Homeಮುಖಪುಟಛತ್ತೀಸ್‌ಗಢ ಎನ್‌ಕೌಂಟರ್: ಕೇಂದ್ರ ಸಮಿತಿ ಸದಸ್ಯ ಜಯರಾಮ್ ಸೇರಿದಂತೆ 16 ಜನ ಮಾವೋವಾದಿಗಳು ಸಾವು

ಛತ್ತೀಸ್‌ಗಢ ಎನ್‌ಕೌಂಟರ್: ಕೇಂದ್ರ ಸಮಿತಿ ಸದಸ್ಯ ಜಯರಾಮ್ ಸೇರಿದಂತೆ 16 ಜನ ಮಾವೋವಾದಿಗಳು ಸಾವು

- Advertisement -
- Advertisement -

ಒಡಿಶಾದ ಗಡಿಯ ಸಮೀಪವಿರುವ ಛತ್ತೀಸ್‌ಗಢದ ಗರಿಯಾಬಂದ್ ಜಿಲ್ಲೆಯ ಟೈಗರ್ ರಿಸರ್ವ್‌ ಪ್ರದೇಶದೊಳಗೆ ಸೋಮವಾರ ತಡ ರಾತ್ರಿ ಪ್ರಾರಂಭವಾದ ಭದ್ರತಾ ಪಡೆಗಳೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಕನಿಷ್ಠ 16 ಶಂಕಿತ ಮಾವೋವಾದಿಗಳು ಸಾವನ್ನಪ್ಪಿದ್ದಾರೆ.

ಈ ಎನ್‌ಕೌಂಟರ್‌ನಲ್ಲಿ, ₹1 ಕೋಟಿ ಬಹುಮಾನ ಹೊಂದಿದ್ದ ಕೇಂದ್ರ ಸಮಿತಿಯ ಸದಸ್ಯ ಜಯರಾಮ್ ಅಲಿಯಾಸ್ ಚಲಪತಿ ಸಾವನ್ನಪ್ಪಿದ್ದಾರೆ.

ಜಿಲ್ಲಾ ಮೀಸಲು ಪಡೆ (ಡಿಆರ್‌ಜಿ), ಕೇಂದ್ರ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್), ಛತ್ತೀಸ್‌ಗಢದ ಕೋಬ್ರಾ ಮತ್ತು ಒಡಿಶಾದ ವಿಶೇಷ ಕಾರ್ಯಾಚರಣೆ ಗುಂಪು (ಎಸ್‌ಒಜಿ) ಭದ್ರತಾ ಸಿಬ್ಬಂದಿಯ ಜಂಟಿ ತಂಡವು ಕಾರ್ಯಾಚರಣೆಯಲ್ಲಿ ಭಾಗಿಯಾಗಿತ್ತು.

ಸೋನಾಬೆಡಾ-ಧರಾಮಬಂಧ ಸಮಿತಿಯ ಇಬ್ಬರು ಮಹಿಳಾ ನಕ್ಸಲೀಯರನ್ನು ಗರಿಯಾಬಂದ್ ಜಿಲ್ಲಾ ಪೊಲೀಸರು, ಕೇಂದ್ರ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್‌), ಕಮಾಂಡೋ ಬೆಟಾಲಿಯನ್ ಫಾರ್ ರೆಸಲ್ಯೂಟ್ ಆಕ್ಷನ್ (ಕೋಬ್ರಾ) ಮತ್ತು ನಕ್ಸಲ್ ವಿರೋಧಿ ಕಾರ್ಯಾಚರಣೆಗಳಿಗೆ ತರಬೇತಿ ಪಡೆದ ಒಡಿಶಾದ ವಿಶೇಷ ಕಾರ್ಯಾಚರಣೆ ಪಡೆ (ಎಸ್‌ಒಜಿ) ಗುಂಡಿಕ್ಕಿ ಕೊಂದ ಒಂದು ದಿನದ ನಂತರ ಈ ಸಾವುಗಳು ಸಂಭವಿಸಿವೆ. ಎನ್‌ಕೌಂಟರ್‌ನಲ್ಲಿ ಒಬ್ಬ ಕೋಬ್ರಾ ಜವಾನನಿಗೆ ಸಣ್ಣಪುಟ್ಟ ಗಾಯಗಳು ಸಂಭವಿಸಿವೆ.

ಜನವರಿ 19ರಂದು ಸೋನಾಬೆಡಾ-ಧರಾಮಬಂಧ ಸಮಿತಿಯಿಂದ ಮಾವೋವಾದಿಗಳ ಚಲನವಲನದ ಬಗ್ಗೆ ಭದ್ರತಾ ಪಡೆಗಳಿಗೆ ಮಾಹಿತಿ ದೊರೆತ ನಂತರ ಜಂಟಿ ಕಾರ್ಯಾಚರಣೆ ಪ್ರಾರಂಭವಾಯಿತು. ಸೋಮವಾರ ಬೆಳಿಗ್ಗೆ 8 ಗಂಟೆಗೆ ಉದಾಂತಿ ಸೀತಾನದಿ ಟೈಗರ್‌ ರಿಸರ್ವ್ ಪ್ರದೇಶದಲ್ಲಿ ಗರಿಯಾಬಂದ್ ಪ್ರಧಾನ ಕಚೇರಿಯಿಂದ ಸುಮಾರು 60ರಿಂದ 70 ಕಿ.ಮೀ ದೂರದಲ್ಲಿ ಮತ್ತು ಒಡಿಶಾ ಗಡಿಯಿಂದ ಸುಮಾರು 20 ಕಿ.ಮೀ ದೂರದಲ್ಲಿ ಈ ಎನ್ಕೌಂಟರ್ ನಡೆದಿದೆ.

“14ಕ್ಕೂ ಹೆಚ್ಚು ಮಾವೋವಾದಿಗಳನ್ನು ಗುಂಡಿಕ್ಕಿ ಕೊಲ್ಲಲಾಗಿದೆ. ಶೋಧ ಕಾರ್ಯಾಚರಣೆಗಳು ನಡೆಯುತ್ತಿವೆ; ಭದ್ರತಾ ಪಡೆಗಳು ತಮ್ಮ ಶೋಧ ಕಾರ್ಯಾಚರಣೆಯನ್ನು ಪೂರ್ಣಗೊಳಿಸಿ ಹಿಂದಿರುಗಿದ ನಂತರ ಹೆಚ್ಚಿನ ಮಾಹಿತಿಯನ್ನು ನೀಡಬಹುದು” ಎಂದು ಛತ್ತೀಸ್‌ಗಢದ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಮಾವೋವಾದಿಗಳ ಸಾವುನೋವುಗಳ ಸಂಖ್ಯೆ ಹೆಚ್ಚಿರಬಹುದು; ಭದ್ರತಾ ಪಡೆಗಳು ಬೃಹತ್ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಂಡಿವೆ ಎಂದು ಒಡಿಶಾ ಪೊಲೀಸರು ತಿಳಿಸಿದ್ದಾರೆ. “ಈ ಪ್ರದೇಶದಲ್ಲಿ ಪೊಲೀಸರು ಬೃಹತ್ ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ; ಮಾವೋವಾದಿಗಳ ವಿರುದ್ಧ ಜಂಟಿ ಕಾರ್ಯಾಚರಣೆ ಮುಂದುವರಿಯುತ್ತದೆ” ಎಂದು ಒಡಿಶಾದ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇತ್ತೀಚಿನ ಸಾವುನೋವುಗಳು ಈ ವರ್ಷ ಛತ್ತೀಸ್‌ಗಢದಲ್ಲಿ ನಡೆದ ಎನ್‌ಕೌಂಟರ್‌ಗಳಲ್ಲಿ ಸಾವನ್ನಪ್ಪಿದ ಮಾವೋವಾದಿಗಳ ಸಂಖ್ಯೆಯನ್ನು 36ಕ್ಕೆ ಹೆಚ್ಚಿಸಿದೆ. ರಾಜ್ಯದಲ್ಲಿ ಒಂಬತ್ತು ಭದ್ರತಾ ಪಡೆಗಳ ಸಿಬ್ಬಂದಿ ಮತ್ತು ಒಬ್ಬ ನಾಗರಿಕ ಚಾಲಕನನ್ನು ಸಹ ಮಾವೋವಾದಿಗಳು ಕೊಂದಿದ್ದಾರೆ. ಜನವರಿ 3ರಂದು ನಡೆದ ಎನ್‌ಕೌಂಟರ್‌ನಲ್ಲಿ ಮಾವೋವಾದಿಯೊಬ್ಬರು ಸಾವನ್ನಪ್ಪಿದ ನಂತರ ಈ ವರ್ಷ ಗರಿಯಾಬಂದ್ ಜಿಲ್ಲೆಯಲ್ಲಿ ನಡೆದ ಎರಡನೇ ಎನ್‌ಕೌಂಟರ್ ಇದಾಗಿದೆ.

ಒಡಿಶಾ, ಛತ್ತೀಸ್‌ಗಢ ಮತ್ತು ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳ ನಡುವಿನ ಜಂಟಿ ಅಂತರರಾಜ್ಯ ಕಾರ್ಯಾಚರಣೆಗಳಲ್ಲಿ 2025ರಲ್ಲಿ ಇದುವರೆಗೆ 15 “ಮಾವೋವಾದಿಗಳು” ಸಾವನ್ನಪ್ಪಿದ್ದಾರೆ ಎಂದು ಒಡಿಶಾ ಪೊಲೀಸರು ತಿಳಿಸಿದ್ದಾರೆ.

ನಕ್ಸಲ್ ಚಟುವಟಿಕೆಗಳನ್ನು ಕೆಲವು ಪ್ರದೇಶಗಳಿಗೆ ಸೀಮಿತಗೊಳಿಸಲಾಗಿದೆ, ಒಡಿಶಾದಲ್ಲಿ ಹಿಂಸಾಚಾರದ ಘಟನೆಗಳನ್ನು ಕಡಿಮೆ ಮಾಡಲಾಗಿದೆ, ಛತ್ತೀಸ್‌ಗಢದಿಂದ ಒಡಿಶಾಗೆ ಮಾವೋವಾದಿಗಳ ಸಂಚಾರದಿಂದ ಕಂಧಮಲ್-ಬೌಧ್-ಕಲಹಂಡಿ-ನುವಾಪಾದ ಅಕ್ಷದಲ್ಲಿ ಮಾವೋವಾದಿ ಚಟುವಟಿಕೆಗಳು ಕಳವಳಕಾರಿಯಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮಾವೋವಾದಿಗಳ ಬೆದರಿಕೆಯನ್ನು ಕೊನೆಗೊಳಿಸಲು ಜಂಟಿ ಕಾರ್ಯಾಚರಣೆಗಳು ಮತ್ತು ಗುಪ್ತಚರ ಮಾಹಿತಿಯ ಹಂಚಿಕೆಗೆ ಒತ್ತು ನೀಡಲಾಗುತ್ತಿದೆ ಎಂದು ಒಡಿಶಾ ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ; ದಲಿತ ಬಾಲಕಿಯ ಅತ್ಯಾಚಾರ ಪ್ರಕರಣ: 59ರಲ್ಲಿ 57 ಆರೋಪಿಗಳ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...