Homeಮುಖಪುಟಲಕ್ಷದ್ವೀಪ ನಿರ್ಮಾಪಕಿ ವಿರುದ್ಧ ದೇಶದ್ರೋಹ ಪ್ರಕರಣಕ್ಕೆ ಬಿಜೆಪಿಯಲ್ಲೇ ವಿರೋಧ: 15 ಬಿಜೆಪಿ ನಾಯಕರ ರಾಜೀನಾಮೆ!

ಲಕ್ಷದ್ವೀಪ ನಿರ್ಮಾಪಕಿ ವಿರುದ್ಧ ದೇಶದ್ರೋಹ ಪ್ರಕರಣಕ್ಕೆ ಬಿಜೆಪಿಯಲ್ಲೇ ವಿರೋಧ: 15 ಬಿಜೆಪಿ ನಾಯಕರ ರಾಜೀನಾಮೆ!

ನೀವು ಆ ಸಹೋದರಿಯ ವಿರುದ್ಧ ತಪ್ಪು ಮತ್ತು ಅನ್ಯಾಯಯುತ ದೂರು ನೀಡಿದ್ದೀರಿ. ಅವರ ಕುಟುಂಬ ಮತ್ತು ಆಕೆಯ ಭವಿಷ್ಯವನ್ನು ಹಾಳುಮಾಡುತ್ತಿದ್ದೀರಿ. ಹಾಗಾಗಿ ನಾವು ಬಿಜೆಪಿಯ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡುತ್ತಿದ್ದೇವೆ..

- Advertisement -
- Advertisement -

ಕೇಂದ್ರಾಡಳಿತ ಪ್ರದೇಶ ಲಕ್ಷದ್ವೀಪದ ಆಡಳಿತಾಧಿಕಾರಿ ಪ್ರಪುಲ್ ಪಟೇಲ್‌ರವರ ಕೊರೊನಾ ನಿರ್ವಹಣೆ ಟೀಕಿಸಿದ್ದ ಮತ್ತು ಕೇಂದ್ರವು “ಜೈವಿಕ ಶಸ್ತ್ರಾಸ್ತ್ರ” ವನ್ನು ಬಳಸಿದೆ ಎಂದು ಆರೋಪಿಸಿದ್ದ ಲಕ್ಷದ್ವೀಪ ಚಲನಚಿತ್ರ ನಿರ್ಮಾಪಕಿ ಆಯೆಷಾ ಸುಲ್ತಾನಾ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಿಸಿರುವುದಕ್ಕೆ ಬಿಜೆಪಿಯಲ್ಲಿಯೇ ಆಕ್ರೋಶ ಭುಗಿಲೆದ್ದಿದೆ. ಈ ಕುರಿತು ಪ್ರತಿಭಟನೆಯ ಭಾಗವಾಗಿ 15 ಬಿಜೆಪಿ ನಾಯಕರು ತಮ್ಮ ರಾಜೀನಾಮೆ ಸಲ್ಲಿಸಿದ್ದು, ಬಿಜೆಪಿ ಮುಖ್ಯಸ್ಥರಿಗೆ ದೂರು ನೀಡಿದ್ದಾರೆ.

12 ಜನ ಬಿಜೆಪಿ ನಾಯಕರು ಮತ್ತು ಇತರ ಕಾರ್ಯಕರ್ತರು ದೂರಿನ ಪ್ರತಿಗೆ ಸಹಿ ಮಾಡಿದ್ದು, ಲಕ್ಷದ್ವೀಪದ ಬಿಜೆಪಿ ಮುಖ್ಯಸ್ಥ ಸಿ ಅಬ್ದುಲ್ ಖಾದರ್ ಹಾಜಿಯವರಿಗೆ ಸಲ್ಲಿಸಿದ್ದಾರೆ. “ಲಕ್ಷದ್ವೀಪದ ಆಡಳಿತಾಧಿಕಾರಿಯವರ ಜನವಿರೋಧಿ ಕ್ರಮಗಳು, ಪ್ರಜಾಪ್ರಭುತ್ವ ವಿರೋಧಿ ಕ್ರಮಗಳಿಂದಾಗಿ ಜನರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ” ಎಂದು ದೂರಿನಲ್ಲಿ ಹೇಳಲಾಗಿದೆ.

ನಿರ್ಮಾಪಕಿ ಆಯಿಷಾ ಸುಲ್ತಾನ ಅವರನ್ನು ಈ ಬಿಜೆಪಿ ನಾಯಕರು ಬೆಂಬಲಿಸಿದ್ದಾರೆ. “ಚೆಟ್ಲಾಟ್ ನಿವಾಸಿ ಆಯಿಷಾ ಸುಲ್ತಾನಾ ಕೂಡ ಮಾಧ್ಯಮಗಳಲ್ಲಿ ತಮ್ಮ ಅಭಿಪ್ರಾಯವನ್ನು ಹಂಚಿಕೊಂಡಿದ್ದಾರೆ. ಲಕ್ಷದ್ವೀಪದಲ್ಲಿ ಮೊದಲು ಯಾವುದೇ ಕೋವಿಡ್‌ ಪ್ರಕರಣಗಳಿರಲಿಲ್ಲ. ಆದರೆ ಹೊಸ ಆಡಳಿತಾಧಿಕಾರಿಯ ಆಗಮನದೊಂದಿಗೆ, ಅವರ ಅವೈಜ್ಞಾನಿಕ, ಬೇಜವಾಬ್ದಾರಿಯುತ ನಿರ್ಧಾರಗಳಿಂದ ಕೋವಿಡ್‌ ಪ್ರಕರಣಗಳು ದಿಢೀರನೆ ಹೆಚ್ಚಾಗಿವೆ ಎಂದು ವಾಸ್ತವವನ್ನು ಅವರು ಮಾತನಾಡಿದ್ದಾರೆ. ಅಷ್ಟಕ್ಕೆ ಪೊಲೀಸರಿಗೆ ನೀವು ನೀಡಿದ ದೂರಿನ ಆಧಾರದ ಮೇಲೆ, ಆಯಿಷಾ ಸುಲ್ತಾನಾ ವಿರುದ್ಧ ಪ್ರಕರಣ ದಾಖಲಾಗಿದೆ. ಇದು ಸರಿಯಲ್ಲ” ಎಂದು ಬಿಜೆಪಿ ನಾಯಕರು ದೂರಿದ್ದಾರೆ.

ನೀವು ಆ ಸಹೋದರಿಯ ವಿರುದ್ಧ ತಪ್ಪು ಮತ್ತು ಅನ್ಯಾಯಯುತ ದೂರು ನೀಡಿದ್ದೀರಿ. ಅವರ ಕುಟುಂಬ ಮತ್ತು ಆಕೆಯ ಭವಿಷ್ಯವನ್ನು ಹಾಳುಮಾಡುತ್ತಿದ್ದೀರಿ. ಹಾಗಾಗಿ ನಾವು ಬಿಜೆಪಿಯ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡುತ್ತಿದ್ದೇವೆ ಎಂದು ಬಿಜೆಪಿ ರಾಜ್ಯ ಕಾರ್ಯದರ್ಶಿ ಅಬ್ದುಲ್ ಹಮೀದ್ ಮುಲ್ಲಿಫುಝ ತಿಳಿಸಿದ್ದಾರೆ.

“ಲಕ್ಷದ್ವೀಪದಲ್ಲಿ ಕೊರೊನಾ ಪ್ರಕರಣಗಳು ಶೂನ್ಯವಾಗಿದ್ದವು. ಈಗ ಪ್ರತಿದಿನ 100 ಪ್ರಕರಣಗಳನ್ನು ವರದಿ ಮಾಡುತ್ತಿದೆ. ಕೇಂದ್ರ ಸರ್ಕಾರವು “ಜೈವಿಕ ಶಸ್ತ್ರಾಸ್ತ್ರ” ಬಳಸುತ್ತಿದೆ ಎಂದು ನಾನು ಇದನ್ನು ಸ್ಪಷ್ಟವಾಗಿ ಹೇಳಬಲ್ಲೆ” ಎಂದು ಆಯಿಷಾ ಸುಲ್ತಾನಾ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದರು. ಹಾಗಾಗಿ ಅವರ ವಿರುದ್ಧ ಲಕ್ಷದ್ವೀಪದ ಬಿಜೆಪಿ ಮುಖ್ಯಸ್ಥ ಸಿ ಅಬ್ದುಲ್ ಖಾದರ್ ಹಾಜಿ ದೇಶದ್ರೋಹದ ದೂರು ನೀಡಿದ್ದರು. ಅದರ ಆಧಾರದ ಮೇಲೆ ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 124ಎ (ದೇಶದ್ರೋಹ) ಮತ್ತು 153 ಬಿ (ದ್ವೇಷಪೂರಿತ ಭಾಷಣ) ಅಡಿಯಲ್ಲಿ ಕವರತ್ತಿ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.


ಇದನ್ನೂ ಓದಿ: ಲಕ್ಷದ್ವೀಪ: ಕೇಂದ್ರದಿಂದ ಜೈವಿಕ ಅಸ್ತ್ರ ಬಳಕೆ ಆರೋಪ, ನಿರ್ಮಾಪಕಿ ವಿರುದ್ಧ ದೇಶದ್ರೋಹ ಪ್ರಕರಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...