Homeಮುಖಪುಟಕೋವಿಡ್‌ಗೆ 135 ಪಂಚಾಯತ್ ಚುನಾವಣಾ ಸಿಬ್ಬಂದಿ ಬಲಿ: ಯುಪಿ ಚುನಾವಣಾ ಆಯೋಗಕ್ಕೆ ಹೈಕೋರ್ಟ್ ಶೋ-ಕಾಸ್ ನೋಟಿಸ್

ಕೋವಿಡ್‌ಗೆ 135 ಪಂಚಾಯತ್ ಚುನಾವಣಾ ಸಿಬ್ಬಂದಿ ಬಲಿ: ಯುಪಿ ಚುನಾವಣಾ ಆಯೋಗಕ್ಕೆ ಹೈಕೋರ್ಟ್ ಶೋ-ಕಾಸ್ ನೋಟಿಸ್

- Advertisement -
- Advertisement -

ಪಂಚಾಯತ್ ಚುನಾವಣಾ ಕೆಲಸಕ್ಕೆ ನಿಯೋಜನಗೊಂಡ 135 ವಿದ್ಯಾರ್ಥಿಗಳು, ‘ಶಿಕ್ಷಾ ಮಿತ್ರರು’ ಮತ್ತು ಚುನಾವಣಾ ಕರ್ತವ್ಯಕ್ಕೆ ನೇಮಕಗೊಂಡ ತನಿಖಾಧಿಕಾರಿಗಳು ಕೋವಿಡ್ ಕಾರಣದಿಂದಾಗಿ ಸಾವನ್ನಪ್ಪಿದ್ದಾರೆ ಎಂದು ಹಿಂದಿ ದಿನಪತ್ರಿಕೆ ‘ಅಮರ್ ಉಜಲಾ’ದಲ್ಲಿ ಪ್ರಕಟವಾದ ಸುದ್ದಿ ಲೇಖನವೊಂದನ್ನು ಗಮನಿಸಿರುವ ಅಲಹಾಬಾದ್ ಹೈಕೋರ್ಟ್, ಉತ್ತರಪ್ರದೇಶ ಚುನಾವಣಾ ಆಯೋಗಕ್ಕೆ ಇಂದು ಶೋ-ಕಾಸ್ ನೋಟಿಸ್ ನೀಡಿದೆ ಎಂದು ಲೈವ್ ಲಾ, ಇಂಡಿಯಾ ಟುಡೇ ವರದಿ ಮಾಡಿವೆ.

ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸಿದ್ಧಾರ್ಥ ವರ್ಮಾ ಮತ್ತು ನ್ಯಾಯಮೂರ್ತಿ ಅಜಿತ್ ಕುಮಾರ್ ಅವರನ್ನೊಳಗೊಂಡ ವಿಭಾಗೀಯ ಪೀಠವು, ರಾಜ್ಯ ಚುನಾವಣಾ ಆಯೋಗಕ್ಕೆ, ಕೋವಿಡ್ ಮಾರ್ಗಸೂಚಿಗಳನ್ನು ಅನುಸರಿಸಲಾಗಿದೆಯೇ ಎಂದು ಖಚಿತಪಡಿಸಿಕೊಳ್ಳಲು ಪಂಚಾಯತ್ ಚುನಾವಣೆಯ ಉಳಿದ ಹಂತಗಳಲ್ಲಿ ತ್ವರಿತ ಕ್ರಮಗಳನ್ನು ತೆಗೆದುಕೊಳ್ಳುವಂತೆ ನಿರ್ದೇಶಿಸಿತು, ಇಲ್ಲದಿದ್ದರೆ ಇದರಲ್ಲಿ ಭಾಗಿಯಾಗಿರುವ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿತು.

ಅಲಹಾಬಾದ್ ಹೈಕೋರ್ಟ್ ಉತ್ತರ ಪ್ರದೇಶ ರಾಜ್ಯ ಚುನಾವಣಾ ಆಯೋಗಕ್ಕೆ ಶೋ-ಕಾಸ್ ನೋಟಿಸ್ ನೀಡಿ, ಪಂಚಾಯತ್ ಚುನಾವಣೆಯ ಸಂದರ್ಭದಲ್ಲಿ ಕೋವಿಡ್ ಮಾರ್ಗಸೂಚಿಗಳನ್ನು ಜಾರಿಗೊಳಿಸಲು ವಿಫಲವಾಗಿದ್ದು ಏಕೆ ಎಂದು ಪ್ರಶ್ನಿಸಿದೆ. ಅಂತಹ ಉಲ್ಲಂಘನೆಗಳಿಗೆ ಕಾರಣರಾದವರ ವಿರುದ್ಧ ಕಾನೂನು ಕ್ರಮ ಜರುಗಿಸಲು ಆದೇಶಿಸಿದೆ.
“ಚುನಾವಣಾ ಕರ್ತವ್ಯದಲ್ಲಿರುವ ಜನರನ್ನು ಮಾರಕ ವೈರಸ್ ಸೋಂಕಿಗೆ ಒಳಗಾಗದಂತೆ ರಕ್ಷಿಸಲು ಪೊಲೀಸರು ಅಥವಾ ಚುನಾವಣಾ ಆಯೋಗವು ಏನನ್ನೂ ಮಾಡಿಲ್ಲ” ಎಂದು ಆದೇಶದಲ್ಲಿ ಟೀಕಿಸಲಾಗಿದೆ.

ತುರ್ತು ಪರಿಹಾರ ಕ್ರಮ ತೆಗೆದುಕೊಳ್ಳಲು ಸರ್ಕಾರಕ್ಕೆ ನಿರ್ದೇಶನ ನೀಡಿದ ನ್ಯಾಯಾಲಯ, “ಕೈಗೊಂಡ ಕ್ರಮಗಳು ಮತ್ತು ಅದರ ಸಮರ್ಪಕತೆಯ ಬಗ್ಗೆ ತೋರಿಸಲು ಯಾವುದೇ ದಾಖಲೆಗಳನ್ನು ಅಥವಾ ಸಾರ್ವಜನಿಕ ಪ್ರಕಟಣೆಗಳನ್ನು ಕೋರ್ಟ್ ಸಹಿಸುವುದಿಲ್ಲ ಎಂದು ನಾವು ಸ್ಪಷ್ಟಪಡಿಸುತ್ತೇವೆ. ರಾಜ್ಯದಲ್ಲಿ 2020ರ ಅಂತ್ಯದ ವೇಳೆಗೆ ವೈರಸ್ ಪ್ರಭಾವ ದುರ್ಬಲಗೊಂಡ ನಂತರ ಮೈಮರೆತ ಸರ್ಕಾರ, ಪಂಚಾಯತ್ ಚುನಾವಣೆ ಸೇರಿದಂತೆ ಇತರ ಚಟುವಟಿಕೆಗಳಲ್ಲಿ ಹೆಚ್ಚು ತೊಡಗಿಸಿಕೊಂಡಿದೆ’ ಎಂದು ಕೋರ್ಟ್ ಅಭಿಪ್ರಾಯ ಪಟ್ಟಿದೆ.

ಸಾರ್ವಜನಿಕ ಆರೋಗ್ಯ ವ್ಯವಸ್ಥೆಯು ಜನರ ಅಗತ್ಯಗಳನ್ನು ಪೂರೈಸಲು ಸಾಧ್ಯವಾಗುತ್ತಿಲ್ಲ ಎಂದು ಗಮನಿಸಿದ ನ್ಯಾಯಾಲಯ, ಲಕ್ನೋ, ಪ್ರಯಾಗರಾಜ್, ವಾರಣಾಸಿ, ಆಗ್ರಾ, ಕಾನ್ಪುರ ನಗರ, ಗೋರಖ್‌ಪುರ ಮತ್ತು ಝಾನ್ಸಿಗಳಲ್ಲಿನ ಸರ್ಕಾರಿ ಆಸ್ಪತ್ರೆಗಳಿಗೆ ದಿನಕ್ಕೆ ಎರಡು ಬಾರಿ ಆರೋಗ್ಯ ಬುಲೆಟಿನ್ ಪ್ರಕಟಿಸುವಂತೆ ನಿರ್ದೇಶನ ನೀಡಿತು. ಇದರಿಂದ ಆಸ್ಪತ್ರೆಗಳಿಗೆ ರೋಗಿಗಳ ಪರಿಚಾರಕರು ಭೇಟಿ ನೀಡುವುದನ್ನು ಕಡಿಮೆಗೊಳಿಸಬಹುದು ಎಂದು ಕೋರ್ಟ್ ಸಲಹೆ ನೀಡಿದೆ.
ಈ ಕುರಿತು ಮುಂದಿನ ವಿಚಾರಣೆಯನ್ನು ಮೇ 3ಕ್ಕೆ ನಿಗದಿಪಡಿಸಲಾಗಿದೆ.


ಇದನ್ನೂಓದಿ: ಕೋವಿಡ್ ಸಂದರ್ಭದಲ್ಲಿ ಬಿಜೆಪಿ ಐಟಿ ಸೆಲ್, ಪೋಸ್ಟ್ ಕಾರ್ಡ್, ಬಿಜೆಪಿ ವಕ್ತಾರರು ಹೇಳಿದ ಸುಳ್ಳುಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...