ ಪತ್ರಿಕೆ ಸೋರಿಕೆ ಜೊತೆಗೆ ಹೆಚ್ಚುತ್ತಿರುವ ವಿದ್ಯಾರ್ಥಿಗಳ ಆತ್ಮಹತ್ಯೆ

ರಾಜಸ್ಥಾನದಲ್ಲಿ ನಡೆದ ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ (ಸಿಬಿಐ) ತನಿಖೆ ವೇಗ ಪಡೆದುಕೊಂಡಿದೆ. ದೇಶದಾದ್ಯಂತ ಹಲವು ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ...

ಎಸ್‌ಐಆರ್‌ನಲ್ಲಿ ಮತದಾನದ ಹಕ್ಕು ಹೋಯ್ತು..ಈಗ ಸರ್ಕಾರಿ ಸೌಲಭ್ಯದ ಸರದಿ..ಮುಂದೆ ನಾಗರಿಕತ್ವ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುವುದು ಚುನಾವಣಾ ಆಯೋಗ ಭಾರತದ ಕೋಟ್ಯಾಂತರ ನಾಗರಿಕ ಅಮೂಲ್ಯವಾದ ಮತದಾನದ ಹಕ್ಕನ್ನು ಕಿತ್ತುಕೊಂಡ ಒಂದು ವ್ಯವಸ್ಥಿತ ಸಂಚು ಎನ್ನಬಹುದು. ಬಿಹಾರ, ಪಶ್ಚಿಮ ಬಂಗಾಳ, ತಮಿಳುನಾಡು,...

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...