Homeಮುಖಪುಟಗೋಧ್ರೋತ್ತರ ಗಲಭೆ: 131 ಸಾಕ್ಷಿಗಳ ಭದ್ರತೆ ವಾಪಸ್

ಗೋಧ್ರೋತ್ತರ ಗಲಭೆ: 131 ಸಾಕ್ಷಿಗಳ ಭದ್ರತೆ ವಾಪಸ್

- Advertisement -
- Advertisement -

2002ರಲ್ಲಿ ಗುಜರಾತ್‌ನಲ್ಲಿ ನಡೆದಿದ್ದ ಗೋಧ್ರಾ ರೈಲು ದಹನ ಮತ್ತು ನಂತರದ ದಂಗೆ ಪ್ರಕರಣಗಳಲ್ಲಿನ ಎಲ್ಲಾ 131 ಸಾಕ್ಷಿಗಳಿಗೆ ನೀಡಿದ್ದ ಭದ್ರತೆಯನ್ನು ವಿಶೇಷ ತನಿಖಾ ತಂಡ (SIT) ಹಿಂತೆಗೆದುಕೊಂಡಿದೆ ಮತ್ತು ಸಾಕ್ಷಿಗಳಿಗೆ ಯಾವುದೇ ಬೆದರಿಕೆಗಳು ಸುದೀರ್ಘ ಅವಧಿಯಲ್ಲಿ ಬಂದಿಲ್ಲ ಎಂದು ಹೇಳಿಕೊಂಡಿದೆ.

ಸಾಕ್ಷಿಗಳ ಜೊತೆಗೆ ಸಂತ್ರಸ್ತರಿಗೆ ಕಾನೂನು ಹೋರಾಟದಲ್ಲಿ ಸಹಾಯ ಮಾಡಿದ ಇಬ್ಬರು ವಕೀಲರಾದ ಎಂ ಎಂ ತಿರ್ಮಿಜಿ ಮತ್ತು ಎಸ್ ಎಂ ವೋಹ್ರಾ  ಮತ್ತು ಪ್ರಕರಣದಲ್ಲಿ ತೀರ್ಪನ್ನು ನೀಡಿದ್ದ ನ್ಯಾಯಾದೀಶರ ತಂಡದಲ್ಲಿದ್ದ ಜಡ್ಜ್‌ ಜ್ಯೋತ್ಸ್ನಾ ಯಾಗ್ನಿಕ್‌ ಅವರ ಭದ್ರತೆಯನ್ನು ಕೂಡ ಹಿಂಪಡೆಯಲಾಗಿದೆ.

ಈ ಬಗ್ಗೆ ಎಸ್‌ಐಟಿ ಮಾಹಿತಿಯನ್ನು ನೀಡಿದ್ದು, ಬೆದರಿಕೆ ಬಗ್ಗೆ ಪರಿಶೀಲನೆಯ ನಂತರ ಡಿ.13ರಂದು ಭದ್ರತೆಯನ್ನು ಹಿಂಪಡೆಯಲಾಗಿದೆ. ಬಹುಪಾಲು ಸಾಕ್ಷಿಗಳಿಗೆ 2003ರಿಂದ ರಾಜ್ಯ ಸರ್ಕಾರದಿಂದ ರಕ್ಷಣೆ ನೀಡಲಾಗಿತ್ತು. ನ್ಯಾಯಾಲಯದ ಮುಂದೆ ಸಾಕ್ಷಿ ಹೇಳುವ ವಿಚಾರದಲ್ಲಿ ಯಾವುದೇ ಸಾಕ್ಷಿಗಳಿಗೆ ಬೆದರಿಕೆ ಅಥವಾ ಒತ್ತಡವನ್ನು ಹಾಕಲಾಗಿಲ್ಲ ಎಂದು ಎಸ್‌ಐಟಿ ಅಧಿಕಾರಿಗಳು ಕಂಡುಕೊಂಡ ಬಳಿಕ ಈ ನಿರ್ಧಾರಕ್ಕೆ ಬರಲಾಗಿದೆ ಎಂದು ಹೇಳಿದೆ.

ಸಾಕ್ಷಿಗಳಿಗೆ ಯಾವುದೇ ಬೆದರಿಕೆ ಹಾಕಲಾಗಿಲ್ಲ ಎಂದು ಖಚಿತಪಡಿಸಿದ ನಂತರ ನಾವು ಸಾಕ್ಷಿಗಳಿಂದ ಭದ್ರತೆಯನ್ನು ತೆಗೆದುಹಾಕಿದ್ದೇವೆ. ಅವರಲ್ಲಿ ಯಾರೂ ಬೆದರಿಕೆ ಅಥವಾ ಹಲ್ಲೆಯನ್ನು ಎದುರಿಸಿಲ್ಲ ಎಂದು ಎಸ್‌ಐಟಿ ತಂಡದ ಸದಸ್ಯ ಎ ಕೆ ಮಲ್ಹೋತ್ರಾ ಹೇಳಿದ್ದಾರೆ.

ಈ ಹಿಂದೆ ಆ.2021ರಲ್ಲಿ ಎಸ್‌ಐಟಿ 25 ಸಾಕ್ಷಿಗಳಿಗೆ ಯಾವುದೇ ಬೆದರಿಕೆ ಇಲ್ಲ ಎಂದು ಉಲ್ಲೇಖಿಸಿ ಅವರಿಗೆ ನೀಡಿದ್ದ ಭದ್ರತೆಯನ್ನು ಹಿಂತೆಗೆದುಕೊಂಡಿತ್ತು. ಇವರಿಗೆ ಸಿಐಎಸ್ಎಫ್ ಸಿಬ್ಬಂದಿ ಮತ್ತು ಸ್ಥಳೀಯ ಪೊಲೀಸರು ಭದ್ರತೆ ನೀಡುತ್ತಿದ್ದರು.

ಗೃಹ ಸಚಿವ ಹರ್ಷ ಸಾಂಘವಿ, ರಾಜ್ಯ ಪೊಲೀಸ್ ಮಹಾನಿರ್ದೇಶಕ ವಿಕಾಸ್ ಸಹಾಯ್ ಮತ್ತು ಎಸ್‌ಐಟಿಯ ಮಾತುಕತೆ ಬಳಿಕ ಸಾಕ್ಷಿಗಳಿಗೆ ರಕ್ಷಣೆಯನ್ನು ತೆಗೆದುಹಾಕಲು ಡಿ.13ರಂದು ಆದೇಶವನ್ನು ನೀಡಲಾಯಿತು. ಇದಲ್ಲದೆ ಹತ್ಯೆಗೀಡಾದ ಕಾಂಗ್ರೆಸ್ ಸಂಸದ ಅಹ್ಸಾನ್ ಜಾಫ್ರಿ ಅವರ ಪತ್ನಿ ಜಾಕಿಯಾ ಜಾಫ್ರಿ ಅವರ ಭದ್ರತೆಯನ್ನು ಕೂಡ ಸಿಐಎಸ್‌ಎಫ್‌ನಿಂದ ಸ್ಥಳೀಯ ಪೊಲೀಸರಿಗೆ ಇಳಿಸಲಾಗಿದೆ.

ಸಾಕ್ಷಿಗಳ ರಕ್ಷಣೆಗಾಗಿ ಒಟ್ಟು 156 ಪೊಲೀಸರು ಮತ್ತು 98 ಸಿಐಎಸ್ಎಫ್ ಸಿಬ್ಬಂದಿಗಳನ್ನು ನೇಮಿಸಲಾಗಿತ್ತು. ನರೋಡಾ ಪಾಟಿಯಾ ಹತ್ಯಾಕಾಂಡದ ತೀರ್ಪು ನೀಡಿ 12 ವರ್ಷಗಳು ಕಳೆದಿವೆ ಎಂಬ ಕಾರಣಕ್ಕಾಗಿ ನ್ಯಾಯಾಧೀಶೆ ಯಾಗ್ನಿಕ್ ಅವರ ಭದ್ರತೆಯನ್ನು ತೆಗೆದುಹಾಕಲಾಗಿದೆ ಎಂದು ಎಸ್‌ಐಟಿ ಹೇಳಿದೆ. ಬಿಜೆಪಿಯ ಮಾಜಿ ಸಚಿವೆ ಮಾಯಾ ಕೊಡ್ನಾನಿ ಮತ್ತು ವಿಎಚ್‌ಪಿ ನಾಯಕ ಬಾಬು ಬಜರಂಗಿ ಸೇರಿದಂತೆ 32 ಆರೋಪಿಗಳನ್ನು ಅವರು ತಪ್ಪಿತಸ್ಥರೆಂದು ಘೋಷಿಸಿದ್ದರು. 2018ರಲ್ಲಿ ಕೊಡ್ನಾನಿ ಸೇರಿದಂತೆ 18 ಮಂದಿಯನ್ನು ಹೈಕೋರ್ಟ್ ಖುಲಾಸೆಗೊಳಿಸಿತ್ತು. ಗಲಭೆ ಪ್ರಕರಣಗಳ ತೀರ್ಪು ನೀಡಿದ್ದ 9 ನ್ಯಾಯಾಧೀಶರ ಪೈಕಿ ರಕ್ಷಣೆ ಕೋರಿದ ನ್ಯಾಯಾಧೀಶರಲ್ಲಿ ಯಾಗ್ನಿಕ್ ಒಬ್ಬರೇ ಆಗಿದ್ದರು ಎಂದು ಎಸ್‌ಐಟಿ ಅಧಿಕಾರಿಗಳು ತಿಳಿಸಿದ್ದಾರೆ. ತನಗೆ ಹಲವಾರು ಬೆದರಿಕೆ ಪತ್ರಗಳು ಮತ್ತು ಫೋನ್ ಕರೆಗಳು ಬಂದಿವೆ ಎಂದು ಯಾಗ್ನಿಕ್ ರಕ್ಷಣೆ ಕೋರಿದ್ದರು.

ಡಿ.13ರಂದು ರಕ್ಷಣೆಯನ್ನು ತೆಗೆದುಹಾಕುವ ಆದೇಶವನ್ನು ಹೊರಡಿಸುವವರೆಗೂ ಸಿಐಎಸ್ಎಫ್ ಸಿಬ್ಬಂದಿ ಗಲಭೆ ಪೀಡಿತ ಪ್ರದೇಶಗಳಲ್ಲಿ ಗಸ್ತು ತಿರುಗುತ್ತಿದ್ದರು. ಭದ್ರತಾ ಶಾಶ್ವತವಾಗಿ ಮುಂದುವರಿಸಲು ಸಾಧ್ಯವಿಲ್ಲ. ಎಲ್ಲಾ 9 ಪ್ರಮುಖ ಗಲಭೆ ಪ್ರಕರಣಗಳ (ನರೋಡಾ ಪಾಟಿಯಾ, ನರೋಡಾ ಗಾಮ್, ಗುಲ್ಬರ್ಗ್ ಸೊಸೈಟಿ, ದೀಪ್ದಾ ದರ್ವಾಜಾ, ಸರ್ದಾರ್‌ಪುರ) ವಿಚಾರಣೆಗಳು ಈಗಾಗಲೇ ಮುಗಿದಿವೆ. ಕೆಲವು ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟ್‌ನಲ್ಲಿ ಬಾಕಿ ಇವೆ. ಈ ಬಗ್ಗೆ ಯಾವುದೇ ಸಾಕ್ಷಿಗಳು ಬೆದರಿಕೆ ಅಥವಾ ಹಲ್ಲೆಯ ಬಗ್ಗೆ ದೂರು ನೀಡಿಲ್ಲ ಎಂದು ಎಸ್‌ಐಟಿ ಅಧಿಕಾರಿಗಳು ಹೇಳಿದ್ದಾರೆ.

2002ರ ಫೆ.27ರಂದು ಅಯೋಧ್ಯೆಯಿಂದ ಕರಸೇವಕರು ಬರುವಾಗ ಸಬರಮತಿ ಎಕ್ಸ್‌ಪ್ರೆಸ್ ರೈಲು ಗುಜರಾತ್‌ನ ಗೋಧ್ರಾ ರೈಲ್ವೆ ನಿಲ್ದಾಣದ ಬಳಿ ನಿಲ್ಲಿಸಿತ್ತು. ಆಗ ರೈಲಿನ ನಾಲ್ಕು ಬೋಗಿಗಳಿಗೆ ಬೆಂಕಿ ತಗುಲಿ 59 ಮಂದಿ ಮೃತಪಟ್ಟಿದ್ದರು. ಅವರಲ್ಲಿ 29 ಮಂದಿ ಪುರುಷರು, 22 ಮಂದಿ ಮಹಿಳೆಯರು ಹಾಗೂ 8 ಮಕ್ಕಳು ಸೇರಿದ್ದರು.

ಗೋಧ್ರಾ ರೈಲು ದರುಂತ ಘಟನೆಯನ್ನು ವಿಶ್ವ ಹಿಂದೂ ಪರಿಷತ್ ಮತ್ತಿತರ ಬಲಪಂಥೀಯ ಸಂಘಟನೆಗಳು ಬಲವಾಗಿ ಖಂಡಿಸಿದ್ದವು. ಗುಜರಾತ್ ಬಂದ್‌ಗೆ ಕರೆಕೊಡಲಾಯಿತು. ಫೆ.28ರಂದು ಗುಜರಾತ್‌ನಾದ್ಯಂತ ಕೋಮುಗಲಭೆಗಳು ನಡೆದವು. ಅಂದು ಸಂಜೆ 27 ನಗರ ಮತ್ತು ಪಟ್ಟಣಗಳಲ್ಲಿ ಕರ್ಫ್ಯೂ ಹಾಕಲಾಯಿತು. ರಾಜ್ಯ ಸರಕಾರ ಮತ್ತು ಪೊಲೀಸ್ ಇಲಾಖೆ ಈ ಗಲಭೆ ತಡೆಯಲು ಮನಃಪೂರ್ವಕವಾಗಿ ಕೆಲಸ ಮಾಡಲಿಲ್ಲ ಎಂಬ ಆರೋಪ ಕೇಳಿ ಬಂದಿತ್ತು. ರಾಜ್ಯ ಸರಕಾರದ ಮುಂದಾಳುಗಳು ನೀಡಿದರೆನ್ನಲಾದ ಪ್ರಚೋದನಕಾರಿ ಹೇಳಿಕೆಗಳು ಗಲಭೆಕೋರರಿಗೆ ಇನ್ನಷ್ಟು ಪ್ರಚೋದನೆ ನೀಡಿದವು. ಮುಸ್ಲಿಮ್ ಸಮುದಾಯದವರನ್ನು ಗುರಿ ಮಾಡಿ ಹಲವೆಡೆ ಭೀಕರ ಹತ್ಯಾಕಾಂಡವೇ ನಡೆದಿದೆ. ಆ ಬಳಿಕದ ಗಲಭೆಗಳಲ್ಲಿ 1,044 ಮಂದಿ ಸಾವನ್ನಪ್ಪಿರುವುದು ಅಧಿಕೃತವಾಗಿ ದಾಖಲಾಗಿರುವ ಮಾಹಿತಿ. 2,500 ಜನರು ಗಾಯಗೊಂಡಿದ್ದಾರೆ. ಇನ್ನೂರಕ್ಕೂ ಹೆಚ್ಚು ಮಂದಿ ನಾಪತ್ತೆಯಾಗಿದ್ದರು.

ಅಹ್ಮದಾಬಾದ್‌ನ ಗುಲ್‌ಬರ್ಗ್ ಸೊಸೈಟಿ ಹತ್ಯಾಕಾಂಡಾದಲ್ಲಿ ಫೆ. 28ರಂದು 69 ಮಂದಿ ಹತ್ಯೆಯಾಗಿದ್ದರು. ಅದರಲ್ಲಿ ಕಾಂಗ್ರೆಸ್ ಮುಖಂಡ ಮತ್ತು ಮಾಜಿ ಸಂಸದರಾಗಿದ್ದ ಎಹ್ಸಾನ್ ಜಫ್ರಿ ಕೂಡ ಸೇರಿದ್ದರು. ಗುಲ್ಬರ್ಗ್ ಸೊಸೈಟಿ ಹತ್ಯಾಕಾಂಡದಷ್ಟೇ ಭೀಕರವಾದ ಹಲವು ಹತ್ಯಾಕಾಂಡಗಳು ಗುಜರಾತ್‌ನ ವಿವಿಧೆಡೆ ಸಂಭವಿಸಿವೆ. ಬೆಸ್ಟ್ ಬೇಕರಿ, ಬಿಲ್ಕಿಸ್ ಬಾನೋ, ಅವಧೂತ್‌ನಗರ್, ದನಿಲಿಮಡಾ, ಎರಾಲ್, ಪವಗಡ್ ಧಿಕ್ವಾ, ದಿಪ್ಡ ದರವಾಜ, ನರೋಡ ಪಾಟಿಯಾ ಹತ್ಯಾಕಾಂಡಗಳು ಘೋರ ದುರಂತದ ಘಟನೆಗಳಾಗಿವೆ.

ಇದನ್ನು ಓದಿ: ಚುನಾವಣಾ ಆಯುಕ್ತರ ನೇಮಕಾತಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...