Homeಮುಖಪುಟಲಕ್ಷದ್ವೀಪ ನಿರ್ಮಾಪಕಿ ವಿರುದ್ಧ ದೇಶದ್ರೋಹ ಪ್ರಕರಣಕ್ಕೆ ಬಿಜೆಪಿಯಲ್ಲೇ ವಿರೋಧ: 15 ಬಿಜೆಪಿ ನಾಯಕರ ರಾಜೀನಾಮೆ!

ಲಕ್ಷದ್ವೀಪ ನಿರ್ಮಾಪಕಿ ವಿರುದ್ಧ ದೇಶದ್ರೋಹ ಪ್ರಕರಣಕ್ಕೆ ಬಿಜೆಪಿಯಲ್ಲೇ ವಿರೋಧ: 15 ಬಿಜೆಪಿ ನಾಯಕರ ರಾಜೀನಾಮೆ!

ನೀವು ಆ ಸಹೋದರಿಯ ವಿರುದ್ಧ ತಪ್ಪು ಮತ್ತು ಅನ್ಯಾಯಯುತ ದೂರು ನೀಡಿದ್ದೀರಿ. ಅವರ ಕುಟುಂಬ ಮತ್ತು ಆಕೆಯ ಭವಿಷ್ಯವನ್ನು ಹಾಳುಮಾಡುತ್ತಿದ್ದೀರಿ. ಹಾಗಾಗಿ ನಾವು ಬಿಜೆಪಿಯ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡುತ್ತಿದ್ದೇವೆ..

- Advertisement -
- Advertisement -

ಕೇಂದ್ರಾಡಳಿತ ಪ್ರದೇಶ ಲಕ್ಷದ್ವೀಪದ ಆಡಳಿತಾಧಿಕಾರಿ ಪ್ರಪುಲ್ ಪಟೇಲ್‌ರವರ ಕೊರೊನಾ ನಿರ್ವಹಣೆ ಟೀಕಿಸಿದ್ದ ಮತ್ತು ಕೇಂದ್ರವು “ಜೈವಿಕ ಶಸ್ತ್ರಾಸ್ತ್ರ” ವನ್ನು ಬಳಸಿದೆ ಎಂದು ಆರೋಪಿಸಿದ್ದ ಲಕ್ಷದ್ವೀಪ ಚಲನಚಿತ್ರ ನಿರ್ಮಾಪಕಿ ಆಯೆಷಾ ಸುಲ್ತಾನಾ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಿಸಿರುವುದಕ್ಕೆ ಬಿಜೆಪಿಯಲ್ಲಿಯೇ ಆಕ್ರೋಶ ಭುಗಿಲೆದ್ದಿದೆ. ಈ ಕುರಿತು ಪ್ರತಿಭಟನೆಯ ಭಾಗವಾಗಿ 15 ಬಿಜೆಪಿ ನಾಯಕರು ತಮ್ಮ ರಾಜೀನಾಮೆ ಸಲ್ಲಿಸಿದ್ದು, ಬಿಜೆಪಿ ಮುಖ್ಯಸ್ಥರಿಗೆ ದೂರು ನೀಡಿದ್ದಾರೆ.

12 ಜನ ಬಿಜೆಪಿ ನಾಯಕರು ಮತ್ತು ಇತರ ಕಾರ್ಯಕರ್ತರು ದೂರಿನ ಪ್ರತಿಗೆ ಸಹಿ ಮಾಡಿದ್ದು, ಲಕ್ಷದ್ವೀಪದ ಬಿಜೆಪಿ ಮುಖ್ಯಸ್ಥ ಸಿ ಅಬ್ದುಲ್ ಖಾದರ್ ಹಾಜಿಯವರಿಗೆ ಸಲ್ಲಿಸಿದ್ದಾರೆ. “ಲಕ್ಷದ್ವೀಪದ ಆಡಳಿತಾಧಿಕಾರಿಯವರ ಜನವಿರೋಧಿ ಕ್ರಮಗಳು, ಪ್ರಜಾಪ್ರಭುತ್ವ ವಿರೋಧಿ ಕ್ರಮಗಳಿಂದಾಗಿ ಜನರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ” ಎಂದು ದೂರಿನಲ್ಲಿ ಹೇಳಲಾಗಿದೆ.

ನಿರ್ಮಾಪಕಿ ಆಯಿಷಾ ಸುಲ್ತಾನ ಅವರನ್ನು ಈ ಬಿಜೆಪಿ ನಾಯಕರು ಬೆಂಬಲಿಸಿದ್ದಾರೆ. “ಚೆಟ್ಲಾಟ್ ನಿವಾಸಿ ಆಯಿಷಾ ಸುಲ್ತಾನಾ ಕೂಡ ಮಾಧ್ಯಮಗಳಲ್ಲಿ ತಮ್ಮ ಅಭಿಪ್ರಾಯವನ್ನು ಹಂಚಿಕೊಂಡಿದ್ದಾರೆ. ಲಕ್ಷದ್ವೀಪದಲ್ಲಿ ಮೊದಲು ಯಾವುದೇ ಕೋವಿಡ್‌ ಪ್ರಕರಣಗಳಿರಲಿಲ್ಲ. ಆದರೆ ಹೊಸ ಆಡಳಿತಾಧಿಕಾರಿಯ ಆಗಮನದೊಂದಿಗೆ, ಅವರ ಅವೈಜ್ಞಾನಿಕ, ಬೇಜವಾಬ್ದಾರಿಯುತ ನಿರ್ಧಾರಗಳಿಂದ ಕೋವಿಡ್‌ ಪ್ರಕರಣಗಳು ದಿಢೀರನೆ ಹೆಚ್ಚಾಗಿವೆ ಎಂದು ವಾಸ್ತವವನ್ನು ಅವರು ಮಾತನಾಡಿದ್ದಾರೆ. ಅಷ್ಟಕ್ಕೆ ಪೊಲೀಸರಿಗೆ ನೀವು ನೀಡಿದ ದೂರಿನ ಆಧಾರದ ಮೇಲೆ, ಆಯಿಷಾ ಸುಲ್ತಾನಾ ವಿರುದ್ಧ ಪ್ರಕರಣ ದಾಖಲಾಗಿದೆ. ಇದು ಸರಿಯಲ್ಲ” ಎಂದು ಬಿಜೆಪಿ ನಾಯಕರು ದೂರಿದ್ದಾರೆ.

ನೀವು ಆ ಸಹೋದರಿಯ ವಿರುದ್ಧ ತಪ್ಪು ಮತ್ತು ಅನ್ಯಾಯಯುತ ದೂರು ನೀಡಿದ್ದೀರಿ. ಅವರ ಕುಟುಂಬ ಮತ್ತು ಆಕೆಯ ಭವಿಷ್ಯವನ್ನು ಹಾಳುಮಾಡುತ್ತಿದ್ದೀರಿ. ಹಾಗಾಗಿ ನಾವು ಬಿಜೆಪಿಯ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡುತ್ತಿದ್ದೇವೆ ಎಂದು ಬಿಜೆಪಿ ರಾಜ್ಯ ಕಾರ್ಯದರ್ಶಿ ಅಬ್ದುಲ್ ಹಮೀದ್ ಮುಲ್ಲಿಫುಝ ತಿಳಿಸಿದ್ದಾರೆ.

“ಲಕ್ಷದ್ವೀಪದಲ್ಲಿ ಕೊರೊನಾ ಪ್ರಕರಣಗಳು ಶೂನ್ಯವಾಗಿದ್ದವು. ಈಗ ಪ್ರತಿದಿನ 100 ಪ್ರಕರಣಗಳನ್ನು ವರದಿ ಮಾಡುತ್ತಿದೆ. ಕೇಂದ್ರ ಸರ್ಕಾರವು “ಜೈವಿಕ ಶಸ್ತ್ರಾಸ್ತ್ರ” ಬಳಸುತ್ತಿದೆ ಎಂದು ನಾನು ಇದನ್ನು ಸ್ಪಷ್ಟವಾಗಿ ಹೇಳಬಲ್ಲೆ” ಎಂದು ಆಯಿಷಾ ಸುಲ್ತಾನಾ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದರು. ಹಾಗಾಗಿ ಅವರ ವಿರುದ್ಧ ಲಕ್ಷದ್ವೀಪದ ಬಿಜೆಪಿ ಮುಖ್ಯಸ್ಥ ಸಿ ಅಬ್ದುಲ್ ಖಾದರ್ ಹಾಜಿ ದೇಶದ್ರೋಹದ ದೂರು ನೀಡಿದ್ದರು. ಅದರ ಆಧಾರದ ಮೇಲೆ ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 124ಎ (ದೇಶದ್ರೋಹ) ಮತ್ತು 153 ಬಿ (ದ್ವೇಷಪೂರಿತ ಭಾಷಣ) ಅಡಿಯಲ್ಲಿ ಕವರತ್ತಿ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.


ಇದನ್ನೂ ಓದಿ: ಲಕ್ಷದ್ವೀಪ: ಕೇಂದ್ರದಿಂದ ಜೈವಿಕ ಅಸ್ತ್ರ ಬಳಕೆ ಆರೋಪ, ನಿರ್ಮಾಪಕಿ ವಿರುದ್ಧ ದೇಶದ್ರೋಹ ಪ್ರಕರಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...