Homeಮುಖಪುಟಹಲ್ದ್ವಾನಿ ಹಿಂಸಾಚಾರ: ಮತ್ತೆ 14 ಮಂದಿಯ ಬಂಧನ

ಹಲ್ದ್ವಾನಿ ಹಿಂಸಾಚಾರ: ಮತ್ತೆ 14 ಮಂದಿಯ ಬಂಧನ

- Advertisement -
- Advertisement -

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಮರಿಯಮ್ ಮಸೀದಿ ಮತ್ತು ಅಬ್ದುಲ್ ರಝಾಕ್ ಜಕಾರಿಯಾ ಮದರಸಾ ಧ್ವಂಸ ಘಟನೆಯ ವೇಳೆ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಉತ್ತರಾಖಂಡ ಪೊಲೀಸರು 14 ಜನರನ್ನು ಮತ್ತೆ ಬಂಧಿಸಿದ್ದು, ಈವರೆಗೆ ಪ್ರಕರಣದಲ್ಲಿ ಬಂಧಿತರ ಸಂಖ್ಯೆ 58ಕ್ಕೆ ಏರಿಕೆಯಾಗಿದೆ.

ಬಿಜೆಪಿ ಆಡಳಿತದ ಉತ್ತರಾಖಂಡದ ಹಲ್ದ್ವಾನಿಯ ಬನ್‌ಭೂಲ್‌ಪುರ ಪ್ರದೇಶದಲ್ಲಿ ಫೆಬ್ರವರಿ 8ರಂದು ಪುರಸಭೆ ಅಕ್ರಮ ಕಟ್ಟಡ ಎಂದು ಇತಿಹಾಸ ಪ್ರಸಿದ್ಧ ಮಸೀದಿ ಮತ್ತು ಮದರಸಾವನ್ನು ಕೆಡವಿತ್ತು. ಈ ಕುರಿತ ಪ್ರಕರಣ ನ್ಯಾಯಾಲಯದಲ್ಲಿ ಬಾಕಿ ಇರುವಾಗಲೇ ನಡೆದ ಧ್ವಂಸ ಪ್ರಕರಣ ಸ್ಥಳೀಯರ ವಿರೋಧಕ್ಕೆ ಕಾರಣವಾಗಿ ಹಿಂಸಾಚಾರಕ್ಕೆ ತಿರುಗಿತ್ತು.

ಸ್ಥಳೀಯರು ಪುರಸಭೆಯ ಸಿಬ್ಬಂದಿಗಳ ಮತ್ತು ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ್ದರು. ಹಿಂಸಾಚಾರದಲ್ಲಿ 6 ಮಂದಿ ಸಾವನ್ನಪ್ಪಿದ್ದರು ಮತ್ತು ಪೊಲೀಸ್ ಸಿಬ್ಬಂದಿ ಮತ್ತು ಮಾಧ್ಯಮ ಪ್ರತಿನಿಧಿಗಳು ಸೇರಿದಂತೆ 100ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು. ಜಿಲ್ಲಾಡಳಿತ ನೀಡಿದ ಮಾಹಿತಿಯ ಪ್ರಕಾರ ಹಿಂಸಾಚಾರದಲ್ಲಿ ಹಲ್ದ್ವಾನಿ ನಿವಾಸಿಗಳಾದ ಫಹೀಮ್ ಖುರೇಷಿ (30), ಝಾಹಿದ್ (45), ಮಗ ಮೊಹಮ್ಮದ್ ಅನಸ್ (16), ಮೊಹಮ್ಮದ್ ಶಬಾನ್ (22), ಮತ್ತು ಬಿಹಾರ ನಿವಾಸಿ ಪ್ರಕಾಶ್ ಕುಮಾರ್ ಸಿಂಗ್ (24)  ಮೃತಪಟ್ಟಿದ್ದರು.

ಘಟನೆ ಬಳಿಕ ಪೊಲೀಸರು ತಮ್ಮ ಮನೆಗಳಿಗೆ ನುಗ್ಗಿ ದೌರ್ಜನ್ಯ ನಡೆಸಿದ್ದಾರೆ ಎಂದು ಸ್ಥಳೀಯ ಮುಸ್ಲಿಂ ನಿವಾಸಿಗಳು ಆರೋಪಿಸಿದ್ದರು. ಪೊಲೀಸರು ಮನೆಗೆ ನುಗ್ಗಿ ವಸ್ತುಗಳನ್ನು ಧ್ವಂಸಗೊಳಿಸಿದ್ದಾರೆ ಮತ್ತು ಮನೆಯಲ್ಲಿದ್ದ ಪುರುಷರನ್ನು ಬಂಧಿಸಿದ್ದಾರೆ ಎಂದು ಬಂಬೂಲ್ಪುರದ ನಿವಾಸಿಗಳು ಹೇಳಿದ್ದರು. ಪೋಲೀಸರ ದೌರ್ಜನ್ಯದಿಂದ  ಹಲ್ದ್ವಾನಿಯಿಂದ ಮುಸ್ಲಿಮರು ವಲಸೆ ಹೋಗುವ ದೃಶ್ಯವು ಕಂಡು ಬಂದಿತ್ತು. ನೂರಾರು ಜನರು ಉತ್ತರಾಖಂಡದ ಇತರ ನಗರಗಳಿಗೆ ಮತ್ತು ಉತ್ತರಪ್ರದೇಶದ ನೆರೆಯ ಪಟ್ಟಣಗಳು ಮತ್ತು ನಗರಗಳಿಗೆ ತೆರಳಿದ್ದರು.

ಶನಿವಾರ ಬಂಧಿತರಲ್ಲಿ ಶಕೀಲ್ ಅನ್ಸಾರಿ, ಮೌಕೀನ್ ಸೈಫಿ ಮತ್ತು ಜಿಯಾ ಉಲ್ ರಹಮಾನ್ ಸೇರಿದ್ದಾರೆ. ಇತ್ತೀಚೆಗೆ ಹಿಂಸಾಚಾರಕ್ಕೆ ಸಂಬಂಧಿಸಿ ಪೊಲೀಸರು ವಾಂಟೆಡ್‌ ಲಿಸ್ಟ್‌ನಲ್ಲಿದ್ದ 9 ಮಂದಿಯಲ್ಲಿ ಇವರು ಸೇರಿದ್ದರು. ಇವರ ಬಗ್ಗೆ ಪೊಲೀಸರು ಪಟ್ಟಣದಾದ್ಯಂತ ಸಾರ್ವಜನಿಕರಿಂದ ಮಾಹಿತಿ ಕೋರಿ ಪೋಸ್ಟರ್‌ ಅಂಟಿಸಿದ್ದರು.

ಹಿಂಸಾಚಾರದ ಮಾಸ್ಟರ್ ಮೈಂಡ್ ಎಂದು ಹೇಳಲಾದ ಅಬ್ದುಲ್ ಮಲಿಕ್ ಮತ್ತು ಅವರ ಮಗ ಅಬ್ದುಲ್ ಮೊಯಿದ್ ಇನ್ನೂ ಪರಾರಿಯಾಗಿದ್ದಾರೆ. ಅವರ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳಲಾಗುತ್ತಿದೆ ಎಂದು ತಿಳಿದು ಬಂದಿದೆ. ಮಲಿಕ್ ಮತ್ತು ಅವರ ಪುತ್ರನ ವಿರುದ್ಧ ಜಾಮೀನು ರಹಿತ ವಾರೆಂಟ್ ಮತ್ತು ಲುಕ್ ಔಟ್ ನೋಟಿಸ್ ಜಾರಿ ಮಾಡಲಾಗಿತ್ತು. ಇದಾದ ನಂತರ ಶುಕ್ರವಾರ ಪಟ್ಟಣದಾದ್ಯಂತ ತಂದೆ-ಮಗ ಸೇರಿದಂತೆ ಒಂಬತ್ತು ಆರೋಪಿಗಳ ಪೋಸ್ಟರ್‌ಗಳನ್ನು ಅಂಟಿಸಲಾಗಿತ್ತು.

ಮಲಿಕ್ ಅವರು ಮದರಸಾವನ್ನು ನಿರ್ಮಿಸಿದ್ದರು ಮತ್ತು ಅದನ್ನು ಕೆಡವುವುದನ್ನು ತೀವ್ರವಾಗಿ ವಿರೋಧಿಸಿದ್ದರು. ಅವರ ಪತ್ನಿ ಸಫಿಯಾ ಮಲಿಕ್ ಅವರು ತೆರವು ಕಾರ್ಯವನ್ನು ಸ್ಥಗಿತಗೊಳಿಸುವಂತೆ ಕೋರಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಆದರೆ ಹೈಕೋರ್ಟ್‌ನಲ್ಲಿ ಪ್ರಕರಣ ಬಾಕಿ ಇರುವಾಗಲೇ ತ್ವರಿತವಾಗಿ ಮಸೀದಿ ಧ್ವಂಸ ಕಾರ್ಯ ನಡೆದಿತ್ತು.

ಇದನ್ನು ಓದಿ: ಹಲ್ದ್ವಾನಿ ಹಿಂಸಾಚಾರ: ಮಾಹಿತಿ ಬಿಚ್ಚಿಟ್ಟ ಮೃತರ ಸಂಬಂಧಿಕರು..

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...