Homeಮುಖಪುಟಸಿಸೋಡಿಯಾಗೆ 14 ದಿನಗಳ ನ್ಯಾಯಾಂಗ ಬಂಧನ; ತಿಹಾರ್ ಜೈಲಿಗೆ ಎಎಪಿ ನಾಯಕ

ಸಿಸೋಡಿಯಾಗೆ 14 ದಿನಗಳ ನ್ಯಾಯಾಂಗ ಬಂಧನ; ತಿಹಾರ್ ಜೈಲಿಗೆ ಎಎಪಿ ನಾಯಕ

- Advertisement -
- Advertisement -

ಅಬಕಾರಿ ನೀತಿ ಪ್ರಕರಣದಲ್ಲಿ ದೆಹಲಿಯ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ಸೋಮವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ. ಮಾರ್ಚ್ 20ರವರೆಗೆ ಸಿಸೋಡಿಯಾ ಅವರನ್ನು ತಿಹಾರ್ ಜೈಲಿನಲ್ಲಿ ಇರಿಸಲಾಗುತ್ತದೆ. ಕಳೆದ ಒಂದು ವಾರದಿಂದ ಎಎಪಿ ನಾಯಕ ಸಿಬಿಐ ಕಸ್ಟಡಿಯಲ್ಲಿದ್ದರು.

ದೆಹಲಿಯಲ್ಲಿ ಈಗ ರದ್ದಾಗಿರುವ ಅಬಕಾರಿ ನೀತಿಯ ರಚನೆ ಮತ್ತು ಅನುಷ್ಠಾನದಲ್ಲಿನ ಭ್ರಷ್ಟಾಚಾರಕ್ಕೆ ಸಂಬಂಧಿಸಿದಂತೆ ಸಿಸೋಡಿಯಾ ಅವರನ್ನು ಬಂಧಿಸಲಾಗಿತ್ತು.

ಸಿಸೋಡಿಯಾ ಅವರ ಸಿಬಿಐ ಬಂಧನವನ್ನು ಶನಿವಾರ ಇನ್ನೂ ಎರಡು ದಿನಗಳವರೆಗೆ ವಿಸ್ತರಿಸಿದಾಗ, ಅವರು, ”ಇಡೀ ದಿನ ಬೆಳಿಗ್ಗೆಯಿಂದ ಸಂಜೆಯವರೆಗೆ ನನಗೆ ಒಂದೇ ರೀತಿಯ ಪ್ರಶ್ನೆಗಳನ್ನು ಕೇಳಲಾಗುತ್ತಿದೆ. ಇದು ನನಗೆ ಮಾನಸಿಕ ಕಿರುಕುಳವಾಗಿದೆ” ಎಂದು ಹೇಳಿದರು.

ನ್ಯಾಯಾಲಯವು ಈ ಹಿಂದೆ ಅನುಮತಿಸಿದ್ದ 7 ದಿನಗಳ ಸಿಬಿಐ ಕಸ್ಟಡಿ ವಿಚಾರಣೆಯ ಅವಧಿ ಮುಗಿದ ಹಿನ್ನೆಲೆಯಲ್ಲಿ ಅವರನ್ನು ಇಂದು ವಿಶೇಷ ನ್ಯಾಯಾಧೀಶ ಎಂ.ಕೆ.ನಾಗ್ಪಾಲ್ ಅವರ ಮುಂದೆ ಹಾಜರುಪಡಿಸಲಾಯಿತು.

ಇದನ್ನೂ ಓದಿ: ಕೇಂದ್ರದಿಂದ ತನಿಖಾ ಸಂಸ್ಥೆಗಳ ದುರುಪಯೋಗ: 8 ವಿರೋಧ ಪಕ್ಷಗಳಿಂದ ಪ್ರಧಾನಿಗೆ ಪತ್ರ

ದೆಹಲಿಯ ಮಾಜಿ ಉಪಮುಖ್ಯಮಂತ್ರಿ ಅವರು ನುಣುಚಿಕೊಳ್ಳುವ ಉತ್ತರಗಳನ್ನು ನೀಡಿದ್ದರಿಂದ ಮತ್ತು ಸಾಕ್ಷ್ಯಾಧಾರಗಳೊಂದಿಗೆ ತನಿಖೆಗೆ ಸಹಕರಿಸದ ಕಾರಣ ಅವರನ್ನು ಬಂಧಿಸಲಾಗಿದೆ ಎಂದು ಸಿಬಿಐ ಆರೋಪಿಸಿದೆ.

ಈ ಮಧ್ಯೆ ಸಿಸೋಡಿಯಾ ಅವರು ದೆಹಲಿ ನ್ಯಾಯಾಲಯದ ಮುಂದೆ ಜಾಮೀನು ಅರ್ಜಿಯನ್ನು ಸಲ್ಲಿಸಿದ್ದಾರೆ, ಮಾರ್ಚ್ 10ರಂದು ಈ ಅರ್ಜಿ ವಿಚಾರಣೆ ನಡೆಸಲಿದೆ. ನ್ಯಾಯಾಲಯವು ತನ್ನ ಉತ್ತರವನ್ನು ಸಲ್ಲಿಸಲು ಸಿಬಿಐಗೆ ಕೇಳಿದೆ.

ಪ್ರಕರಣಕ್ಕೆ ಸಂಬಂಧಿಸಿದ ಎಲ್ಲಾ ದಾಖಲೆಗಳನ್ನು ಈಗಾಗಲೇ ಪಡೆಯಲಾಗಿದೆ. ಹಾಗಾಗಿ ಕಸ್ಟಡಿಯಲ್ಲಿ ಇಡುವುದರಿಂದ ಯಾವುದೇ ಉಪಯೋಗವಾಗುವುದಿಲ್ಲ ಎಂದು ಜಾಮೀನು ಅರ್ಜಿಯಲ್ಲಿ ಸಿಸೋಡಿಯಾ ಹೇಳಿದ್ದಾರೆ.

ಸಿಸೋಡಿಯಾ ಬಂಧನಕ್ಕೆ ಸಂಬಂಧಿಸಿ ಪ್ರಧಾನಿಗೆ ವಿಪಕ್ಷಗಳ ಪತ್ರ

ಆಮ್ ಆದ್ಮಿ ಪಕ್ಷದ(ಎಎಪಿ) ನಾಯಕ ಮನೀಶ್ ಸಿಸೋಡಿಯಾ ಬಂಧನದ ವಿಚಾರದಲ್ಲಿ ಕೇಂದ್ರ ತನಿಖಾ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಳ್ಳಲಾಗಿದೆ ಎಂದು ಆರೋಪಿಸಿ ಎಂಟು ವಿರೋಧ ಪಕ್ಷಗಳು, ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿವೆ.

”ವಿರೋಧ ಪಕ್ಷದ ಸದಸ್ಯರ ವಿರುದ್ಧ ಕೇಂದ್ರೀಯ ಸಂಸ್ಥೆಗಳ ದುರ್ಬಳಕೆಯ ಈ ನಡೆಯು ನಾವು ಪ್ರಜಾಪ್ರಭುತ್ವದಿಂದ ನಿರಂಕುಶಪ್ರಭುತ್ವಕ್ಕೆ ಪರಿವರ್ತನೆಯಾಗಿದ್ದೇವೆ ಎಂದು ಸೂಚಿಸುತ್ತದೆ” ಎಂದು ಪತ್ರದಲ್ಲಿ ತಿಳಿಸಲಾಗಿದೆ.

”ಮನೀಶ್ ಸಿಸೋಡಿಯಾ ಅವರನ್ನು ಕೇಂದ್ರೀಯ ತನಿಖಾ ದಳ (ಸಿಬಿಐ) ಅವರ ವಿರುದ್ಧ ಯಾವುದೇ ಸಾಕ್ಷ್ಯಾಧಾರಗಳಿಲ್ಲದೆ ಅಕ್ರಮವೆಸಗಿರುವ ಆರೋಪದಲ್ಲಿ ಬಂಧಿಸಿದೆ” ಎಂದು ವಿರೋಧ ಪಕ್ಷದ ನಾಯಕರು ಪ್ರಧಾನಿ ಮೋದಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...

ಪ್ರತಿಭಟನೆಯನ್ನು ಹತ್ತಿಕ್ಕಲು ಅಕ್ಕಾಡಕ್ಕಿಳಿದಿವೆ ಹಿಂದುತ್ವವಾದಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್‌ ಮತ್ತು ಉಗ್ರ ಗೂಂಡಾ ಪಡೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 20ರಂದು ಶುರುವಾಗಿದ್ದ ಈ ಆಂದೋಲನ ಇದೀಗ ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಸಿಜೆಪಿ ಪಟ್ಟು ಹಿಡಿದಿದ್ದು, ಇಂದು...

ಜಿರಳೆಗಳನ್ನು ಸಾಯಿಸಿ ಎಂದು ವಿವಾದಾತ್ಮಕ ಪೋಸ್ಟ್‌ ಹಾಕಿದ ಪ್ರಜ್ಞಾ ಸಿಂಗ್ ಠಾಕೂರ್

ಮಾಜಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ದೇಶದಿಂದ ಜಿರಳೆಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಲು ವ್ಯವಸ್ಥೆ ಮಾಡುವಂತೆ ದೇಶದ ನಾಯಕರಿಗೆ ಮನವಿ ಮಾಡಿದ್ದಾರೆ. X (ಟ್ವಿಟರ್) ನಲ್ಲಿ ಮಾಡಿದ ಪೋಸ್ಟ್‌ನಲ್ಲಿ, 2008 ರ...

ಸೋನಮ್ ವಾಂಗ್ಚುಕ್ ಮತ್ತು ಸರ್ಕಾರದ ಡೀಲ್‌ನಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಅಂಶವೇ ಇಲ್ಲ

ಕೇಂದ್ರದ ಮೋದಿ ಸರ್ಕಾರ ತನ್ನ ಮೂರು ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಒಪ್ಪಿಕೊಂಡ ನಂತರ, ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಜುಲೈ 23ರ ಗುರುವಾರ ತಮ್ಮ 26 ದಿನಗಳ ಸುದೀರ್ಘ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ....

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...