Homeಕರೋನಾ ತಲ್ಲಣಮಹಾರಾಷ್ಟ್ರದಲ್ಲಿ ಸೋಮವಾರದಿಂದ 15 ದಿನಗಳ ಲಾಕ್‌ಡೌನ್‌ ಸಾಧ್ಯತೆ

ಮಹಾರಾಷ್ಟ್ರದಲ್ಲಿ ಸೋಮವಾರದಿಂದ 15 ದಿನಗಳ ಲಾಕ್‌ಡೌನ್‌ ಸಾಧ್ಯತೆ

- Advertisement -
- Advertisement -

ಕೊರೊನಾ ಹೆಚ್ಚಳದ ಹಿನ್ನಲೆಯಲ್ಲಿ ಮಹಾರಾಷ್ಟ್ರ ಸರ್ಕಾರವು ರಾಜ್ಯದಲ್ಲಿ ಕಳೆದ ಐದು ದಿನಗಳಿಂದ ಹಗಲಿನಲ್ಲಿ ಕಟ್ಟುನಿಟ್ಟಿನ ನಿರ್ಬಂಧಗಳು ಮತ್ತು ರಾತ್ರಿ ವೇಳೆ ಕರ್ಫ್ಯೂವನ್ನು ಘೋಷಿಸಿತ್ತು. ಜೊತೆಗೆ ವಾರಾಂತ್ಯದಲ್ಲಿ ಲಾಕ್‌ಡೌನ್ ಕೂಡಾ ಹೇರಲಾಗಿತ್ತು. ವಾರಾಂತ್ಯದ ಲಾಕ್‌ಡೌನ್‌‌ನನ್ನು ಗಮನಿಸಿರುವ ಮುಖ್ಯಮಂ‌ತ್ರಿ ಉದ್ದವ್ ಠಾಕ್ರೆ, ಕೊರೊನಾ ಹರಡುವುದನ್ನು ತಡೆಯಲು ಬೇಕಾಗಿ ಸೋಮವಾರದಿಂದ 15 ದಿನಗಳವರೆಗೆ ಲಾಕ್‌ಡೌನ್ ವಿಧಿಸುವ ಸಾಧ್ಯತೆ ಇದೆ ಎಂದು ಶನಿವಾರ ಸೂಚಿಸಿದ್ದಾರೆ.

ಶನಿವಾರ ನಡೆದ ಆಡಳಿತಾರೂಢ ಮೂರು ಮೈತ್ರಿ ಪಕ್ಷಗಳು ಮತ್ತು ಪ್ರತಿಪಕ್ಷಗಳ ಸಭೆಯಲ್ಲಿ, ರಾಜ್ಯ ಸರ್ಕಾರವು ತೆಗೆದುಕೊಳ್ಳುವ ಯಾವುದೇ ನಿರ್ಧಾರಕ್ಕೆ ಎಲ್ಲ ಪಕ್ಷಗಳ ಸಹಕಾರವನ್ನು ಕೋರಿದರು. ಮಾಜಿ ಮುಖ್ಯಮಂತ್ರಿ ಮತ್ತು ವಿರೋಧ ಪಕ್ಷದ ನಾಯಕ ದೇವೇಂದ್ರ ಫಡ್ನವೀಸ್ ಸೇರಿದಂತೆ ಹಾಜರಿದ್ದ ಎಲ್ಲರೂ ತಮ್ಮ ಬೆಂಬಲವನ್ನು ಮುಖ್ಯಮಂತ್ರಿಗೆ ನೀಡಿದ್ದಾರೆ.

ಇದನ್ನೂ ಓದಿ: ಪರೀಕ್ಷೆಗಳು ಇದ್ದೇ ಇರುತ್ತವೆ, ಬೇಸಿಗೆ ರಜೆ ಇಲ್ಲ – ಡಿಸಿಎಂ ಅಶ್ವತ್ಥನಾರಾಯಣ

“ವಿರೋಧ ಪಕ್ಷವಾಗಿ, ನಾವು ಸರ್ಕಾರಕ್ಕೆ ನಮ್ಮ ಬೆಂಬಲವನ್ನು ನೀಡಲು ಸಿದ್ಧರಿದ್ದೇವೆ. ಲಾಕ್‌ಡೌನ್ ಸಮಯದಲ್ಲಿ ಉದ್ಯೋಗ ನಷ್ಟ ಮತ್ತು ಜೀವನೋಪಾಯದ ಸಮಸ್ಯೆಗಳ ಬಗ್ಗೆ ಜನರ ಆತಂಕಗಳನ್ನು ನಿವಾರಿಸಲು ಸರ್ಕಾರವು ವಿವರವಾದ ಯೋಜನೆಯನ್ನು ರೂಪಿಸಬೇಕು” ಎಂದು ಫಡ್ನವೀಸ್ ಒತ್ತಾಯಿಸಿದರು.

ಎನ್‌ಸಿಪಿ ನಾಯಕ, ಸಚಿವ ನವಾಬ್ ಮಲಿಕ್, ಅಗತ್ಯವಿದ್ದರೆ ಸಂಪೂರ್ಣ ಲಾಕ್‌ಡೌನ್ ಅಥವಾ ಕಟ್ಟುನಿಟ್ಟಿನ ನಿರ್ಬಂಧಗಳ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಎಲ್ಲಾ ಪಕ್ಷಗಳು ಒಪ್ಪಿಕೊಂಡಿವೆ ಎಂದು ಹೇಳಿದ್ದಾರೆ.

ಕಾಂಗ್ರೆಸ್ ನಾಯಕ, ಸಚಿವ ಅಶೋಕ್ ಚವಾಣ್, “ಸಂಪೂರ್ಣ ಲಾಕ್‌ಡೌನ್ ಅನ್ನು ಹೇಗೆ ವಿಧಿಸಬೇಕು ಎಂಬುದರ ಕುರಿತು ಠಾಕ್ರೆ ಮಾರ್ಗಸೂಚಿಯನ್ನು ಸಿದ್ಧಪಡಿಸುತ್ತಿದ್ದಾರೆ. ಪ್ರಕರಣಗಳ ಸಂಖ್ಯೆ ಕಡಿಮೆಯಾಗಲು ಪ್ರಾರಂಭವಾದರೆ ನಿರ್ಬಂಧಗಳನ್ನು ಕ್ರಮೇಣ ಹಿಂತೆಗೆದುಕೊಳ್ಳಲಾಗುವುದು” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಬಿಜೆಪಿಗೂ, ಪ್ರಧಾನಿ ಮೋದಿಗೂ ಒಂದಷ್ಟು ಮಾನಸಿಕ ಚಿಕಿತ್ಸೆಯ ಅಗತ್ಯವಿದೆ: ಕಾಂಗ್ರೆಸ್ ತೀವ್ರ ವಾಗ್ದಾಳಿ

ಸಭೆಯಲ್ಲಿ ಆರೋಗ್ಯ ಇಲಾಖೆ ಅಧಿಕಾರಿಗಳು 15 ದಿನಗಳ ಲಾಕ್‌ಡೌನ್ ಪ್ರಸ್ತಾಪಿಸಿದ್ದಾರೆ ಎಂದು ಸರ್ಕಾರಿ ಮೂಲಗಳು ತಿಳಿಸಿವೆ. ನಿಖರವಾದ ಅವಧಿ 15 ದಿನಗಳು ಅಥವಾ ಏಪ್ರಿಲ್ ಅಂತ್ಯದವರೆಗೂ ಲಾಕ್‌ಡೌನ್‌ ಸಾಧ್ಯತೆ ಇದೆ ಎನ್ನಲಾಗಿದೆ. ಮುಖ್ಯಮಂತ್ರಿ ಉದ್ದವ್ ಠಾಕ್ರೆ ರಾಜ್ಯ ಕೋವಿಡ್ ಕಾರ್ಯಪಡೆಯೊಂದಿಗೆ ಭೇಟಿಯಾದ ನಂತರ ಭಾನುವಾರ ಘೋಷಿಸುವ ಸಾಧ್ಯತೆಯಿದೆ. ಸೋಮವಾರ ಸಂಜೆ ಸಂಪೂರ್ಣ ಲಾಕ್‌ಡೌನ್ ಜಾರಿಗೆ ಬರಬಹುದು ಎಂದು ಮೂಲಗಳು ತಿಳಿಸಿವೆ.

ಮಹಾರಾಷ್ಟ್ರದಲ್ಲಿ ಶನಿವಾರ 55,411 ಹೊಸ ಕೊರೊನಾ ಪ್ರಕರಣಗಳು ದಾಖಲಾಗಿದ್ದು, ಮುಂಬೈನಲ್ಲಿ 9,330 ಪ್ರಕರಣಗಳು ದಾಖಲಾಗಿವೆ. ಈ ವಾರ ರಾಜ್ಯದಲ್ಲಿ ಕಟ್ಟುನಿಟ್ಟಿನ ನಿರ್ಬಂಧ ಹೇರಿದ್ದರಿಂದ ರಾಜ್ಯದಾದ್ಯಂತ ಹೊಸ ಪ್ರಕರಣಗಳಲ್ಲಿ ಅಲ್ಪ ಕುಸಿತ ಕಂಡಿದೆ. ರಾಜ್ಯದಲ್ಲಿ 5.36 ಲಕ್ಷ ಸಕ್ರಿಯ ಪ್ರಕರಣದಳಿವೆ. ಕಳೆದ ನಾಲ್ಕು ದಿನಗಳಿಂದ ರಾಜ್ಯದಲ್ಲಿ 300 ಕ್ಕೂ ಹೆಚ್ಚು ಜನರು ಕೊರೊನಾದಿಂದಾಗಿ ಮೃತಪಟ್ಟಿದ್ದಾರೆ.

ಇದನ್ನೂ ಓದಿ: ಬಂಗಾಳದಲ್ಲಿ ಐವರು ಟಿಎಂಸಿ ಕಾರ್ಯಕರ್ತರಿಗೆ ಗುಂಡಿಕ್ಕಿ ಹತ್ಯೆ-ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...