Homeಮುಖಪುಟಪಹಲ್ಗಾಮ್ ದಾಳಿ ನಂತರ ರಾಜಸ್ಥಾನದಿಂದ 148 ಬಂಗಾಳಿ ಮುಸ್ಲಿಮರ ಗಡಿಪಾರು: ಪಿಯುಸಿಎಲ್ ಖಂಡನೆ

ಪಹಲ್ಗಾಮ್ ದಾಳಿ ನಂತರ ರಾಜಸ್ಥಾನದಿಂದ 148 ಬಂಗಾಳಿ ಮುಸ್ಲಿಮರ ಗಡಿಪಾರು: ಪಿಯುಸಿಎಲ್ ಖಂಡನೆ

- Advertisement -
- Advertisement -

ಗುಜರಾತಿನಿಂದ 148 ಬಂಗಾಳಿ ಮಾತನಾಡುವ ಮುಸ್ಲಿಮರನ್ನು ಬಲವಂತವಾಗಿ ಹೊರದಬ್ಬಿರುವುದನ್ನು ರಾಜಸ್ಥಾನದ ಪೀಪಲ್ಸ್ ಯೂನಿಯನ್ ಫಾರ್ ಸಿವಿಲ್ ಲಿಬರ್ಟೀಸ್ (ಪಿಯುಸಿಎಲ್) ಗುರುವಾರದಂದು ಖಂಡಿಸಿದೆ. ಈ ಕಾರ್ಯಾಚರಣೆಯನ್ನು ಸಾಂವಿಧಾನಿಕ ಮತ್ತು ಅಂತರರಾಷ್ಟ್ರೀಯ ಕಾನೂನಿನ ಉಲ್ಲಂಘನೆ ಎಂದು ಕರೆದಿದೆ.

ಈ ಗಡಿಪಾರು ಮಾಡಿದ ವ್ಯಕ್ತಿಗಳನ್ನು “ಬಾಂಗ್ಲಾದೇಶಿ ನಾಗರಿಕರು” ಎಂದು ತಪ್ಪಾಗಿ ಬ್ರಾಂಡ್ ಮಾಡಲಾಗಿದೆ ಮತ್ತು ಸರಿಯಾದ ಕಾನೂನು ಪ್ರಕ್ರಿಯೆಯಿಲ್ಲದೆ ಗಡಿಪಾರು ಮಾಡಲು ಭಾರತ-ಬಾಂಗ್ಲಾದೇಶ ಗಡಿಗೆ ಬಲವಂತವಾಗಿ ನೂಕಲಾಗಿದೆ ಎಂದು ಗುಂಪು ಆರೋಪಿಸಿದೆ.

ಜಮ್ಮು ಮತ್ತು ಕಾಶ್ಮೀರದಲ್ಲಿ ಇತ್ತೀಚೆಗೆ ನಡೆದ ಪಹಲ್ಗಾಮ್ ದಾಳಿಯ ನಂತರ ಈ ಸಾಮೂಹಿಕ ಸ್ಥಳಾಂತರವನ್ನು ನಡೆಸಲಾಯಿತು ಮತ್ತು ರಾಷ್ಟ್ರೀಯ ಭದ್ರತೆ ಮತ್ತು ಗುಪ್ತಚರ ವೈಫಲ್ಯಗಳಿಂದ ಗಮನವನ್ನು ಬೇರೆಡೆಗೆ ಸೆಳೆಯಲು ಅಧಿಕಾರಿಗಳು ದುರ್ಬಲ ಸಮುದಾಯವನ್ನು ಬಲಿಪಶುವನ್ನಾಗಿ ಮಾಡುತ್ತಿದ್ದಾರೆ ಎಂದು ಪಿಯುಸಿಎಲ್ ಆರೋಪಿಸಿದೆ.

ಸಿಕಾರ್ ಮತ್ತು ಕೋಟ್‌ಪುಟ್ಲಿ ಜಿಲ್ಲೆಗಳಿಂದ ಇವರನ್ನು ರಾಜಸ್ಥಾನ ಪೊಲೀಸರು ಬಂಧಿಸಿ, ಜೋಧ್‌ಪುರದಲ್ಲಿ ಗಡಿ ಭದ್ರತಾ ಪಡೆ (ಬಿಎಸ್‌ಎಫ್)ಗೆ ಹಸ್ತಾಂತರಿಸಿದರು ಮತ್ತು ನಂತರ ಅವರನ್ನು ಪಶ್ಚಿಮ ಬಂಗಾಳದ ಅಂತರರಾಷ್ಟ್ರೀಯ ಗಡಿಗೆ ವಾಯುಮಾರ್ಗದ ಮೂಲಕ ಸಾಗಿಸಲಾಯಿತು, ಇದನ್ನು “ಕಾನೂನುಬಾಹಿರ ಗಡಿಪಾರು” ಎಂದು ಪಿಯುಸಿಎಲ್ ವಿವರಿಸಿದೆ.

ಮೇ 10ರಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು 30ರಿಂದ 40 ಅಕ್ರಮ ಬಾಂಗ್ಲಾದೇಶಿ ವಲಸಿಗರನ್ನು ಇದೇ ರೀತಿ ಹೊರಹಾಕಿದ್ದನ್ನು ಪಿಯುಸಿಎಲ್ ಉಲ್ಲೇಖಿಸಿದೆ. ಗಡೀಪಾರು ಪ್ರಕರಣಗಳಲ್ಲಿ ಸಾಂಪ್ರದಾಯಿಕವಾಗಿ ಅನುಸರಿಸಲಾಗುವ ನ್ಯಾಯಾಂಗ ಕಾರ್ಯವಿಧಾನಗಳನ್ನು ಉಲ್ಲಂಘಿಸುವ ಈ ಕ್ರಮವು “ಅಸಂವಿಧಾನಿಕ ಮತ್ತು ಕಾನೂನುಬಾಹಿರ” ಎಂದು ಪಿಯುಸಿಎಲ್ ಟೀಕಿಸಿತು.

ರಾಜಸ್ಥಾನ ಮುಖ್ಯಮಂತ್ರಿ ಭಜನ್ ಲಾಲ್ ಶರ್ಮಾ ಅವರಿಗೆ ಪಿಯುಸಿಎಲ್ ನೇರ ಸವಾಲನ್ನು ಒಡ್ಡಿದೆ. ಮುಖ್ಯಮಂತ್ರಿಗಳು ಇಂತಹ ಕಾನೂನುಬಾಹಿರ ಕ್ರಮಗಳನ್ನು ಅನುಮೋದಿಸುತ್ತಾರೆಯೇ ಎಂದು ಪ್ರಶ್ನಿಸಿತು. ಅಂತಹ ಪದ್ಧತಿಗಳನ್ನು ಅಳವಡಿಸಿಕೊಳ್ಳುವುದರಿಂದ ರಾಜ್ಯಸ ಅಧಿಕಾರಿಗಳು ಭಾರತೀಯ ಸಂವಿಧಾನ ಮತ್ತು ನಾಗರಿಕರಲ್ಲದವರ ಹಕ್ಕುಗಳ ಕುರಿತು ಸುಪ್ರೀಂ ಕೋರ್ಟ್‌ನ ತೀರ್ಪುಗಳನ್ನು ಉಲ್ಲಂಘಿಸಬಹುದು ಎಂದು ಪಿಯುಸಿಎಲ್ ಎಚ್ಚರಿಸಿದೆ.

ಅರುಣಾಚಲ ಪ್ರದೇಶ ರಾಜ್ಯvs ಭಾರತ ಒಕ್ಕೂಟ ಪ್ರಕರಣದಲ್ಲಿ 1996ರ ಸುಪ್ರೀಂ ಕೋರ್ಟ್ ತೀರ್ಪನ್ನು ಉಲ್ಲೇಖಿಸಿ, ಭಾರತದಲ್ಲಿನ ಎಲ್ಲಾ ವ್ಯಕ್ತಿಗಳು ಪೌರತ್ವವನ್ನು ಲೆಕ್ಕಿಸದೆ, ಕಾನೂನಿನ ಮುಂದೆ ಬದುಕುವ ಹಕ್ಕು ಮತ್ತು ಸಮಾನತೆಯನ್ನು ಖಾತರಿಪಡಿಸಲಾಗಿದೆ ಎಂದು ಪಿಯುಸಿಎಲ್ ಒತ್ತಿ ಹೇಳಿದೆ. ಕಾನೂನು ಸಹಾಯವಿಲ್ಲದೆ ಸಾಮೂಹಿಕ ಹೊರಹಾಕುವಿಕೆಯನ್ನು ನಿಷೇಧಿಸುವ ಅಂತರರಾಷ್ಟ್ರೀಯ ಕಾನೂನಿನಡಿಯಲ್ಲಿ ಭಾರತದ ಬಾಧ್ಯತೆಗಳನ್ನು ಸಹ ಗುಂಪು ಉಲ್ಲೇಖಿಸಿದೆ.

“ಪಹಲ್ಗಾಮ್ ದಾಳಿಯ ನಂತರ ಭದ್ರತಾ ಲೋಪಗಳನ್ನು ತನಿಖೆ ಮಾಡುವ ಬದಲು ಅಲ್ಪಸಂಖ್ಯಾತ ಸಮುದಾಯಗಳನ್ನು ಕಾನೂನುಬಾಹಿರವಾಗಿ ಗುರಿಯಾಗಿಸಿಕೊಂಡು ದೇಶದ ಜನರ ಗಮನ ಬೇರೆಡೆ ಸೆಳೆಯಲು ಸರ್ಕಾರ ಏಕೆ ಆಯ್ಕೆ ಮಾಡಿಕೊಂಡಿದೆ ಎಂದು ಉತ್ತರಿಸಬೇಕು” ಎಂದು ಪಿಯುಸಿಎಲ್ ಪ್ರಶ್ನಿಸಿದೆ. ರಾಜಸ್ಥಾನದ ಆರು ಬಂಧನ ಕೇಂದ್ರಗಳಲ್ಲಿ ಕಾರ್ಯವಿಧಾನದ ಉಲ್ಲಂಘನೆಗಳನ್ನು ದಾಖಲಿಸಿದೆ ಮತ್ತು ತಪ್ಪಾಗಿ ಬಂಧಿಸಲ್ಪಟ್ಟ ಹಲವಾರು ವ್ಯಕ್ತಿಗಳ ಬಿಡುಗಡೆಗೆ ಸಹಾಯ ಮಾಡಿದೆ ಎಂದು ಪಿಯುಸಿಎಲ್ ಹೇಳಿದೆ.

ಜನವರಿಯಲ್ಲಿ ಪಿಯುಸಿಎಲ್ ಅಮೆರಿಕದಿಂದ 385 ಭಾರತೀಯ ನಾಗರಿಕರನ್ನು ಸಂಕೋಲೆಯಲ್ಲಿ ಗಡೀಪಾರು ಮಾಡಿರುವುದನ್ನು ಖಂಡಿಸಿತ್ತು, ಇದನ್ನು ಮಾನವ ಹಕ್ಕುಗಳ ಉಲ್ಲಂಘನೆ ಎಂದು ಕರೆದಿತ್ತು. ವಿದೇಶಿ ಪ್ರಜೆಗಳು ಮತ್ತು ವಲಸೆ ಕಾರ್ಮಿಕರನ್ನು ಭಾರತ ನಡೆಸಿಕೊಳ್ಳುವ ರೀತಿಗೆ ಅದೇ ಮಾನದಂಡವನ್ನು ಕಾಯ್ದುಕೊಳ್ಳುತ್ತದೆ ಎಂದು ಪಿಯುಸಿಎಲ್ ತಿಳಿಸಿದೆ.

ಪಿಯುಸಿಎಲ್ ಗಡೀಪಾರು ಮಾಡುವುದನ್ನು ನಿಲ್ಲಿಸಬೇಕೆಂದು ಒತ್ತಾಯಿಸಿತು ಮತ್ತು ಕಾನೂನು ನೆರವು ಮತ್ತು ನ್ಯಾಯಯುತ ವಿಚಾರಣೆಗಳನ್ನು ಒಳಗೊಂಡಂತೆ ಪ್ರತಿಯೊಬ್ಬ ಬಂಧಿತನ ಕಾನೂನು ಹಕ್ಕುಗಳನ್ನು ಎತ್ತಿಹಿಡಿಯಬೇಕೆಂದು ಕರೆ ನೀಡಿತು. “ರಾಜ್ಯದ ಎಲ್ಲಾ ಕ್ರಮಗಳು ಸಾಂವಿಧಾನಿಕ ಮಾನದಂಡಗಳು ಮತ್ತು ಅಂತರರಾಷ್ಟ್ರೀಯ ಕಾನೂನು ಬಾಧ್ಯತೆಗಳಿಗೆ ಅನುಗುಣವಾಗಿರಬೇಕು” ಎಂದು ಪಿಯುಸಿಎಲ್ ಅಭಿಪ್ರಾಯಿಸಿದೆ.

ಬಿಹಾರ: ತಳ ಸಮುದಾಯಗಳ ‘ಭಯದಿಂದ’ ಮೋದಿ ಜಾತಿ ಜನಗಣತಿ ಘೋಷಣೆ; ರಾಹುಲ್ ಗಾಂಧಿ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...