Homeಮುಖಪುಟಗೋಧ್ರೋತ್ತರ ಗಲಭೆ: 131 ಸಾಕ್ಷಿಗಳ ಭದ್ರತೆ ವಾಪಸ್

ಗೋಧ್ರೋತ್ತರ ಗಲಭೆ: 131 ಸಾಕ್ಷಿಗಳ ಭದ್ರತೆ ವಾಪಸ್

- Advertisement -
- Advertisement -

2002ರಲ್ಲಿ ಗುಜರಾತ್‌ನಲ್ಲಿ ನಡೆದಿದ್ದ ಗೋಧ್ರಾ ರೈಲು ದಹನ ಮತ್ತು ನಂತರದ ದಂಗೆ ಪ್ರಕರಣಗಳಲ್ಲಿನ ಎಲ್ಲಾ 131 ಸಾಕ್ಷಿಗಳಿಗೆ ನೀಡಿದ್ದ ಭದ್ರತೆಯನ್ನು ವಿಶೇಷ ತನಿಖಾ ತಂಡ (SIT) ಹಿಂತೆಗೆದುಕೊಂಡಿದೆ ಮತ್ತು ಸಾಕ್ಷಿಗಳಿಗೆ ಯಾವುದೇ ಬೆದರಿಕೆಗಳು ಸುದೀರ್ಘ ಅವಧಿಯಲ್ಲಿ ಬಂದಿಲ್ಲ ಎಂದು ಹೇಳಿಕೊಂಡಿದೆ.

ಸಾಕ್ಷಿಗಳ ಜೊತೆಗೆ ಸಂತ್ರಸ್ತರಿಗೆ ಕಾನೂನು ಹೋರಾಟದಲ್ಲಿ ಸಹಾಯ ಮಾಡಿದ ಇಬ್ಬರು ವಕೀಲರಾದ ಎಂ ಎಂ ತಿರ್ಮಿಜಿ ಮತ್ತು ಎಸ್ ಎಂ ವೋಹ್ರಾ  ಮತ್ತು ಪ್ರಕರಣದಲ್ಲಿ ತೀರ್ಪನ್ನು ನೀಡಿದ್ದ ನ್ಯಾಯಾದೀಶರ ತಂಡದಲ್ಲಿದ್ದ ಜಡ್ಜ್‌ ಜ್ಯೋತ್ಸ್ನಾ ಯಾಗ್ನಿಕ್‌ ಅವರ ಭದ್ರತೆಯನ್ನು ಕೂಡ ಹಿಂಪಡೆಯಲಾಗಿದೆ.

ಈ ಬಗ್ಗೆ ಎಸ್‌ಐಟಿ ಮಾಹಿತಿಯನ್ನು ನೀಡಿದ್ದು, ಬೆದರಿಕೆ ಬಗ್ಗೆ ಪರಿಶೀಲನೆಯ ನಂತರ ಡಿ.13ರಂದು ಭದ್ರತೆಯನ್ನು ಹಿಂಪಡೆಯಲಾಗಿದೆ. ಬಹುಪಾಲು ಸಾಕ್ಷಿಗಳಿಗೆ 2003ರಿಂದ ರಾಜ್ಯ ಸರ್ಕಾರದಿಂದ ರಕ್ಷಣೆ ನೀಡಲಾಗಿತ್ತು. ನ್ಯಾಯಾಲಯದ ಮುಂದೆ ಸಾಕ್ಷಿ ಹೇಳುವ ವಿಚಾರದಲ್ಲಿ ಯಾವುದೇ ಸಾಕ್ಷಿಗಳಿಗೆ ಬೆದರಿಕೆ ಅಥವಾ ಒತ್ತಡವನ್ನು ಹಾಕಲಾಗಿಲ್ಲ ಎಂದು ಎಸ್‌ಐಟಿ ಅಧಿಕಾರಿಗಳು ಕಂಡುಕೊಂಡ ಬಳಿಕ ಈ ನಿರ್ಧಾರಕ್ಕೆ ಬರಲಾಗಿದೆ ಎಂದು ಹೇಳಿದೆ.

ಸಾಕ್ಷಿಗಳಿಗೆ ಯಾವುದೇ ಬೆದರಿಕೆ ಹಾಕಲಾಗಿಲ್ಲ ಎಂದು ಖಚಿತಪಡಿಸಿದ ನಂತರ ನಾವು ಸಾಕ್ಷಿಗಳಿಂದ ಭದ್ರತೆಯನ್ನು ತೆಗೆದುಹಾಕಿದ್ದೇವೆ. ಅವರಲ್ಲಿ ಯಾರೂ ಬೆದರಿಕೆ ಅಥವಾ ಹಲ್ಲೆಯನ್ನು ಎದುರಿಸಿಲ್ಲ ಎಂದು ಎಸ್‌ಐಟಿ ತಂಡದ ಸದಸ್ಯ ಎ ಕೆ ಮಲ್ಹೋತ್ರಾ ಹೇಳಿದ್ದಾರೆ.

ಈ ಹಿಂದೆ ಆ.2021ರಲ್ಲಿ ಎಸ್‌ಐಟಿ 25 ಸಾಕ್ಷಿಗಳಿಗೆ ಯಾವುದೇ ಬೆದರಿಕೆ ಇಲ್ಲ ಎಂದು ಉಲ್ಲೇಖಿಸಿ ಅವರಿಗೆ ನೀಡಿದ್ದ ಭದ್ರತೆಯನ್ನು ಹಿಂತೆಗೆದುಕೊಂಡಿತ್ತು. ಇವರಿಗೆ ಸಿಐಎಸ್ಎಫ್ ಸಿಬ್ಬಂದಿ ಮತ್ತು ಸ್ಥಳೀಯ ಪೊಲೀಸರು ಭದ್ರತೆ ನೀಡುತ್ತಿದ್ದರು.

ಗೃಹ ಸಚಿವ ಹರ್ಷ ಸಾಂಘವಿ, ರಾಜ್ಯ ಪೊಲೀಸ್ ಮಹಾನಿರ್ದೇಶಕ ವಿಕಾಸ್ ಸಹಾಯ್ ಮತ್ತು ಎಸ್‌ಐಟಿಯ ಮಾತುಕತೆ ಬಳಿಕ ಸಾಕ್ಷಿಗಳಿಗೆ ರಕ್ಷಣೆಯನ್ನು ತೆಗೆದುಹಾಕಲು ಡಿ.13ರಂದು ಆದೇಶವನ್ನು ನೀಡಲಾಯಿತು. ಇದಲ್ಲದೆ ಹತ್ಯೆಗೀಡಾದ ಕಾಂಗ್ರೆಸ್ ಸಂಸದ ಅಹ್ಸಾನ್ ಜಾಫ್ರಿ ಅವರ ಪತ್ನಿ ಜಾಕಿಯಾ ಜಾಫ್ರಿ ಅವರ ಭದ್ರತೆಯನ್ನು ಕೂಡ ಸಿಐಎಸ್‌ಎಫ್‌ನಿಂದ ಸ್ಥಳೀಯ ಪೊಲೀಸರಿಗೆ ಇಳಿಸಲಾಗಿದೆ.

ಸಾಕ್ಷಿಗಳ ರಕ್ಷಣೆಗಾಗಿ ಒಟ್ಟು 156 ಪೊಲೀಸರು ಮತ್ತು 98 ಸಿಐಎಸ್ಎಫ್ ಸಿಬ್ಬಂದಿಗಳನ್ನು ನೇಮಿಸಲಾಗಿತ್ತು. ನರೋಡಾ ಪಾಟಿಯಾ ಹತ್ಯಾಕಾಂಡದ ತೀರ್ಪು ನೀಡಿ 12 ವರ್ಷಗಳು ಕಳೆದಿವೆ ಎಂಬ ಕಾರಣಕ್ಕಾಗಿ ನ್ಯಾಯಾಧೀಶೆ ಯಾಗ್ನಿಕ್ ಅವರ ಭದ್ರತೆಯನ್ನು ತೆಗೆದುಹಾಕಲಾಗಿದೆ ಎಂದು ಎಸ್‌ಐಟಿ ಹೇಳಿದೆ. ಬಿಜೆಪಿಯ ಮಾಜಿ ಸಚಿವೆ ಮಾಯಾ ಕೊಡ್ನಾನಿ ಮತ್ತು ವಿಎಚ್‌ಪಿ ನಾಯಕ ಬಾಬು ಬಜರಂಗಿ ಸೇರಿದಂತೆ 32 ಆರೋಪಿಗಳನ್ನು ಅವರು ತಪ್ಪಿತಸ್ಥರೆಂದು ಘೋಷಿಸಿದ್ದರು. 2018ರಲ್ಲಿ ಕೊಡ್ನಾನಿ ಸೇರಿದಂತೆ 18 ಮಂದಿಯನ್ನು ಹೈಕೋರ್ಟ್ ಖುಲಾಸೆಗೊಳಿಸಿತ್ತು. ಗಲಭೆ ಪ್ರಕರಣಗಳ ತೀರ್ಪು ನೀಡಿದ್ದ 9 ನ್ಯಾಯಾಧೀಶರ ಪೈಕಿ ರಕ್ಷಣೆ ಕೋರಿದ ನ್ಯಾಯಾಧೀಶರಲ್ಲಿ ಯಾಗ್ನಿಕ್ ಒಬ್ಬರೇ ಆಗಿದ್ದರು ಎಂದು ಎಸ್‌ಐಟಿ ಅಧಿಕಾರಿಗಳು ತಿಳಿಸಿದ್ದಾರೆ. ತನಗೆ ಹಲವಾರು ಬೆದರಿಕೆ ಪತ್ರಗಳು ಮತ್ತು ಫೋನ್ ಕರೆಗಳು ಬಂದಿವೆ ಎಂದು ಯಾಗ್ನಿಕ್ ರಕ್ಷಣೆ ಕೋರಿದ್ದರು.

ಡಿ.13ರಂದು ರಕ್ಷಣೆಯನ್ನು ತೆಗೆದುಹಾಕುವ ಆದೇಶವನ್ನು ಹೊರಡಿಸುವವರೆಗೂ ಸಿಐಎಸ್ಎಫ್ ಸಿಬ್ಬಂದಿ ಗಲಭೆ ಪೀಡಿತ ಪ್ರದೇಶಗಳಲ್ಲಿ ಗಸ್ತು ತಿರುಗುತ್ತಿದ್ದರು. ಭದ್ರತಾ ಶಾಶ್ವತವಾಗಿ ಮುಂದುವರಿಸಲು ಸಾಧ್ಯವಿಲ್ಲ. ಎಲ್ಲಾ 9 ಪ್ರಮುಖ ಗಲಭೆ ಪ್ರಕರಣಗಳ (ನರೋಡಾ ಪಾಟಿಯಾ, ನರೋಡಾ ಗಾಮ್, ಗುಲ್ಬರ್ಗ್ ಸೊಸೈಟಿ, ದೀಪ್ದಾ ದರ್ವಾಜಾ, ಸರ್ದಾರ್‌ಪುರ) ವಿಚಾರಣೆಗಳು ಈಗಾಗಲೇ ಮುಗಿದಿವೆ. ಕೆಲವು ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟ್‌ನಲ್ಲಿ ಬಾಕಿ ಇವೆ. ಈ ಬಗ್ಗೆ ಯಾವುದೇ ಸಾಕ್ಷಿಗಳು ಬೆದರಿಕೆ ಅಥವಾ ಹಲ್ಲೆಯ ಬಗ್ಗೆ ದೂರು ನೀಡಿಲ್ಲ ಎಂದು ಎಸ್‌ಐಟಿ ಅಧಿಕಾರಿಗಳು ಹೇಳಿದ್ದಾರೆ.

2002ರ ಫೆ.27ರಂದು ಅಯೋಧ್ಯೆಯಿಂದ ಕರಸೇವಕರು ಬರುವಾಗ ಸಬರಮತಿ ಎಕ್ಸ್‌ಪ್ರೆಸ್ ರೈಲು ಗುಜರಾತ್‌ನ ಗೋಧ್ರಾ ರೈಲ್ವೆ ನಿಲ್ದಾಣದ ಬಳಿ ನಿಲ್ಲಿಸಿತ್ತು. ಆಗ ರೈಲಿನ ನಾಲ್ಕು ಬೋಗಿಗಳಿಗೆ ಬೆಂಕಿ ತಗುಲಿ 59 ಮಂದಿ ಮೃತಪಟ್ಟಿದ್ದರು. ಅವರಲ್ಲಿ 29 ಮಂದಿ ಪುರುಷರು, 22 ಮಂದಿ ಮಹಿಳೆಯರು ಹಾಗೂ 8 ಮಕ್ಕಳು ಸೇರಿದ್ದರು.

ಗೋಧ್ರಾ ರೈಲು ದರುಂತ ಘಟನೆಯನ್ನು ವಿಶ್ವ ಹಿಂದೂ ಪರಿಷತ್ ಮತ್ತಿತರ ಬಲಪಂಥೀಯ ಸಂಘಟನೆಗಳು ಬಲವಾಗಿ ಖಂಡಿಸಿದ್ದವು. ಗುಜರಾತ್ ಬಂದ್‌ಗೆ ಕರೆಕೊಡಲಾಯಿತು. ಫೆ.28ರಂದು ಗುಜರಾತ್‌ನಾದ್ಯಂತ ಕೋಮುಗಲಭೆಗಳು ನಡೆದವು. ಅಂದು ಸಂಜೆ 27 ನಗರ ಮತ್ತು ಪಟ್ಟಣಗಳಲ್ಲಿ ಕರ್ಫ್ಯೂ ಹಾಕಲಾಯಿತು. ರಾಜ್ಯ ಸರಕಾರ ಮತ್ತು ಪೊಲೀಸ್ ಇಲಾಖೆ ಈ ಗಲಭೆ ತಡೆಯಲು ಮನಃಪೂರ್ವಕವಾಗಿ ಕೆಲಸ ಮಾಡಲಿಲ್ಲ ಎಂಬ ಆರೋಪ ಕೇಳಿ ಬಂದಿತ್ತು. ರಾಜ್ಯ ಸರಕಾರದ ಮುಂದಾಳುಗಳು ನೀಡಿದರೆನ್ನಲಾದ ಪ್ರಚೋದನಕಾರಿ ಹೇಳಿಕೆಗಳು ಗಲಭೆಕೋರರಿಗೆ ಇನ್ನಷ್ಟು ಪ್ರಚೋದನೆ ನೀಡಿದವು. ಮುಸ್ಲಿಮ್ ಸಮುದಾಯದವರನ್ನು ಗುರಿ ಮಾಡಿ ಹಲವೆಡೆ ಭೀಕರ ಹತ್ಯಾಕಾಂಡವೇ ನಡೆದಿದೆ. ಆ ಬಳಿಕದ ಗಲಭೆಗಳಲ್ಲಿ 1,044 ಮಂದಿ ಸಾವನ್ನಪ್ಪಿರುವುದು ಅಧಿಕೃತವಾಗಿ ದಾಖಲಾಗಿರುವ ಮಾಹಿತಿ. 2,500 ಜನರು ಗಾಯಗೊಂಡಿದ್ದಾರೆ. ಇನ್ನೂರಕ್ಕೂ ಹೆಚ್ಚು ಮಂದಿ ನಾಪತ್ತೆಯಾಗಿದ್ದರು.

ಅಹ್ಮದಾಬಾದ್‌ನ ಗುಲ್‌ಬರ್ಗ್ ಸೊಸೈಟಿ ಹತ್ಯಾಕಾಂಡಾದಲ್ಲಿ ಫೆ. 28ರಂದು 69 ಮಂದಿ ಹತ್ಯೆಯಾಗಿದ್ದರು. ಅದರಲ್ಲಿ ಕಾಂಗ್ರೆಸ್ ಮುಖಂಡ ಮತ್ತು ಮಾಜಿ ಸಂಸದರಾಗಿದ್ದ ಎಹ್ಸಾನ್ ಜಫ್ರಿ ಕೂಡ ಸೇರಿದ್ದರು. ಗುಲ್ಬರ್ಗ್ ಸೊಸೈಟಿ ಹತ್ಯಾಕಾಂಡದಷ್ಟೇ ಭೀಕರವಾದ ಹಲವು ಹತ್ಯಾಕಾಂಡಗಳು ಗುಜರಾತ್‌ನ ವಿವಿಧೆಡೆ ಸಂಭವಿಸಿವೆ. ಬೆಸ್ಟ್ ಬೇಕರಿ, ಬಿಲ್ಕಿಸ್ ಬಾನೋ, ಅವಧೂತ್‌ನಗರ್, ದನಿಲಿಮಡಾ, ಎರಾಲ್, ಪವಗಡ್ ಧಿಕ್ವಾ, ದಿಪ್ಡ ದರವಾಜ, ನರೋಡ ಪಾಟಿಯಾ ಹತ್ಯಾಕಾಂಡಗಳು ಘೋರ ದುರಂತದ ಘಟನೆಗಳಾಗಿವೆ.

ಇದನ್ನು ಓದಿ: ಚುನಾವಣಾ ಆಯುಕ್ತರ ನೇಮಕಾತಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...