Homeಅಂತರಾಷ್ಟ್ರೀಯನೆರವು ನೀಡದಿದ್ದರೆ ಮುಂದಿನ 48 ಗಂಟೆಗಳಲ್ಲಿ ಗಾಜಾದ 14,000 ಶಿಶುಗಳು ಸಾಯಬಹುದು: ವಿಶ್ವಸಂಸ್ಥೆ ಎಚ್ಚರಿಕೆ

ನೆರವು ನೀಡದಿದ್ದರೆ ಮುಂದಿನ 48 ಗಂಟೆಗಳಲ್ಲಿ ಗಾಜಾದ 14,000 ಶಿಶುಗಳು ಸಾಯಬಹುದು: ವಿಶ್ವಸಂಸ್ಥೆ ಎಚ್ಚರಿಕೆ

- Advertisement -
- Advertisement -

ಯುದ್ಧಪೀಡಿತ ಪ್ರದೇಶಕ್ಕೆ ಹೆಚ್ಚಿನ ನೆರವು ನೀಡದಿದ್ದರೆ 48 ಗಂಟೆಗಳಲ್ಲಿ ಗಾಜಾದಲ್ಲಿ 14,000 ಶಿಶುಗಳು ಸಾಯಬಹುದು ಎಂದು ವಿಶ್ವಸಂಸ್ಥೆ ಎಚ್ಚರಿಸಿದೆ. ಗಾಜಾವನ್ನು ಸಂಪೂರ್ಣವಾಗಿ ದಿಗ್ಬಂಧನಗೊಳಿಸಿದ 11 ವಾರಗಳ ನಂತರ ಇಸ್ರೇಲಿ ಅಧಿಕಾರಿಗಳು ಪ್ಯಾಲೆಸ್ತೀನಿಯನ್ ಪ್ರದೇಶಕ್ಕೆ ಸೀಮಿತ ನೆರವು ನೀಡಲು ಮಾತ್ರ ಅವಕಾಶ ನೀಡುತ್ತಿದ್ದಾರೆ. ಯುಎಸ್, ಕೆನಡಾ, ಫ್ರಾನ್ಸ್ ಮತ್ತು ಯುನೈಟೆಡ್ ಕಿಂಗ್‌ಡಮ್ ಸೇರಿದಂತೆ ಮಿತ್ರರಾಷ್ಟ್ರಗಳ ಒತ್ತಡದ ನಂತರ ಈ ಕ್ರಮ ಕೈಗೊಳ್ಳಲಾಗಿದೆ.

ಶಿಶುಗಳಿಗೆ ಆಹಾರ ಸೇರಿದಂತೆ ಮಾನವೀಯ ನೆರವು ಹೊತ್ತ ಐದು ಟ್ರಕ್‌ಗಳು ಸೋಮವಾರ ಗಾಜಾವನ್ನು ಪ್ರವೇಶಿಸಿವೆ ಎಂದು ವಿಶ್ವಸಂಸ್ಥೆಯ ಮಾನವೀಯ ಮುಖ್ಯಸ್ಥ ಟಾಮ್ ಫ್ಲೆಚರ್ ಹೇಳಿದ್ದಾರೆ. ಇಸ್ರೇಲ್‌ನ ವಾರಗಳ ಸಂಪೂರ್ಣ ದಿಗ್ಬಂಧನದ ನಂತರ ಇದು ‘ಸಾಗರದಲ್ಲಿ ಹನಿ’ಯಿದ್ದಂತೆ. ಅಗತ್ಯವಿರುವ ಸಮುದಾಯಗಳಿಗೆ ಸಹಾಯ ಇನ್ನೂ ತಲುಪಿಲ್ಲ ಎಂದು ಅವರು ಹೇಳಿದರು.

“ಮುಂದಿನ 48 ಗಂಟೆಗಳಲ್ಲಿ 14,000 ಶಿಶುಗಳು ಸಾಯುತ್ತವೆ, ಅವರನ್ನು ತಲುಪಲು ಸಾಧ್ಯವಾಗದಿದ್ದರೆ… ಅಪೌಷ್ಟಿಕತೆಯಿಂದ ಬಳಲುತ್ತಿರುವ ಕಾರಣ ಈಗ ತಮ್ಮ ಮಕ್ಕಳಿಗೆ ಆಹಾರವನ್ನು ನೀಡಲು ಸಾಧ್ಯವಾಗದ ತಾಯಂದಿರಿಗೆ ಶಿಶು ಆಹಾರವನ್ನು ತಲುಪಿಸಲು ನಾವು ಎಲ್ಲ ರೀತಿಯ ಅಪಾಯಗಳನ್ನು ಎದುರಿಸುತ್ತೇವೆ” ಎಂದು ಅವರು ಬಿಬಿಸಿಯ ರೇಡಿಯೋ 4 ಗೆ ತಿಳಿಸಿದರು.

ಸೋಮವಾರ ಬ್ರಿಟನ್, ಫ್ರಾನ್ಸ್ ಮತ್ತು ಕೆನಡಾ ನಾಯಕರು ಗಾಜಾದಲ್ಲಿ ಇಸ್ರೇಲ್‌ನ ‘ಅತಿರೇಕದ ಕ್ರಮಗಳನ್ನು’ ಖಂಡಿಸಿದ ನಂತರ ಮತ್ತು ಮಾನವೀಯ ನೆರವಿನ ಮೇಲಿನ ನಿರ್ಬಂಧಗಳನ್ನು ಕೊನೆಗೊಳಿಸದಿದ್ದರೆ ಜಂಟಿ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿದ ನಂತರ ವಿಶ್ವಸಂಸ್ಥೆಯ ಅಧಿಕಾರಿಯ ಹೇಳಿಕೆಗಳು ಬಂದಿವೆ. ಜಂಟಿ ಹೇಳಿಕೆಯಲ್ಲಿ, ಬ್ರಿಟಿಷ್ ಪ್ರಧಾನಿ ಕೀರ್ ಸ್ಟಾರ್ಮರ್, ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಮತ್ತು ಕೆನಡಾದ ಪ್ರಧಾನಿ ಮಾರ್ಕ್ ಕಾರ್ನಿ ಅವರು ಇಸ್ರೇಲ್ ನೆರವು ನಿರ್ಬಂಧಿಸಿರುವುದನ್ನು ಹಾಗೂ ಪ್ಯಾಲೆಸ್ತೀನಿಯನ್ನರ ಸಾಮೂಹಿಕ ಸ್ಥಳಾಂತರಕ್ಕೆ ಬೆದರಿಕೆ ಹಾಕಿರುವ ನೆತನ್ಯಾಹು ಸರ್ಕಾರದ ಮಂತ್ರಿಗಳ ಹೇಳಿಕೆಗಳನ್ನು ಖಂಡಿಸಿದರು.

ಫ್ಲೆಚರ್ ಅವರು ಇಸ್ರೇಲಿ ಮೂರು ಮಿತ್ರರಾಷ್ಟ್ರಗಳ ನಡೆಯನ್ನು ‘ಬಲವಾದ ಮಾತುಗಳು ಮತ್ತು ಅಂತರರಾಷ್ಟ್ರೀಯ ನಿಲುವನ್ನು ಸ್ವಾಗತಾರ್ಹವಾಗಿ ಹೆಚ್ಚಿಸಿದ್ದಾರೆ ಎಂದು ಕರೆದರು. ಶಿಶು ಆಹಾರ ಮತ್ತು ಪೋಷಣೆಯುಕ್ತ ಆಹಾರ ತುಂಬಿದ ಇನ್ನೂ 100 ಟ್ರಕ್‌ಗಳನ್ನು ಇಂದು ಗಾಜಾಕ್ಕೆ ತಲುಪಿಸಲು ವಿಶ್ವಸಂಸ್ಥೆ ಆಶಿಸುತ್ತಿದೆ ಎಂದು ಅವರು ಮಾಹಿತಿ ನೀಡಿದರು.

“ಮುಂದಿನ 48 ಗಂಟೆಗಳಲ್ಲಿ ಸಾಧ್ಯವಾದಷ್ಟು ಈ 14,000 ಶಿಶುಗಳನ್ನು ಉಳಿಸಲು ನಾನು ಬಯಸುತ್ತೇನೆ” ಎಂದು ಅವರು ಹೇಳಿದರು.

ಗಾಜಾದಲ್ಲಿ 14,000 ಶಿಶುಗಳು ಹಸಿವಿನ ಅಪಾಯದಲ್ಲಿವೆ ಎಂದು ವಿಶ್ವಸಂಸ್ಥೆ ಹೇಗೆ ನಿರ್ಧರಿಸಿತು ಎಂದು ಕೇಳಿದಾಗ, ಅಗತ್ಯವನ್ನು ನಿರ್ಣಯಿಸಲು ವಿಶ್ವಸಂಸ್ಥೆಯ ತಂಡಗಳು ವೈದ್ಯಕೀಯ ಕೇಂದ್ರಗಳು ಮತ್ತು ಶಾಲೆಗಳಂತಹ ಸ್ಥಳಗಳಲ್ಲಿ ಕೆಲಸ ಮಾಡುತ್ತಿವೆ ಎಂದು ಫ್ಲೆಚರ್ ಹೇಳಿದರು. “ನಮ್ಮಲ್ಲಿ ಬಲವಾದ ತಂಡಗಳಿವೆ, ಅವರಲ್ಲಿ ಅನೇಕರು ಕೊಲ್ಲಲ್ಪಟ್ಟಿದ್ದಾರೆ… ನಮಗೆ ಇನ್ನೂ ಸಾಕಷ್ಟು ಜನರಿದ್ದಾರೆ. ಅವರು ವೈದ್ಯಕೀಯ ಕೇಂದ್ರಗಳಲ್ಲಿದ್ದಾರೆ, ಅವರು ಶಾಲೆಗಳಲ್ಲಿದ್ದಾರೆ… ಅವರ ಅಗತ್ಯಗಳನ್ನು ನಿರ್ಣಯಿಸಲು ಪ್ರಯತ್ನಿಸುತ್ತಿದ್ದಾರೆ” ಎಂದು ಅವರು ಹೇಳಿದರು.

ಗಾಜಾದಲ್ಲಿ ಹೊಸ ದಾಳಿ ಪ್ರಾರಂಭಿಸುವುದಾಗಿ ಘೋಷಿಸಿದ ಇಸ್ರೇಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...