Homeಮುಖಪುಟಕೇರಳ | ಕಾಂಗ್ರೆಸ್ ಕಾರ್ಯಕರ್ತರ ಕೊಲೆ ಪ್ರಕರಣ : ಸಿಪಿಐ(ಎಂ) ಮಾಜಿ ಶಾಸಕ ಸೇರಿ 14...

ಕೇರಳ | ಕಾಂಗ್ರೆಸ್ ಕಾರ್ಯಕರ್ತರ ಕೊಲೆ ಪ್ರಕರಣ : ಸಿಪಿಐ(ಎಂ) ಮಾಜಿ ಶಾಸಕ ಸೇರಿ 14 ಮಂದಿ ದೋಷಿಗಳೆಂದು ತೀರ್ಪು ಪ್ರಕಟ

- Advertisement -
- Advertisement -

ಕೇರಳದ ಕಾಸರಗೋಡಿನ ಪೆರಿಯದಲ್ಲಿ 2019ರಲ್ಲಿ ನಡೆದ ಇಬ್ಬರು ಯುವ ಕಾಂಗ್ರೆಸ್ ಕಾರ್ಯಕರ್ತರ ಕೊಲೆ ಪ್ರಕರಣದ 14 ಮಂದಿ ಆರೋಪಿಗಳನ್ನು ದೋಷಿಗಳೆಂದು ಘೋಷಿಸಿ ಕೊಚ್ಚಿಯ ಸಿಬಿಐ ವಿಶೇಷ ನ್ಯಾಯಾಲಯ ಇಂದು (ಡಿ.28) ತೀರ್ಪು ಪ್ರಕಟಿಸಿದೆ.

ಪ್ರಕರಣದ ಇತರ 10 ಆರೋಪಿಗಳನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. 14 ಅಪರಾಧಿಗಳ ಶಿಕ್ಷೆಯನ್ನು ಜನವರಿ 3,2025ರಂದು ಪ್ರಕಟಿಸಲಿದೆ. ಕಳೆದ 6 ವರ್ಷಗಳಿಂದ ಈ ಪ್ರಕರಣದ ವಿಚಾರಣೆ ನಡೆಯುತ್ತಿತ್ತು.

ಪ್ರಮುಖ ಸಿಪಿಐ(ಎಂ) ಮುಖಂಡರಾದ ಮಾಜಿ ಶಾಸಕ ಹಾಗೂ ಸಿಪಿಎಂ ಜಿಲ್ಲಾ ನಾಯಕ ಕೆ.ವಿ.ಕುಂಞಿರಾಮನ್, ಕಾಞಂಗಾಡ್ ಬ್ಲಾಕ್ ಪಂಚಾಯತ್ ಅಧ್ಯಕ್ಷ ಕೆ.ಮಣಿಕಂಠನ್, ಪೆರಿಯ ಸ್ಥಳೀಯ ಸಮಿತಿ ಮಾಜಿ ಸದಸ್ಯ ಎ.ಪೀತಾಂಬರನ್, ಪೆರಿಯ ಸ್ಥಳೀಯ ಸಮಿತಿಯ ಮಾಜಿ ಕಾರ್ಯದರ್ಶಿ ಎನ್.ಬಾಲಕೃಷ್ಣನ್, ಪಕ್ಕಂ ಸ್ಥಳೀಯ ಸಮಿತಿಯ ಮಾಜಿ ಕಾರ್ಯದರ್ಶಿ ರಾಘವನ್ ವೆಲುತ್ತೋಳಿ, ಸಿಐಟಿಯು ಮುಖಂಡ ಎ ಸುಭೀಶ್ ಮತ್ತು ಸಿಪಿಐ(ಎಂ) ಎಚಿಲಡುಕ್ಕಂ ಶಾಖೆಯ ಮಾಜಿ ಕಾರ್ಯದರ್ಶಿ ರಾಜೇಶ್ ಸೇರಿದಂತೆ ಒಟ್ಟು 24 ಮಂದಿ ಪ್ರಕರಣದಲ್ಲಿ ವಿಚಾರಣೆ ಎದುರಿಸಿದ್ದರು.

ಈ ಪೈಕಿ, ಪೀತಾಂಬರನ್, ಸಾಜಿ ಜಾರ್ಜ್, ಕೆ.ಎಂ ಸುರೇಶ್, ಕೆ. ಅನಿಲ್‌ಕುಮಾರ್, ಜಿಜಿನ್, ಶ್ರೀರಾಗ್, ಅಶ್ವಿನ್, ಸುಧೀಶ್, ರೆಂಜಿತ್, ಸುರೇಂದ್ರನ್, ಮಣಿಕಂಠನ್, ಕುಂಞಿರಾಮನ್, ವೆಲುತ್ತೋಳಿ ರಾಘವನ್ ಮತ್ತು ಎ.ವಿ. ಭಾಸ್ಕರನ್ ಅವರನ್ನು ದೋಷಿಗಳೆಂದು ನ್ಯಾಯಾಲಯ ಘೋಷಿಸಿದೆ.

ಪೆರಿಯ ಪರಿಸರದಲ್ಲಿ ಸಿಪಿಐ (ಎಂ) ಮತ್ತು ಕಾಂಗ್ರೆಸ್‌ ಕಾರ್ಯಕರ್ತರ ನಡುವೆ ನಡೆಯುತ್ತಿದ್ದ ಸರಣಿ ದಾಳಿ ಮತ್ತು ಪ್ರತಿದಾಳಿಗಳ ಭಾಗವಾಗಿ ನಡೆದ ಇಬ್ಬರ ಕೊಲೆಯು ರಾಜಕೀಯ ಪ್ರೇರಿತ ಎಂದು ಕೇಂದ್ರೀಯ ತನಿಖಾ ದಳ (ಸಿಬಿಐ) ಚಾರ್ಜ್‌ಶೀಟ್‌ನಲ್ಲಿ ಹೇಳಿತ್ತು.

ಫೆಬ್ರವರಿ 17, 2019ರಂದು ಕಾಸರಗೋಡಿನ ಪೆರಿಯದಲ್ಲಿ ಯುವ ಕಾಂಗ್ರೆಸ್ ಕಾರ್ಯಕರ್ತರಾಗಿದ್ದ 19 ವರ್ಷದ ಕೃಪೇಶ್ ಮತ್ತು 24 ವರ್ಷದ ಶರತ್‌ ಲಾಲ್ ಅವರ ಹತ್ಯೆ ನಡೆದಿತ್ತು. ಸಿಪಿಐ (ಎಂ) ಸದಸ್ಯರು ಈ ಕೊಲೆ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿತ್ತು.

ಪ್ರಕರಣದ ಹಿನ್ನೆಲೆ : ಜನವರಿ 5,2019 ರಂದು ನಡೆದ ವಿಚಾರಣೆಯ ಪ್ರಕಾರ, ಕಳ್ಳಿಯೋಟ್‌ನಲ್ಲಿ ಎಸ್‌ಎಫ್‌ಐ ಮತ್ತು ಯೂತ್ ಕಾಂಗ್ರೆಸ್ ನಡುವಿನ ಘರ್ಷಣೆಯ ನಂತರ, ಶರತ್ ಲಾಲ್ ಮತ್ತು ಇತರರು ಮೊದಲ ಪ್ರಕರಣದ ಅಪರಾಧಿ ಪೀತಾಂಬರನ್ ಮತ್ತು ಇನ್ನೋರ್ವ ಅಪರಾಧಿ ಸುರೇಂದ್ರನ್ ಅಲಿಯಾಸ್ ವಿಷ್ಣು ಸುರ ಮೇಲೆ ಹಲ್ಲೆ ನಡೆಸಿದ್ದರು. ಫೆಬ್ರವರಿ 17, 2019ರಂದು, ಕೃಪೇಶ್ ಮತ್ತು ಶರತ್ ಲಾಲ್ ಅವರು ಪೆರುಮ್ಕಾಲಿಯಾಟ್ಟಂ ದೇವಸ್ಥಾನದ ಉತ್ಸವದಿಂದ ಮನೆಗೆ ಹಿಂದಿರುಗುತ್ತಿದ್ದಾಗ ಕಳ್ಳಿಯೋಟ್-ತನ್ನಿತೋಡ್ ರಸ್ತೆಯಲ್ಲಿ ಅವರ ಮೇಲೆ ದಾಳಿ ನಡೆದಿತ್ತು. ಇದರಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಇಬ್ಬರೂ ಸಾವನ್ನಪ್ಪಿದ್ದರು.

ಫೆಬ್ರವರಿ 19, 2019 ರಂದು ಎ. ಪೀತಾಂಬರನ್ ಅವರನ್ನು ಪ್ರಕರಣದ ಪ್ರಮುಖ ಆರೋಪಿಯಾಗಿ ಬಂಧಿಸಲಾಗಿತ್ತು. ಎರಡು ದಿನಗಳ ನಂತರ ಕೇರಳ ಪೊಲೀಸ್ ಕ್ರೈಂ ಬ್ರಾಂಚ್ ತನಿಖೆಯನ್ನು ವಹಿಸಿಕೊಂಡಿತ್ತು. ಮೇ 20, 2019 ರಂದು, ಕ್ರೈಂ ಬ್ರಾಂಚ್ ತನ್ನ ಚಾರ್ಜ್‌ಶೀಟ್ ಸಲ್ಲಿಸಿತ್ತು. ಅದರಲ್ಲಿ 14 ಆರೋಪಿಗಳನ್ನು ಹೆಸರಿಸಿತ್ತು. ಎಲ್ಲರೂ ಸಿಪಿಐ(ಎಂ) ಪಕ್ಷದೊಂದಿಗೆ ಸಂಪರ್ಕ ಹೊಂದಿವರಾಗಿದ್ದರು.

ಸೆಪ್ಟೆಂಬರ್ 30,2019 ರಂದು, ಕೇರಳ ಹೈಕೋರ್ಟ್‌ನ ಏಕಸದಸ್ಯ ಪೀಠ ಕ್ರೈಂ ಬ್ರಾಂಚ್ ಚಾರ್ಜ್‌ಶೀಟ್ ರದ್ದುಗೊಳಿಸಿ ತನಿಖೆಯನ್ನು ಸಿಬಿಐಗೆ ಹಸ್ತಾಂತರಿಸಿತ್ತು. ಅಕ್ಟೋಬರ್ 26, 2019 ರಂದು, ಕೇರಳ ಸರ್ಕಾರವು ಸಿಬಿಐ ತನಿಖೆಯ ವಿರುದ್ಧ ಹೈಕೋರ್ಟ್‌ನ ವಿಭಾಗೀಯ ಪೀಠಕ್ಕೆ ಮನವಿ ಸಲ್ಲಿಸಿತ್ತು. ಆಗಸ್ಟ್ 25, 2020ರಂದು, ವಿಭಾಗೀಯ ಪೀಠವು ತನಿಖೆಯನ್ನು ಸಿಬಿಐಗೆ ವರ್ಗಾಯಿಸುವ ಏಕ ಸದಸ್ಯ ಪೀಠದ ಆದೇಶವನ್ನು ಎತ್ತಿಹಿಡಿದಿತ್ತು. ಸೆಪ್ಟೆಂಬರ್ 12, 2020ರಂದು, ಕೇರಳ ಸರ್ಕಾರವು ಸುಪ್ರೀಂ ಕೋರ್ಟ್‌ನಲ್ಲಿ ಹೈಕೋರ್ಟ್‌ನ ತೀರ್ಪನ್ನು ಪ್ರಶ್ನಿಸಿತ್ತು. ಡಿಸೆಂಬರ್ 1,2020 ರಂದು, ಸುಪ್ರೀಂ ಕೋರ್ಟ್ ಕೂಡ ರಾಜ್ಯ ಸರ್ಕಾರದ ಅರ್ಜಿಯನ್ನು ವಜಾಗೊಳಿಸಿತ್ತು. ಪ್ರಕರಣವನ್ನು ಸಿಬಿಐಗೆ ವಹಿಸಲು ಅವಕಾಶ ಮಾಡಿಕೊಟ್ಟಿತ್ತು.

ಡಿಸೆಂಬರ್ 14, 2020 ರಂದು ಸಿಬಿಐ ಔಪಚಾರಿಕವಾಗಿ ತನಿಖೆಯ ಹೊಣೆಯನ್ನು ವಹಿಸಿಕೊಂಡಿತ್ತು. ಡಿಸೆಂಬರ್ 1, 2021 ರಂದು, ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಐವರನ್ನು ಬಂಧಿಸಿತ್ತು. ಫೆಬ್ರವರಿ 2, 2023 ರಂದು ಕೊಚ್ಚಿಯ ಸಿಬಿಐ ವಿಶೇಷ ನ್ಯಾಯಾಲಯದಲ್ಲಿ ವಿಚಾರಣೆ ಪ್ರಾರಂಭವಾಗಿತ್ತು.

ಇದನ್ನೂ ಓದಿ : ಹಣ ಅಕ್ರಮ ವರ್ಗಾವಣೆ ಆರೋಪ : ವಿಚಾರಣೆಗೆ ಹಾಜರಾಗುವಂತೆ ಕೆಟಿಆರ್‌ಗೆ ಇಡಿ ಸಮನ್ಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...