Homeಮುಖಪುಟಕೋವಿಡ್‌ಗೆ 135 ಪಂಚಾಯತ್ ಚುನಾವಣಾ ಸಿಬ್ಬಂದಿ ಬಲಿ: ಯುಪಿ ಚುನಾವಣಾ ಆಯೋಗಕ್ಕೆ ಹೈಕೋರ್ಟ್ ಶೋ-ಕಾಸ್ ನೋಟಿಸ್

ಕೋವಿಡ್‌ಗೆ 135 ಪಂಚಾಯತ್ ಚುನಾವಣಾ ಸಿಬ್ಬಂದಿ ಬಲಿ: ಯುಪಿ ಚುನಾವಣಾ ಆಯೋಗಕ್ಕೆ ಹೈಕೋರ್ಟ್ ಶೋ-ಕಾಸ್ ನೋಟಿಸ್

- Advertisement -
- Advertisement -

ಪಂಚಾಯತ್ ಚುನಾವಣಾ ಕೆಲಸಕ್ಕೆ ನಿಯೋಜನಗೊಂಡ 135 ವಿದ್ಯಾರ್ಥಿಗಳು, ‘ಶಿಕ್ಷಾ ಮಿತ್ರರು’ ಮತ್ತು ಚುನಾವಣಾ ಕರ್ತವ್ಯಕ್ಕೆ ನೇಮಕಗೊಂಡ ತನಿಖಾಧಿಕಾರಿಗಳು ಕೋವಿಡ್ ಕಾರಣದಿಂದಾಗಿ ಸಾವನ್ನಪ್ಪಿದ್ದಾರೆ ಎಂದು ಹಿಂದಿ ದಿನಪತ್ರಿಕೆ ‘ಅಮರ್ ಉಜಲಾ’ದಲ್ಲಿ ಪ್ರಕಟವಾದ ಸುದ್ದಿ ಲೇಖನವೊಂದನ್ನು ಗಮನಿಸಿರುವ ಅಲಹಾಬಾದ್ ಹೈಕೋರ್ಟ್, ಉತ್ತರಪ್ರದೇಶ ಚುನಾವಣಾ ಆಯೋಗಕ್ಕೆ ಇಂದು ಶೋ-ಕಾಸ್ ನೋಟಿಸ್ ನೀಡಿದೆ ಎಂದು ಲೈವ್ ಲಾ, ಇಂಡಿಯಾ ಟುಡೇ ವರದಿ ಮಾಡಿವೆ.

ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸಿದ್ಧಾರ್ಥ ವರ್ಮಾ ಮತ್ತು ನ್ಯಾಯಮೂರ್ತಿ ಅಜಿತ್ ಕುಮಾರ್ ಅವರನ್ನೊಳಗೊಂಡ ವಿಭಾಗೀಯ ಪೀಠವು, ರಾಜ್ಯ ಚುನಾವಣಾ ಆಯೋಗಕ್ಕೆ, ಕೋವಿಡ್ ಮಾರ್ಗಸೂಚಿಗಳನ್ನು ಅನುಸರಿಸಲಾಗಿದೆಯೇ ಎಂದು ಖಚಿತಪಡಿಸಿಕೊಳ್ಳಲು ಪಂಚಾಯತ್ ಚುನಾವಣೆಯ ಉಳಿದ ಹಂತಗಳಲ್ಲಿ ತ್ವರಿತ ಕ್ರಮಗಳನ್ನು ತೆಗೆದುಕೊಳ್ಳುವಂತೆ ನಿರ್ದೇಶಿಸಿತು, ಇಲ್ಲದಿದ್ದರೆ ಇದರಲ್ಲಿ ಭಾಗಿಯಾಗಿರುವ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿತು.

ಅಲಹಾಬಾದ್ ಹೈಕೋರ್ಟ್ ಉತ್ತರ ಪ್ರದೇಶ ರಾಜ್ಯ ಚುನಾವಣಾ ಆಯೋಗಕ್ಕೆ ಶೋ-ಕಾಸ್ ನೋಟಿಸ್ ನೀಡಿ, ಪಂಚಾಯತ್ ಚುನಾವಣೆಯ ಸಂದರ್ಭದಲ್ಲಿ ಕೋವಿಡ್ ಮಾರ್ಗಸೂಚಿಗಳನ್ನು ಜಾರಿಗೊಳಿಸಲು ವಿಫಲವಾಗಿದ್ದು ಏಕೆ ಎಂದು ಪ್ರಶ್ನಿಸಿದೆ. ಅಂತಹ ಉಲ್ಲಂಘನೆಗಳಿಗೆ ಕಾರಣರಾದವರ ವಿರುದ್ಧ ಕಾನೂನು ಕ್ರಮ ಜರುಗಿಸಲು ಆದೇಶಿಸಿದೆ.
“ಚುನಾವಣಾ ಕರ್ತವ್ಯದಲ್ಲಿರುವ ಜನರನ್ನು ಮಾರಕ ವೈರಸ್ ಸೋಂಕಿಗೆ ಒಳಗಾಗದಂತೆ ರಕ್ಷಿಸಲು ಪೊಲೀಸರು ಅಥವಾ ಚುನಾವಣಾ ಆಯೋಗವು ಏನನ್ನೂ ಮಾಡಿಲ್ಲ” ಎಂದು ಆದೇಶದಲ್ಲಿ ಟೀಕಿಸಲಾಗಿದೆ.

ತುರ್ತು ಪರಿಹಾರ ಕ್ರಮ ತೆಗೆದುಕೊಳ್ಳಲು ಸರ್ಕಾರಕ್ಕೆ ನಿರ್ದೇಶನ ನೀಡಿದ ನ್ಯಾಯಾಲಯ, “ಕೈಗೊಂಡ ಕ್ರಮಗಳು ಮತ್ತು ಅದರ ಸಮರ್ಪಕತೆಯ ಬಗ್ಗೆ ತೋರಿಸಲು ಯಾವುದೇ ದಾಖಲೆಗಳನ್ನು ಅಥವಾ ಸಾರ್ವಜನಿಕ ಪ್ರಕಟಣೆಗಳನ್ನು ಕೋರ್ಟ್ ಸಹಿಸುವುದಿಲ್ಲ ಎಂದು ನಾವು ಸ್ಪಷ್ಟಪಡಿಸುತ್ತೇವೆ. ರಾಜ್ಯದಲ್ಲಿ 2020ರ ಅಂತ್ಯದ ವೇಳೆಗೆ ವೈರಸ್ ಪ್ರಭಾವ ದುರ್ಬಲಗೊಂಡ ನಂತರ ಮೈಮರೆತ ಸರ್ಕಾರ, ಪಂಚಾಯತ್ ಚುನಾವಣೆ ಸೇರಿದಂತೆ ಇತರ ಚಟುವಟಿಕೆಗಳಲ್ಲಿ ಹೆಚ್ಚು ತೊಡಗಿಸಿಕೊಂಡಿದೆ’ ಎಂದು ಕೋರ್ಟ್ ಅಭಿಪ್ರಾಯ ಪಟ್ಟಿದೆ.

ಸಾರ್ವಜನಿಕ ಆರೋಗ್ಯ ವ್ಯವಸ್ಥೆಯು ಜನರ ಅಗತ್ಯಗಳನ್ನು ಪೂರೈಸಲು ಸಾಧ್ಯವಾಗುತ್ತಿಲ್ಲ ಎಂದು ಗಮನಿಸಿದ ನ್ಯಾಯಾಲಯ, ಲಕ್ನೋ, ಪ್ರಯಾಗರಾಜ್, ವಾರಣಾಸಿ, ಆಗ್ರಾ, ಕಾನ್ಪುರ ನಗರ, ಗೋರಖ್‌ಪುರ ಮತ್ತು ಝಾನ್ಸಿಗಳಲ್ಲಿನ ಸರ್ಕಾರಿ ಆಸ್ಪತ್ರೆಗಳಿಗೆ ದಿನಕ್ಕೆ ಎರಡು ಬಾರಿ ಆರೋಗ್ಯ ಬುಲೆಟಿನ್ ಪ್ರಕಟಿಸುವಂತೆ ನಿರ್ದೇಶನ ನೀಡಿತು. ಇದರಿಂದ ಆಸ್ಪತ್ರೆಗಳಿಗೆ ರೋಗಿಗಳ ಪರಿಚಾರಕರು ಭೇಟಿ ನೀಡುವುದನ್ನು ಕಡಿಮೆಗೊಳಿಸಬಹುದು ಎಂದು ಕೋರ್ಟ್ ಸಲಹೆ ನೀಡಿದೆ.
ಈ ಕುರಿತು ಮುಂದಿನ ವಿಚಾರಣೆಯನ್ನು ಮೇ 3ಕ್ಕೆ ನಿಗದಿಪಡಿಸಲಾಗಿದೆ.


ಇದನ್ನೂಓದಿ: ಕೋವಿಡ್ ಸಂದರ್ಭದಲ್ಲಿ ಬಿಜೆಪಿ ಐಟಿ ಸೆಲ್, ಪೋಸ್ಟ್ ಕಾರ್ಡ್, ಬಿಜೆಪಿ ವಕ್ತಾರರು ಹೇಳಿದ ಸುಳ್ಳುಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...