Homeಮುಖಪುಟರೈಲು ಹಳಿಗಳಲ್ಲಿ ಪ್ರಾಣಬಿಟ್ಟ 14 ವಲಸೆ ಕಾರ್ಮಿಕರು : ಮಹಾರಾಷ್ಟ್ರದ ಔರಂಗಾಬಾದ್‌ನಲ್ಲಿ ನಡೆದ ದುರ್ಘಟನೆ

ರೈಲು ಹಳಿಗಳಲ್ಲಿ ಪ್ರಾಣಬಿಟ್ಟ 14 ವಲಸೆ ಕಾರ್ಮಿಕರು : ಮಹಾರಾಷ್ಟ್ರದ ಔರಂಗಾಬಾದ್‌ನಲ್ಲಿ ನಡೆದ ದುರ್ಘಟನೆ

ಆ ರೈಲ್ವೇ ಟ್ರ್ಯಾಕ್‌ಗಳ ಬಳಿ ಮೃತರ ಪಾದರಕ್ಷೆಗಳು ಮತ್ತು ಇತರ ವೈಯಕ್ತಿಕ ವಸ್ತುಗಳಿಂದ ಬಿದ್ದಿವೆ. ಅವರು ತಮ್ಮ ಪ್ರಯಾಣಕ್ಕಾಗಿ ಸಾಗಿಸುತ್ತಿದ್ದ ರೊಟ್ಟಿಗಳು ಸಹ ಚೆಲ್ಲಾಪಿಲ್ಲಿಯಾಗಿದ್ದು ನೋಡುಗರ ಮನಕರಗಿಸುವಂತಿವೆ. 

- Advertisement -
- Advertisement -

ಇಂದು ಬೆಳಿಗ್ಗೆ ಮಹಾರಾಷ್ಟ್ರದ ಔರಂಗಾಬಾದ್‌ನಲ್ಲಿ ರೈಲ್ವೇ ಹಳಿಗಳ ಮೇಲೆ ಮಲಗಿದ್ದ ವಲಸೆ ಕಾರ್ಮಿಕರ ಮೇಲೆ ಸರಕುಗಳ ರೈಲು ಹರಿದ ಪರಿಣಾಮ 14 ಕಾರ್ಮಿಕರು ದುರ್ಮರಣ ಹೊಂದಿರುವ ಕರಾಳ ಘಟನೆ ಜರುಗಿದೆ.

ಈ ದುರ್ಘಟನೆಯಲ್ಲಿ 5 ಜನರು ಗಾಯಗೊಂಡಿದ್ದು ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ಮೋಕ್ಷದಾ ಪಾಟೀಲ್ ತಿಳಿಸಿದ್ದಾರೆ.

ಮಧ್ಯಪ್ರದೇಶದ ವಲಸೆ ಕಾರ್ಮಿಕರಾದ ಇವರು ಮಹಾರಾಷ್ಟ್ರದ ಜಲ್ನಾದಿಂದ ಮಧ್ಯಪ್ರದೇಶದ ಭುಸ್ವಾಲ್‌ಗೆ ಕಾಲ್ನಡಿಗೆಯಲ್ಲಿ ತೆರಳುತ್ತಿದ್ದರು ಎನ್ನಲಾಗಿದೆ. ಲಾಕ್‌ಡೌನ್‌ ಕಾರಣಕ್ಕೆ ರೈಲುಸೇವೆ ರದ್ದುಗೊಂಡಿರುವುದರಿಂದ ಅಪಾಯವಿಲ್ಲ ಎಂದು ರೈಲು ಹಳಿಗಳ ಮೇಲೆ ಮಲಗಿದ್ದಾಗ ಇಂದು ಬೆಳಿಗ್ಗೆ 5.15ಕ್ಕೆ ರೈಲು ಹರಿದ ಘಟನೆ ಸಂಭವಿಸಿದೆ.

ಆ ರೈಲ್ವೇ ಟ್ರ್ಯಾಕ್‌ಗಳ ಬಳಿ ಮೃತರ ಪಾದರಕ್ಷೆಗಳು ಮತ್ತು ಇತರ ವೈಯಕ್ತಿಕ ವಸ್ತುಗಳಿಂದ ಬಿದ್ದಿವೆ. ಅವರು ತಮ್ಮ ಪ್ರಯಾಣಕ್ಕಾಗಿ ಸಾಗಿಸುತ್ತಿದ್ದ ರೊಟ್ಟಿಗಳು ಸಹ ಚೆಲ್ಲಾಪಿಲ್ಲಿಯಾಗಿದ್ದು ನೋಡುಗರ ಮನಕರಗಿಸುವಂತಿವೆ.

ಇನ್ನು ಘಟನೆ ಕುರಿತು ರೈಲ್ವೆ ಸಚಿವಾಲಯವು ಸರಣಿ ಟ್ವೀಟ್‌ಗಳನ್ನು ಮಾಡಿದೆ. “ಇಂದು ಮುಂಜಾನೆ ಕೆಲವು ಜನರು ಟ್ರಾಕ್‌ ಮೇಲೆ ಮಲಗಿರುವುದು ಕಾಣಿಸಿತು. ಕೂಡಲೇ ಸರಕು ರೈಲಿನ ಲೊಕೊ ಪೈಲಟ್ ರೈಲನ್ನು ನಿಲ್ಲಿಸಲು ಪ್ರಯತ್ನಿಸಿದನು. ಆದರೆ ಅಂತಿಮವಾಗಿ ಸಾಧ್ಯವಾಗದೇ 14 ಜನರು ಸಾವನಪ್ಪಬೇಕಾಗಿದೆ. ಗಾಯಗೊಂಡವರನ್ನು ಔರಂಗಾಬಾದ್ ಸಿವಿಲ್ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ವಿಚಾರಣೆಗೆ ಆದೇಶಿಸಲಾಗಿದೆ” ಎಂದು ರೈಲ್ವೆ ಸಚಿವಾಲಯ ಟ್ವೀಟ್ ಮಾಡಿದೆ.

ಪ್ರಧಾನಿ ನರೇಂದ್ರ ಮೋದಿ ಅವರು “ಸಾಧ್ಯವಿರುವ ಎಲ್ಲ ಸಹಾಯವನ್ನು ನೀಡಲಾಗುತ್ತಿದೆ” ಎಂದು ಟ್ವೀಟ್ ಮಾಡಿದ್ದಾರೆ. “ಮಹಾರಾಷ್ಟ್ರದ ಔರಂಗಾಬಾದ್‌ನಲ್ಲಿನ ರೈಲು ಅಪಘಾತದಿಂದ ಪ್ರಾಣಹಾನಿ ತೀವ್ರ ದುಃಖಿತವಾಗಿದೆ. ರೈಲ್ವೆ ಸಚಿವ ಶ್ರೀ ಪಿಯೂಷ್ ಗೋಯಲ್ ಅವರೊಂದಿಗೆ ಮಾತನಾಡಿದ್ದಾರೆ ಮತ್ತು ಅವರು ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ. ಅಗತ್ಯವಿರುವ ಎಲ್ಲ ಸಹಾಯವನ್ನು ಒದಗಿಸಲಾಗುತ್ತಿದೆ” ಎಂದು ಪಿಎಂ ಮೋದಿ ಟ್ವೀಟ್‌ನಲ್ಲಿ ತಿಳಿಸಿದ್ದಾರೆ.

ಅಪಘಾತದ ಸ್ಥಳಕ್ಕೆ ಫುಲಾಂಬ್ರಿಯ ಶಾಸಕರಾಗಿರುವ ಮಹಾರಾಷ್ಟ್ರದ ಮಾಜಿ ಸ್ಪೀಕರ್ ಹರಿಭೌ ಬಾಗ್ಡೆ ಭೇಟಿ ನೀಡಿದ್ದಾರೆ.

ಅಪಘಾತದಲ್ಲಿ ಮೃತಪಟ್ಟವರಿಗೆ ಸಂತಾಪ ಸೂಚಿಸಿ, ಆ ಕಾರ್ಮಿಕರ ಕುಟುಂಬಗಳಿಗೆ ಸಹಾಯ ಕೋರಿ ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್‌ ರೈಲ್ವೆ ಸಚಿವ ಪಿಯೂಷ್ ಗೋಯಲ್ ಅವರೊಂದಿಗೆ ಮಾತನಾಡಿದ್ದಾರೆ. ಅವರು ಸಹ ಮೃತರ ಕುಟುಂಬಗಳಿಗೆ 5 ಲಕ್ಷ ರೂ ಪರಿಹಾರ ಘೋಷಿಸಿದ್ದಾರೆ.

ಗಾಯಗೊಂಡ ವಲಸಿಗರ ಚಿಕಿತ್ಸೆಗೆ ಸಂಬಂಧಿಸಿದ ವ್ಯವಸ್ಥೆಗಳಿಗಾಗಿ ಚೌಹಾಣ್‌ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರೊಂದಿಗೆ ಸಂಪರ್ಕದಲ್ಲಿದ್ದಾರೆ ಎಂದು ಮಧ್ಯಪ್ರದೇಶದ ಅಧಿಕಾರಿಗಳು ತಿಳಿಸಿದ್ದಾರೆ.

ತುರ್ತು ಕಾರಣಗಳಿಗಾಗಿ ಮನೆಗೆ ಮರಳಬೇಕಾದ ವಲಸಿಗರಿಗಾಗಿ ಹಲವಾರು ರಾಜ್ಯಗಳು “ಶ್ರಮಿಕ್” ವಿಶೇಷ ರೈಲುಗಳನ್ನು ಓಡಿಸುತ್ತಿದ್ದರೂ, ಸರ್ಕಾರಗಳು ಸೃಷ್ಟಿಸಿರುವ ಗೊಂದಲಗಳಿಂದಾಗಿ ಅನೇಕರು ಕಾಲ್ನಡಿಗೆಯಲ್ಲಿಯೇ ಹಿಂತಿರುಗಲು ಪ್ರಾರಂಭಿಸಿದ್ದಾರೆ.


ಇದನ್ನೂ ಓದಿ: ಒತ್ತಡಕ್ಕೆ ಮಣಿದ ಸರ್ಕಾರ: ನಾಳೆಯಿಂದ ಕಾರ್ಮಿಕರಿಗೆ ರೈಲು ಸೇವೆ ಆರಂಭ 

Also Read: Gas leak at Vishakhapatnam, 10 dead, over 5000 fell sick

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...