Homeಮುಖಪುಟಪಹಲ್ಗಾಮ್ ದಾಳಿ ನಂತರ ರಾಜಸ್ಥಾನದಿಂದ 148 ಬಂಗಾಳಿ ಮುಸ್ಲಿಮರ ಗಡಿಪಾರು: ಪಿಯುಸಿಎಲ್ ಖಂಡನೆ

ಪಹಲ್ಗಾಮ್ ದಾಳಿ ನಂತರ ರಾಜಸ್ಥಾನದಿಂದ 148 ಬಂಗಾಳಿ ಮುಸ್ಲಿಮರ ಗಡಿಪಾರು: ಪಿಯುಸಿಎಲ್ ಖಂಡನೆ

- Advertisement -
- Advertisement -

ಗುಜರಾತಿನಿಂದ 148 ಬಂಗಾಳಿ ಮಾತನಾಡುವ ಮುಸ್ಲಿಮರನ್ನು ಬಲವಂತವಾಗಿ ಹೊರದಬ್ಬಿರುವುದನ್ನು ರಾಜಸ್ಥಾನದ ಪೀಪಲ್ಸ್ ಯೂನಿಯನ್ ಫಾರ್ ಸಿವಿಲ್ ಲಿಬರ್ಟೀಸ್ (ಪಿಯುಸಿಎಲ್) ಗುರುವಾರದಂದು ಖಂಡಿಸಿದೆ. ಈ ಕಾರ್ಯಾಚರಣೆಯನ್ನು ಸಾಂವಿಧಾನಿಕ ಮತ್ತು ಅಂತರರಾಷ್ಟ್ರೀಯ ಕಾನೂನಿನ ಉಲ್ಲಂಘನೆ ಎಂದು ಕರೆದಿದೆ.

ಈ ಗಡಿಪಾರು ಮಾಡಿದ ವ್ಯಕ್ತಿಗಳನ್ನು “ಬಾಂಗ್ಲಾದೇಶಿ ನಾಗರಿಕರು” ಎಂದು ತಪ್ಪಾಗಿ ಬ್ರಾಂಡ್ ಮಾಡಲಾಗಿದೆ ಮತ್ತು ಸರಿಯಾದ ಕಾನೂನು ಪ್ರಕ್ರಿಯೆಯಿಲ್ಲದೆ ಗಡಿಪಾರು ಮಾಡಲು ಭಾರತ-ಬಾಂಗ್ಲಾದೇಶ ಗಡಿಗೆ ಬಲವಂತವಾಗಿ ನೂಕಲಾಗಿದೆ ಎಂದು ಗುಂಪು ಆರೋಪಿಸಿದೆ.

ಜಮ್ಮು ಮತ್ತು ಕಾಶ್ಮೀರದಲ್ಲಿ ಇತ್ತೀಚೆಗೆ ನಡೆದ ಪಹಲ್ಗಾಮ್ ದಾಳಿಯ ನಂತರ ಈ ಸಾಮೂಹಿಕ ಸ್ಥಳಾಂತರವನ್ನು ನಡೆಸಲಾಯಿತು ಮತ್ತು ರಾಷ್ಟ್ರೀಯ ಭದ್ರತೆ ಮತ್ತು ಗುಪ್ತಚರ ವೈಫಲ್ಯಗಳಿಂದ ಗಮನವನ್ನು ಬೇರೆಡೆಗೆ ಸೆಳೆಯಲು ಅಧಿಕಾರಿಗಳು ದುರ್ಬಲ ಸಮುದಾಯವನ್ನು ಬಲಿಪಶುವನ್ನಾಗಿ ಮಾಡುತ್ತಿದ್ದಾರೆ ಎಂದು ಪಿಯುಸಿಎಲ್ ಆರೋಪಿಸಿದೆ.

ಸಿಕಾರ್ ಮತ್ತು ಕೋಟ್‌ಪುಟ್ಲಿ ಜಿಲ್ಲೆಗಳಿಂದ ಇವರನ್ನು ರಾಜಸ್ಥಾನ ಪೊಲೀಸರು ಬಂಧಿಸಿ, ಜೋಧ್‌ಪುರದಲ್ಲಿ ಗಡಿ ಭದ್ರತಾ ಪಡೆ (ಬಿಎಸ್‌ಎಫ್)ಗೆ ಹಸ್ತಾಂತರಿಸಿದರು ಮತ್ತು ನಂತರ ಅವರನ್ನು ಪಶ್ಚಿಮ ಬಂಗಾಳದ ಅಂತರರಾಷ್ಟ್ರೀಯ ಗಡಿಗೆ ವಾಯುಮಾರ್ಗದ ಮೂಲಕ ಸಾಗಿಸಲಾಯಿತು, ಇದನ್ನು “ಕಾನೂನುಬಾಹಿರ ಗಡಿಪಾರು” ಎಂದು ಪಿಯುಸಿಎಲ್ ವಿವರಿಸಿದೆ.

ಮೇ 10ರಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು 30ರಿಂದ 40 ಅಕ್ರಮ ಬಾಂಗ್ಲಾದೇಶಿ ವಲಸಿಗರನ್ನು ಇದೇ ರೀತಿ ಹೊರಹಾಕಿದ್ದನ್ನು ಪಿಯುಸಿಎಲ್ ಉಲ್ಲೇಖಿಸಿದೆ. ಗಡೀಪಾರು ಪ್ರಕರಣಗಳಲ್ಲಿ ಸಾಂಪ್ರದಾಯಿಕವಾಗಿ ಅನುಸರಿಸಲಾಗುವ ನ್ಯಾಯಾಂಗ ಕಾರ್ಯವಿಧಾನಗಳನ್ನು ಉಲ್ಲಂಘಿಸುವ ಈ ಕ್ರಮವು “ಅಸಂವಿಧಾನಿಕ ಮತ್ತು ಕಾನೂನುಬಾಹಿರ” ಎಂದು ಪಿಯುಸಿಎಲ್ ಟೀಕಿಸಿತು.

ರಾಜಸ್ಥಾನ ಮುಖ್ಯಮಂತ್ರಿ ಭಜನ್ ಲಾಲ್ ಶರ್ಮಾ ಅವರಿಗೆ ಪಿಯುಸಿಎಲ್ ನೇರ ಸವಾಲನ್ನು ಒಡ್ಡಿದೆ. ಮುಖ್ಯಮಂತ್ರಿಗಳು ಇಂತಹ ಕಾನೂನುಬಾಹಿರ ಕ್ರಮಗಳನ್ನು ಅನುಮೋದಿಸುತ್ತಾರೆಯೇ ಎಂದು ಪ್ರಶ್ನಿಸಿತು. ಅಂತಹ ಪದ್ಧತಿಗಳನ್ನು ಅಳವಡಿಸಿಕೊಳ್ಳುವುದರಿಂದ ರಾಜ್ಯಸ ಅಧಿಕಾರಿಗಳು ಭಾರತೀಯ ಸಂವಿಧಾನ ಮತ್ತು ನಾಗರಿಕರಲ್ಲದವರ ಹಕ್ಕುಗಳ ಕುರಿತು ಸುಪ್ರೀಂ ಕೋರ್ಟ್‌ನ ತೀರ್ಪುಗಳನ್ನು ಉಲ್ಲಂಘಿಸಬಹುದು ಎಂದು ಪಿಯುಸಿಎಲ್ ಎಚ್ಚರಿಸಿದೆ.

ಅರುಣಾಚಲ ಪ್ರದೇಶ ರಾಜ್ಯvs ಭಾರತ ಒಕ್ಕೂಟ ಪ್ರಕರಣದಲ್ಲಿ 1996ರ ಸುಪ್ರೀಂ ಕೋರ್ಟ್ ತೀರ್ಪನ್ನು ಉಲ್ಲೇಖಿಸಿ, ಭಾರತದಲ್ಲಿನ ಎಲ್ಲಾ ವ್ಯಕ್ತಿಗಳು ಪೌರತ್ವವನ್ನು ಲೆಕ್ಕಿಸದೆ, ಕಾನೂನಿನ ಮುಂದೆ ಬದುಕುವ ಹಕ್ಕು ಮತ್ತು ಸಮಾನತೆಯನ್ನು ಖಾತರಿಪಡಿಸಲಾಗಿದೆ ಎಂದು ಪಿಯುಸಿಎಲ್ ಒತ್ತಿ ಹೇಳಿದೆ. ಕಾನೂನು ಸಹಾಯವಿಲ್ಲದೆ ಸಾಮೂಹಿಕ ಹೊರಹಾಕುವಿಕೆಯನ್ನು ನಿಷೇಧಿಸುವ ಅಂತರರಾಷ್ಟ್ರೀಯ ಕಾನೂನಿನಡಿಯಲ್ಲಿ ಭಾರತದ ಬಾಧ್ಯತೆಗಳನ್ನು ಸಹ ಗುಂಪು ಉಲ್ಲೇಖಿಸಿದೆ.

“ಪಹಲ್ಗಾಮ್ ದಾಳಿಯ ನಂತರ ಭದ್ರತಾ ಲೋಪಗಳನ್ನು ತನಿಖೆ ಮಾಡುವ ಬದಲು ಅಲ್ಪಸಂಖ್ಯಾತ ಸಮುದಾಯಗಳನ್ನು ಕಾನೂನುಬಾಹಿರವಾಗಿ ಗುರಿಯಾಗಿಸಿಕೊಂಡು ದೇಶದ ಜನರ ಗಮನ ಬೇರೆಡೆ ಸೆಳೆಯಲು ಸರ್ಕಾರ ಏಕೆ ಆಯ್ಕೆ ಮಾಡಿಕೊಂಡಿದೆ ಎಂದು ಉತ್ತರಿಸಬೇಕು” ಎಂದು ಪಿಯುಸಿಎಲ್ ಪ್ರಶ್ನಿಸಿದೆ. ರಾಜಸ್ಥಾನದ ಆರು ಬಂಧನ ಕೇಂದ್ರಗಳಲ್ಲಿ ಕಾರ್ಯವಿಧಾನದ ಉಲ್ಲಂಘನೆಗಳನ್ನು ದಾಖಲಿಸಿದೆ ಮತ್ತು ತಪ್ಪಾಗಿ ಬಂಧಿಸಲ್ಪಟ್ಟ ಹಲವಾರು ವ್ಯಕ್ತಿಗಳ ಬಿಡುಗಡೆಗೆ ಸಹಾಯ ಮಾಡಿದೆ ಎಂದು ಪಿಯುಸಿಎಲ್ ಹೇಳಿದೆ.

ಜನವರಿಯಲ್ಲಿ ಪಿಯುಸಿಎಲ್ ಅಮೆರಿಕದಿಂದ 385 ಭಾರತೀಯ ನಾಗರಿಕರನ್ನು ಸಂಕೋಲೆಯಲ್ಲಿ ಗಡೀಪಾರು ಮಾಡಿರುವುದನ್ನು ಖಂಡಿಸಿತ್ತು, ಇದನ್ನು ಮಾನವ ಹಕ್ಕುಗಳ ಉಲ್ಲಂಘನೆ ಎಂದು ಕರೆದಿತ್ತು. ವಿದೇಶಿ ಪ್ರಜೆಗಳು ಮತ್ತು ವಲಸೆ ಕಾರ್ಮಿಕರನ್ನು ಭಾರತ ನಡೆಸಿಕೊಳ್ಳುವ ರೀತಿಗೆ ಅದೇ ಮಾನದಂಡವನ್ನು ಕಾಯ್ದುಕೊಳ್ಳುತ್ತದೆ ಎಂದು ಪಿಯುಸಿಎಲ್ ತಿಳಿಸಿದೆ.

ಪಿಯುಸಿಎಲ್ ಗಡೀಪಾರು ಮಾಡುವುದನ್ನು ನಿಲ್ಲಿಸಬೇಕೆಂದು ಒತ್ತಾಯಿಸಿತು ಮತ್ತು ಕಾನೂನು ನೆರವು ಮತ್ತು ನ್ಯಾಯಯುತ ವಿಚಾರಣೆಗಳನ್ನು ಒಳಗೊಂಡಂತೆ ಪ್ರತಿಯೊಬ್ಬ ಬಂಧಿತನ ಕಾನೂನು ಹಕ್ಕುಗಳನ್ನು ಎತ್ತಿಹಿಡಿಯಬೇಕೆಂದು ಕರೆ ನೀಡಿತು. “ರಾಜ್ಯದ ಎಲ್ಲಾ ಕ್ರಮಗಳು ಸಾಂವಿಧಾನಿಕ ಮಾನದಂಡಗಳು ಮತ್ತು ಅಂತರರಾಷ್ಟ್ರೀಯ ಕಾನೂನು ಬಾಧ್ಯತೆಗಳಿಗೆ ಅನುಗುಣವಾಗಿರಬೇಕು” ಎಂದು ಪಿಯುಸಿಎಲ್ ಅಭಿಪ್ರಾಯಿಸಿದೆ.

ಬಿಹಾರ: ತಳ ಸಮುದಾಯಗಳ ‘ಭಯದಿಂದ’ ಮೋದಿ ಜಾತಿ ಜನಗಣತಿ ಘೋಷಣೆ; ರಾಹುಲ್ ಗಾಂಧಿ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಏಷ್ಯಾ ಸಂಘರ್ಷ: ಪ್ರತ್ಯೇಕ ಘಟನೆಗಳಲ್ಲಿ ಈವರೆಗೆ ಆರು ಭಾರತೀಯರ ಸಾವು, ಒಬ್ಬರು ಕಾಣೆ; ವಿದೇಶಾಂಗ ಸಚಿವಾಲಯ ಮಾಹಿತಿ

ಪಶ್ಚಿಮ ಏಷ್ಯಾ ಸಂಘರ್ಷದ ಮಧ್ಯೆ ಗಲ್ಫ್ ಪ್ರದೇಶದಾದ್ಯಂತ ನಡೆದ ಪ್ರತ್ಯೇಕ ಘಟನೆಗಳಲ್ಲಿ ಆರು ಭಾರತೀಯ ಪ್ರಜೆಗಳು ಪ್ರಾಣ ಕಳೆದುಕೊಂಡಿದ್ದಾರೆ ಮತ್ತು ಒಬ್ಬರು ಕಾಣೆಯಾಗಿದ್ದಾರೆ ಎಂದು ವಿದೇಶಾಂಗ ಸಚಿವಾಲಯ (MEA) ಶುಕ್ರವಾರ ತಿಳಿಸಿದೆ.  ಭಾರತೀಯ ಕಾರ್ಯಾಚರಣೆಗಳು...

ಅಮೆರಿಕ-ಇಸ್ರೇಲ್ ದಾಳಿಯಲ್ಲಿ ಇರಾನ್‌ನ ಮತ್ತೊಬ್ಬ ನಾಯಕ, ಐಆರ್‌ಜಿಸಿ ವಕ್ತಾರ ಅಲಿ ಮೊಹಮ್ಮದ್ ನೈನಿ ಸಾವು

ಟೆಹ್ರಾನ್: ಇಸ್ರೇಲಿ-ಅಮೆರಿಕನ್ ಕ್ಷಿಪಣಿ ದಾಳಿಯಲ್ಲಿ ಇರಾನ್ ವಕ್ತಾರ ಜನರಲ್ ಅಲಿ ಮೊಹಮ್ಮದ್ ನೈನಿ ಸಾವನ್ನಪ್ಪಿದ್ದಾರೆ ಎಂದು ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಶುಕ್ರವಾರ ದೃಢಪಡಿಸಿದೆ. ಸರ್ಕಾರಿ ಸ್ವಾಮ್ಯದ ತಸ್ನಿಮ್ ಸುದ್ದಿ ಸಂಸ್ಥೆ...

ಶಿವಮೊಗ್ಗ: ಚಿಕಿತ್ಸೆ ನೀಡಲು ತೆರಳಿದ್ದ ವೇಳೆ ನೀರಾನೆ ದಾಳಿ; 26 ವರ್ಷದ ಪಶುವೈದ್ಯೆ ಸಾವು

ಶಿವಮೊಗ್ಗದ ತ್ಯಾವರೆಕೊಪ್ಪ ಸಿಂಹ ಮತ್ತು ಹುಲಿ ಸಫಾರಿ ಮೃಗಾಲಯದಲ್ಲಿ ಗುರುವಾರ ತಡರಾತ್ರಿ ನೀರಾನೆ ದಾಳಿಗೆ ಒಳಗಾಗಿದ್ದ 26 ವರ್ಷದ ತರಬೇತಿ ವನ್ಯಜೀವಿ ಪಶುವೈದ್ಯೆ ಸಮೀಕ್ಷಾ ರೆಡ್ಡಿ ಶುಕ್ರವಾರ ಬೆಳಿಗ್ಗೆ ಮೃತಪಟ್ಟಿದ್ದಾರೆ. ಬೆಂಗಳೂರಿನ ಬನ್ನೇರುಘಟ್ಟದವರಾದ ಸಮೀಕ್ಷಾ,...

ಸಾಮೂಹಿಕ ಮತಾಂತರಕ್ಕೆ ಕಾರಣವಾದವರಿಗೆ ಜೀವಾವಧಿ ಶಿಕ್ಷೆ; ಮಸೂದೆ ಅಂಗೀಕರಿಸಿದ ಛತ್ತೀಸ್‌ಗಢ ವಿಧಾನಸಭೆ

ಬಲವಂತ, ಪ್ರಚೋದನೆ, ವಂಚನೆ ಅಥವಾ ತಪ್ಪು ನಿರೂಪಣೆಯ ಮೂಲಕ ನಡೆಸಲಾಗುವ ಧಾರ್ಮಿಕ ಮತಾಂತರಗಳನ್ನು ತಡೆಗಟ್ಟುವ ಗುರಿಯನ್ನು ಹೊಂದಿರುವ ಮಸೂದೆಯನ್ನು ಛತ್ತೀಸ್‌ಗಢ ವಿಧಾನಸಭೆಯು ಗುರುವಾರ ಅಂಗೀಕರಿಸಿದೆ. ಸಾಮೂಹಿಕ ಮತಾಂತರ ಪ್ರಕರಣಗಳಲ್ಲಿ ಜೀವಾವಧಿ ಶಿಕ್ಷೆ ಸೇರಿದಂತೆ...

6 ವರ್ಷಗಳ ಜೈಲುವಾಸದ ನಂತರ ಮಧ್ಯಂತರ ಜಾಮೀನು; ಜೈಲಿನಿಂದ ಹೊರಬಂದ ಶಾರ್ಜೀಲ್ ಇಮಾಮ್‌

ಸಹೋದರನ ಮದುವೆಯಲ್ಲಿ ಭಾಗವಹಿಸಲು ಮತ್ತು ಅನಾರೋಗ್ಯ ಪೀಡಿತ ತಾಯಿಯನ್ನು ನೋಡಿಕೊಳ್ಳಲು ದೆಹಲಿ ನ್ಯಾಯಾಲಯವು 10 ದಿನಗಳ ಮಧ್ಯಂತರ ಜಾಮೀನು ನೀಡಿದ ನಂತರ ವಿದ್ಯಾರ್ಥಿ ಕಾರ್ಯಕರ್ತ ಶಾರ್ಜೀಲ್ ಇಮಾಮ್ ಶುಕ್ರವಾರ ಸುಮಾರು ಆರು ವರ್ಷಗಳ...

ಉತ್ತಮ್ ನಗರದಲ್ಲಿ ಗೌರವಯುತ-ಶಾಂತಿಯುತ ಈದ್ ಆಚರಿಸುವಂತೆ ನೋಡಿಕೊಳ್ಳಿ: ಅಧಿಕಾರಿಗಳಿಗೆ ಎಂದು ದೆಹಲಿ ಹೈಕೋರ್ಟ್ ನಿರ್ದೇಶನ

ರಾಷ್ಟ್ರ ರಾಜಧಾನಿಯ ದೆಹಲಿಯ ಉತ್ತಮ್ ನಗರ ಪ್ರದೇಶದಲ್ಲಿ ಹೆಚ್ಚುತ್ತಿರುವ ಕೋಮು ಉದ್ವಿಗ್ನತೆಯ ನಡುವೆ, ಸಮುದಾಯಗಳ ನಡುವೆ ಶಾಂತಿ ಕಾಪಾಡಿಕೊಳ್ಳುವ ಜೊತೆಗೆ ಶಾಂತಿಯುತ ಮತ್ತು ಘನತೆಯ ಈದ್ ಆಚರಣೆಯನ್ನು ಖಚಿತಪಡಿಸಿಕೊಳ್ಳಲು ಕಾನೂನಿನಡಿಯಲ್ಲಿ ಅನುಮತಿಸಬಹುದಾದ ಎಲ್ಲಾ...

ಕಥುವಾ ಪ್ರಕರಣ: ವೈಯಕ್ತಿಕ ಭದ್ರತೆ ಕಡಿತ; ‘ಮಗಳು ಶಾಲೆಗೆ ಹೋಗುತ್ತಿಲ್ಲ’ ಎಂದು ಕಳವಳ ವ್ಯಕ್ತಪಡಿಸಿದ ವಕೀಲೆ ದೀಪಿಕಾ ಪುಷ್ಕರ್ ನಾಥ್ 

2018 ರ ಕಥುವಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಎಂಟು ವರ್ಷದ ಬಾಲಕಿಯ ಕುಟುಂಬವನ್ನು ಪ್ರತಿನಿಧಿಸಿದ್ದ ಜಮ್ಮುವಿನ ಪ್ರಮುಖ ವಕೀಲೆ ಮತ್ತು ಮಾನವ ಹಕ್ಕುಗಳ ಕಾರ್ಯಕರ್ತೆ ದೀಪಿಕಾ ಪುಷ್ಕರ್ ನಾಥ್, ತಮ್ಮ ವೈಯಕ್ತಿಕ...

ಒಡಿಶಾ| ದಲಿತ ವ್ಯಕ್ತಿಗೆ ಭೂಮಿ ಮಾರಾಟ ಮಾಡಿದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ

ಸಾಮಾಜಿಕ ಬಹಿಷ್ಕಾರದ ಆತಂಕಕಾರಿ ಪ್ರಕರಣವೊಂದು ಒಡಿಶಾ ರಾಜ್ಯದ ಗಂಜಾಂ ಜಿಲ್ಲೆಯ ಕಬಿಸೂರ್ಯನಗರ ಪೊಲೀಸ್ ವ್ಯಾಪ್ತಿಯಲ್ಲಿರುವ ಅರ್ಜುನಪಲ್ಲಿ ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ಪರಿಶಿಷ್ಟ ಜಾತಿ (ಎಸ್‌ಸಿ) ಗೆ ಸೇರಿದ ವ್ಯಕ್ತಿಗೆ ಭೂಮಿ ಮಾರಾಟ ಮಾಡಿದ್ದಕ್ಕಾಗಿ...

‘ಕೇವಲ ಗಾಳಿಯಲ್ಲಿ ಕ್ರಾಂತಿ ಸಾಧ್ಯವಿಲ್ಲ, ನೆಲದ ಘಟಕವೂ ಬೇಕು’; ಇರಾನ್ ಮೇಲಿನ ಯುದ್ಧದಲ್ಲಿ ‘ಭೂ-ದಾಳಿ’ಯ ಸುಳಿವು ನೀಡಿದ ನೆತನ್ಯಾಹು

‘ನೀವು ಗಾಳಿಯಿಂದ ಕ್ರಾಂತಿಗಳನ್ನು ಮಾಡಲು ಸಾಧ್ಯವಿಲ್ಲ’ ಈ ಹೇಳಿಕೆಯ ಮೂಲಕ ಇರಾನ್ ವಿರುದ್ಧ ಅಮೆರಿಕ-ಇಸ್ರೇಲ್ ಯುದ್ಧಕ್ಕೆ 'ನೆಲದ ಅಂಶ'ದ ಸಾಧ್ಯತೆಯ ಬಗ್ಗೆ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಸುಳಿವು ನೀಡಿದ್ದಾರೆ ಎನ್ನುವ ಸುದ್ದಿ...

ನಕಲಿ ಆಪಲ್ ಪರಿಕರಗಳ ದಂಧೆ ಭೇದಿಸಿದ ಮುಂಬೈ ಪೊಲೀಸರು; ₹16.33 ಲಕ್ಷ ಮೌಲ್ಯದ ಸರಕುಗಳ ವಶ; ಆರು ಜನರ ವಿರುದ್ಧ ಪ್ರಕರಣ 

ಮುಂಬೈ: ನಕಲಿ ಬ್ರಾಂಡ್ ಸರಕುಗಳ ಮಾರಾಟದ ಮೇಲೆ ಪ್ರಮುಖ ದಾಳಿ ನಡೆಸಿರುವ ಮುಂಬೈ ಪೊಲೀಸರು, ಘಾಟ್ಕೋಪರ್ ಪೂರ್ವದಲ್ಲಿ ನಕಲಿ ಆಪಲ್ ಪರಿಕರಗಳನ್ನು ಮಾರಾಟ ಮಾಡುತ್ತಿದ್ದ ಸಂಘಟಿತ ದಂಧೆಯನ್ನು ಭೇದಿಸಿದ್ದಾರೆ. ಈ ಪ್ರಕರಣದಲ್ಲಿ 16.33...