Homeಮುಖಪುಟಸರ್ಕಾರ ಉರುಳಿಸಲು ಶಾಸಕರಿಗೆ ಬಿಜೆಪಿ 15 ಕೋಟಿ ನೀಡುತ್ತಿದೆ: ರಾಜಸ್ಥಾನ ಸಿಎಂ ಗೆಹ್ಲೋಟ್ ಆರೋಪ

ಸರ್ಕಾರ ಉರುಳಿಸಲು ಶಾಸಕರಿಗೆ ಬಿಜೆಪಿ 15 ಕೋಟಿ ನೀಡುತ್ತಿದೆ: ರಾಜಸ್ಥಾನ ಸಿಎಂ ಗೆಹ್ಲೋಟ್ ಆರೋಪ

- Advertisement -
- Advertisement -

ರಾಜಸ್ಥಾನದಲ್ಲಿನ ತಮ್ಮ ಕಾಂಗ್ರೆಸ್ ಸರ್ಕಾರವನ್ನು ಉರುಳಿಸಲು ವಿರೋಧ ಪಕ್ಷ ಬಿಜೆಪಿ ಪ್ರಯತ್ನಿಸುತ್ತಿದ್ದು, ಶಾಸಕರಿಗೆ ತಲಾ 15 ಕೋಟಿ ರೂಗಳ ಆಮಿಷವೊಡ್ಡಿದೆ ಎಂದು ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಆರೋಪಿಸಿದ್ದಾರೆ.

ತಮ್ಮ ನಿವಾಸದಲ್ಲಿ ಪತ್ರಿಕಾಗೋಷ್ಟಿಯನ್ನು ಉದ್ದೇಶಿಸಿ ಮಾತನಾಡಿದ ಅವರು, “COVID-19 ಬಿಕ್ಕಟ್ಟಿನ ಸಂದರ್ಭದಲ್ಲಿ ರಾಜ್ಯ ಸರ್ಕಾರವು ಜನರಿಗಾಗಿ ಕೆಲಸ ಮಾಡುತ್ತಿರುವಾಗ ಬಿಜೆಪಿ ಸರ್ಕಾರ ಉರುಳಿಸುವ ಕುತಂತ್ರ ಹೆಣೆದಿದೆ ಎಂದು ಕಿಡಿಕಾರಿದ್ದಾರೆ.

ಕಳೆದ ವರ್ಷ ಕರ್ನಾಟಕದಲ್ಲಿ ಮತ್ತು ಈ ವರ್ಷ ಮಧ್ಯಪ್ರದೇಶ ರಾಜ್ಯಗಳಲ್ಲಿ ಬಿಜೆಪಿ ಆಪರೇಷನ್ ಕಮಲದ ಮೂಲಕ ಅನಧಿಕೃತವಾಗಿ ಅಧಿಕಾರ ಹಿಡಿದಿದೆ ಎಂದು ಆರೋಪಿಸಿದ ಅವರು ಅದೇ ವರ್ತನೆಯನ್ನು ರಾಜಸ್ಥಾನದಲ್ಲಿಯೂ ತೋರುತ್ತಿದೆ ಎಂದಿದ್ದಾರೆ.

ಪಕ್ಷ ಬದಲಿಸಲು ಶಾಸಕರಿಗೆ 15 ಕೋಟಿ ರೂಗಳ ಆಮಿಷವೊಡ್ಡಿದ್ದಾರೆ ಎಂಬ ಮಾತುಗಳು ಪದೇ ಪದೇ ಕೇಳಿಬರುತ್ತಿವೆ. ಒಟ್ಟಾರೆ ನಿರಂತರವಾಗಿ ಬಿಜೆಪಿ ಸರ್ಕಾರ ಉರುಳಿಸಲು ಪ್ರಯತ್ನಿಸಿತ್ತಿದ್ದು, ಕೋವಿಡ್ ಸಮಯದಲ್ಲಿ ಅಸ್ಥಿರತೆ ಉಂಟು ಮಾಡಲು ಮುಂದಾಗಿದ್ದಾರೆ ಎಂದು ತಿಳಿಸಿದ್ದಾರೆ.

“2014 ರಲ್ಲಿ ಕೇಂದ್ರ ಬಿಜೆಪಿ ಅಧಿಕಾರ ಹಿಡಿದಾಗಿನಿಂದಲೂ ಅದರ ನಿಜ ಮುಖವನ್ನು ಬಹಿರಂಗಪಡಿಸಲಾಗಿದೆ. ಅವರು ಮೊದಲು ರಹಸ್ಯವಾಗಿ ಮಾಡಿದ್ದನ್ನು ಈಗ ಬಹಿರಂಗವಾಗಿ ಮಾಡುತ್ತಾರೆ. ಗೋವಾ, ಮಧ್ಯಪ್ರದೇಶ ಮತ್ತು ಈಶಾನ್ಯ ರಾಜ್ಯಗಳಲ್ಲಿ ನೀವು ಇದನ್ನು ನೋಡಿದ್ದೀರಿ” ಎಂದು ಗೆಹ್ಲೋಟ್ ತಿಳಿಸಿದ್ದಾರೆ.

ಕಳೆದ ತಿಂಗಳು ನಡೆದ ರಾಜ್ಯಸಭಾ ಚುನಾವಣೆಯಲ್ಲಿ ಗೆಲ್ಲಲು ನಾಚಿಕೆಯಿಲ್ಲದ ಬಿಜೆಪಿಯು ಗುಜರಾತ್‌ನಲ್ಲಿ ಏಳು ಶಾಸಕರನ್ನು ಖರೀದಿಸಿದೆ ಎಂದು ಟೀಕಿಸಿದ್ದಾರೆ.

“ಅವರು ರಾಜಸ್ಥಾನದಲ್ಲಿ ಅದೇ ಕೆಲಸವನ್ನು ಮಾಡಲು ಪ್ರಯತ್ನಿಸಿದರು. ಆದರೆ ನಾವು ಅದನ್ನು ತಡೆದು ಅವರಿಗೆ ದೀರ್ಘಕಾಲದವರೆಗೆ ನೆನಪಿನಲ್ಲಿಟ್ಟುಕೊಳ್ಳುವ ಪಾಠ ನೀಡಿದ್ದೇವೆ” ಎಂದು ಗೆಹ್ಲೋಟ್ ಹೇಳಿದ್ದಾರೆ.

ಜನರು ಎಲ್ಲವನ್ನೂ ನೋಡುತ್ತಿದ್ದಾರೆ ಮತ್ತು ಮುಂಬರುವ ಚುನಾವಣೆಯಲ್ಲಿ ಬಿಜೆಪಿಯ ಈ ದುರಹಂಕಾರವು ಕೊನೆಯಾಗಲಿದ್ದ, ಭಾರತದ ಜನರು ಬಿಜೆಪಿಗೆ ಪಾಠ ಕಲಿಸುತ್ತಾರೆ ಎಂದು ಅವರು ಹೇಳಿದ್ದಾರೆ.

ಬಿಜೆಪಿಯ ಹಿರಿಯ ನಾಯಕರು ಈ ಪಿತೂರಿಯಲ್ಲಿ ಭಾಗಿಯಾಗಿದ್ದಾರೆ ಎಂದು ಕೆಲವು ಕಾಂಗ್ರೆಸ್ ನಾಯಕರು ಆರೋಪಿಸಿದ್ದಾರೆ.

ರಾಜಸ್ಥಾನ ಪೊಲೀಸರ ಎಸ್‌ಒಜಿ (ವಿಶೇಷ ಕಾರ್ಯಾಚರಣೆ ಗುಂಪು) ಮತ್ತು ಎಸಿಬಿ (ಭ್ರಷ್ಟಾಚಾರ ನಿಗ್ರಹ ದಳ) ಗೆ ದೂರು ಸಲ್ಲಿಸಿರುವ ಕಾಂಗ್ರೆಸ್ ನಾಯಕ ಮಹೇಶ್ ಜೋಶಿ,  ಬಿಜೆಪಿ ಭಯಭೀತರಾಗಿದೆ ಎಂದು ಹೇಳಿದ್ದಾರೆ.

ಈ ಕುರಿತು ಬಿಜೆಪಿಯು ಇದುವರೆಗೂ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

200 ಸದಸ್ಯರ ರಾಜಸ್ಥಾನ ವಿಧಾನಸಭೆಯಲ್ಲಿ ಕಾಂಗ್ರೆಸ್ 107 ಸ್ಥಾನಗಳನ್ನು ಹೊಂದಿದ್ದು, 12 ಸ್ವತಂತ್ರ ಅಭ್ಯರ್ಥಿಗಳ ಬೆಂಬಲವನ್ನು ಹೊಂದಿದೆ. ಇದಲ್ಲದೆ ಇತರ ಪಕ್ಷಗಳ ಐದು ಶಾಸಕರು ಗೆಹ್ಲೋಟ್ ಸರ್ಕಾರವನ್ನು ಬೆಂಬಲಿಸಿದ್ದಾರೆ.


ಇದನ್ನೂ ಓದಿ: ಭಾರತದೊಂದಿಗೆ ಮೈತ್ರಿ ಮಾಡಿಕೊಂಡಿದ್ದಕ್ಕಾಗಿ ಶಿಕ್ಷೆ: ಭೂತಾನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...