Homeಮುಖಪುಟಛತ್ತೀಸ್‌ಗಢ ಎನ್‌ಕೌಂಟರ್: ಕೇಂದ್ರ ಸಮಿತಿ ಸದಸ್ಯ ಜಯರಾಮ್ ಸೇರಿದಂತೆ 16 ಜನ ಮಾವೋವಾದಿಗಳು ಸಾವು

ಛತ್ತೀಸ್‌ಗಢ ಎನ್‌ಕೌಂಟರ್: ಕೇಂದ್ರ ಸಮಿತಿ ಸದಸ್ಯ ಜಯರಾಮ್ ಸೇರಿದಂತೆ 16 ಜನ ಮಾವೋವಾದಿಗಳು ಸಾವು

- Advertisement -
- Advertisement -

ಒಡಿಶಾದ ಗಡಿಯ ಸಮೀಪವಿರುವ ಛತ್ತೀಸ್‌ಗಢದ ಗರಿಯಾಬಂದ್ ಜಿಲ್ಲೆಯ ಟೈಗರ್ ರಿಸರ್ವ್‌ ಪ್ರದೇಶದೊಳಗೆ ಸೋಮವಾರ ತಡ ರಾತ್ರಿ ಪ್ರಾರಂಭವಾದ ಭದ್ರತಾ ಪಡೆಗಳೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಕನಿಷ್ಠ 16 ಶಂಕಿತ ಮಾವೋವಾದಿಗಳು ಸಾವನ್ನಪ್ಪಿದ್ದಾರೆ.

ಈ ಎನ್‌ಕೌಂಟರ್‌ನಲ್ಲಿ, ₹1 ಕೋಟಿ ಬಹುಮಾನ ಹೊಂದಿದ್ದ ಕೇಂದ್ರ ಸಮಿತಿಯ ಸದಸ್ಯ ಜಯರಾಮ್ ಅಲಿಯಾಸ್ ಚಲಪತಿ ಸಾವನ್ನಪ್ಪಿದ್ದಾರೆ.

ಜಿಲ್ಲಾ ಮೀಸಲು ಪಡೆ (ಡಿಆರ್‌ಜಿ), ಕೇಂದ್ರ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್), ಛತ್ತೀಸ್‌ಗಢದ ಕೋಬ್ರಾ ಮತ್ತು ಒಡಿಶಾದ ವಿಶೇಷ ಕಾರ್ಯಾಚರಣೆ ಗುಂಪು (ಎಸ್‌ಒಜಿ) ಭದ್ರತಾ ಸಿಬ್ಬಂದಿಯ ಜಂಟಿ ತಂಡವು ಕಾರ್ಯಾಚರಣೆಯಲ್ಲಿ ಭಾಗಿಯಾಗಿತ್ತು.

ಸೋನಾಬೆಡಾ-ಧರಾಮಬಂಧ ಸಮಿತಿಯ ಇಬ್ಬರು ಮಹಿಳಾ ನಕ್ಸಲೀಯರನ್ನು ಗರಿಯಾಬಂದ್ ಜಿಲ್ಲಾ ಪೊಲೀಸರು, ಕೇಂದ್ರ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್‌), ಕಮಾಂಡೋ ಬೆಟಾಲಿಯನ್ ಫಾರ್ ರೆಸಲ್ಯೂಟ್ ಆಕ್ಷನ್ (ಕೋಬ್ರಾ) ಮತ್ತು ನಕ್ಸಲ್ ವಿರೋಧಿ ಕಾರ್ಯಾಚರಣೆಗಳಿಗೆ ತರಬೇತಿ ಪಡೆದ ಒಡಿಶಾದ ವಿಶೇಷ ಕಾರ್ಯಾಚರಣೆ ಪಡೆ (ಎಸ್‌ಒಜಿ) ಗುಂಡಿಕ್ಕಿ ಕೊಂದ ಒಂದು ದಿನದ ನಂತರ ಈ ಸಾವುಗಳು ಸಂಭವಿಸಿವೆ. ಎನ್‌ಕೌಂಟರ್‌ನಲ್ಲಿ ಒಬ್ಬ ಕೋಬ್ರಾ ಜವಾನನಿಗೆ ಸಣ್ಣಪುಟ್ಟ ಗಾಯಗಳು ಸಂಭವಿಸಿವೆ.

ಜನವರಿ 19ರಂದು ಸೋನಾಬೆಡಾ-ಧರಾಮಬಂಧ ಸಮಿತಿಯಿಂದ ಮಾವೋವಾದಿಗಳ ಚಲನವಲನದ ಬಗ್ಗೆ ಭದ್ರತಾ ಪಡೆಗಳಿಗೆ ಮಾಹಿತಿ ದೊರೆತ ನಂತರ ಜಂಟಿ ಕಾರ್ಯಾಚರಣೆ ಪ್ರಾರಂಭವಾಯಿತು. ಸೋಮವಾರ ಬೆಳಿಗ್ಗೆ 8 ಗಂಟೆಗೆ ಉದಾಂತಿ ಸೀತಾನದಿ ಟೈಗರ್‌ ರಿಸರ್ವ್ ಪ್ರದೇಶದಲ್ಲಿ ಗರಿಯಾಬಂದ್ ಪ್ರಧಾನ ಕಚೇರಿಯಿಂದ ಸುಮಾರು 60ರಿಂದ 70 ಕಿ.ಮೀ ದೂರದಲ್ಲಿ ಮತ್ತು ಒಡಿಶಾ ಗಡಿಯಿಂದ ಸುಮಾರು 20 ಕಿ.ಮೀ ದೂರದಲ್ಲಿ ಈ ಎನ್ಕೌಂಟರ್ ನಡೆದಿದೆ.

“14ಕ್ಕೂ ಹೆಚ್ಚು ಮಾವೋವಾದಿಗಳನ್ನು ಗುಂಡಿಕ್ಕಿ ಕೊಲ್ಲಲಾಗಿದೆ. ಶೋಧ ಕಾರ್ಯಾಚರಣೆಗಳು ನಡೆಯುತ್ತಿವೆ; ಭದ್ರತಾ ಪಡೆಗಳು ತಮ್ಮ ಶೋಧ ಕಾರ್ಯಾಚರಣೆಯನ್ನು ಪೂರ್ಣಗೊಳಿಸಿ ಹಿಂದಿರುಗಿದ ನಂತರ ಹೆಚ್ಚಿನ ಮಾಹಿತಿಯನ್ನು ನೀಡಬಹುದು” ಎಂದು ಛತ್ತೀಸ್‌ಗಢದ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಮಾವೋವಾದಿಗಳ ಸಾವುನೋವುಗಳ ಸಂಖ್ಯೆ ಹೆಚ್ಚಿರಬಹುದು; ಭದ್ರತಾ ಪಡೆಗಳು ಬೃಹತ್ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಂಡಿವೆ ಎಂದು ಒಡಿಶಾ ಪೊಲೀಸರು ತಿಳಿಸಿದ್ದಾರೆ. “ಈ ಪ್ರದೇಶದಲ್ಲಿ ಪೊಲೀಸರು ಬೃಹತ್ ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ; ಮಾವೋವಾದಿಗಳ ವಿರುದ್ಧ ಜಂಟಿ ಕಾರ್ಯಾಚರಣೆ ಮುಂದುವರಿಯುತ್ತದೆ” ಎಂದು ಒಡಿಶಾದ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇತ್ತೀಚಿನ ಸಾವುನೋವುಗಳು ಈ ವರ್ಷ ಛತ್ತೀಸ್‌ಗಢದಲ್ಲಿ ನಡೆದ ಎನ್‌ಕೌಂಟರ್‌ಗಳಲ್ಲಿ ಸಾವನ್ನಪ್ಪಿದ ಮಾವೋವಾದಿಗಳ ಸಂಖ್ಯೆಯನ್ನು 36ಕ್ಕೆ ಹೆಚ್ಚಿಸಿದೆ. ರಾಜ್ಯದಲ್ಲಿ ಒಂಬತ್ತು ಭದ್ರತಾ ಪಡೆಗಳ ಸಿಬ್ಬಂದಿ ಮತ್ತು ಒಬ್ಬ ನಾಗರಿಕ ಚಾಲಕನನ್ನು ಸಹ ಮಾವೋವಾದಿಗಳು ಕೊಂದಿದ್ದಾರೆ. ಜನವರಿ 3ರಂದು ನಡೆದ ಎನ್‌ಕೌಂಟರ್‌ನಲ್ಲಿ ಮಾವೋವಾದಿಯೊಬ್ಬರು ಸಾವನ್ನಪ್ಪಿದ ನಂತರ ಈ ವರ್ಷ ಗರಿಯಾಬಂದ್ ಜಿಲ್ಲೆಯಲ್ಲಿ ನಡೆದ ಎರಡನೇ ಎನ್‌ಕೌಂಟರ್ ಇದಾಗಿದೆ.

ಒಡಿಶಾ, ಛತ್ತೀಸ್‌ಗಢ ಮತ್ತು ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳ ನಡುವಿನ ಜಂಟಿ ಅಂತರರಾಜ್ಯ ಕಾರ್ಯಾಚರಣೆಗಳಲ್ಲಿ 2025ರಲ್ಲಿ ಇದುವರೆಗೆ 15 “ಮಾವೋವಾದಿಗಳು” ಸಾವನ್ನಪ್ಪಿದ್ದಾರೆ ಎಂದು ಒಡಿಶಾ ಪೊಲೀಸರು ತಿಳಿಸಿದ್ದಾರೆ.

ನಕ್ಸಲ್ ಚಟುವಟಿಕೆಗಳನ್ನು ಕೆಲವು ಪ್ರದೇಶಗಳಿಗೆ ಸೀಮಿತಗೊಳಿಸಲಾಗಿದೆ, ಒಡಿಶಾದಲ್ಲಿ ಹಿಂಸಾಚಾರದ ಘಟನೆಗಳನ್ನು ಕಡಿಮೆ ಮಾಡಲಾಗಿದೆ, ಛತ್ತೀಸ್‌ಗಢದಿಂದ ಒಡಿಶಾಗೆ ಮಾವೋವಾದಿಗಳ ಸಂಚಾರದಿಂದ ಕಂಧಮಲ್-ಬೌಧ್-ಕಲಹಂಡಿ-ನುವಾಪಾದ ಅಕ್ಷದಲ್ಲಿ ಮಾವೋವಾದಿ ಚಟುವಟಿಕೆಗಳು ಕಳವಳಕಾರಿಯಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮಾವೋವಾದಿಗಳ ಬೆದರಿಕೆಯನ್ನು ಕೊನೆಗೊಳಿಸಲು ಜಂಟಿ ಕಾರ್ಯಾಚರಣೆಗಳು ಮತ್ತು ಗುಪ್ತಚರ ಮಾಹಿತಿಯ ಹಂಚಿಕೆಗೆ ಒತ್ತು ನೀಡಲಾಗುತ್ತಿದೆ ಎಂದು ಒಡಿಶಾ ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ; ದಲಿತ ಬಾಲಕಿಯ ಅತ್ಯಾಚಾರ ಪ್ರಕರಣ: 59ರಲ್ಲಿ 57 ಆರೋಪಿಗಳ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...