Homeಮುಖಪುಟಪಹಲ್ಗಾಮ್ ದಾಳಿ ನಂತರ ರಾಜಸ್ಥಾನದಿಂದ 148 ಬಂಗಾಳಿ ಮುಸ್ಲಿಮರ ಗಡಿಪಾರು: ಪಿಯುಸಿಎಲ್ ಖಂಡನೆ

ಪಹಲ್ಗಾಮ್ ದಾಳಿ ನಂತರ ರಾಜಸ್ಥಾನದಿಂದ 148 ಬಂಗಾಳಿ ಮುಸ್ಲಿಮರ ಗಡಿಪಾರು: ಪಿಯುಸಿಎಲ್ ಖಂಡನೆ

- Advertisement -
- Advertisement -

ಗುಜರಾತಿನಿಂದ 148 ಬಂಗಾಳಿ ಮಾತನಾಡುವ ಮುಸ್ಲಿಮರನ್ನು ಬಲವಂತವಾಗಿ ಹೊರದಬ್ಬಿರುವುದನ್ನು ರಾಜಸ್ಥಾನದ ಪೀಪಲ್ಸ್ ಯೂನಿಯನ್ ಫಾರ್ ಸಿವಿಲ್ ಲಿಬರ್ಟೀಸ್ (ಪಿಯುಸಿಎಲ್) ಗುರುವಾರದಂದು ಖಂಡಿಸಿದೆ. ಈ ಕಾರ್ಯಾಚರಣೆಯನ್ನು ಸಾಂವಿಧಾನಿಕ ಮತ್ತು ಅಂತರರಾಷ್ಟ್ರೀಯ ಕಾನೂನಿನ ಉಲ್ಲಂಘನೆ ಎಂದು ಕರೆದಿದೆ.

ಈ ಗಡಿಪಾರು ಮಾಡಿದ ವ್ಯಕ್ತಿಗಳನ್ನು “ಬಾಂಗ್ಲಾದೇಶಿ ನಾಗರಿಕರು” ಎಂದು ತಪ್ಪಾಗಿ ಬ್ರಾಂಡ್ ಮಾಡಲಾಗಿದೆ ಮತ್ತು ಸರಿಯಾದ ಕಾನೂನು ಪ್ರಕ್ರಿಯೆಯಿಲ್ಲದೆ ಗಡಿಪಾರು ಮಾಡಲು ಭಾರತ-ಬಾಂಗ್ಲಾದೇಶ ಗಡಿಗೆ ಬಲವಂತವಾಗಿ ನೂಕಲಾಗಿದೆ ಎಂದು ಗುಂಪು ಆರೋಪಿಸಿದೆ.

ಜಮ್ಮು ಮತ್ತು ಕಾಶ್ಮೀರದಲ್ಲಿ ಇತ್ತೀಚೆಗೆ ನಡೆದ ಪಹಲ್ಗಾಮ್ ದಾಳಿಯ ನಂತರ ಈ ಸಾಮೂಹಿಕ ಸ್ಥಳಾಂತರವನ್ನು ನಡೆಸಲಾಯಿತು ಮತ್ತು ರಾಷ್ಟ್ರೀಯ ಭದ್ರತೆ ಮತ್ತು ಗುಪ್ತಚರ ವೈಫಲ್ಯಗಳಿಂದ ಗಮನವನ್ನು ಬೇರೆಡೆಗೆ ಸೆಳೆಯಲು ಅಧಿಕಾರಿಗಳು ದುರ್ಬಲ ಸಮುದಾಯವನ್ನು ಬಲಿಪಶುವನ್ನಾಗಿ ಮಾಡುತ್ತಿದ್ದಾರೆ ಎಂದು ಪಿಯುಸಿಎಲ್ ಆರೋಪಿಸಿದೆ.

ಸಿಕಾರ್ ಮತ್ತು ಕೋಟ್‌ಪುಟ್ಲಿ ಜಿಲ್ಲೆಗಳಿಂದ ಇವರನ್ನು ರಾಜಸ್ಥಾನ ಪೊಲೀಸರು ಬಂಧಿಸಿ, ಜೋಧ್‌ಪುರದಲ್ಲಿ ಗಡಿ ಭದ್ರತಾ ಪಡೆ (ಬಿಎಸ್‌ಎಫ್)ಗೆ ಹಸ್ತಾಂತರಿಸಿದರು ಮತ್ತು ನಂತರ ಅವರನ್ನು ಪಶ್ಚಿಮ ಬಂಗಾಳದ ಅಂತರರಾಷ್ಟ್ರೀಯ ಗಡಿಗೆ ವಾಯುಮಾರ್ಗದ ಮೂಲಕ ಸಾಗಿಸಲಾಯಿತು, ಇದನ್ನು “ಕಾನೂನುಬಾಹಿರ ಗಡಿಪಾರು” ಎಂದು ಪಿಯುಸಿಎಲ್ ವಿವರಿಸಿದೆ.

ಮೇ 10ರಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು 30ರಿಂದ 40 ಅಕ್ರಮ ಬಾಂಗ್ಲಾದೇಶಿ ವಲಸಿಗರನ್ನು ಇದೇ ರೀತಿ ಹೊರಹಾಕಿದ್ದನ್ನು ಪಿಯುಸಿಎಲ್ ಉಲ್ಲೇಖಿಸಿದೆ. ಗಡೀಪಾರು ಪ್ರಕರಣಗಳಲ್ಲಿ ಸಾಂಪ್ರದಾಯಿಕವಾಗಿ ಅನುಸರಿಸಲಾಗುವ ನ್ಯಾಯಾಂಗ ಕಾರ್ಯವಿಧಾನಗಳನ್ನು ಉಲ್ಲಂಘಿಸುವ ಈ ಕ್ರಮವು “ಅಸಂವಿಧಾನಿಕ ಮತ್ತು ಕಾನೂನುಬಾಹಿರ” ಎಂದು ಪಿಯುಸಿಎಲ್ ಟೀಕಿಸಿತು.

ರಾಜಸ್ಥಾನ ಮುಖ್ಯಮಂತ್ರಿ ಭಜನ್ ಲಾಲ್ ಶರ್ಮಾ ಅವರಿಗೆ ಪಿಯುಸಿಎಲ್ ನೇರ ಸವಾಲನ್ನು ಒಡ್ಡಿದೆ. ಮುಖ್ಯಮಂತ್ರಿಗಳು ಇಂತಹ ಕಾನೂನುಬಾಹಿರ ಕ್ರಮಗಳನ್ನು ಅನುಮೋದಿಸುತ್ತಾರೆಯೇ ಎಂದು ಪ್ರಶ್ನಿಸಿತು. ಅಂತಹ ಪದ್ಧತಿಗಳನ್ನು ಅಳವಡಿಸಿಕೊಳ್ಳುವುದರಿಂದ ರಾಜ್ಯಸ ಅಧಿಕಾರಿಗಳು ಭಾರತೀಯ ಸಂವಿಧಾನ ಮತ್ತು ನಾಗರಿಕರಲ್ಲದವರ ಹಕ್ಕುಗಳ ಕುರಿತು ಸುಪ್ರೀಂ ಕೋರ್ಟ್‌ನ ತೀರ್ಪುಗಳನ್ನು ಉಲ್ಲಂಘಿಸಬಹುದು ಎಂದು ಪಿಯುಸಿಎಲ್ ಎಚ್ಚರಿಸಿದೆ.

ಅರುಣಾಚಲ ಪ್ರದೇಶ ರಾಜ್ಯvs ಭಾರತ ಒಕ್ಕೂಟ ಪ್ರಕರಣದಲ್ಲಿ 1996ರ ಸುಪ್ರೀಂ ಕೋರ್ಟ್ ತೀರ್ಪನ್ನು ಉಲ್ಲೇಖಿಸಿ, ಭಾರತದಲ್ಲಿನ ಎಲ್ಲಾ ವ್ಯಕ್ತಿಗಳು ಪೌರತ್ವವನ್ನು ಲೆಕ್ಕಿಸದೆ, ಕಾನೂನಿನ ಮುಂದೆ ಬದುಕುವ ಹಕ್ಕು ಮತ್ತು ಸಮಾನತೆಯನ್ನು ಖಾತರಿಪಡಿಸಲಾಗಿದೆ ಎಂದು ಪಿಯುಸಿಎಲ್ ಒತ್ತಿ ಹೇಳಿದೆ. ಕಾನೂನು ಸಹಾಯವಿಲ್ಲದೆ ಸಾಮೂಹಿಕ ಹೊರಹಾಕುವಿಕೆಯನ್ನು ನಿಷೇಧಿಸುವ ಅಂತರರಾಷ್ಟ್ರೀಯ ಕಾನೂನಿನಡಿಯಲ್ಲಿ ಭಾರತದ ಬಾಧ್ಯತೆಗಳನ್ನು ಸಹ ಗುಂಪು ಉಲ್ಲೇಖಿಸಿದೆ.

“ಪಹಲ್ಗಾಮ್ ದಾಳಿಯ ನಂತರ ಭದ್ರತಾ ಲೋಪಗಳನ್ನು ತನಿಖೆ ಮಾಡುವ ಬದಲು ಅಲ್ಪಸಂಖ್ಯಾತ ಸಮುದಾಯಗಳನ್ನು ಕಾನೂನುಬಾಹಿರವಾಗಿ ಗುರಿಯಾಗಿಸಿಕೊಂಡು ದೇಶದ ಜನರ ಗಮನ ಬೇರೆಡೆ ಸೆಳೆಯಲು ಸರ್ಕಾರ ಏಕೆ ಆಯ್ಕೆ ಮಾಡಿಕೊಂಡಿದೆ ಎಂದು ಉತ್ತರಿಸಬೇಕು” ಎಂದು ಪಿಯುಸಿಎಲ್ ಪ್ರಶ್ನಿಸಿದೆ. ರಾಜಸ್ಥಾನದ ಆರು ಬಂಧನ ಕೇಂದ್ರಗಳಲ್ಲಿ ಕಾರ್ಯವಿಧಾನದ ಉಲ್ಲಂಘನೆಗಳನ್ನು ದಾಖಲಿಸಿದೆ ಮತ್ತು ತಪ್ಪಾಗಿ ಬಂಧಿಸಲ್ಪಟ್ಟ ಹಲವಾರು ವ್ಯಕ್ತಿಗಳ ಬಿಡುಗಡೆಗೆ ಸಹಾಯ ಮಾಡಿದೆ ಎಂದು ಪಿಯುಸಿಎಲ್ ಹೇಳಿದೆ.

ಜನವರಿಯಲ್ಲಿ ಪಿಯುಸಿಎಲ್ ಅಮೆರಿಕದಿಂದ 385 ಭಾರತೀಯ ನಾಗರಿಕರನ್ನು ಸಂಕೋಲೆಯಲ್ಲಿ ಗಡೀಪಾರು ಮಾಡಿರುವುದನ್ನು ಖಂಡಿಸಿತ್ತು, ಇದನ್ನು ಮಾನವ ಹಕ್ಕುಗಳ ಉಲ್ಲಂಘನೆ ಎಂದು ಕರೆದಿತ್ತು. ವಿದೇಶಿ ಪ್ರಜೆಗಳು ಮತ್ತು ವಲಸೆ ಕಾರ್ಮಿಕರನ್ನು ಭಾರತ ನಡೆಸಿಕೊಳ್ಳುವ ರೀತಿಗೆ ಅದೇ ಮಾನದಂಡವನ್ನು ಕಾಯ್ದುಕೊಳ್ಳುತ್ತದೆ ಎಂದು ಪಿಯುಸಿಎಲ್ ತಿಳಿಸಿದೆ.

ಪಿಯುಸಿಎಲ್ ಗಡೀಪಾರು ಮಾಡುವುದನ್ನು ನಿಲ್ಲಿಸಬೇಕೆಂದು ಒತ್ತಾಯಿಸಿತು ಮತ್ತು ಕಾನೂನು ನೆರವು ಮತ್ತು ನ್ಯಾಯಯುತ ವಿಚಾರಣೆಗಳನ್ನು ಒಳಗೊಂಡಂತೆ ಪ್ರತಿಯೊಬ್ಬ ಬಂಧಿತನ ಕಾನೂನು ಹಕ್ಕುಗಳನ್ನು ಎತ್ತಿಹಿಡಿಯಬೇಕೆಂದು ಕರೆ ನೀಡಿತು. “ರಾಜ್ಯದ ಎಲ್ಲಾ ಕ್ರಮಗಳು ಸಾಂವಿಧಾನಿಕ ಮಾನದಂಡಗಳು ಮತ್ತು ಅಂತರರಾಷ್ಟ್ರೀಯ ಕಾನೂನು ಬಾಧ್ಯತೆಗಳಿಗೆ ಅನುಗುಣವಾಗಿರಬೇಕು” ಎಂದು ಪಿಯುಸಿಎಲ್ ಅಭಿಪ್ರಾಯಿಸಿದೆ.

ಬಿಹಾರ: ತಳ ಸಮುದಾಯಗಳ ‘ಭಯದಿಂದ’ ಮೋದಿ ಜಾತಿ ಜನಗಣತಿ ಘೋಷಣೆ; ರಾಹುಲ್ ಗಾಂಧಿ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...