Homeಮುಖಪುಟಪಹಲ್ಗಾಮ್ ದಾಳಿ ನಂತರ ರಾಜಸ್ಥಾನದಿಂದ 148 ಬಂಗಾಳಿ ಮುಸ್ಲಿಮರ ಗಡಿಪಾರು: ಪಿಯುಸಿಎಲ್ ಖಂಡನೆ

ಪಹಲ್ಗಾಮ್ ದಾಳಿ ನಂತರ ರಾಜಸ್ಥಾನದಿಂದ 148 ಬಂಗಾಳಿ ಮುಸ್ಲಿಮರ ಗಡಿಪಾರು: ಪಿಯುಸಿಎಲ್ ಖಂಡನೆ

- Advertisement -
- Advertisement -

ಗುಜರಾತಿನಿಂದ 148 ಬಂಗಾಳಿ ಮಾತನಾಡುವ ಮುಸ್ಲಿಮರನ್ನು ಬಲವಂತವಾಗಿ ಹೊರದಬ್ಬಿರುವುದನ್ನು ರಾಜಸ್ಥಾನದ ಪೀಪಲ್ಸ್ ಯೂನಿಯನ್ ಫಾರ್ ಸಿವಿಲ್ ಲಿಬರ್ಟೀಸ್ (ಪಿಯುಸಿಎಲ್) ಗುರುವಾರದಂದು ಖಂಡಿಸಿದೆ. ಈ ಕಾರ್ಯಾಚರಣೆಯನ್ನು ಸಾಂವಿಧಾನಿಕ ಮತ್ತು ಅಂತರರಾಷ್ಟ್ರೀಯ ಕಾನೂನಿನ ಉಲ್ಲಂಘನೆ ಎಂದು ಕರೆದಿದೆ.

ಈ ಗಡಿಪಾರು ಮಾಡಿದ ವ್ಯಕ್ತಿಗಳನ್ನು “ಬಾಂಗ್ಲಾದೇಶಿ ನಾಗರಿಕರು” ಎಂದು ತಪ್ಪಾಗಿ ಬ್ರಾಂಡ್ ಮಾಡಲಾಗಿದೆ ಮತ್ತು ಸರಿಯಾದ ಕಾನೂನು ಪ್ರಕ್ರಿಯೆಯಿಲ್ಲದೆ ಗಡಿಪಾರು ಮಾಡಲು ಭಾರತ-ಬಾಂಗ್ಲಾದೇಶ ಗಡಿಗೆ ಬಲವಂತವಾಗಿ ನೂಕಲಾಗಿದೆ ಎಂದು ಗುಂಪು ಆರೋಪಿಸಿದೆ.

ಜಮ್ಮು ಮತ್ತು ಕಾಶ್ಮೀರದಲ್ಲಿ ಇತ್ತೀಚೆಗೆ ನಡೆದ ಪಹಲ್ಗಾಮ್ ದಾಳಿಯ ನಂತರ ಈ ಸಾಮೂಹಿಕ ಸ್ಥಳಾಂತರವನ್ನು ನಡೆಸಲಾಯಿತು ಮತ್ತು ರಾಷ್ಟ್ರೀಯ ಭದ್ರತೆ ಮತ್ತು ಗುಪ್ತಚರ ವೈಫಲ್ಯಗಳಿಂದ ಗಮನವನ್ನು ಬೇರೆಡೆಗೆ ಸೆಳೆಯಲು ಅಧಿಕಾರಿಗಳು ದುರ್ಬಲ ಸಮುದಾಯವನ್ನು ಬಲಿಪಶುವನ್ನಾಗಿ ಮಾಡುತ್ತಿದ್ದಾರೆ ಎಂದು ಪಿಯುಸಿಎಲ್ ಆರೋಪಿಸಿದೆ.

ಸಿಕಾರ್ ಮತ್ತು ಕೋಟ್‌ಪುಟ್ಲಿ ಜಿಲ್ಲೆಗಳಿಂದ ಇವರನ್ನು ರಾಜಸ್ಥಾನ ಪೊಲೀಸರು ಬಂಧಿಸಿ, ಜೋಧ್‌ಪುರದಲ್ಲಿ ಗಡಿ ಭದ್ರತಾ ಪಡೆ (ಬಿಎಸ್‌ಎಫ್)ಗೆ ಹಸ್ತಾಂತರಿಸಿದರು ಮತ್ತು ನಂತರ ಅವರನ್ನು ಪಶ್ಚಿಮ ಬಂಗಾಳದ ಅಂತರರಾಷ್ಟ್ರೀಯ ಗಡಿಗೆ ವಾಯುಮಾರ್ಗದ ಮೂಲಕ ಸಾಗಿಸಲಾಯಿತು, ಇದನ್ನು “ಕಾನೂನುಬಾಹಿರ ಗಡಿಪಾರು” ಎಂದು ಪಿಯುಸಿಎಲ್ ವಿವರಿಸಿದೆ.

ಮೇ 10ರಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು 30ರಿಂದ 40 ಅಕ್ರಮ ಬಾಂಗ್ಲಾದೇಶಿ ವಲಸಿಗರನ್ನು ಇದೇ ರೀತಿ ಹೊರಹಾಕಿದ್ದನ್ನು ಪಿಯುಸಿಎಲ್ ಉಲ್ಲೇಖಿಸಿದೆ. ಗಡೀಪಾರು ಪ್ರಕರಣಗಳಲ್ಲಿ ಸಾಂಪ್ರದಾಯಿಕವಾಗಿ ಅನುಸರಿಸಲಾಗುವ ನ್ಯಾಯಾಂಗ ಕಾರ್ಯವಿಧಾನಗಳನ್ನು ಉಲ್ಲಂಘಿಸುವ ಈ ಕ್ರಮವು “ಅಸಂವಿಧಾನಿಕ ಮತ್ತು ಕಾನೂನುಬಾಹಿರ” ಎಂದು ಪಿಯುಸಿಎಲ್ ಟೀಕಿಸಿತು.

ರಾಜಸ್ಥಾನ ಮುಖ್ಯಮಂತ್ರಿ ಭಜನ್ ಲಾಲ್ ಶರ್ಮಾ ಅವರಿಗೆ ಪಿಯುಸಿಎಲ್ ನೇರ ಸವಾಲನ್ನು ಒಡ್ಡಿದೆ. ಮುಖ್ಯಮಂತ್ರಿಗಳು ಇಂತಹ ಕಾನೂನುಬಾಹಿರ ಕ್ರಮಗಳನ್ನು ಅನುಮೋದಿಸುತ್ತಾರೆಯೇ ಎಂದು ಪ್ರಶ್ನಿಸಿತು. ಅಂತಹ ಪದ್ಧತಿಗಳನ್ನು ಅಳವಡಿಸಿಕೊಳ್ಳುವುದರಿಂದ ರಾಜ್ಯಸ ಅಧಿಕಾರಿಗಳು ಭಾರತೀಯ ಸಂವಿಧಾನ ಮತ್ತು ನಾಗರಿಕರಲ್ಲದವರ ಹಕ್ಕುಗಳ ಕುರಿತು ಸುಪ್ರೀಂ ಕೋರ್ಟ್‌ನ ತೀರ್ಪುಗಳನ್ನು ಉಲ್ಲಂಘಿಸಬಹುದು ಎಂದು ಪಿಯುಸಿಎಲ್ ಎಚ್ಚರಿಸಿದೆ.

ಅರುಣಾಚಲ ಪ್ರದೇಶ ರಾಜ್ಯvs ಭಾರತ ಒಕ್ಕೂಟ ಪ್ರಕರಣದಲ್ಲಿ 1996ರ ಸುಪ್ರೀಂ ಕೋರ್ಟ್ ತೀರ್ಪನ್ನು ಉಲ್ಲೇಖಿಸಿ, ಭಾರತದಲ್ಲಿನ ಎಲ್ಲಾ ವ್ಯಕ್ತಿಗಳು ಪೌರತ್ವವನ್ನು ಲೆಕ್ಕಿಸದೆ, ಕಾನೂನಿನ ಮುಂದೆ ಬದುಕುವ ಹಕ್ಕು ಮತ್ತು ಸಮಾನತೆಯನ್ನು ಖಾತರಿಪಡಿಸಲಾಗಿದೆ ಎಂದು ಪಿಯುಸಿಎಲ್ ಒತ್ತಿ ಹೇಳಿದೆ. ಕಾನೂನು ಸಹಾಯವಿಲ್ಲದೆ ಸಾಮೂಹಿಕ ಹೊರಹಾಕುವಿಕೆಯನ್ನು ನಿಷೇಧಿಸುವ ಅಂತರರಾಷ್ಟ್ರೀಯ ಕಾನೂನಿನಡಿಯಲ್ಲಿ ಭಾರತದ ಬಾಧ್ಯತೆಗಳನ್ನು ಸಹ ಗುಂಪು ಉಲ್ಲೇಖಿಸಿದೆ.

“ಪಹಲ್ಗಾಮ್ ದಾಳಿಯ ನಂತರ ಭದ್ರತಾ ಲೋಪಗಳನ್ನು ತನಿಖೆ ಮಾಡುವ ಬದಲು ಅಲ್ಪಸಂಖ್ಯಾತ ಸಮುದಾಯಗಳನ್ನು ಕಾನೂನುಬಾಹಿರವಾಗಿ ಗುರಿಯಾಗಿಸಿಕೊಂಡು ದೇಶದ ಜನರ ಗಮನ ಬೇರೆಡೆ ಸೆಳೆಯಲು ಸರ್ಕಾರ ಏಕೆ ಆಯ್ಕೆ ಮಾಡಿಕೊಂಡಿದೆ ಎಂದು ಉತ್ತರಿಸಬೇಕು” ಎಂದು ಪಿಯುಸಿಎಲ್ ಪ್ರಶ್ನಿಸಿದೆ. ರಾಜಸ್ಥಾನದ ಆರು ಬಂಧನ ಕೇಂದ್ರಗಳಲ್ಲಿ ಕಾರ್ಯವಿಧಾನದ ಉಲ್ಲಂಘನೆಗಳನ್ನು ದಾಖಲಿಸಿದೆ ಮತ್ತು ತಪ್ಪಾಗಿ ಬಂಧಿಸಲ್ಪಟ್ಟ ಹಲವಾರು ವ್ಯಕ್ತಿಗಳ ಬಿಡುಗಡೆಗೆ ಸಹಾಯ ಮಾಡಿದೆ ಎಂದು ಪಿಯುಸಿಎಲ್ ಹೇಳಿದೆ.

ಜನವರಿಯಲ್ಲಿ ಪಿಯುಸಿಎಲ್ ಅಮೆರಿಕದಿಂದ 385 ಭಾರತೀಯ ನಾಗರಿಕರನ್ನು ಸಂಕೋಲೆಯಲ್ಲಿ ಗಡೀಪಾರು ಮಾಡಿರುವುದನ್ನು ಖಂಡಿಸಿತ್ತು, ಇದನ್ನು ಮಾನವ ಹಕ್ಕುಗಳ ಉಲ್ಲಂಘನೆ ಎಂದು ಕರೆದಿತ್ತು. ವಿದೇಶಿ ಪ್ರಜೆಗಳು ಮತ್ತು ವಲಸೆ ಕಾರ್ಮಿಕರನ್ನು ಭಾರತ ನಡೆಸಿಕೊಳ್ಳುವ ರೀತಿಗೆ ಅದೇ ಮಾನದಂಡವನ್ನು ಕಾಯ್ದುಕೊಳ್ಳುತ್ತದೆ ಎಂದು ಪಿಯುಸಿಎಲ್ ತಿಳಿಸಿದೆ.

ಪಿಯುಸಿಎಲ್ ಗಡೀಪಾರು ಮಾಡುವುದನ್ನು ನಿಲ್ಲಿಸಬೇಕೆಂದು ಒತ್ತಾಯಿಸಿತು ಮತ್ತು ಕಾನೂನು ನೆರವು ಮತ್ತು ನ್ಯಾಯಯುತ ವಿಚಾರಣೆಗಳನ್ನು ಒಳಗೊಂಡಂತೆ ಪ್ರತಿಯೊಬ್ಬ ಬಂಧಿತನ ಕಾನೂನು ಹಕ್ಕುಗಳನ್ನು ಎತ್ತಿಹಿಡಿಯಬೇಕೆಂದು ಕರೆ ನೀಡಿತು. “ರಾಜ್ಯದ ಎಲ್ಲಾ ಕ್ರಮಗಳು ಸಾಂವಿಧಾನಿಕ ಮಾನದಂಡಗಳು ಮತ್ತು ಅಂತರರಾಷ್ಟ್ರೀಯ ಕಾನೂನು ಬಾಧ್ಯತೆಗಳಿಗೆ ಅನುಗುಣವಾಗಿರಬೇಕು” ಎಂದು ಪಿಯುಸಿಎಲ್ ಅಭಿಪ್ರಾಯಿಸಿದೆ.

ಬಿಹಾರ: ತಳ ಸಮುದಾಯಗಳ ‘ಭಯದಿಂದ’ ಮೋದಿ ಜಾತಿ ಜನಗಣತಿ ಘೋಷಣೆ; ರಾಹುಲ್ ಗಾಂಧಿ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....