Homeಅಂತರಾಷ್ಟ್ರೀಯಗಾಜಾದಲ್ಲಿ 1,410 ಕುಟುಂಬಗಳು ಸಂಪೂರ್ಣ ನಿರ್ನಾಮ

ಗಾಜಾದಲ್ಲಿ 1,410 ಕುಟುಂಬಗಳು ಸಂಪೂರ್ಣ ನಿರ್ನಾಮ

- Advertisement -
- Advertisement -

ಜೆರುಸಲೇಂ: ಗಾಜಾದಲ್ಲಿ ಇಸ್ರೇಲಿ ನಡೆಸಿದ ವೈಮಾನಿಕ ದಾಳಿಗಳಲ್ಲಿ ಸಂಪೂರ್ಣವಾಗಿ ಕೆಲ ಪ್ಯಾಲೆಸ್ತೀನ್ ಕುಟುಂಬಗಳು ನಿರ್ನಾಮವಾಗಿವೆ. ಕೆಲವು ಬಾಂಬ್ ದಾಳಿಗಳು  ಮಕ್ಕಳು ಸೇರಿದಂತೆ ಒಂದೇ ಮನೆಯ ನಾಲ್ಕು ತಲೆಮಾರುಗಳನ್ನು ನಾಶಮಾಡಿವೆ ಎಂದು ಇಸ್ರೇಲಿ ಪತ್ರಿಕೆ ಹಾರೆಟ್ಜ್  ವರದಿ ಮಾಡಿದೆ.

ಅನಾಮಧೇಯ ಪತ್ರಕರ್ತರ ಹೇಳಿಕೆಗಳನ್ನು ಉಲ್ಲೇಖಿಸಿ, ಹಾರೆಟ್ಜ್  ವರದಿಯು,  “ಅಲ್-ನಸ್ರ್, ಡೊಗ್ಮುಶ್, ಸೇಲಂ, ಅಲ್-ಮಸ್ರಿ ಮತ್ತು ಅಲ್-ಅಸ್ತಲ್ ಕುಟುಂಬಗಳನ್ನು ಪ್ಯಾಲೆಸ್ತೀನ್ ಜನಸಂಖ್ಯಾ ನೋಂದಣಿಯಿಂದ ಅಳಿಸಿಹಾಕಲಾಗಿದೆ” ಎಂದು ಹೇಳಿದೆ.

ವರದಿಯು ಗಾಜಾದಲ್ಲಿನ ಪ್ಯಾಲೆಸ್ತೀನ್ ಆರೋಗ್ಯ ಸಚಿವಾಲಯದ ಅಂಕಿ-ಅಂಶಗಳನ್ನು ಉಲ್ಲೇಖಿಸಿದೆ.  ಇಸ್ರೇಲ್‌ ಮತ್ತು ಹಮಾಸ್ ನಡುವಿನ ಯುದ್ಧದ ಪ್ರಾರಂಭ ಮತ್ತು ಈ ವರ್ಷದ ನವೆಂಬರ್ 1 ರ ನಡುವೆ ಸುಮಾರು 7,160 ಕುಟುಂಬಗಳ ನಡುವೆ  ಬಾಂಬ್ ದಾಳಿ ನಡೆಸಲಾಗಿದೆ” ಎಂದು ಇದು ಬಹಿರಂಗಪಡಿಸಿದೆ.

1,410 ಕುಟುಂಬಗಳು ಸಂಪೂರ್ಣವಾಗಿ ನಾಶವಾಗಿದ್ದು, 5,444 ಜನರು ಸತ್ತಿದ್ದಾರೆ. ಹಾಗೆಯೇ 3,463 ಕುಟುಂಬಗಳಲ್ಲಿ, 7,934 ಜನರು ಸಾವನ್ನಪ್ಪಿದ್ದಾರೆ ಮತ್ತು ಇದರಲ್ಲಿ ಪ್ರತಿ ಕುಟುಂಬಕ್ಕೆ ಒಬ್ಬ ಸದಸ್ಯ ಮಾತ್ರ ಉಳಿದುಕೊಂಡಿದ್ದಾರೆ ಎಂದು ಅದು  ವರದಿಯಲ್ಲಿ ಹೇಳಿದೆ.

2,287 ಕುಟುಂಬಗಳಲ್ಲಿ, 9,577 ಜನರು ಸಾವನ್ನಪ್ಪಿದ್ದು, ಇದರಲ್ಲಿ ಇಬ್ಬರು ಅಥವಾ ಹೆಚ್ಚಿನ ಕುಟುಂಬ ಸದಸ್ಯರು ಬದುಕುಳಿದಿದ್ದಾರೆ ಎಂದು ವರದಿ ತಿಳಿಸಿದೆ..

ಹಾರೆಟ್ಜ್ ಲೇಖನಕ್ಕೆ ಸಂಬಂಧಿಸಿದಂತೆ ಕಾಮೆಂಟ್‌ಗಾಗಿ ಮಾಡಿದ ವಿನಂತಿಗೆ ಇಸ್ರೇಲ್ ರಕ್ಷಣಾ ಪಡೆಗಳು ಪ್ರತಿಕ್ರಿಯಿಸಲಿಲ್ಲ ಎಂದು ಹೇಳಿದೆ.

ಇಸ್ರೇಲ್ ಗಾಜಾಪಟ್ಟಿಯ ಮೇಲೆ ನರಮೇಧದ ಯುದ್ಧವನ್ನು ಪ್ರಾರಂಭಿಸಿದೆ, ಇದು 2023ರ ಅಕ್ಟೋಬರ್ 7 ರಿಂದ 44,600 ಕ್ಕೂ ಹೆಚ್ಚು ಜನರನ್ನು ಕೊಂದು ಹಾಕಿದ್ದು, ಇದರಲ್ಲಿ ಹೆಚ್ಚಾಗಿ ಮಹಿಳೆಯರು ಮತ್ತು ಮಕ್ಕಳು ಸಾವನ್ನಪ್ಪಿದ್ದಾರೆ.

ಕಳೆದ ತಿಂಗಳು, ಅಂತರಾಷ್ಟ್ರೀಯ ಕ್ರಿಮಿನಲ್ ನ್ಯಾಯಾಲಯವು ಇಸ್ರೇಲಿ ಪ್ರಧಾನಿ ಬೆಂಜಮಿನ್ ನೆತನ್ಯಾಹು ಮತ್ತು ಮಾಜಿ ರಕ್ಷಣಾ ಸಚಿವ ಯೋವ್ ಗ್ಯಾಲಂಟ್ ಅವರಿಗೆ ಯುದ್ಧ ಅಪರಾಧಗಳು ಮತ್ತು ಗಾಜಾದಲ್ಲಿ ಮಾನವೀಯತೆಯ ವಿರುದ್ಧದ ಅಪರಾಧಗಳಿಗಾಗಿ ಬಂಧನ ವಾರಂಟ್ ಹೊರಡಿಸಿತು.

ಗಾಜಾದ ಮೇಲಿನ ಯುದ್ಧಕ್ಕಾಗಿ ಇಸ್ರೇಲ್ ಅಂತರರಾಷ್ಟ್ರೀಯ ನ್ಯಾಯಾಲಯದಲ್ಲಿ ನರಮೇಧದ ಪ್ರಕರಣವನ್ನು ಎದುರಿಸುತ್ತಿದೆ.

ಇದನ್ನೂ ಓದಿ….ಮಾನಸಿಕ ಅಸ್ವಸ್ಥ ರೋಗಿಗಳನ್ನು ಬಿಸಾಡಿದ ಆಸ್ಪತ್ರೆ:  ಒಂದು ಶವ ಪತ್ತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...