Homeಕರೋನಾ ತಲ್ಲಣಮಹಾರಾಷ್ಟ್ರದಲ್ಲಿ ಸೋಮವಾರದಿಂದ 15 ದಿನಗಳ ಲಾಕ್‌ಡೌನ್‌ ಸಾಧ್ಯತೆ

ಮಹಾರಾಷ್ಟ್ರದಲ್ಲಿ ಸೋಮವಾರದಿಂದ 15 ದಿನಗಳ ಲಾಕ್‌ಡೌನ್‌ ಸಾಧ್ಯತೆ

- Advertisement -
- Advertisement -

ಕೊರೊನಾ ಹೆಚ್ಚಳದ ಹಿನ್ನಲೆಯಲ್ಲಿ ಮಹಾರಾಷ್ಟ್ರ ಸರ್ಕಾರವು ರಾಜ್ಯದಲ್ಲಿ ಕಳೆದ ಐದು ದಿನಗಳಿಂದ ಹಗಲಿನಲ್ಲಿ ಕಟ್ಟುನಿಟ್ಟಿನ ನಿರ್ಬಂಧಗಳು ಮತ್ತು ರಾತ್ರಿ ವೇಳೆ ಕರ್ಫ್ಯೂವನ್ನು ಘೋಷಿಸಿತ್ತು. ಜೊತೆಗೆ ವಾರಾಂತ್ಯದಲ್ಲಿ ಲಾಕ್‌ಡೌನ್ ಕೂಡಾ ಹೇರಲಾಗಿತ್ತು. ವಾರಾಂತ್ಯದ ಲಾಕ್‌ಡೌನ್‌‌ನನ್ನು ಗಮನಿಸಿರುವ ಮುಖ್ಯಮಂ‌ತ್ರಿ ಉದ್ದವ್ ಠಾಕ್ರೆ, ಕೊರೊನಾ ಹರಡುವುದನ್ನು ತಡೆಯಲು ಬೇಕಾಗಿ ಸೋಮವಾರದಿಂದ 15 ದಿನಗಳವರೆಗೆ ಲಾಕ್‌ಡೌನ್ ವಿಧಿಸುವ ಸಾಧ್ಯತೆ ಇದೆ ಎಂದು ಶನಿವಾರ ಸೂಚಿಸಿದ್ದಾರೆ.

ಶನಿವಾರ ನಡೆದ ಆಡಳಿತಾರೂಢ ಮೂರು ಮೈತ್ರಿ ಪಕ್ಷಗಳು ಮತ್ತು ಪ್ರತಿಪಕ್ಷಗಳ ಸಭೆಯಲ್ಲಿ, ರಾಜ್ಯ ಸರ್ಕಾರವು ತೆಗೆದುಕೊಳ್ಳುವ ಯಾವುದೇ ನಿರ್ಧಾರಕ್ಕೆ ಎಲ್ಲ ಪಕ್ಷಗಳ ಸಹಕಾರವನ್ನು ಕೋರಿದರು. ಮಾಜಿ ಮುಖ್ಯಮಂತ್ರಿ ಮತ್ತು ವಿರೋಧ ಪಕ್ಷದ ನಾಯಕ ದೇವೇಂದ್ರ ಫಡ್ನವೀಸ್ ಸೇರಿದಂತೆ ಹಾಜರಿದ್ದ ಎಲ್ಲರೂ ತಮ್ಮ ಬೆಂಬಲವನ್ನು ಮುಖ್ಯಮಂತ್ರಿಗೆ ನೀಡಿದ್ದಾರೆ.

ಇದನ್ನೂ ಓದಿ: ಪರೀಕ್ಷೆಗಳು ಇದ್ದೇ ಇರುತ್ತವೆ, ಬೇಸಿಗೆ ರಜೆ ಇಲ್ಲ – ಡಿಸಿಎಂ ಅಶ್ವತ್ಥನಾರಾಯಣ

“ವಿರೋಧ ಪಕ್ಷವಾಗಿ, ನಾವು ಸರ್ಕಾರಕ್ಕೆ ನಮ್ಮ ಬೆಂಬಲವನ್ನು ನೀಡಲು ಸಿದ್ಧರಿದ್ದೇವೆ. ಲಾಕ್‌ಡೌನ್ ಸಮಯದಲ್ಲಿ ಉದ್ಯೋಗ ನಷ್ಟ ಮತ್ತು ಜೀವನೋಪಾಯದ ಸಮಸ್ಯೆಗಳ ಬಗ್ಗೆ ಜನರ ಆತಂಕಗಳನ್ನು ನಿವಾರಿಸಲು ಸರ್ಕಾರವು ವಿವರವಾದ ಯೋಜನೆಯನ್ನು ರೂಪಿಸಬೇಕು” ಎಂದು ಫಡ್ನವೀಸ್ ಒತ್ತಾಯಿಸಿದರು.

ಎನ್‌ಸಿಪಿ ನಾಯಕ, ಸಚಿವ ನವಾಬ್ ಮಲಿಕ್, ಅಗತ್ಯವಿದ್ದರೆ ಸಂಪೂರ್ಣ ಲಾಕ್‌ಡೌನ್ ಅಥವಾ ಕಟ್ಟುನಿಟ್ಟಿನ ನಿರ್ಬಂಧಗಳ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಎಲ್ಲಾ ಪಕ್ಷಗಳು ಒಪ್ಪಿಕೊಂಡಿವೆ ಎಂದು ಹೇಳಿದ್ದಾರೆ.

ಕಾಂಗ್ರೆಸ್ ನಾಯಕ, ಸಚಿವ ಅಶೋಕ್ ಚವಾಣ್, “ಸಂಪೂರ್ಣ ಲಾಕ್‌ಡೌನ್ ಅನ್ನು ಹೇಗೆ ವಿಧಿಸಬೇಕು ಎಂಬುದರ ಕುರಿತು ಠಾಕ್ರೆ ಮಾರ್ಗಸೂಚಿಯನ್ನು ಸಿದ್ಧಪಡಿಸುತ್ತಿದ್ದಾರೆ. ಪ್ರಕರಣಗಳ ಸಂಖ್ಯೆ ಕಡಿಮೆಯಾಗಲು ಪ್ರಾರಂಭವಾದರೆ ನಿರ್ಬಂಧಗಳನ್ನು ಕ್ರಮೇಣ ಹಿಂತೆಗೆದುಕೊಳ್ಳಲಾಗುವುದು” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಬಿಜೆಪಿಗೂ, ಪ್ರಧಾನಿ ಮೋದಿಗೂ ಒಂದಷ್ಟು ಮಾನಸಿಕ ಚಿಕಿತ್ಸೆಯ ಅಗತ್ಯವಿದೆ: ಕಾಂಗ್ರೆಸ್ ತೀವ್ರ ವಾಗ್ದಾಳಿ

ಸಭೆಯಲ್ಲಿ ಆರೋಗ್ಯ ಇಲಾಖೆ ಅಧಿಕಾರಿಗಳು 15 ದಿನಗಳ ಲಾಕ್‌ಡೌನ್ ಪ್ರಸ್ತಾಪಿಸಿದ್ದಾರೆ ಎಂದು ಸರ್ಕಾರಿ ಮೂಲಗಳು ತಿಳಿಸಿವೆ. ನಿಖರವಾದ ಅವಧಿ 15 ದಿನಗಳು ಅಥವಾ ಏಪ್ರಿಲ್ ಅಂತ್ಯದವರೆಗೂ ಲಾಕ್‌ಡೌನ್‌ ಸಾಧ್ಯತೆ ಇದೆ ಎನ್ನಲಾಗಿದೆ. ಮುಖ್ಯಮಂತ್ರಿ ಉದ್ದವ್ ಠಾಕ್ರೆ ರಾಜ್ಯ ಕೋವಿಡ್ ಕಾರ್ಯಪಡೆಯೊಂದಿಗೆ ಭೇಟಿಯಾದ ನಂತರ ಭಾನುವಾರ ಘೋಷಿಸುವ ಸಾಧ್ಯತೆಯಿದೆ. ಸೋಮವಾರ ಸಂಜೆ ಸಂಪೂರ್ಣ ಲಾಕ್‌ಡೌನ್ ಜಾರಿಗೆ ಬರಬಹುದು ಎಂದು ಮೂಲಗಳು ತಿಳಿಸಿವೆ.

ಮಹಾರಾಷ್ಟ್ರದಲ್ಲಿ ಶನಿವಾರ 55,411 ಹೊಸ ಕೊರೊನಾ ಪ್ರಕರಣಗಳು ದಾಖಲಾಗಿದ್ದು, ಮುಂಬೈನಲ್ಲಿ 9,330 ಪ್ರಕರಣಗಳು ದಾಖಲಾಗಿವೆ. ಈ ವಾರ ರಾಜ್ಯದಲ್ಲಿ ಕಟ್ಟುನಿಟ್ಟಿನ ನಿರ್ಬಂಧ ಹೇರಿದ್ದರಿಂದ ರಾಜ್ಯದಾದ್ಯಂತ ಹೊಸ ಪ್ರಕರಣಗಳಲ್ಲಿ ಅಲ್ಪ ಕುಸಿತ ಕಂಡಿದೆ. ರಾಜ್ಯದಲ್ಲಿ 5.36 ಲಕ್ಷ ಸಕ್ರಿಯ ಪ್ರಕರಣದಳಿವೆ. ಕಳೆದ ನಾಲ್ಕು ದಿನಗಳಿಂದ ರಾಜ್ಯದಲ್ಲಿ 300 ಕ್ಕೂ ಹೆಚ್ಚು ಜನರು ಕೊರೊನಾದಿಂದಾಗಿ ಮೃತಪಟ್ಟಿದ್ದಾರೆ.

ಇದನ್ನೂ ಓದಿ: ಬಂಗಾಳದಲ್ಲಿ ಐವರು ಟಿಎಂಸಿ ಕಾರ್ಯಕರ್ತರಿಗೆ ಗುಂಡಿಕ್ಕಿ ಹತ್ಯೆ-ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...