Homeಮುಖಪುಟಜಮ್ಮು ಕಾಶ್ಮೀರಕ್ಕೆ 1,350 ಕೋಟಿ  ರೂ. ಆರ್ಥಿಕ ಪ್ಯಾಕೇಜ್ ಘೋಷಣೆ

ಜಮ್ಮು ಕಾಶ್ಮೀರಕ್ಕೆ 1,350 ಕೋಟಿ  ರೂ. ಆರ್ಥಿಕ ಪ್ಯಾಕೇಜ್ ಘೋಷಣೆ

ಒಂದು ವರ್ಷ ನೀರು ಹಾಗೂ ವಿದ್ಯುತ್​ ಬಿಲ್​​ ಮೇಲೆ ಶೇಕಡಾ 50ರಷ್ಟು ರಿಯಾಯಿತಿ, ಎಲ್ಲಾ ಸಾಲಗಾರರಿಗೆ ಮಾರ್ಚ್ 2021 ರವರೆಗೆ ಸ್ಟಾಂಪ್ ಶುಲ್ಕ ವಿನಾಯಿತಿ ನೀಡಲಾಗಿದೆ.

- Advertisement -
- Advertisement -

ಪ್ರವಾಸೋದ್ಯಮವನ್ನು ನಂಬಿಕೊಂಡಿರುವ ಜಮ್ಮು ಮತ್ತು ಕಾಶ್ಮೀರದಲ್ಲಿ ವ್ಯಾಪಾರೋದ್ಯಮ ಕುಂಠಿತಗೊಂಡಿರುವ ಹಿನ್ನೆಲೆ ಉದ್ಯಮ ಮತ್ತು ಇತರೆ ಕ್ಷೇತ್ರಗಳಿಗೆ ಚೇತರಿಕೆ ನೀಡಲು 1,350 ಕೋಟಿ  ರೂ.ಗಾತ್ರದ ಆರ್ಥಿಕ ಪ್ಯಾಕೇಜ್ ಅನ್ನು ಲೆಫ್ಟಿನಂಟ್ ಗವರ್ನರ್ ಮನೋಜ್ ಸಿನ್ಹಾ ಘೋಷಿಸಿದ್ದಾರೆ.

ಒಂದು ವರ್ಷ ನೀರು ಹಾಗೂ ವಿದ್ಯುತ್​ ಬಿಲ್​​ ಮೇಲೆ ಶೇಕಡಾ 50 ರಷ್ಟು ರಿಯಾಯಿತಿ ನೀಡಿರೋದು ಪ್ಯಾಕೇಜ್​ನ ಪ್ರಮುಖ ಅಂಶಗಳಲ್ಲಿ ಒಂದಾಗಿದೆ. ಇದಕ್ಕಾಗಿ 105 ಕೋಟಿ ರೂಪಾಯಿ ಖರ್ಚು ಮಾಡುತ್ತೇವೆ. ಇದರಿಂದ ರೈತರು, ಸಾಮಾನ್ಯ ಜನರು, ಉದ್ಯಮಿ ಮತ್ತು ಇತರರು ಪ್ರಯೋಜನ ಪಡೆಯುತ್ತಾರೆಎಂದು ಸಿನ್ಹಾ ಹೇಳಿದರು.

ಎಲ್ಲಾ ಸಾಲಗಾರರಿಗೆ ಮಾರ್ಚ್ 2021 ರವರೆಗೆ ಸ್ಟಾಂಪ್ ಶುಲ್ಕ ವಿನಾಯಿತಿ ನೀಡಲಾಗಿದೆ. ಕೈಗಾರಿಕಾ ವಲಯವನ್ನು ಪುನರುಜ್ಜೀವನಗೊಳಿಸಲು ಶೀಘ್ರದಲ್ಲೇ ಹೊಸ ಕೈಗಾರಿಕಾ ನೀತಿಯನ್ನು ಪ್ರಕಟಿಸಲಾಗುವುದು. ಪ್ರಧಾನಿ ಮೋದಿ ಘೋಷಣೆ ಮಾಡಿದ್ದ ಆತ್ಮನಿರ್ಭರ ಅಭಿಯಾನ 14,000 ಕೋಟಿ  ರೂಪಾಯಿಗಳ ಸೌಲಭ್ಯಗಳ ಜೊತೆಗೆ ಹೆಚ್ಚುವಾರಿಯಾಗಿ ಪರಿಹಾರವನ್ನ ನೀಡಲಾಗುತ್ತಿದೆ ಎಂದು ಮನೋಜ್ ಸಿನ್ಹಾ ಹೇಳಿದ್ದಾರೆ.

PC: Zee Business

ಇದನ್ನೂ ಓದಿ: ರವಿಕೃಷ್ಣಾ ರೆಡ್ಡಿಯವರಿಗೆ ಅಪಘಾತ: “ಚಲಿಸು ಕರ್ನಾಟಕ” ಸೈಕಲ್ ಯಾತ್ರೆ ತಾತ್ಕಾಲಿಕ ಸ್ಥಗಿತ

ಪ್ರಸಕ್ತ ಹಣಕಾಸು ವರ್ಷದಲ್ಲಿ 6 ತಿಂಗಳವರೆಗೆ ಯಾವುದೇ ಷರತ್ತುಗಳಿಲ್ಲದೆ ವ್ಯಾಪಾರ ವಲಯದ ಪ್ರತಿ ಸಾಲಗಾರನಿಗೆ ಶೇಕಡ 5ರಷ್ಟು ಬಡ್ಡಿ ಮನ್ನಾ ಅವಕಾಶ ನೀಡಲಾಗುತ್ತದೆ. ಇದು ಉದ್ಯೋಗ ಸೃಷ್ಟಿಸಲು ಸಹಾಯ ಮಾಡುತ್ತದೆ ಎಂದಿದ್ದಾರೆ. 

ಕ್ರೆಡಿಟ್ ಕಾರ್ಡ್ ಯೋಜನೆಯಡಿ, ಕೈಮಗ್ಗ ಮತ್ತು ಕರಕುಶಲ ಉದ್ಯಮದಲ್ಲಿ ಕೆಲಸ ಮಾಡುವ ಜನರಿಗೆ ನೀಡಲಾಗುತ್ತಿದ್ದ ಹಣದ ಗರಿಷ್ಠ ಮೊತ್ತ 1 ಲಕ್ಷದಿಂದ 2 ಲಕ್ಷಕ್ಕೆ ಏರಿಕೆ. ಜೊತೆಗೆ ಶೇ. 7 ರಷ್ಟು ಬಡ್ಡಿ ಮನ್ನಾ ಅವಕಾಶ. ಇದರ ಜೊತೆಗೆ ಅಕ್ಟೋಬರ್ 1 ರಿಂದ ಜಮ್ಮು ಕಾಶ್ಮೀರ ಬ್ಯಾಂಕ್​ನಲ್ಲಿ ಯುವ ಮತ್ತು ಮಹಿಳಾ ಉದ್ಯಮಗಳಿಗೆ ವಿಶೇಷ ಡೆಸ್ಕ್  ಪ್ರಾರಂಭ ಮಾಡಲಾಗುವುದು ಎಂದರು.


ಇದನ್ನೂ ಓದಿ: ರಾಜ್ಯಕ್ಕೆ ಕೇಂದ್ರದ ಪರಿಹಾರ?: ಯಡಿಯೂರಪ್ಪಗೆ ಮಾಜಿ ಸಿಎಂ ಸಿದ್ದರಾಮಯ್ಯ ಸಲಹೆಗಳು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...