Homeಮುಖಪುಟಕೇರಳ | ಕಾಂಗ್ರೆಸ್ ಕಾರ್ಯಕರ್ತರ ಕೊಲೆ ಪ್ರಕರಣ : ಸಿಪಿಐ(ಎಂ) ಮಾಜಿ ಶಾಸಕ ಸೇರಿ 14...

ಕೇರಳ | ಕಾಂಗ್ರೆಸ್ ಕಾರ್ಯಕರ್ತರ ಕೊಲೆ ಪ್ರಕರಣ : ಸಿಪಿಐ(ಎಂ) ಮಾಜಿ ಶಾಸಕ ಸೇರಿ 14 ಮಂದಿ ದೋಷಿಗಳೆಂದು ತೀರ್ಪು ಪ್ರಕಟ

- Advertisement -
- Advertisement -

ಕೇರಳದ ಕಾಸರಗೋಡಿನ ಪೆರಿಯದಲ್ಲಿ 2019ರಲ್ಲಿ ನಡೆದ ಇಬ್ಬರು ಯುವ ಕಾಂಗ್ರೆಸ್ ಕಾರ್ಯಕರ್ತರ ಕೊಲೆ ಪ್ರಕರಣದ 14 ಮಂದಿ ಆರೋಪಿಗಳನ್ನು ದೋಷಿಗಳೆಂದು ಘೋಷಿಸಿ ಕೊಚ್ಚಿಯ ಸಿಬಿಐ ವಿಶೇಷ ನ್ಯಾಯಾಲಯ ಇಂದು (ಡಿ.28) ತೀರ್ಪು ಪ್ರಕಟಿಸಿದೆ.

ಪ್ರಕರಣದ ಇತರ 10 ಆರೋಪಿಗಳನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. 14 ಅಪರಾಧಿಗಳ ಶಿಕ್ಷೆಯನ್ನು ಜನವರಿ 3,2025ರಂದು ಪ್ರಕಟಿಸಲಿದೆ. ಕಳೆದ 6 ವರ್ಷಗಳಿಂದ ಈ ಪ್ರಕರಣದ ವಿಚಾರಣೆ ನಡೆಯುತ್ತಿತ್ತು.

ಪ್ರಮುಖ ಸಿಪಿಐ(ಎಂ) ಮುಖಂಡರಾದ ಮಾಜಿ ಶಾಸಕ ಹಾಗೂ ಸಿಪಿಎಂ ಜಿಲ್ಲಾ ನಾಯಕ ಕೆ.ವಿ.ಕುಂಞಿರಾಮನ್, ಕಾಞಂಗಾಡ್ ಬ್ಲಾಕ್ ಪಂಚಾಯತ್ ಅಧ್ಯಕ್ಷ ಕೆ.ಮಣಿಕಂಠನ್, ಪೆರಿಯ ಸ್ಥಳೀಯ ಸಮಿತಿ ಮಾಜಿ ಸದಸ್ಯ ಎ.ಪೀತಾಂಬರನ್, ಪೆರಿಯ ಸ್ಥಳೀಯ ಸಮಿತಿಯ ಮಾಜಿ ಕಾರ್ಯದರ್ಶಿ ಎನ್.ಬಾಲಕೃಷ್ಣನ್, ಪಕ್ಕಂ ಸ್ಥಳೀಯ ಸಮಿತಿಯ ಮಾಜಿ ಕಾರ್ಯದರ್ಶಿ ರಾಘವನ್ ವೆಲುತ್ತೋಳಿ, ಸಿಐಟಿಯು ಮುಖಂಡ ಎ ಸುಭೀಶ್ ಮತ್ತು ಸಿಪಿಐ(ಎಂ) ಎಚಿಲಡುಕ್ಕಂ ಶಾಖೆಯ ಮಾಜಿ ಕಾರ್ಯದರ್ಶಿ ರಾಜೇಶ್ ಸೇರಿದಂತೆ ಒಟ್ಟು 24 ಮಂದಿ ಪ್ರಕರಣದಲ್ಲಿ ವಿಚಾರಣೆ ಎದುರಿಸಿದ್ದರು.

ಈ ಪೈಕಿ, ಪೀತಾಂಬರನ್, ಸಾಜಿ ಜಾರ್ಜ್, ಕೆ.ಎಂ ಸುರೇಶ್, ಕೆ. ಅನಿಲ್‌ಕುಮಾರ್, ಜಿಜಿನ್, ಶ್ರೀರಾಗ್, ಅಶ್ವಿನ್, ಸುಧೀಶ್, ರೆಂಜಿತ್, ಸುರೇಂದ್ರನ್, ಮಣಿಕಂಠನ್, ಕುಂಞಿರಾಮನ್, ವೆಲುತ್ತೋಳಿ ರಾಘವನ್ ಮತ್ತು ಎ.ವಿ. ಭಾಸ್ಕರನ್ ಅವರನ್ನು ದೋಷಿಗಳೆಂದು ನ್ಯಾಯಾಲಯ ಘೋಷಿಸಿದೆ.

ಪೆರಿಯ ಪರಿಸರದಲ್ಲಿ ಸಿಪಿಐ (ಎಂ) ಮತ್ತು ಕಾಂಗ್ರೆಸ್‌ ಕಾರ್ಯಕರ್ತರ ನಡುವೆ ನಡೆಯುತ್ತಿದ್ದ ಸರಣಿ ದಾಳಿ ಮತ್ತು ಪ್ರತಿದಾಳಿಗಳ ಭಾಗವಾಗಿ ನಡೆದ ಇಬ್ಬರ ಕೊಲೆಯು ರಾಜಕೀಯ ಪ್ರೇರಿತ ಎಂದು ಕೇಂದ್ರೀಯ ತನಿಖಾ ದಳ (ಸಿಬಿಐ) ಚಾರ್ಜ್‌ಶೀಟ್‌ನಲ್ಲಿ ಹೇಳಿತ್ತು.

ಫೆಬ್ರವರಿ 17, 2019ರಂದು ಕಾಸರಗೋಡಿನ ಪೆರಿಯದಲ್ಲಿ ಯುವ ಕಾಂಗ್ರೆಸ್ ಕಾರ್ಯಕರ್ತರಾಗಿದ್ದ 19 ವರ್ಷದ ಕೃಪೇಶ್ ಮತ್ತು 24 ವರ್ಷದ ಶರತ್‌ ಲಾಲ್ ಅವರ ಹತ್ಯೆ ನಡೆದಿತ್ತು. ಸಿಪಿಐ (ಎಂ) ಸದಸ್ಯರು ಈ ಕೊಲೆ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿತ್ತು.

ಪ್ರಕರಣದ ಹಿನ್ನೆಲೆ : ಜನವರಿ 5,2019 ರಂದು ನಡೆದ ವಿಚಾರಣೆಯ ಪ್ರಕಾರ, ಕಳ್ಳಿಯೋಟ್‌ನಲ್ಲಿ ಎಸ್‌ಎಫ್‌ಐ ಮತ್ತು ಯೂತ್ ಕಾಂಗ್ರೆಸ್ ನಡುವಿನ ಘರ್ಷಣೆಯ ನಂತರ, ಶರತ್ ಲಾಲ್ ಮತ್ತು ಇತರರು ಮೊದಲ ಪ್ರಕರಣದ ಅಪರಾಧಿ ಪೀತಾಂಬರನ್ ಮತ್ತು ಇನ್ನೋರ್ವ ಅಪರಾಧಿ ಸುರೇಂದ್ರನ್ ಅಲಿಯಾಸ್ ವಿಷ್ಣು ಸುರ ಮೇಲೆ ಹಲ್ಲೆ ನಡೆಸಿದ್ದರು. ಫೆಬ್ರವರಿ 17, 2019ರಂದು, ಕೃಪೇಶ್ ಮತ್ತು ಶರತ್ ಲಾಲ್ ಅವರು ಪೆರುಮ್ಕಾಲಿಯಾಟ್ಟಂ ದೇವಸ್ಥಾನದ ಉತ್ಸವದಿಂದ ಮನೆಗೆ ಹಿಂದಿರುಗುತ್ತಿದ್ದಾಗ ಕಳ್ಳಿಯೋಟ್-ತನ್ನಿತೋಡ್ ರಸ್ತೆಯಲ್ಲಿ ಅವರ ಮೇಲೆ ದಾಳಿ ನಡೆದಿತ್ತು. ಇದರಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಇಬ್ಬರೂ ಸಾವನ್ನಪ್ಪಿದ್ದರು.

ಫೆಬ್ರವರಿ 19, 2019 ರಂದು ಎ. ಪೀತಾಂಬರನ್ ಅವರನ್ನು ಪ್ರಕರಣದ ಪ್ರಮುಖ ಆರೋಪಿಯಾಗಿ ಬಂಧಿಸಲಾಗಿತ್ತು. ಎರಡು ದಿನಗಳ ನಂತರ ಕೇರಳ ಪೊಲೀಸ್ ಕ್ರೈಂ ಬ್ರಾಂಚ್ ತನಿಖೆಯನ್ನು ವಹಿಸಿಕೊಂಡಿತ್ತು. ಮೇ 20, 2019 ರಂದು, ಕ್ರೈಂ ಬ್ರಾಂಚ್ ತನ್ನ ಚಾರ್ಜ್‌ಶೀಟ್ ಸಲ್ಲಿಸಿತ್ತು. ಅದರಲ್ಲಿ 14 ಆರೋಪಿಗಳನ್ನು ಹೆಸರಿಸಿತ್ತು. ಎಲ್ಲರೂ ಸಿಪಿಐ(ಎಂ) ಪಕ್ಷದೊಂದಿಗೆ ಸಂಪರ್ಕ ಹೊಂದಿವರಾಗಿದ್ದರು.

ಸೆಪ್ಟೆಂಬರ್ 30,2019 ರಂದು, ಕೇರಳ ಹೈಕೋರ್ಟ್‌ನ ಏಕಸದಸ್ಯ ಪೀಠ ಕ್ರೈಂ ಬ್ರಾಂಚ್ ಚಾರ್ಜ್‌ಶೀಟ್ ರದ್ದುಗೊಳಿಸಿ ತನಿಖೆಯನ್ನು ಸಿಬಿಐಗೆ ಹಸ್ತಾಂತರಿಸಿತ್ತು. ಅಕ್ಟೋಬರ್ 26, 2019 ರಂದು, ಕೇರಳ ಸರ್ಕಾರವು ಸಿಬಿಐ ತನಿಖೆಯ ವಿರುದ್ಧ ಹೈಕೋರ್ಟ್‌ನ ವಿಭಾಗೀಯ ಪೀಠಕ್ಕೆ ಮನವಿ ಸಲ್ಲಿಸಿತ್ತು. ಆಗಸ್ಟ್ 25, 2020ರಂದು, ವಿಭಾಗೀಯ ಪೀಠವು ತನಿಖೆಯನ್ನು ಸಿಬಿಐಗೆ ವರ್ಗಾಯಿಸುವ ಏಕ ಸದಸ್ಯ ಪೀಠದ ಆದೇಶವನ್ನು ಎತ್ತಿಹಿಡಿದಿತ್ತು. ಸೆಪ್ಟೆಂಬರ್ 12, 2020ರಂದು, ಕೇರಳ ಸರ್ಕಾರವು ಸುಪ್ರೀಂ ಕೋರ್ಟ್‌ನಲ್ಲಿ ಹೈಕೋರ್ಟ್‌ನ ತೀರ್ಪನ್ನು ಪ್ರಶ್ನಿಸಿತ್ತು. ಡಿಸೆಂಬರ್ 1,2020 ರಂದು, ಸುಪ್ರೀಂ ಕೋರ್ಟ್ ಕೂಡ ರಾಜ್ಯ ಸರ್ಕಾರದ ಅರ್ಜಿಯನ್ನು ವಜಾಗೊಳಿಸಿತ್ತು. ಪ್ರಕರಣವನ್ನು ಸಿಬಿಐಗೆ ವಹಿಸಲು ಅವಕಾಶ ಮಾಡಿಕೊಟ್ಟಿತ್ತು.

ಡಿಸೆಂಬರ್ 14, 2020 ರಂದು ಸಿಬಿಐ ಔಪಚಾರಿಕವಾಗಿ ತನಿಖೆಯ ಹೊಣೆಯನ್ನು ವಹಿಸಿಕೊಂಡಿತ್ತು. ಡಿಸೆಂಬರ್ 1, 2021 ರಂದು, ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಐವರನ್ನು ಬಂಧಿಸಿತ್ತು. ಫೆಬ್ರವರಿ 2, 2023 ರಂದು ಕೊಚ್ಚಿಯ ಸಿಬಿಐ ವಿಶೇಷ ನ್ಯಾಯಾಲಯದಲ್ಲಿ ವಿಚಾರಣೆ ಪ್ರಾರಂಭವಾಗಿತ್ತು.

ಇದನ್ನೂ ಓದಿ : ಹಣ ಅಕ್ರಮ ವರ್ಗಾವಣೆ ಆರೋಪ : ವಿಚಾರಣೆಗೆ ಹಾಜರಾಗುವಂತೆ ಕೆಟಿಆರ್‌ಗೆ ಇಡಿ ಸಮನ್ಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...