Homeಮುಖಪುಟಲಕ್ಷದ್ವೀಪ ನಿರ್ಮಾಪಕಿ ವಿರುದ್ಧ ದೇಶದ್ರೋಹ ಪ್ರಕರಣಕ್ಕೆ ಬಿಜೆಪಿಯಲ್ಲೇ ವಿರೋಧ: 15 ಬಿಜೆಪಿ ನಾಯಕರ ರಾಜೀನಾಮೆ!

ಲಕ್ಷದ್ವೀಪ ನಿರ್ಮಾಪಕಿ ವಿರುದ್ಧ ದೇಶದ್ರೋಹ ಪ್ರಕರಣಕ್ಕೆ ಬಿಜೆಪಿಯಲ್ಲೇ ವಿರೋಧ: 15 ಬಿಜೆಪಿ ನಾಯಕರ ರಾಜೀನಾಮೆ!

ನೀವು ಆ ಸಹೋದರಿಯ ವಿರುದ್ಧ ತಪ್ಪು ಮತ್ತು ಅನ್ಯಾಯಯುತ ದೂರು ನೀಡಿದ್ದೀರಿ. ಅವರ ಕುಟುಂಬ ಮತ್ತು ಆಕೆಯ ಭವಿಷ್ಯವನ್ನು ಹಾಳುಮಾಡುತ್ತಿದ್ದೀರಿ. ಹಾಗಾಗಿ ನಾವು ಬಿಜೆಪಿಯ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡುತ್ತಿದ್ದೇವೆ..

- Advertisement -
- Advertisement -

ಕೇಂದ್ರಾಡಳಿತ ಪ್ರದೇಶ ಲಕ್ಷದ್ವೀಪದ ಆಡಳಿತಾಧಿಕಾರಿ ಪ್ರಪುಲ್ ಪಟೇಲ್‌ರವರ ಕೊರೊನಾ ನಿರ್ವಹಣೆ ಟೀಕಿಸಿದ್ದ ಮತ್ತು ಕೇಂದ್ರವು “ಜೈವಿಕ ಶಸ್ತ್ರಾಸ್ತ್ರ” ವನ್ನು ಬಳಸಿದೆ ಎಂದು ಆರೋಪಿಸಿದ್ದ ಲಕ್ಷದ್ವೀಪ ಚಲನಚಿತ್ರ ನಿರ್ಮಾಪಕಿ ಆಯೆಷಾ ಸುಲ್ತಾನಾ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಿಸಿರುವುದಕ್ಕೆ ಬಿಜೆಪಿಯಲ್ಲಿಯೇ ಆಕ್ರೋಶ ಭುಗಿಲೆದ್ದಿದೆ. ಈ ಕುರಿತು ಪ್ರತಿಭಟನೆಯ ಭಾಗವಾಗಿ 15 ಬಿಜೆಪಿ ನಾಯಕರು ತಮ್ಮ ರಾಜೀನಾಮೆ ಸಲ್ಲಿಸಿದ್ದು, ಬಿಜೆಪಿ ಮುಖ್ಯಸ್ಥರಿಗೆ ದೂರು ನೀಡಿದ್ದಾರೆ.

12 ಜನ ಬಿಜೆಪಿ ನಾಯಕರು ಮತ್ತು ಇತರ ಕಾರ್ಯಕರ್ತರು ದೂರಿನ ಪ್ರತಿಗೆ ಸಹಿ ಮಾಡಿದ್ದು, ಲಕ್ಷದ್ವೀಪದ ಬಿಜೆಪಿ ಮುಖ್ಯಸ್ಥ ಸಿ ಅಬ್ದುಲ್ ಖಾದರ್ ಹಾಜಿಯವರಿಗೆ ಸಲ್ಲಿಸಿದ್ದಾರೆ. “ಲಕ್ಷದ್ವೀಪದ ಆಡಳಿತಾಧಿಕಾರಿಯವರ ಜನವಿರೋಧಿ ಕ್ರಮಗಳು, ಪ್ರಜಾಪ್ರಭುತ್ವ ವಿರೋಧಿ ಕ್ರಮಗಳಿಂದಾಗಿ ಜನರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ” ಎಂದು ದೂರಿನಲ್ಲಿ ಹೇಳಲಾಗಿದೆ.

ನಿರ್ಮಾಪಕಿ ಆಯಿಷಾ ಸುಲ್ತಾನ ಅವರನ್ನು ಈ ಬಿಜೆಪಿ ನಾಯಕರು ಬೆಂಬಲಿಸಿದ್ದಾರೆ. “ಚೆಟ್ಲಾಟ್ ನಿವಾಸಿ ಆಯಿಷಾ ಸುಲ್ತಾನಾ ಕೂಡ ಮಾಧ್ಯಮಗಳಲ್ಲಿ ತಮ್ಮ ಅಭಿಪ್ರಾಯವನ್ನು ಹಂಚಿಕೊಂಡಿದ್ದಾರೆ. ಲಕ್ಷದ್ವೀಪದಲ್ಲಿ ಮೊದಲು ಯಾವುದೇ ಕೋವಿಡ್‌ ಪ್ರಕರಣಗಳಿರಲಿಲ್ಲ. ಆದರೆ ಹೊಸ ಆಡಳಿತಾಧಿಕಾರಿಯ ಆಗಮನದೊಂದಿಗೆ, ಅವರ ಅವೈಜ್ಞಾನಿಕ, ಬೇಜವಾಬ್ದಾರಿಯುತ ನಿರ್ಧಾರಗಳಿಂದ ಕೋವಿಡ್‌ ಪ್ರಕರಣಗಳು ದಿಢೀರನೆ ಹೆಚ್ಚಾಗಿವೆ ಎಂದು ವಾಸ್ತವವನ್ನು ಅವರು ಮಾತನಾಡಿದ್ದಾರೆ. ಅಷ್ಟಕ್ಕೆ ಪೊಲೀಸರಿಗೆ ನೀವು ನೀಡಿದ ದೂರಿನ ಆಧಾರದ ಮೇಲೆ, ಆಯಿಷಾ ಸುಲ್ತಾನಾ ವಿರುದ್ಧ ಪ್ರಕರಣ ದಾಖಲಾಗಿದೆ. ಇದು ಸರಿಯಲ್ಲ” ಎಂದು ಬಿಜೆಪಿ ನಾಯಕರು ದೂರಿದ್ದಾರೆ.

ನೀವು ಆ ಸಹೋದರಿಯ ವಿರುದ್ಧ ತಪ್ಪು ಮತ್ತು ಅನ್ಯಾಯಯುತ ದೂರು ನೀಡಿದ್ದೀರಿ. ಅವರ ಕುಟುಂಬ ಮತ್ತು ಆಕೆಯ ಭವಿಷ್ಯವನ್ನು ಹಾಳುಮಾಡುತ್ತಿದ್ದೀರಿ. ಹಾಗಾಗಿ ನಾವು ಬಿಜೆಪಿಯ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡುತ್ತಿದ್ದೇವೆ ಎಂದು ಬಿಜೆಪಿ ರಾಜ್ಯ ಕಾರ್ಯದರ್ಶಿ ಅಬ್ದುಲ್ ಹಮೀದ್ ಮುಲ್ಲಿಫುಝ ತಿಳಿಸಿದ್ದಾರೆ.

“ಲಕ್ಷದ್ವೀಪದಲ್ಲಿ ಕೊರೊನಾ ಪ್ರಕರಣಗಳು ಶೂನ್ಯವಾಗಿದ್ದವು. ಈಗ ಪ್ರತಿದಿನ 100 ಪ್ರಕರಣಗಳನ್ನು ವರದಿ ಮಾಡುತ್ತಿದೆ. ಕೇಂದ್ರ ಸರ್ಕಾರವು “ಜೈವಿಕ ಶಸ್ತ್ರಾಸ್ತ್ರ” ಬಳಸುತ್ತಿದೆ ಎಂದು ನಾನು ಇದನ್ನು ಸ್ಪಷ್ಟವಾಗಿ ಹೇಳಬಲ್ಲೆ” ಎಂದು ಆಯಿಷಾ ಸುಲ್ತಾನಾ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದರು. ಹಾಗಾಗಿ ಅವರ ವಿರುದ್ಧ ಲಕ್ಷದ್ವೀಪದ ಬಿಜೆಪಿ ಮುಖ್ಯಸ್ಥ ಸಿ ಅಬ್ದುಲ್ ಖಾದರ್ ಹಾಜಿ ದೇಶದ್ರೋಹದ ದೂರು ನೀಡಿದ್ದರು. ಅದರ ಆಧಾರದ ಮೇಲೆ ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 124ಎ (ದೇಶದ್ರೋಹ) ಮತ್ತು 153 ಬಿ (ದ್ವೇಷಪೂರಿತ ಭಾಷಣ) ಅಡಿಯಲ್ಲಿ ಕವರತ್ತಿ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.


ಇದನ್ನೂ ಓದಿ: ಲಕ್ಷದ್ವೀಪ: ಕೇಂದ್ರದಿಂದ ಜೈವಿಕ ಅಸ್ತ್ರ ಬಳಕೆ ಆರೋಪ, ನಿರ್ಮಾಪಕಿ ವಿರುದ್ಧ ದೇಶದ್ರೋಹ ಪ್ರಕರಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...