Homeಮುಖಪುಟಕೇರಳ | ಕಾಂಗ್ರೆಸ್ ಕಾರ್ಯಕರ್ತರ ಕೊಲೆ ಪ್ರಕರಣ : ಸಿಪಿಐ(ಎಂ) ಮಾಜಿ ಶಾಸಕ ಸೇರಿ 14...

ಕೇರಳ | ಕಾಂಗ್ರೆಸ್ ಕಾರ್ಯಕರ್ತರ ಕೊಲೆ ಪ್ರಕರಣ : ಸಿಪಿಐ(ಎಂ) ಮಾಜಿ ಶಾಸಕ ಸೇರಿ 14 ಮಂದಿ ದೋಷಿಗಳೆಂದು ತೀರ್ಪು ಪ್ರಕಟ

- Advertisement -
- Advertisement -

ಕೇರಳದ ಕಾಸರಗೋಡಿನ ಪೆರಿಯದಲ್ಲಿ 2019ರಲ್ಲಿ ನಡೆದ ಇಬ್ಬರು ಯುವ ಕಾಂಗ್ರೆಸ್ ಕಾರ್ಯಕರ್ತರ ಕೊಲೆ ಪ್ರಕರಣದ 14 ಮಂದಿ ಆರೋಪಿಗಳನ್ನು ದೋಷಿಗಳೆಂದು ಘೋಷಿಸಿ ಕೊಚ್ಚಿಯ ಸಿಬಿಐ ವಿಶೇಷ ನ್ಯಾಯಾಲಯ ಇಂದು (ಡಿ.28) ತೀರ್ಪು ಪ್ರಕಟಿಸಿದೆ.

ಪ್ರಕರಣದ ಇತರ 10 ಆರೋಪಿಗಳನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. 14 ಅಪರಾಧಿಗಳ ಶಿಕ್ಷೆಯನ್ನು ಜನವರಿ 3,2025ರಂದು ಪ್ರಕಟಿಸಲಿದೆ. ಕಳೆದ 6 ವರ್ಷಗಳಿಂದ ಈ ಪ್ರಕರಣದ ವಿಚಾರಣೆ ನಡೆಯುತ್ತಿತ್ತು.

ಪ್ರಮುಖ ಸಿಪಿಐ(ಎಂ) ಮುಖಂಡರಾದ ಮಾಜಿ ಶಾಸಕ ಹಾಗೂ ಸಿಪಿಎಂ ಜಿಲ್ಲಾ ನಾಯಕ ಕೆ.ವಿ.ಕುಂಞಿರಾಮನ್, ಕಾಞಂಗಾಡ್ ಬ್ಲಾಕ್ ಪಂಚಾಯತ್ ಅಧ್ಯಕ್ಷ ಕೆ.ಮಣಿಕಂಠನ್, ಪೆರಿಯ ಸ್ಥಳೀಯ ಸಮಿತಿ ಮಾಜಿ ಸದಸ್ಯ ಎ.ಪೀತಾಂಬರನ್, ಪೆರಿಯ ಸ್ಥಳೀಯ ಸಮಿತಿಯ ಮಾಜಿ ಕಾರ್ಯದರ್ಶಿ ಎನ್.ಬಾಲಕೃಷ್ಣನ್, ಪಕ್ಕಂ ಸ್ಥಳೀಯ ಸಮಿತಿಯ ಮಾಜಿ ಕಾರ್ಯದರ್ಶಿ ರಾಘವನ್ ವೆಲುತ್ತೋಳಿ, ಸಿಐಟಿಯು ಮುಖಂಡ ಎ ಸುಭೀಶ್ ಮತ್ತು ಸಿಪಿಐ(ಎಂ) ಎಚಿಲಡುಕ್ಕಂ ಶಾಖೆಯ ಮಾಜಿ ಕಾರ್ಯದರ್ಶಿ ರಾಜೇಶ್ ಸೇರಿದಂತೆ ಒಟ್ಟು 24 ಮಂದಿ ಪ್ರಕರಣದಲ್ಲಿ ವಿಚಾರಣೆ ಎದುರಿಸಿದ್ದರು.

ಈ ಪೈಕಿ, ಪೀತಾಂಬರನ್, ಸಾಜಿ ಜಾರ್ಜ್, ಕೆ.ಎಂ ಸುರೇಶ್, ಕೆ. ಅನಿಲ್‌ಕುಮಾರ್, ಜಿಜಿನ್, ಶ್ರೀರಾಗ್, ಅಶ್ವಿನ್, ಸುಧೀಶ್, ರೆಂಜಿತ್, ಸುರೇಂದ್ರನ್, ಮಣಿಕಂಠನ್, ಕುಂಞಿರಾಮನ್, ವೆಲುತ್ತೋಳಿ ರಾಘವನ್ ಮತ್ತು ಎ.ವಿ. ಭಾಸ್ಕರನ್ ಅವರನ್ನು ದೋಷಿಗಳೆಂದು ನ್ಯಾಯಾಲಯ ಘೋಷಿಸಿದೆ.

ಪೆರಿಯ ಪರಿಸರದಲ್ಲಿ ಸಿಪಿಐ (ಎಂ) ಮತ್ತು ಕಾಂಗ್ರೆಸ್‌ ಕಾರ್ಯಕರ್ತರ ನಡುವೆ ನಡೆಯುತ್ತಿದ್ದ ಸರಣಿ ದಾಳಿ ಮತ್ತು ಪ್ರತಿದಾಳಿಗಳ ಭಾಗವಾಗಿ ನಡೆದ ಇಬ್ಬರ ಕೊಲೆಯು ರಾಜಕೀಯ ಪ್ರೇರಿತ ಎಂದು ಕೇಂದ್ರೀಯ ತನಿಖಾ ದಳ (ಸಿಬಿಐ) ಚಾರ್ಜ್‌ಶೀಟ್‌ನಲ್ಲಿ ಹೇಳಿತ್ತು.

ಫೆಬ್ರವರಿ 17, 2019ರಂದು ಕಾಸರಗೋಡಿನ ಪೆರಿಯದಲ್ಲಿ ಯುವ ಕಾಂಗ್ರೆಸ್ ಕಾರ್ಯಕರ್ತರಾಗಿದ್ದ 19 ವರ್ಷದ ಕೃಪೇಶ್ ಮತ್ತು 24 ವರ್ಷದ ಶರತ್‌ ಲಾಲ್ ಅವರ ಹತ್ಯೆ ನಡೆದಿತ್ತು. ಸಿಪಿಐ (ಎಂ) ಸದಸ್ಯರು ಈ ಕೊಲೆ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿತ್ತು.

ಪ್ರಕರಣದ ಹಿನ್ನೆಲೆ : ಜನವರಿ 5,2019 ರಂದು ನಡೆದ ವಿಚಾರಣೆಯ ಪ್ರಕಾರ, ಕಳ್ಳಿಯೋಟ್‌ನಲ್ಲಿ ಎಸ್‌ಎಫ್‌ಐ ಮತ್ತು ಯೂತ್ ಕಾಂಗ್ರೆಸ್ ನಡುವಿನ ಘರ್ಷಣೆಯ ನಂತರ, ಶರತ್ ಲಾಲ್ ಮತ್ತು ಇತರರು ಮೊದಲ ಪ್ರಕರಣದ ಅಪರಾಧಿ ಪೀತಾಂಬರನ್ ಮತ್ತು ಇನ್ನೋರ್ವ ಅಪರಾಧಿ ಸುರೇಂದ್ರನ್ ಅಲಿಯಾಸ್ ವಿಷ್ಣು ಸುರ ಮೇಲೆ ಹಲ್ಲೆ ನಡೆಸಿದ್ದರು. ಫೆಬ್ರವರಿ 17, 2019ರಂದು, ಕೃಪೇಶ್ ಮತ್ತು ಶರತ್ ಲಾಲ್ ಅವರು ಪೆರುಮ್ಕಾಲಿಯಾಟ್ಟಂ ದೇವಸ್ಥಾನದ ಉತ್ಸವದಿಂದ ಮನೆಗೆ ಹಿಂದಿರುಗುತ್ತಿದ್ದಾಗ ಕಳ್ಳಿಯೋಟ್-ತನ್ನಿತೋಡ್ ರಸ್ತೆಯಲ್ಲಿ ಅವರ ಮೇಲೆ ದಾಳಿ ನಡೆದಿತ್ತು. ಇದರಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಇಬ್ಬರೂ ಸಾವನ್ನಪ್ಪಿದ್ದರು.

ಫೆಬ್ರವರಿ 19, 2019 ರಂದು ಎ. ಪೀತಾಂಬರನ್ ಅವರನ್ನು ಪ್ರಕರಣದ ಪ್ರಮುಖ ಆರೋಪಿಯಾಗಿ ಬಂಧಿಸಲಾಗಿತ್ತು. ಎರಡು ದಿನಗಳ ನಂತರ ಕೇರಳ ಪೊಲೀಸ್ ಕ್ರೈಂ ಬ್ರಾಂಚ್ ತನಿಖೆಯನ್ನು ವಹಿಸಿಕೊಂಡಿತ್ತು. ಮೇ 20, 2019 ರಂದು, ಕ್ರೈಂ ಬ್ರಾಂಚ್ ತನ್ನ ಚಾರ್ಜ್‌ಶೀಟ್ ಸಲ್ಲಿಸಿತ್ತು. ಅದರಲ್ಲಿ 14 ಆರೋಪಿಗಳನ್ನು ಹೆಸರಿಸಿತ್ತು. ಎಲ್ಲರೂ ಸಿಪಿಐ(ಎಂ) ಪಕ್ಷದೊಂದಿಗೆ ಸಂಪರ್ಕ ಹೊಂದಿವರಾಗಿದ್ದರು.

ಸೆಪ್ಟೆಂಬರ್ 30,2019 ರಂದು, ಕೇರಳ ಹೈಕೋರ್ಟ್‌ನ ಏಕಸದಸ್ಯ ಪೀಠ ಕ್ರೈಂ ಬ್ರಾಂಚ್ ಚಾರ್ಜ್‌ಶೀಟ್ ರದ್ದುಗೊಳಿಸಿ ತನಿಖೆಯನ್ನು ಸಿಬಿಐಗೆ ಹಸ್ತಾಂತರಿಸಿತ್ತು. ಅಕ್ಟೋಬರ್ 26, 2019 ರಂದು, ಕೇರಳ ಸರ್ಕಾರವು ಸಿಬಿಐ ತನಿಖೆಯ ವಿರುದ್ಧ ಹೈಕೋರ್ಟ್‌ನ ವಿಭಾಗೀಯ ಪೀಠಕ್ಕೆ ಮನವಿ ಸಲ್ಲಿಸಿತ್ತು. ಆಗಸ್ಟ್ 25, 2020ರಂದು, ವಿಭಾಗೀಯ ಪೀಠವು ತನಿಖೆಯನ್ನು ಸಿಬಿಐಗೆ ವರ್ಗಾಯಿಸುವ ಏಕ ಸದಸ್ಯ ಪೀಠದ ಆದೇಶವನ್ನು ಎತ್ತಿಹಿಡಿದಿತ್ತು. ಸೆಪ್ಟೆಂಬರ್ 12, 2020ರಂದು, ಕೇರಳ ಸರ್ಕಾರವು ಸುಪ್ರೀಂ ಕೋರ್ಟ್‌ನಲ್ಲಿ ಹೈಕೋರ್ಟ್‌ನ ತೀರ್ಪನ್ನು ಪ್ರಶ್ನಿಸಿತ್ತು. ಡಿಸೆಂಬರ್ 1,2020 ರಂದು, ಸುಪ್ರೀಂ ಕೋರ್ಟ್ ಕೂಡ ರಾಜ್ಯ ಸರ್ಕಾರದ ಅರ್ಜಿಯನ್ನು ವಜಾಗೊಳಿಸಿತ್ತು. ಪ್ರಕರಣವನ್ನು ಸಿಬಿಐಗೆ ವಹಿಸಲು ಅವಕಾಶ ಮಾಡಿಕೊಟ್ಟಿತ್ತು.

ಡಿಸೆಂಬರ್ 14, 2020 ರಂದು ಸಿಬಿಐ ಔಪಚಾರಿಕವಾಗಿ ತನಿಖೆಯ ಹೊಣೆಯನ್ನು ವಹಿಸಿಕೊಂಡಿತ್ತು. ಡಿಸೆಂಬರ್ 1, 2021 ರಂದು, ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಐವರನ್ನು ಬಂಧಿಸಿತ್ತು. ಫೆಬ್ರವರಿ 2, 2023 ರಂದು ಕೊಚ್ಚಿಯ ಸಿಬಿಐ ವಿಶೇಷ ನ್ಯಾಯಾಲಯದಲ್ಲಿ ವಿಚಾರಣೆ ಪ್ರಾರಂಭವಾಗಿತ್ತು.

ಇದನ್ನೂ ಓದಿ : ಹಣ ಅಕ್ರಮ ವರ್ಗಾವಣೆ ಆರೋಪ : ವಿಚಾರಣೆಗೆ ಹಾಜರಾಗುವಂತೆ ಕೆಟಿಆರ್‌ಗೆ ಇಡಿ ಸಮನ್ಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...