Homeಮುಖಪುಟರೈಲು ಹಳಿಗಳಲ್ಲಿ ಪ್ರಾಣಬಿಟ್ಟ 14 ವಲಸೆ ಕಾರ್ಮಿಕರು : ಮಹಾರಾಷ್ಟ್ರದ ಔರಂಗಾಬಾದ್‌ನಲ್ಲಿ ನಡೆದ ದುರ್ಘಟನೆ

ರೈಲು ಹಳಿಗಳಲ್ಲಿ ಪ್ರಾಣಬಿಟ್ಟ 14 ವಲಸೆ ಕಾರ್ಮಿಕರು : ಮಹಾರಾಷ್ಟ್ರದ ಔರಂಗಾಬಾದ್‌ನಲ್ಲಿ ನಡೆದ ದುರ್ಘಟನೆ

ಆ ರೈಲ್ವೇ ಟ್ರ್ಯಾಕ್‌ಗಳ ಬಳಿ ಮೃತರ ಪಾದರಕ್ಷೆಗಳು ಮತ್ತು ಇತರ ವೈಯಕ್ತಿಕ ವಸ್ತುಗಳಿಂದ ಬಿದ್ದಿವೆ. ಅವರು ತಮ್ಮ ಪ್ರಯಾಣಕ್ಕಾಗಿ ಸಾಗಿಸುತ್ತಿದ್ದ ರೊಟ್ಟಿಗಳು ಸಹ ಚೆಲ್ಲಾಪಿಲ್ಲಿಯಾಗಿದ್ದು ನೋಡುಗರ ಮನಕರಗಿಸುವಂತಿವೆ. 

- Advertisement -
- Advertisement -

ಇಂದು ಬೆಳಿಗ್ಗೆ ಮಹಾರಾಷ್ಟ್ರದ ಔರಂಗಾಬಾದ್‌ನಲ್ಲಿ ರೈಲ್ವೇ ಹಳಿಗಳ ಮೇಲೆ ಮಲಗಿದ್ದ ವಲಸೆ ಕಾರ್ಮಿಕರ ಮೇಲೆ ಸರಕುಗಳ ರೈಲು ಹರಿದ ಪರಿಣಾಮ 14 ಕಾರ್ಮಿಕರು ದುರ್ಮರಣ ಹೊಂದಿರುವ ಕರಾಳ ಘಟನೆ ಜರುಗಿದೆ.

ಈ ದುರ್ಘಟನೆಯಲ್ಲಿ 5 ಜನರು ಗಾಯಗೊಂಡಿದ್ದು ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ಮೋಕ್ಷದಾ ಪಾಟೀಲ್ ತಿಳಿಸಿದ್ದಾರೆ.

ಮಧ್ಯಪ್ರದೇಶದ ವಲಸೆ ಕಾರ್ಮಿಕರಾದ ಇವರು ಮಹಾರಾಷ್ಟ್ರದ ಜಲ್ನಾದಿಂದ ಮಧ್ಯಪ್ರದೇಶದ ಭುಸ್ವಾಲ್‌ಗೆ ಕಾಲ್ನಡಿಗೆಯಲ್ಲಿ ತೆರಳುತ್ತಿದ್ದರು ಎನ್ನಲಾಗಿದೆ. ಲಾಕ್‌ಡೌನ್‌ ಕಾರಣಕ್ಕೆ ರೈಲುಸೇವೆ ರದ್ದುಗೊಂಡಿರುವುದರಿಂದ ಅಪಾಯವಿಲ್ಲ ಎಂದು ರೈಲು ಹಳಿಗಳ ಮೇಲೆ ಮಲಗಿದ್ದಾಗ ಇಂದು ಬೆಳಿಗ್ಗೆ 5.15ಕ್ಕೆ ರೈಲು ಹರಿದ ಘಟನೆ ಸಂಭವಿಸಿದೆ.

ಆ ರೈಲ್ವೇ ಟ್ರ್ಯಾಕ್‌ಗಳ ಬಳಿ ಮೃತರ ಪಾದರಕ್ಷೆಗಳು ಮತ್ತು ಇತರ ವೈಯಕ್ತಿಕ ವಸ್ತುಗಳಿಂದ ಬಿದ್ದಿವೆ. ಅವರು ತಮ್ಮ ಪ್ರಯಾಣಕ್ಕಾಗಿ ಸಾಗಿಸುತ್ತಿದ್ದ ರೊಟ್ಟಿಗಳು ಸಹ ಚೆಲ್ಲಾಪಿಲ್ಲಿಯಾಗಿದ್ದು ನೋಡುಗರ ಮನಕರಗಿಸುವಂತಿವೆ.

ಇನ್ನು ಘಟನೆ ಕುರಿತು ರೈಲ್ವೆ ಸಚಿವಾಲಯವು ಸರಣಿ ಟ್ವೀಟ್‌ಗಳನ್ನು ಮಾಡಿದೆ. “ಇಂದು ಮುಂಜಾನೆ ಕೆಲವು ಜನರು ಟ್ರಾಕ್‌ ಮೇಲೆ ಮಲಗಿರುವುದು ಕಾಣಿಸಿತು. ಕೂಡಲೇ ಸರಕು ರೈಲಿನ ಲೊಕೊ ಪೈಲಟ್ ರೈಲನ್ನು ನಿಲ್ಲಿಸಲು ಪ್ರಯತ್ನಿಸಿದನು. ಆದರೆ ಅಂತಿಮವಾಗಿ ಸಾಧ್ಯವಾಗದೇ 14 ಜನರು ಸಾವನಪ್ಪಬೇಕಾಗಿದೆ. ಗಾಯಗೊಂಡವರನ್ನು ಔರಂಗಾಬಾದ್ ಸಿವಿಲ್ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ವಿಚಾರಣೆಗೆ ಆದೇಶಿಸಲಾಗಿದೆ” ಎಂದು ರೈಲ್ವೆ ಸಚಿವಾಲಯ ಟ್ವೀಟ್ ಮಾಡಿದೆ.

ಪ್ರಧಾನಿ ನರೇಂದ್ರ ಮೋದಿ ಅವರು “ಸಾಧ್ಯವಿರುವ ಎಲ್ಲ ಸಹಾಯವನ್ನು ನೀಡಲಾಗುತ್ತಿದೆ” ಎಂದು ಟ್ವೀಟ್ ಮಾಡಿದ್ದಾರೆ. “ಮಹಾರಾಷ್ಟ್ರದ ಔರಂಗಾಬಾದ್‌ನಲ್ಲಿನ ರೈಲು ಅಪಘಾತದಿಂದ ಪ್ರಾಣಹಾನಿ ತೀವ್ರ ದುಃಖಿತವಾಗಿದೆ. ರೈಲ್ವೆ ಸಚಿವ ಶ್ರೀ ಪಿಯೂಷ್ ಗೋಯಲ್ ಅವರೊಂದಿಗೆ ಮಾತನಾಡಿದ್ದಾರೆ ಮತ್ತು ಅವರು ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ. ಅಗತ್ಯವಿರುವ ಎಲ್ಲ ಸಹಾಯವನ್ನು ಒದಗಿಸಲಾಗುತ್ತಿದೆ” ಎಂದು ಪಿಎಂ ಮೋದಿ ಟ್ವೀಟ್‌ನಲ್ಲಿ ತಿಳಿಸಿದ್ದಾರೆ.

ಅಪಘಾತದ ಸ್ಥಳಕ್ಕೆ ಫುಲಾಂಬ್ರಿಯ ಶಾಸಕರಾಗಿರುವ ಮಹಾರಾಷ್ಟ್ರದ ಮಾಜಿ ಸ್ಪೀಕರ್ ಹರಿಭೌ ಬಾಗ್ಡೆ ಭೇಟಿ ನೀಡಿದ್ದಾರೆ.

ಅಪಘಾತದಲ್ಲಿ ಮೃತಪಟ್ಟವರಿಗೆ ಸಂತಾಪ ಸೂಚಿಸಿ, ಆ ಕಾರ್ಮಿಕರ ಕುಟುಂಬಗಳಿಗೆ ಸಹಾಯ ಕೋರಿ ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್‌ ರೈಲ್ವೆ ಸಚಿವ ಪಿಯೂಷ್ ಗೋಯಲ್ ಅವರೊಂದಿಗೆ ಮಾತನಾಡಿದ್ದಾರೆ. ಅವರು ಸಹ ಮೃತರ ಕುಟುಂಬಗಳಿಗೆ 5 ಲಕ್ಷ ರೂ ಪರಿಹಾರ ಘೋಷಿಸಿದ್ದಾರೆ.

ಗಾಯಗೊಂಡ ವಲಸಿಗರ ಚಿಕಿತ್ಸೆಗೆ ಸಂಬಂಧಿಸಿದ ವ್ಯವಸ್ಥೆಗಳಿಗಾಗಿ ಚೌಹಾಣ್‌ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರೊಂದಿಗೆ ಸಂಪರ್ಕದಲ್ಲಿದ್ದಾರೆ ಎಂದು ಮಧ್ಯಪ್ರದೇಶದ ಅಧಿಕಾರಿಗಳು ತಿಳಿಸಿದ್ದಾರೆ.

ತುರ್ತು ಕಾರಣಗಳಿಗಾಗಿ ಮನೆಗೆ ಮರಳಬೇಕಾದ ವಲಸಿಗರಿಗಾಗಿ ಹಲವಾರು ರಾಜ್ಯಗಳು “ಶ್ರಮಿಕ್” ವಿಶೇಷ ರೈಲುಗಳನ್ನು ಓಡಿಸುತ್ತಿದ್ದರೂ, ಸರ್ಕಾರಗಳು ಸೃಷ್ಟಿಸಿರುವ ಗೊಂದಲಗಳಿಂದಾಗಿ ಅನೇಕರು ಕಾಲ್ನಡಿಗೆಯಲ್ಲಿಯೇ ಹಿಂತಿರುಗಲು ಪ್ರಾರಂಭಿಸಿದ್ದಾರೆ.


ಇದನ್ನೂ ಓದಿ: ಒತ್ತಡಕ್ಕೆ ಮಣಿದ ಸರ್ಕಾರ: ನಾಳೆಯಿಂದ ಕಾರ್ಮಿಕರಿಗೆ ರೈಲು ಸೇವೆ ಆರಂಭ 

Also Read: Gas leak at Vishakhapatnam, 10 dead, over 5000 fell sick

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...