Homeಮುಖಪುಟಕೇರಳ | ಕಾಂಗ್ರೆಸ್ ಕಾರ್ಯಕರ್ತರ ಕೊಲೆ ಪ್ರಕರಣ : ಸಿಪಿಐ(ಎಂ) ಮಾಜಿ ಶಾಸಕ ಸೇರಿ 14...

ಕೇರಳ | ಕಾಂಗ್ರೆಸ್ ಕಾರ್ಯಕರ್ತರ ಕೊಲೆ ಪ್ರಕರಣ : ಸಿಪಿಐ(ಎಂ) ಮಾಜಿ ಶಾಸಕ ಸೇರಿ 14 ಮಂದಿ ದೋಷಿಗಳೆಂದು ತೀರ್ಪು ಪ್ರಕಟ

- Advertisement -
- Advertisement -

ಕೇರಳದ ಕಾಸರಗೋಡಿನ ಪೆರಿಯದಲ್ಲಿ 2019ರಲ್ಲಿ ನಡೆದ ಇಬ್ಬರು ಯುವ ಕಾಂಗ್ರೆಸ್ ಕಾರ್ಯಕರ್ತರ ಕೊಲೆ ಪ್ರಕರಣದ 14 ಮಂದಿ ಆರೋಪಿಗಳನ್ನು ದೋಷಿಗಳೆಂದು ಘೋಷಿಸಿ ಕೊಚ್ಚಿಯ ಸಿಬಿಐ ವಿಶೇಷ ನ್ಯಾಯಾಲಯ ಇಂದು (ಡಿ.28) ತೀರ್ಪು ಪ್ರಕಟಿಸಿದೆ.

ಪ್ರಕರಣದ ಇತರ 10 ಆರೋಪಿಗಳನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. 14 ಅಪರಾಧಿಗಳ ಶಿಕ್ಷೆಯನ್ನು ಜನವರಿ 3,2025ರಂದು ಪ್ರಕಟಿಸಲಿದೆ. ಕಳೆದ 6 ವರ್ಷಗಳಿಂದ ಈ ಪ್ರಕರಣದ ವಿಚಾರಣೆ ನಡೆಯುತ್ತಿತ್ತು.

ಪ್ರಮುಖ ಸಿಪಿಐ(ಎಂ) ಮುಖಂಡರಾದ ಮಾಜಿ ಶಾಸಕ ಹಾಗೂ ಸಿಪಿಎಂ ಜಿಲ್ಲಾ ನಾಯಕ ಕೆ.ವಿ.ಕುಂಞಿರಾಮನ್, ಕಾಞಂಗಾಡ್ ಬ್ಲಾಕ್ ಪಂಚಾಯತ್ ಅಧ್ಯಕ್ಷ ಕೆ.ಮಣಿಕಂಠನ್, ಪೆರಿಯ ಸ್ಥಳೀಯ ಸಮಿತಿ ಮಾಜಿ ಸದಸ್ಯ ಎ.ಪೀತಾಂಬರನ್, ಪೆರಿಯ ಸ್ಥಳೀಯ ಸಮಿತಿಯ ಮಾಜಿ ಕಾರ್ಯದರ್ಶಿ ಎನ್.ಬಾಲಕೃಷ್ಣನ್, ಪಕ್ಕಂ ಸ್ಥಳೀಯ ಸಮಿತಿಯ ಮಾಜಿ ಕಾರ್ಯದರ್ಶಿ ರಾಘವನ್ ವೆಲುತ್ತೋಳಿ, ಸಿಐಟಿಯು ಮುಖಂಡ ಎ ಸುಭೀಶ್ ಮತ್ತು ಸಿಪಿಐ(ಎಂ) ಎಚಿಲಡುಕ್ಕಂ ಶಾಖೆಯ ಮಾಜಿ ಕಾರ್ಯದರ್ಶಿ ರಾಜೇಶ್ ಸೇರಿದಂತೆ ಒಟ್ಟು 24 ಮಂದಿ ಪ್ರಕರಣದಲ್ಲಿ ವಿಚಾರಣೆ ಎದುರಿಸಿದ್ದರು.

ಈ ಪೈಕಿ, ಪೀತಾಂಬರನ್, ಸಾಜಿ ಜಾರ್ಜ್, ಕೆ.ಎಂ ಸುರೇಶ್, ಕೆ. ಅನಿಲ್‌ಕುಮಾರ್, ಜಿಜಿನ್, ಶ್ರೀರಾಗ್, ಅಶ್ವಿನ್, ಸುಧೀಶ್, ರೆಂಜಿತ್, ಸುರೇಂದ್ರನ್, ಮಣಿಕಂಠನ್, ಕುಂಞಿರಾಮನ್, ವೆಲುತ್ತೋಳಿ ರಾಘವನ್ ಮತ್ತು ಎ.ವಿ. ಭಾಸ್ಕರನ್ ಅವರನ್ನು ದೋಷಿಗಳೆಂದು ನ್ಯಾಯಾಲಯ ಘೋಷಿಸಿದೆ.

ಪೆರಿಯ ಪರಿಸರದಲ್ಲಿ ಸಿಪಿಐ (ಎಂ) ಮತ್ತು ಕಾಂಗ್ರೆಸ್‌ ಕಾರ್ಯಕರ್ತರ ನಡುವೆ ನಡೆಯುತ್ತಿದ್ದ ಸರಣಿ ದಾಳಿ ಮತ್ತು ಪ್ರತಿದಾಳಿಗಳ ಭಾಗವಾಗಿ ನಡೆದ ಇಬ್ಬರ ಕೊಲೆಯು ರಾಜಕೀಯ ಪ್ರೇರಿತ ಎಂದು ಕೇಂದ್ರೀಯ ತನಿಖಾ ದಳ (ಸಿಬಿಐ) ಚಾರ್ಜ್‌ಶೀಟ್‌ನಲ್ಲಿ ಹೇಳಿತ್ತು.

ಫೆಬ್ರವರಿ 17, 2019ರಂದು ಕಾಸರಗೋಡಿನ ಪೆರಿಯದಲ್ಲಿ ಯುವ ಕಾಂಗ್ರೆಸ್ ಕಾರ್ಯಕರ್ತರಾಗಿದ್ದ 19 ವರ್ಷದ ಕೃಪೇಶ್ ಮತ್ತು 24 ವರ್ಷದ ಶರತ್‌ ಲಾಲ್ ಅವರ ಹತ್ಯೆ ನಡೆದಿತ್ತು. ಸಿಪಿಐ (ಎಂ) ಸದಸ್ಯರು ಈ ಕೊಲೆ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿತ್ತು.

ಪ್ರಕರಣದ ಹಿನ್ನೆಲೆ : ಜನವರಿ 5,2019 ರಂದು ನಡೆದ ವಿಚಾರಣೆಯ ಪ್ರಕಾರ, ಕಳ್ಳಿಯೋಟ್‌ನಲ್ಲಿ ಎಸ್‌ಎಫ್‌ಐ ಮತ್ತು ಯೂತ್ ಕಾಂಗ್ರೆಸ್ ನಡುವಿನ ಘರ್ಷಣೆಯ ನಂತರ, ಶರತ್ ಲಾಲ್ ಮತ್ತು ಇತರರು ಮೊದಲ ಪ್ರಕರಣದ ಅಪರಾಧಿ ಪೀತಾಂಬರನ್ ಮತ್ತು ಇನ್ನೋರ್ವ ಅಪರಾಧಿ ಸುರೇಂದ್ರನ್ ಅಲಿಯಾಸ್ ವಿಷ್ಣು ಸುರ ಮೇಲೆ ಹಲ್ಲೆ ನಡೆಸಿದ್ದರು. ಫೆಬ್ರವರಿ 17, 2019ರಂದು, ಕೃಪೇಶ್ ಮತ್ತು ಶರತ್ ಲಾಲ್ ಅವರು ಪೆರುಮ್ಕಾಲಿಯಾಟ್ಟಂ ದೇವಸ್ಥಾನದ ಉತ್ಸವದಿಂದ ಮನೆಗೆ ಹಿಂದಿರುಗುತ್ತಿದ್ದಾಗ ಕಳ್ಳಿಯೋಟ್-ತನ್ನಿತೋಡ್ ರಸ್ತೆಯಲ್ಲಿ ಅವರ ಮೇಲೆ ದಾಳಿ ನಡೆದಿತ್ತು. ಇದರಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಇಬ್ಬರೂ ಸಾವನ್ನಪ್ಪಿದ್ದರು.

ಫೆಬ್ರವರಿ 19, 2019 ರಂದು ಎ. ಪೀತಾಂಬರನ್ ಅವರನ್ನು ಪ್ರಕರಣದ ಪ್ರಮುಖ ಆರೋಪಿಯಾಗಿ ಬಂಧಿಸಲಾಗಿತ್ತು. ಎರಡು ದಿನಗಳ ನಂತರ ಕೇರಳ ಪೊಲೀಸ್ ಕ್ರೈಂ ಬ್ರಾಂಚ್ ತನಿಖೆಯನ್ನು ವಹಿಸಿಕೊಂಡಿತ್ತು. ಮೇ 20, 2019 ರಂದು, ಕ್ರೈಂ ಬ್ರಾಂಚ್ ತನ್ನ ಚಾರ್ಜ್‌ಶೀಟ್ ಸಲ್ಲಿಸಿತ್ತು. ಅದರಲ್ಲಿ 14 ಆರೋಪಿಗಳನ್ನು ಹೆಸರಿಸಿತ್ತು. ಎಲ್ಲರೂ ಸಿಪಿಐ(ಎಂ) ಪಕ್ಷದೊಂದಿಗೆ ಸಂಪರ್ಕ ಹೊಂದಿವರಾಗಿದ್ದರು.

ಸೆಪ್ಟೆಂಬರ್ 30,2019 ರಂದು, ಕೇರಳ ಹೈಕೋರ್ಟ್‌ನ ಏಕಸದಸ್ಯ ಪೀಠ ಕ್ರೈಂ ಬ್ರಾಂಚ್ ಚಾರ್ಜ್‌ಶೀಟ್ ರದ್ದುಗೊಳಿಸಿ ತನಿಖೆಯನ್ನು ಸಿಬಿಐಗೆ ಹಸ್ತಾಂತರಿಸಿತ್ತು. ಅಕ್ಟೋಬರ್ 26, 2019 ರಂದು, ಕೇರಳ ಸರ್ಕಾರವು ಸಿಬಿಐ ತನಿಖೆಯ ವಿರುದ್ಧ ಹೈಕೋರ್ಟ್‌ನ ವಿಭಾಗೀಯ ಪೀಠಕ್ಕೆ ಮನವಿ ಸಲ್ಲಿಸಿತ್ತು. ಆಗಸ್ಟ್ 25, 2020ರಂದು, ವಿಭಾಗೀಯ ಪೀಠವು ತನಿಖೆಯನ್ನು ಸಿಬಿಐಗೆ ವರ್ಗಾಯಿಸುವ ಏಕ ಸದಸ್ಯ ಪೀಠದ ಆದೇಶವನ್ನು ಎತ್ತಿಹಿಡಿದಿತ್ತು. ಸೆಪ್ಟೆಂಬರ್ 12, 2020ರಂದು, ಕೇರಳ ಸರ್ಕಾರವು ಸುಪ್ರೀಂ ಕೋರ್ಟ್‌ನಲ್ಲಿ ಹೈಕೋರ್ಟ್‌ನ ತೀರ್ಪನ್ನು ಪ್ರಶ್ನಿಸಿತ್ತು. ಡಿಸೆಂಬರ್ 1,2020 ರಂದು, ಸುಪ್ರೀಂ ಕೋರ್ಟ್ ಕೂಡ ರಾಜ್ಯ ಸರ್ಕಾರದ ಅರ್ಜಿಯನ್ನು ವಜಾಗೊಳಿಸಿತ್ತು. ಪ್ರಕರಣವನ್ನು ಸಿಬಿಐಗೆ ವಹಿಸಲು ಅವಕಾಶ ಮಾಡಿಕೊಟ್ಟಿತ್ತು.

ಡಿಸೆಂಬರ್ 14, 2020 ರಂದು ಸಿಬಿಐ ಔಪಚಾರಿಕವಾಗಿ ತನಿಖೆಯ ಹೊಣೆಯನ್ನು ವಹಿಸಿಕೊಂಡಿತ್ತು. ಡಿಸೆಂಬರ್ 1, 2021 ರಂದು, ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಐವರನ್ನು ಬಂಧಿಸಿತ್ತು. ಫೆಬ್ರವರಿ 2, 2023 ರಂದು ಕೊಚ್ಚಿಯ ಸಿಬಿಐ ವಿಶೇಷ ನ್ಯಾಯಾಲಯದಲ್ಲಿ ವಿಚಾರಣೆ ಪ್ರಾರಂಭವಾಗಿತ್ತು.

ಇದನ್ನೂ ಓದಿ : ಹಣ ಅಕ್ರಮ ವರ್ಗಾವಣೆ ಆರೋಪ : ವಿಚಾರಣೆಗೆ ಹಾಜರಾಗುವಂತೆ ಕೆಟಿಆರ್‌ಗೆ ಇಡಿ ಸಮನ್ಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...