Homeಮುಖಪುಟಕೋವಿಡ್‌ಗೆ 135 ಪಂಚಾಯತ್ ಚುನಾವಣಾ ಸಿಬ್ಬಂದಿ ಬಲಿ: ಯುಪಿ ಚುನಾವಣಾ ಆಯೋಗಕ್ಕೆ ಹೈಕೋರ್ಟ್ ಶೋ-ಕಾಸ್ ನೋಟಿಸ್

ಕೋವಿಡ್‌ಗೆ 135 ಪಂಚಾಯತ್ ಚುನಾವಣಾ ಸಿಬ್ಬಂದಿ ಬಲಿ: ಯುಪಿ ಚುನಾವಣಾ ಆಯೋಗಕ್ಕೆ ಹೈಕೋರ್ಟ್ ಶೋ-ಕಾಸ್ ನೋಟಿಸ್

- Advertisement -
- Advertisement -

ಪಂಚಾಯತ್ ಚುನಾವಣಾ ಕೆಲಸಕ್ಕೆ ನಿಯೋಜನಗೊಂಡ 135 ವಿದ್ಯಾರ್ಥಿಗಳು, ‘ಶಿಕ್ಷಾ ಮಿತ್ರರು’ ಮತ್ತು ಚುನಾವಣಾ ಕರ್ತವ್ಯಕ್ಕೆ ನೇಮಕಗೊಂಡ ತನಿಖಾಧಿಕಾರಿಗಳು ಕೋವಿಡ್ ಕಾರಣದಿಂದಾಗಿ ಸಾವನ್ನಪ್ಪಿದ್ದಾರೆ ಎಂದು ಹಿಂದಿ ದಿನಪತ್ರಿಕೆ ‘ಅಮರ್ ಉಜಲಾ’ದಲ್ಲಿ ಪ್ರಕಟವಾದ ಸುದ್ದಿ ಲೇಖನವೊಂದನ್ನು ಗಮನಿಸಿರುವ ಅಲಹಾಬಾದ್ ಹೈಕೋರ್ಟ್, ಉತ್ತರಪ್ರದೇಶ ಚುನಾವಣಾ ಆಯೋಗಕ್ಕೆ ಇಂದು ಶೋ-ಕಾಸ್ ನೋಟಿಸ್ ನೀಡಿದೆ ಎಂದು ಲೈವ್ ಲಾ, ಇಂಡಿಯಾ ಟುಡೇ ವರದಿ ಮಾಡಿವೆ.

ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸಿದ್ಧಾರ್ಥ ವರ್ಮಾ ಮತ್ತು ನ್ಯಾಯಮೂರ್ತಿ ಅಜಿತ್ ಕುಮಾರ್ ಅವರನ್ನೊಳಗೊಂಡ ವಿಭಾಗೀಯ ಪೀಠವು, ರಾಜ್ಯ ಚುನಾವಣಾ ಆಯೋಗಕ್ಕೆ, ಕೋವಿಡ್ ಮಾರ್ಗಸೂಚಿಗಳನ್ನು ಅನುಸರಿಸಲಾಗಿದೆಯೇ ಎಂದು ಖಚಿತಪಡಿಸಿಕೊಳ್ಳಲು ಪಂಚಾಯತ್ ಚುನಾವಣೆಯ ಉಳಿದ ಹಂತಗಳಲ್ಲಿ ತ್ವರಿತ ಕ್ರಮಗಳನ್ನು ತೆಗೆದುಕೊಳ್ಳುವಂತೆ ನಿರ್ದೇಶಿಸಿತು, ಇಲ್ಲದಿದ್ದರೆ ಇದರಲ್ಲಿ ಭಾಗಿಯಾಗಿರುವ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿತು.

ಅಲಹಾಬಾದ್ ಹೈಕೋರ್ಟ್ ಉತ್ತರ ಪ್ರದೇಶ ರಾಜ್ಯ ಚುನಾವಣಾ ಆಯೋಗಕ್ಕೆ ಶೋ-ಕಾಸ್ ನೋಟಿಸ್ ನೀಡಿ, ಪಂಚಾಯತ್ ಚುನಾವಣೆಯ ಸಂದರ್ಭದಲ್ಲಿ ಕೋವಿಡ್ ಮಾರ್ಗಸೂಚಿಗಳನ್ನು ಜಾರಿಗೊಳಿಸಲು ವಿಫಲವಾಗಿದ್ದು ಏಕೆ ಎಂದು ಪ್ರಶ್ನಿಸಿದೆ. ಅಂತಹ ಉಲ್ಲಂಘನೆಗಳಿಗೆ ಕಾರಣರಾದವರ ವಿರುದ್ಧ ಕಾನೂನು ಕ್ರಮ ಜರುಗಿಸಲು ಆದೇಶಿಸಿದೆ.
“ಚುನಾವಣಾ ಕರ್ತವ್ಯದಲ್ಲಿರುವ ಜನರನ್ನು ಮಾರಕ ವೈರಸ್ ಸೋಂಕಿಗೆ ಒಳಗಾಗದಂತೆ ರಕ್ಷಿಸಲು ಪೊಲೀಸರು ಅಥವಾ ಚುನಾವಣಾ ಆಯೋಗವು ಏನನ್ನೂ ಮಾಡಿಲ್ಲ” ಎಂದು ಆದೇಶದಲ್ಲಿ ಟೀಕಿಸಲಾಗಿದೆ.

ತುರ್ತು ಪರಿಹಾರ ಕ್ರಮ ತೆಗೆದುಕೊಳ್ಳಲು ಸರ್ಕಾರಕ್ಕೆ ನಿರ್ದೇಶನ ನೀಡಿದ ನ್ಯಾಯಾಲಯ, “ಕೈಗೊಂಡ ಕ್ರಮಗಳು ಮತ್ತು ಅದರ ಸಮರ್ಪಕತೆಯ ಬಗ್ಗೆ ತೋರಿಸಲು ಯಾವುದೇ ದಾಖಲೆಗಳನ್ನು ಅಥವಾ ಸಾರ್ವಜನಿಕ ಪ್ರಕಟಣೆಗಳನ್ನು ಕೋರ್ಟ್ ಸಹಿಸುವುದಿಲ್ಲ ಎಂದು ನಾವು ಸ್ಪಷ್ಟಪಡಿಸುತ್ತೇವೆ. ರಾಜ್ಯದಲ್ಲಿ 2020ರ ಅಂತ್ಯದ ವೇಳೆಗೆ ವೈರಸ್ ಪ್ರಭಾವ ದುರ್ಬಲಗೊಂಡ ನಂತರ ಮೈಮರೆತ ಸರ್ಕಾರ, ಪಂಚಾಯತ್ ಚುನಾವಣೆ ಸೇರಿದಂತೆ ಇತರ ಚಟುವಟಿಕೆಗಳಲ್ಲಿ ಹೆಚ್ಚು ತೊಡಗಿಸಿಕೊಂಡಿದೆ’ ಎಂದು ಕೋರ್ಟ್ ಅಭಿಪ್ರಾಯ ಪಟ್ಟಿದೆ.

ಸಾರ್ವಜನಿಕ ಆರೋಗ್ಯ ವ್ಯವಸ್ಥೆಯು ಜನರ ಅಗತ್ಯಗಳನ್ನು ಪೂರೈಸಲು ಸಾಧ್ಯವಾಗುತ್ತಿಲ್ಲ ಎಂದು ಗಮನಿಸಿದ ನ್ಯಾಯಾಲಯ, ಲಕ್ನೋ, ಪ್ರಯಾಗರಾಜ್, ವಾರಣಾಸಿ, ಆಗ್ರಾ, ಕಾನ್ಪುರ ನಗರ, ಗೋರಖ್‌ಪುರ ಮತ್ತು ಝಾನ್ಸಿಗಳಲ್ಲಿನ ಸರ್ಕಾರಿ ಆಸ್ಪತ್ರೆಗಳಿಗೆ ದಿನಕ್ಕೆ ಎರಡು ಬಾರಿ ಆರೋಗ್ಯ ಬುಲೆಟಿನ್ ಪ್ರಕಟಿಸುವಂತೆ ನಿರ್ದೇಶನ ನೀಡಿತು. ಇದರಿಂದ ಆಸ್ಪತ್ರೆಗಳಿಗೆ ರೋಗಿಗಳ ಪರಿಚಾರಕರು ಭೇಟಿ ನೀಡುವುದನ್ನು ಕಡಿಮೆಗೊಳಿಸಬಹುದು ಎಂದು ಕೋರ್ಟ್ ಸಲಹೆ ನೀಡಿದೆ.
ಈ ಕುರಿತು ಮುಂದಿನ ವಿಚಾರಣೆಯನ್ನು ಮೇ 3ಕ್ಕೆ ನಿಗದಿಪಡಿಸಲಾಗಿದೆ.


ಇದನ್ನೂಓದಿ: ಕೋವಿಡ್ ಸಂದರ್ಭದಲ್ಲಿ ಬಿಜೆಪಿ ಐಟಿ ಸೆಲ್, ಪೋಸ್ಟ್ ಕಾರ್ಡ್, ಬಿಜೆಪಿ ವಕ್ತಾರರು ಹೇಳಿದ ಸುಳ್ಳುಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...