Homeಮುಖಪುಟಪಹಲ್ಗಾಮ್ ದಾಳಿ ನಂತರ ರಾಜಸ್ಥಾನದಿಂದ 148 ಬಂಗಾಳಿ ಮುಸ್ಲಿಮರ ಗಡಿಪಾರು: ಪಿಯುಸಿಎಲ್ ಖಂಡನೆ

ಪಹಲ್ಗಾಮ್ ದಾಳಿ ನಂತರ ರಾಜಸ್ಥಾನದಿಂದ 148 ಬಂಗಾಳಿ ಮುಸ್ಲಿಮರ ಗಡಿಪಾರು: ಪಿಯುಸಿಎಲ್ ಖಂಡನೆ

- Advertisement -
- Advertisement -

ಗುಜರಾತಿನಿಂದ 148 ಬಂಗಾಳಿ ಮಾತನಾಡುವ ಮುಸ್ಲಿಮರನ್ನು ಬಲವಂತವಾಗಿ ಹೊರದಬ್ಬಿರುವುದನ್ನು ರಾಜಸ್ಥಾನದ ಪೀಪಲ್ಸ್ ಯೂನಿಯನ್ ಫಾರ್ ಸಿವಿಲ್ ಲಿಬರ್ಟೀಸ್ (ಪಿಯುಸಿಎಲ್) ಗುರುವಾರದಂದು ಖಂಡಿಸಿದೆ. ಈ ಕಾರ್ಯಾಚರಣೆಯನ್ನು ಸಾಂವಿಧಾನಿಕ ಮತ್ತು ಅಂತರರಾಷ್ಟ್ರೀಯ ಕಾನೂನಿನ ಉಲ್ಲಂಘನೆ ಎಂದು ಕರೆದಿದೆ.

ಈ ಗಡಿಪಾರು ಮಾಡಿದ ವ್ಯಕ್ತಿಗಳನ್ನು “ಬಾಂಗ್ಲಾದೇಶಿ ನಾಗರಿಕರು” ಎಂದು ತಪ್ಪಾಗಿ ಬ್ರಾಂಡ್ ಮಾಡಲಾಗಿದೆ ಮತ್ತು ಸರಿಯಾದ ಕಾನೂನು ಪ್ರಕ್ರಿಯೆಯಿಲ್ಲದೆ ಗಡಿಪಾರು ಮಾಡಲು ಭಾರತ-ಬಾಂಗ್ಲಾದೇಶ ಗಡಿಗೆ ಬಲವಂತವಾಗಿ ನೂಕಲಾಗಿದೆ ಎಂದು ಗುಂಪು ಆರೋಪಿಸಿದೆ.

ಜಮ್ಮು ಮತ್ತು ಕಾಶ್ಮೀರದಲ್ಲಿ ಇತ್ತೀಚೆಗೆ ನಡೆದ ಪಹಲ್ಗಾಮ್ ದಾಳಿಯ ನಂತರ ಈ ಸಾಮೂಹಿಕ ಸ್ಥಳಾಂತರವನ್ನು ನಡೆಸಲಾಯಿತು ಮತ್ತು ರಾಷ್ಟ್ರೀಯ ಭದ್ರತೆ ಮತ್ತು ಗುಪ್ತಚರ ವೈಫಲ್ಯಗಳಿಂದ ಗಮನವನ್ನು ಬೇರೆಡೆಗೆ ಸೆಳೆಯಲು ಅಧಿಕಾರಿಗಳು ದುರ್ಬಲ ಸಮುದಾಯವನ್ನು ಬಲಿಪಶುವನ್ನಾಗಿ ಮಾಡುತ್ತಿದ್ದಾರೆ ಎಂದು ಪಿಯುಸಿಎಲ್ ಆರೋಪಿಸಿದೆ.

ಸಿಕಾರ್ ಮತ್ತು ಕೋಟ್‌ಪುಟ್ಲಿ ಜಿಲ್ಲೆಗಳಿಂದ ಇವರನ್ನು ರಾಜಸ್ಥಾನ ಪೊಲೀಸರು ಬಂಧಿಸಿ, ಜೋಧ್‌ಪುರದಲ್ಲಿ ಗಡಿ ಭದ್ರತಾ ಪಡೆ (ಬಿಎಸ್‌ಎಫ್)ಗೆ ಹಸ್ತಾಂತರಿಸಿದರು ಮತ್ತು ನಂತರ ಅವರನ್ನು ಪಶ್ಚಿಮ ಬಂಗಾಳದ ಅಂತರರಾಷ್ಟ್ರೀಯ ಗಡಿಗೆ ವಾಯುಮಾರ್ಗದ ಮೂಲಕ ಸಾಗಿಸಲಾಯಿತು, ಇದನ್ನು “ಕಾನೂನುಬಾಹಿರ ಗಡಿಪಾರು” ಎಂದು ಪಿಯುಸಿಎಲ್ ವಿವರಿಸಿದೆ.

ಮೇ 10ರಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು 30ರಿಂದ 40 ಅಕ್ರಮ ಬಾಂಗ್ಲಾದೇಶಿ ವಲಸಿಗರನ್ನು ಇದೇ ರೀತಿ ಹೊರಹಾಕಿದ್ದನ್ನು ಪಿಯುಸಿಎಲ್ ಉಲ್ಲೇಖಿಸಿದೆ. ಗಡೀಪಾರು ಪ್ರಕರಣಗಳಲ್ಲಿ ಸಾಂಪ್ರದಾಯಿಕವಾಗಿ ಅನುಸರಿಸಲಾಗುವ ನ್ಯಾಯಾಂಗ ಕಾರ್ಯವಿಧಾನಗಳನ್ನು ಉಲ್ಲಂಘಿಸುವ ಈ ಕ್ರಮವು “ಅಸಂವಿಧಾನಿಕ ಮತ್ತು ಕಾನೂನುಬಾಹಿರ” ಎಂದು ಪಿಯುಸಿಎಲ್ ಟೀಕಿಸಿತು.

ರಾಜಸ್ಥಾನ ಮುಖ್ಯಮಂತ್ರಿ ಭಜನ್ ಲಾಲ್ ಶರ್ಮಾ ಅವರಿಗೆ ಪಿಯುಸಿಎಲ್ ನೇರ ಸವಾಲನ್ನು ಒಡ್ಡಿದೆ. ಮುಖ್ಯಮಂತ್ರಿಗಳು ಇಂತಹ ಕಾನೂನುಬಾಹಿರ ಕ್ರಮಗಳನ್ನು ಅನುಮೋದಿಸುತ್ತಾರೆಯೇ ಎಂದು ಪ್ರಶ್ನಿಸಿತು. ಅಂತಹ ಪದ್ಧತಿಗಳನ್ನು ಅಳವಡಿಸಿಕೊಳ್ಳುವುದರಿಂದ ರಾಜ್ಯಸ ಅಧಿಕಾರಿಗಳು ಭಾರತೀಯ ಸಂವಿಧಾನ ಮತ್ತು ನಾಗರಿಕರಲ್ಲದವರ ಹಕ್ಕುಗಳ ಕುರಿತು ಸುಪ್ರೀಂ ಕೋರ್ಟ್‌ನ ತೀರ್ಪುಗಳನ್ನು ಉಲ್ಲಂಘಿಸಬಹುದು ಎಂದು ಪಿಯುಸಿಎಲ್ ಎಚ್ಚರಿಸಿದೆ.

ಅರುಣಾಚಲ ಪ್ರದೇಶ ರಾಜ್ಯvs ಭಾರತ ಒಕ್ಕೂಟ ಪ್ರಕರಣದಲ್ಲಿ 1996ರ ಸುಪ್ರೀಂ ಕೋರ್ಟ್ ತೀರ್ಪನ್ನು ಉಲ್ಲೇಖಿಸಿ, ಭಾರತದಲ್ಲಿನ ಎಲ್ಲಾ ವ್ಯಕ್ತಿಗಳು ಪೌರತ್ವವನ್ನು ಲೆಕ್ಕಿಸದೆ, ಕಾನೂನಿನ ಮುಂದೆ ಬದುಕುವ ಹಕ್ಕು ಮತ್ತು ಸಮಾನತೆಯನ್ನು ಖಾತರಿಪಡಿಸಲಾಗಿದೆ ಎಂದು ಪಿಯುಸಿಎಲ್ ಒತ್ತಿ ಹೇಳಿದೆ. ಕಾನೂನು ಸಹಾಯವಿಲ್ಲದೆ ಸಾಮೂಹಿಕ ಹೊರಹಾಕುವಿಕೆಯನ್ನು ನಿಷೇಧಿಸುವ ಅಂತರರಾಷ್ಟ್ರೀಯ ಕಾನೂನಿನಡಿಯಲ್ಲಿ ಭಾರತದ ಬಾಧ್ಯತೆಗಳನ್ನು ಸಹ ಗುಂಪು ಉಲ್ಲೇಖಿಸಿದೆ.

“ಪಹಲ್ಗಾಮ್ ದಾಳಿಯ ನಂತರ ಭದ್ರತಾ ಲೋಪಗಳನ್ನು ತನಿಖೆ ಮಾಡುವ ಬದಲು ಅಲ್ಪಸಂಖ್ಯಾತ ಸಮುದಾಯಗಳನ್ನು ಕಾನೂನುಬಾಹಿರವಾಗಿ ಗುರಿಯಾಗಿಸಿಕೊಂಡು ದೇಶದ ಜನರ ಗಮನ ಬೇರೆಡೆ ಸೆಳೆಯಲು ಸರ್ಕಾರ ಏಕೆ ಆಯ್ಕೆ ಮಾಡಿಕೊಂಡಿದೆ ಎಂದು ಉತ್ತರಿಸಬೇಕು” ಎಂದು ಪಿಯುಸಿಎಲ್ ಪ್ರಶ್ನಿಸಿದೆ. ರಾಜಸ್ಥಾನದ ಆರು ಬಂಧನ ಕೇಂದ್ರಗಳಲ್ಲಿ ಕಾರ್ಯವಿಧಾನದ ಉಲ್ಲಂಘನೆಗಳನ್ನು ದಾಖಲಿಸಿದೆ ಮತ್ತು ತಪ್ಪಾಗಿ ಬಂಧಿಸಲ್ಪಟ್ಟ ಹಲವಾರು ವ್ಯಕ್ತಿಗಳ ಬಿಡುಗಡೆಗೆ ಸಹಾಯ ಮಾಡಿದೆ ಎಂದು ಪಿಯುಸಿಎಲ್ ಹೇಳಿದೆ.

ಜನವರಿಯಲ್ಲಿ ಪಿಯುಸಿಎಲ್ ಅಮೆರಿಕದಿಂದ 385 ಭಾರತೀಯ ನಾಗರಿಕರನ್ನು ಸಂಕೋಲೆಯಲ್ಲಿ ಗಡೀಪಾರು ಮಾಡಿರುವುದನ್ನು ಖಂಡಿಸಿತ್ತು, ಇದನ್ನು ಮಾನವ ಹಕ್ಕುಗಳ ಉಲ್ಲಂಘನೆ ಎಂದು ಕರೆದಿತ್ತು. ವಿದೇಶಿ ಪ್ರಜೆಗಳು ಮತ್ತು ವಲಸೆ ಕಾರ್ಮಿಕರನ್ನು ಭಾರತ ನಡೆಸಿಕೊಳ್ಳುವ ರೀತಿಗೆ ಅದೇ ಮಾನದಂಡವನ್ನು ಕಾಯ್ದುಕೊಳ್ಳುತ್ತದೆ ಎಂದು ಪಿಯುಸಿಎಲ್ ತಿಳಿಸಿದೆ.

ಪಿಯುಸಿಎಲ್ ಗಡೀಪಾರು ಮಾಡುವುದನ್ನು ನಿಲ್ಲಿಸಬೇಕೆಂದು ಒತ್ತಾಯಿಸಿತು ಮತ್ತು ಕಾನೂನು ನೆರವು ಮತ್ತು ನ್ಯಾಯಯುತ ವಿಚಾರಣೆಗಳನ್ನು ಒಳಗೊಂಡಂತೆ ಪ್ರತಿಯೊಬ್ಬ ಬಂಧಿತನ ಕಾನೂನು ಹಕ್ಕುಗಳನ್ನು ಎತ್ತಿಹಿಡಿಯಬೇಕೆಂದು ಕರೆ ನೀಡಿತು. “ರಾಜ್ಯದ ಎಲ್ಲಾ ಕ್ರಮಗಳು ಸಾಂವಿಧಾನಿಕ ಮಾನದಂಡಗಳು ಮತ್ತು ಅಂತರರಾಷ್ಟ್ರೀಯ ಕಾನೂನು ಬಾಧ್ಯತೆಗಳಿಗೆ ಅನುಗುಣವಾಗಿರಬೇಕು” ಎಂದು ಪಿಯುಸಿಎಲ್ ಅಭಿಪ್ರಾಯಿಸಿದೆ.

ಬಿಹಾರ: ತಳ ಸಮುದಾಯಗಳ ‘ಭಯದಿಂದ’ ಮೋದಿ ಜಾತಿ ಜನಗಣತಿ ಘೋಷಣೆ; ರಾಹುಲ್ ಗಾಂಧಿ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...