Homeಮುಖಪುಟಗೋಧ್ರೋತ್ತರ ಗಲಭೆ: 131 ಸಾಕ್ಷಿಗಳ ಭದ್ರತೆ ವಾಪಸ್

ಗೋಧ್ರೋತ್ತರ ಗಲಭೆ: 131 ಸಾಕ್ಷಿಗಳ ಭದ್ರತೆ ವಾಪಸ್

- Advertisement -
- Advertisement -

2002ರಲ್ಲಿ ಗುಜರಾತ್‌ನಲ್ಲಿ ನಡೆದಿದ್ದ ಗೋಧ್ರಾ ರೈಲು ದಹನ ಮತ್ತು ನಂತರದ ದಂಗೆ ಪ್ರಕರಣಗಳಲ್ಲಿನ ಎಲ್ಲಾ 131 ಸಾಕ್ಷಿಗಳಿಗೆ ನೀಡಿದ್ದ ಭದ್ರತೆಯನ್ನು ವಿಶೇಷ ತನಿಖಾ ತಂಡ (SIT) ಹಿಂತೆಗೆದುಕೊಂಡಿದೆ ಮತ್ತು ಸಾಕ್ಷಿಗಳಿಗೆ ಯಾವುದೇ ಬೆದರಿಕೆಗಳು ಸುದೀರ್ಘ ಅವಧಿಯಲ್ಲಿ ಬಂದಿಲ್ಲ ಎಂದು ಹೇಳಿಕೊಂಡಿದೆ.

ಸಾಕ್ಷಿಗಳ ಜೊತೆಗೆ ಸಂತ್ರಸ್ತರಿಗೆ ಕಾನೂನು ಹೋರಾಟದಲ್ಲಿ ಸಹಾಯ ಮಾಡಿದ ಇಬ್ಬರು ವಕೀಲರಾದ ಎಂ ಎಂ ತಿರ್ಮಿಜಿ ಮತ್ತು ಎಸ್ ಎಂ ವೋಹ್ರಾ  ಮತ್ತು ಪ್ರಕರಣದಲ್ಲಿ ತೀರ್ಪನ್ನು ನೀಡಿದ್ದ ನ್ಯಾಯಾದೀಶರ ತಂಡದಲ್ಲಿದ್ದ ಜಡ್ಜ್‌ ಜ್ಯೋತ್ಸ್ನಾ ಯಾಗ್ನಿಕ್‌ ಅವರ ಭದ್ರತೆಯನ್ನು ಕೂಡ ಹಿಂಪಡೆಯಲಾಗಿದೆ.

ಈ ಬಗ್ಗೆ ಎಸ್‌ಐಟಿ ಮಾಹಿತಿಯನ್ನು ನೀಡಿದ್ದು, ಬೆದರಿಕೆ ಬಗ್ಗೆ ಪರಿಶೀಲನೆಯ ನಂತರ ಡಿ.13ರಂದು ಭದ್ರತೆಯನ್ನು ಹಿಂಪಡೆಯಲಾಗಿದೆ. ಬಹುಪಾಲು ಸಾಕ್ಷಿಗಳಿಗೆ 2003ರಿಂದ ರಾಜ್ಯ ಸರ್ಕಾರದಿಂದ ರಕ್ಷಣೆ ನೀಡಲಾಗಿತ್ತು. ನ್ಯಾಯಾಲಯದ ಮುಂದೆ ಸಾಕ್ಷಿ ಹೇಳುವ ವಿಚಾರದಲ್ಲಿ ಯಾವುದೇ ಸಾಕ್ಷಿಗಳಿಗೆ ಬೆದರಿಕೆ ಅಥವಾ ಒತ್ತಡವನ್ನು ಹಾಕಲಾಗಿಲ್ಲ ಎಂದು ಎಸ್‌ಐಟಿ ಅಧಿಕಾರಿಗಳು ಕಂಡುಕೊಂಡ ಬಳಿಕ ಈ ನಿರ್ಧಾರಕ್ಕೆ ಬರಲಾಗಿದೆ ಎಂದು ಹೇಳಿದೆ.

ಸಾಕ್ಷಿಗಳಿಗೆ ಯಾವುದೇ ಬೆದರಿಕೆ ಹಾಕಲಾಗಿಲ್ಲ ಎಂದು ಖಚಿತಪಡಿಸಿದ ನಂತರ ನಾವು ಸಾಕ್ಷಿಗಳಿಂದ ಭದ್ರತೆಯನ್ನು ತೆಗೆದುಹಾಕಿದ್ದೇವೆ. ಅವರಲ್ಲಿ ಯಾರೂ ಬೆದರಿಕೆ ಅಥವಾ ಹಲ್ಲೆಯನ್ನು ಎದುರಿಸಿಲ್ಲ ಎಂದು ಎಸ್‌ಐಟಿ ತಂಡದ ಸದಸ್ಯ ಎ ಕೆ ಮಲ್ಹೋತ್ರಾ ಹೇಳಿದ್ದಾರೆ.

ಈ ಹಿಂದೆ ಆ.2021ರಲ್ಲಿ ಎಸ್‌ಐಟಿ 25 ಸಾಕ್ಷಿಗಳಿಗೆ ಯಾವುದೇ ಬೆದರಿಕೆ ಇಲ್ಲ ಎಂದು ಉಲ್ಲೇಖಿಸಿ ಅವರಿಗೆ ನೀಡಿದ್ದ ಭದ್ರತೆಯನ್ನು ಹಿಂತೆಗೆದುಕೊಂಡಿತ್ತು. ಇವರಿಗೆ ಸಿಐಎಸ್ಎಫ್ ಸಿಬ್ಬಂದಿ ಮತ್ತು ಸ್ಥಳೀಯ ಪೊಲೀಸರು ಭದ್ರತೆ ನೀಡುತ್ತಿದ್ದರು.

ಗೃಹ ಸಚಿವ ಹರ್ಷ ಸಾಂಘವಿ, ರಾಜ್ಯ ಪೊಲೀಸ್ ಮಹಾನಿರ್ದೇಶಕ ವಿಕಾಸ್ ಸಹಾಯ್ ಮತ್ತು ಎಸ್‌ಐಟಿಯ ಮಾತುಕತೆ ಬಳಿಕ ಸಾಕ್ಷಿಗಳಿಗೆ ರಕ್ಷಣೆಯನ್ನು ತೆಗೆದುಹಾಕಲು ಡಿ.13ರಂದು ಆದೇಶವನ್ನು ನೀಡಲಾಯಿತು. ಇದಲ್ಲದೆ ಹತ್ಯೆಗೀಡಾದ ಕಾಂಗ್ರೆಸ್ ಸಂಸದ ಅಹ್ಸಾನ್ ಜಾಫ್ರಿ ಅವರ ಪತ್ನಿ ಜಾಕಿಯಾ ಜಾಫ್ರಿ ಅವರ ಭದ್ರತೆಯನ್ನು ಕೂಡ ಸಿಐಎಸ್‌ಎಫ್‌ನಿಂದ ಸ್ಥಳೀಯ ಪೊಲೀಸರಿಗೆ ಇಳಿಸಲಾಗಿದೆ.

ಸಾಕ್ಷಿಗಳ ರಕ್ಷಣೆಗಾಗಿ ಒಟ್ಟು 156 ಪೊಲೀಸರು ಮತ್ತು 98 ಸಿಐಎಸ್ಎಫ್ ಸಿಬ್ಬಂದಿಗಳನ್ನು ನೇಮಿಸಲಾಗಿತ್ತು. ನರೋಡಾ ಪಾಟಿಯಾ ಹತ್ಯಾಕಾಂಡದ ತೀರ್ಪು ನೀಡಿ 12 ವರ್ಷಗಳು ಕಳೆದಿವೆ ಎಂಬ ಕಾರಣಕ್ಕಾಗಿ ನ್ಯಾಯಾಧೀಶೆ ಯಾಗ್ನಿಕ್ ಅವರ ಭದ್ರತೆಯನ್ನು ತೆಗೆದುಹಾಕಲಾಗಿದೆ ಎಂದು ಎಸ್‌ಐಟಿ ಹೇಳಿದೆ. ಬಿಜೆಪಿಯ ಮಾಜಿ ಸಚಿವೆ ಮಾಯಾ ಕೊಡ್ನಾನಿ ಮತ್ತು ವಿಎಚ್‌ಪಿ ನಾಯಕ ಬಾಬು ಬಜರಂಗಿ ಸೇರಿದಂತೆ 32 ಆರೋಪಿಗಳನ್ನು ಅವರು ತಪ್ಪಿತಸ್ಥರೆಂದು ಘೋಷಿಸಿದ್ದರು. 2018ರಲ್ಲಿ ಕೊಡ್ನಾನಿ ಸೇರಿದಂತೆ 18 ಮಂದಿಯನ್ನು ಹೈಕೋರ್ಟ್ ಖುಲಾಸೆಗೊಳಿಸಿತ್ತು. ಗಲಭೆ ಪ್ರಕರಣಗಳ ತೀರ್ಪು ನೀಡಿದ್ದ 9 ನ್ಯಾಯಾಧೀಶರ ಪೈಕಿ ರಕ್ಷಣೆ ಕೋರಿದ ನ್ಯಾಯಾಧೀಶರಲ್ಲಿ ಯಾಗ್ನಿಕ್ ಒಬ್ಬರೇ ಆಗಿದ್ದರು ಎಂದು ಎಸ್‌ಐಟಿ ಅಧಿಕಾರಿಗಳು ತಿಳಿಸಿದ್ದಾರೆ. ತನಗೆ ಹಲವಾರು ಬೆದರಿಕೆ ಪತ್ರಗಳು ಮತ್ತು ಫೋನ್ ಕರೆಗಳು ಬಂದಿವೆ ಎಂದು ಯಾಗ್ನಿಕ್ ರಕ್ಷಣೆ ಕೋರಿದ್ದರು.

ಡಿ.13ರಂದು ರಕ್ಷಣೆಯನ್ನು ತೆಗೆದುಹಾಕುವ ಆದೇಶವನ್ನು ಹೊರಡಿಸುವವರೆಗೂ ಸಿಐಎಸ್ಎಫ್ ಸಿಬ್ಬಂದಿ ಗಲಭೆ ಪೀಡಿತ ಪ್ರದೇಶಗಳಲ್ಲಿ ಗಸ್ತು ತಿರುಗುತ್ತಿದ್ದರು. ಭದ್ರತಾ ಶಾಶ್ವತವಾಗಿ ಮುಂದುವರಿಸಲು ಸಾಧ್ಯವಿಲ್ಲ. ಎಲ್ಲಾ 9 ಪ್ರಮುಖ ಗಲಭೆ ಪ್ರಕರಣಗಳ (ನರೋಡಾ ಪಾಟಿಯಾ, ನರೋಡಾ ಗಾಮ್, ಗುಲ್ಬರ್ಗ್ ಸೊಸೈಟಿ, ದೀಪ್ದಾ ದರ್ವಾಜಾ, ಸರ್ದಾರ್‌ಪುರ) ವಿಚಾರಣೆಗಳು ಈಗಾಗಲೇ ಮುಗಿದಿವೆ. ಕೆಲವು ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟ್‌ನಲ್ಲಿ ಬಾಕಿ ಇವೆ. ಈ ಬಗ್ಗೆ ಯಾವುದೇ ಸಾಕ್ಷಿಗಳು ಬೆದರಿಕೆ ಅಥವಾ ಹಲ್ಲೆಯ ಬಗ್ಗೆ ದೂರು ನೀಡಿಲ್ಲ ಎಂದು ಎಸ್‌ಐಟಿ ಅಧಿಕಾರಿಗಳು ಹೇಳಿದ್ದಾರೆ.

2002ರ ಫೆ.27ರಂದು ಅಯೋಧ್ಯೆಯಿಂದ ಕರಸೇವಕರು ಬರುವಾಗ ಸಬರಮತಿ ಎಕ್ಸ್‌ಪ್ರೆಸ್ ರೈಲು ಗುಜರಾತ್‌ನ ಗೋಧ್ರಾ ರೈಲ್ವೆ ನಿಲ್ದಾಣದ ಬಳಿ ನಿಲ್ಲಿಸಿತ್ತು. ಆಗ ರೈಲಿನ ನಾಲ್ಕು ಬೋಗಿಗಳಿಗೆ ಬೆಂಕಿ ತಗುಲಿ 59 ಮಂದಿ ಮೃತಪಟ್ಟಿದ್ದರು. ಅವರಲ್ಲಿ 29 ಮಂದಿ ಪುರುಷರು, 22 ಮಂದಿ ಮಹಿಳೆಯರು ಹಾಗೂ 8 ಮಕ್ಕಳು ಸೇರಿದ್ದರು.

ಗೋಧ್ರಾ ರೈಲು ದರುಂತ ಘಟನೆಯನ್ನು ವಿಶ್ವ ಹಿಂದೂ ಪರಿಷತ್ ಮತ್ತಿತರ ಬಲಪಂಥೀಯ ಸಂಘಟನೆಗಳು ಬಲವಾಗಿ ಖಂಡಿಸಿದ್ದವು. ಗುಜರಾತ್ ಬಂದ್‌ಗೆ ಕರೆಕೊಡಲಾಯಿತು. ಫೆ.28ರಂದು ಗುಜರಾತ್‌ನಾದ್ಯಂತ ಕೋಮುಗಲಭೆಗಳು ನಡೆದವು. ಅಂದು ಸಂಜೆ 27 ನಗರ ಮತ್ತು ಪಟ್ಟಣಗಳಲ್ಲಿ ಕರ್ಫ್ಯೂ ಹಾಕಲಾಯಿತು. ರಾಜ್ಯ ಸರಕಾರ ಮತ್ತು ಪೊಲೀಸ್ ಇಲಾಖೆ ಈ ಗಲಭೆ ತಡೆಯಲು ಮನಃಪೂರ್ವಕವಾಗಿ ಕೆಲಸ ಮಾಡಲಿಲ್ಲ ಎಂಬ ಆರೋಪ ಕೇಳಿ ಬಂದಿತ್ತು. ರಾಜ್ಯ ಸರಕಾರದ ಮುಂದಾಳುಗಳು ನೀಡಿದರೆನ್ನಲಾದ ಪ್ರಚೋದನಕಾರಿ ಹೇಳಿಕೆಗಳು ಗಲಭೆಕೋರರಿಗೆ ಇನ್ನಷ್ಟು ಪ್ರಚೋದನೆ ನೀಡಿದವು. ಮುಸ್ಲಿಮ್ ಸಮುದಾಯದವರನ್ನು ಗುರಿ ಮಾಡಿ ಹಲವೆಡೆ ಭೀಕರ ಹತ್ಯಾಕಾಂಡವೇ ನಡೆದಿದೆ. ಆ ಬಳಿಕದ ಗಲಭೆಗಳಲ್ಲಿ 1,044 ಮಂದಿ ಸಾವನ್ನಪ್ಪಿರುವುದು ಅಧಿಕೃತವಾಗಿ ದಾಖಲಾಗಿರುವ ಮಾಹಿತಿ. 2,500 ಜನರು ಗಾಯಗೊಂಡಿದ್ದಾರೆ. ಇನ್ನೂರಕ್ಕೂ ಹೆಚ್ಚು ಮಂದಿ ನಾಪತ್ತೆಯಾಗಿದ್ದರು.

ಅಹ್ಮದಾಬಾದ್‌ನ ಗುಲ್‌ಬರ್ಗ್ ಸೊಸೈಟಿ ಹತ್ಯಾಕಾಂಡಾದಲ್ಲಿ ಫೆ. 28ರಂದು 69 ಮಂದಿ ಹತ್ಯೆಯಾಗಿದ್ದರು. ಅದರಲ್ಲಿ ಕಾಂಗ್ರೆಸ್ ಮುಖಂಡ ಮತ್ತು ಮಾಜಿ ಸಂಸದರಾಗಿದ್ದ ಎಹ್ಸಾನ್ ಜಫ್ರಿ ಕೂಡ ಸೇರಿದ್ದರು. ಗುಲ್ಬರ್ಗ್ ಸೊಸೈಟಿ ಹತ್ಯಾಕಾಂಡದಷ್ಟೇ ಭೀಕರವಾದ ಹಲವು ಹತ್ಯಾಕಾಂಡಗಳು ಗುಜರಾತ್‌ನ ವಿವಿಧೆಡೆ ಸಂಭವಿಸಿವೆ. ಬೆಸ್ಟ್ ಬೇಕರಿ, ಬಿಲ್ಕಿಸ್ ಬಾನೋ, ಅವಧೂತ್‌ನಗರ್, ದನಿಲಿಮಡಾ, ಎರಾಲ್, ಪವಗಡ್ ಧಿಕ್ವಾ, ದಿಪ್ಡ ದರವಾಜ, ನರೋಡ ಪಾಟಿಯಾ ಹತ್ಯಾಕಾಂಡಗಳು ಘೋರ ದುರಂತದ ಘಟನೆಗಳಾಗಿವೆ.

ಇದನ್ನು ಓದಿ: ಚುನಾವಣಾ ಆಯುಕ್ತರ ನೇಮಕಾತಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...