Homeಅಂತರಾಷ್ಟ್ರೀಯಚೀನಾ ಪ್ರಸ್ತಾಪಿತ ಒಪ್ಪಂದಕ್ಕೆ ಸಹಿ ಹಾಕಿದ 15 ರಾಷ್ಟ್ರಗಳು; ಹೊರಗುಳಿದ ಭಾರತ!

ಚೀನಾ ಪ್ರಸ್ತಾಪಿತ ಒಪ್ಪಂದಕ್ಕೆ ಸಹಿ ಹಾಕಿದ 15 ರಾಷ್ಟ್ರಗಳು; ಹೊರಗುಳಿದ ಭಾರತ!

ಚೀನಾದಿಂದ ಬಹಳ ಅಗ್ಗದ ದರದಲ್ಲಿ ಕಳಪೆ ಉತ್ಪನ್ನಗಳು ರಫ್ತಾಗುವುತ್ತಿವೆ ಎಂದು ಆರೋಪಿಸಿದ್ದ ಭಾರತ ಈ ಒಪ್ಪಂದಕ್ಕೆ ಸಹಿ ಹಾಕದಿರಲು ಕಳೆದ ವರ್ಷ ನಿರ್ಧರಿಸಿತ್ತು

- Advertisement -
- Advertisement -

ಅಮೆರಿಕಾ ವಿರುದ್ಧ ತನ್ನ ಶಕ್ತಿ ಪ್ರದರ್ಶನ ಮಾಡುತ್ತಿರುವ ಚೀನಾ, ಏಷ್ಯಾದ ಪ್ರಮುಖ ರಾಷ್ಟ್ರಗಳನ್ನು ಒಗ್ಗೂಡಿಸುವ ಮಹತ್ವಾಕಾಂಕ್ಷೆಯ ಆರ್​ಸಿಇಪಿ ವ್ಯಾಪಾರ ಒಪ್ಪಂದ ಸಾಕಾರಗೊಂಡಿದೆ. ಏಷ್ಯಾದ 15 ಪ್ರಮುಖ ರಾಷ್ಟ್ರಗಳು ಪ್ರಾದೇಶಿಕ ಸಮಗ್ರ ಆರ್ಥಿಕ ಪಾಲುದಾರತ್ವ (RCEP) ಒಪ್ಪಂದಕ್ಕೆ ಸಹಿ ಹಾಕಿವೆ.

ಭಾರತ ಕೂಡ ಈ ಒಪ್ಪಂದಕ್ಕೆ ಸಹಿ ಹಾಕಬೇಕಿತ್ತು. ಆದರೆ, ಚೀನಾದಿಂದ ಬಹಳ ಅಗ್ಗದ ದರದಲ್ಲಿ ಕಳಪೆ ಉತ್ಪನ್ನಗಳು ರಫ್ತಾಗುವುತ್ತಿವೆ ಎಂದು ಆರೋಪಿಸಿದ್ದ ಭಾರತ ಈ ಒಪ್ಪಂದಕ್ಕೆ ಸಹಿ ಹಾಕದಿರಲು ಕಳೆದ ವರ್ಷ ನಿರ್ಧರಿಸಿತ್ತು. ಹಾಗಾಗಿ ಭಾರತ ಈ ಒಪ್ಪಂದಕ್ಕೆ ಸಹಿ ಹಾಕಿಲ್ಲ.

ಇದನ್ನೂ ಓದಿ: ಭಾರತೀಯ ರೈತರಿಗೆ ಅಮೇರಿಕಾ-ಭಾರತ ಮುಕ್ತ ವ್ಯಾಪಾರ ಒಪ್ಪಂದ ತಂದೊಡ್ಡುವ ಅಪಾಯಗಳು

ಜಪಾನ್, ದಕ್ಷಿಣ ಕೊರಿಯಾ, ನ್ಯೂಜಿಲೆಂಡ್ ಮತ್ತು ಆಸ್ಟ್ರೇಲಿಯಾ ಸೇರಿದಂತೆ 15 ರಾಷ್ಟ್ರಗಳು ಚೀನಾ ಪ್ರಸ್ತಾಪಿಸಿದ್ದ RCEP ಒಪ್ಪಂದಕ್ಕೆ ಸಹಿ ಹಾಕಿವೆ.

2012ರಲ್ಲಿ ಮೊದಲ ಬಾರಿಗೆ ಈ ಆರ್​ಸಿಇಪಿ ಒಪ್ಪಂದದ ಪ್ರಸ್ತಾವವಾಗಿದ್ದು. ಎಂಟು ವರ್ಷಗಳ ನಿರಂತರ ಚರ್ಚೆಗಳ ಬಳಿಕ 15 ರಾಷ್ಟ್ರಗಳು ಸಹಿ ಹಾಕಿವೆ. ಈ ವರ್ಷ ಕೊರೊನಾ ಸೋಂಕಿನಿಂದಾಗಿ ಆರ್ಥಿಕತೆ ಸಂಕಷ್ಟಕ್ಕೊಳಗಾಗಿದ್ದರಿಂದ ಒಪ್ಪಂದ ಸಾಕಾರಗೊಳ್ಳಲು ಮುಖ್ಯ ಕಾರಣ ಎನ್ನಲಾಗಿದೆ.

ಆರ್‌ಸಿಇಪಿ ಒಪ್ಪಂದಕ್ಕೆ ಸಹಿಹಾಕಿರುವ ದೇಶಗಳು ತಮ್ಮ ಉತ್ಪನ್ನಗಳನ್ನ ಸುಲಭವಾಗಿ ರಫ್ತು ಮಾಡಲು ಸಾಧ್ಯವಾಗುತ್ತದೆ. ಎಲ್ಲರಿಗೂ ಸಮಾನ ನಿಯಮಾವಳಿಗಳು ಇರುತ್ತವೆ. ಮ್ಯಾನುಫ್ಯಾಕ್ಚರಿಂಗ್ ಉದ್ಯಮ ಪ್ರಬಲವಾಗಿರುವ ಚೀನಾಗೆ ಈ ಒಪ್ಪಂದದಿಂದ ಅತಿಹೆಚ್ಚು ಲಾಭ ಸಿಗುವ ನಿರೀಕ್ಷೆ ಇದೆ. ಆರ್​ಸಿಇಪಿ ಮೂಲಕ ಚೀನಾದ ಪ್ರಭಾವ ಇನ್ನಷ್ಟು ಹೆಚ್ಚಾಗುತ್ತದೆ. ಟ್ರಾನ್ಸ್-ಪೆಸಿಫಿಕ್ ಒಪ್ಪಂದದಿಂದ ಅಮೆರಿಕ ಹಿಂದೆ ಸರಿದಿರುವ ಹಿನ್ನೆಲೆಯಲ್ಲಿ ಏಷ್ಯಾದ ಮೇಲೆ ಚೀನಾದ ಹಿಡಿತ ಇನ್ನಷ್ಟು ಹೆಚ್ಚಾಗಲಿದೆ.

ಇದನ್ನೂ ಓದಿ: ಬಿಳೇಮನಿಯ ಕರೀ ಒಪ್ಪಂದ : ಟ್ರಂಪ್‌ನಿಂದ ಭಾರತಕ್ಕಾಗುವ ಅಪಾಯಗಳೇನು? 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...