Homeಕರೋನಾ ತಲ್ಲಣಮಹಾರಾಷ್ಟ್ರದಲ್ಲಿ ಸೋಮವಾರದಿಂದ 15 ದಿನಗಳ ಲಾಕ್‌ಡೌನ್‌ ಸಾಧ್ಯತೆ

ಮಹಾರಾಷ್ಟ್ರದಲ್ಲಿ ಸೋಮವಾರದಿಂದ 15 ದಿನಗಳ ಲಾಕ್‌ಡೌನ್‌ ಸಾಧ್ಯತೆ

- Advertisement -
- Advertisement -

ಕೊರೊನಾ ಹೆಚ್ಚಳದ ಹಿನ್ನಲೆಯಲ್ಲಿ ಮಹಾರಾಷ್ಟ್ರ ಸರ್ಕಾರವು ರಾಜ್ಯದಲ್ಲಿ ಕಳೆದ ಐದು ದಿನಗಳಿಂದ ಹಗಲಿನಲ್ಲಿ ಕಟ್ಟುನಿಟ್ಟಿನ ನಿರ್ಬಂಧಗಳು ಮತ್ತು ರಾತ್ರಿ ವೇಳೆ ಕರ್ಫ್ಯೂವನ್ನು ಘೋಷಿಸಿತ್ತು. ಜೊತೆಗೆ ವಾರಾಂತ್ಯದಲ್ಲಿ ಲಾಕ್‌ಡೌನ್ ಕೂಡಾ ಹೇರಲಾಗಿತ್ತು. ವಾರಾಂತ್ಯದ ಲಾಕ್‌ಡೌನ್‌‌ನನ್ನು ಗಮನಿಸಿರುವ ಮುಖ್ಯಮಂ‌ತ್ರಿ ಉದ್ದವ್ ಠಾಕ್ರೆ, ಕೊರೊನಾ ಹರಡುವುದನ್ನು ತಡೆಯಲು ಬೇಕಾಗಿ ಸೋಮವಾರದಿಂದ 15 ದಿನಗಳವರೆಗೆ ಲಾಕ್‌ಡೌನ್ ವಿಧಿಸುವ ಸಾಧ್ಯತೆ ಇದೆ ಎಂದು ಶನಿವಾರ ಸೂಚಿಸಿದ್ದಾರೆ.

ಶನಿವಾರ ನಡೆದ ಆಡಳಿತಾರೂಢ ಮೂರು ಮೈತ್ರಿ ಪಕ್ಷಗಳು ಮತ್ತು ಪ್ರತಿಪಕ್ಷಗಳ ಸಭೆಯಲ್ಲಿ, ರಾಜ್ಯ ಸರ್ಕಾರವು ತೆಗೆದುಕೊಳ್ಳುವ ಯಾವುದೇ ನಿರ್ಧಾರಕ್ಕೆ ಎಲ್ಲ ಪಕ್ಷಗಳ ಸಹಕಾರವನ್ನು ಕೋರಿದರು. ಮಾಜಿ ಮುಖ್ಯಮಂತ್ರಿ ಮತ್ತು ವಿರೋಧ ಪಕ್ಷದ ನಾಯಕ ದೇವೇಂದ್ರ ಫಡ್ನವೀಸ್ ಸೇರಿದಂತೆ ಹಾಜರಿದ್ದ ಎಲ್ಲರೂ ತಮ್ಮ ಬೆಂಬಲವನ್ನು ಮುಖ್ಯಮಂತ್ರಿಗೆ ನೀಡಿದ್ದಾರೆ.

ಇದನ್ನೂ ಓದಿ: ಪರೀಕ್ಷೆಗಳು ಇದ್ದೇ ಇರುತ್ತವೆ, ಬೇಸಿಗೆ ರಜೆ ಇಲ್ಲ – ಡಿಸಿಎಂ ಅಶ್ವತ್ಥನಾರಾಯಣ

“ವಿರೋಧ ಪಕ್ಷವಾಗಿ, ನಾವು ಸರ್ಕಾರಕ್ಕೆ ನಮ್ಮ ಬೆಂಬಲವನ್ನು ನೀಡಲು ಸಿದ್ಧರಿದ್ದೇವೆ. ಲಾಕ್‌ಡೌನ್ ಸಮಯದಲ್ಲಿ ಉದ್ಯೋಗ ನಷ್ಟ ಮತ್ತು ಜೀವನೋಪಾಯದ ಸಮಸ್ಯೆಗಳ ಬಗ್ಗೆ ಜನರ ಆತಂಕಗಳನ್ನು ನಿವಾರಿಸಲು ಸರ್ಕಾರವು ವಿವರವಾದ ಯೋಜನೆಯನ್ನು ರೂಪಿಸಬೇಕು” ಎಂದು ಫಡ್ನವೀಸ್ ಒತ್ತಾಯಿಸಿದರು.

ಎನ್‌ಸಿಪಿ ನಾಯಕ, ಸಚಿವ ನವಾಬ್ ಮಲಿಕ್, ಅಗತ್ಯವಿದ್ದರೆ ಸಂಪೂರ್ಣ ಲಾಕ್‌ಡೌನ್ ಅಥವಾ ಕಟ್ಟುನಿಟ್ಟಿನ ನಿರ್ಬಂಧಗಳ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಎಲ್ಲಾ ಪಕ್ಷಗಳು ಒಪ್ಪಿಕೊಂಡಿವೆ ಎಂದು ಹೇಳಿದ್ದಾರೆ.

ಕಾಂಗ್ರೆಸ್ ನಾಯಕ, ಸಚಿವ ಅಶೋಕ್ ಚವಾಣ್, “ಸಂಪೂರ್ಣ ಲಾಕ್‌ಡೌನ್ ಅನ್ನು ಹೇಗೆ ವಿಧಿಸಬೇಕು ಎಂಬುದರ ಕುರಿತು ಠಾಕ್ರೆ ಮಾರ್ಗಸೂಚಿಯನ್ನು ಸಿದ್ಧಪಡಿಸುತ್ತಿದ್ದಾರೆ. ಪ್ರಕರಣಗಳ ಸಂಖ್ಯೆ ಕಡಿಮೆಯಾಗಲು ಪ್ರಾರಂಭವಾದರೆ ನಿರ್ಬಂಧಗಳನ್ನು ಕ್ರಮೇಣ ಹಿಂತೆಗೆದುಕೊಳ್ಳಲಾಗುವುದು” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಬಿಜೆಪಿಗೂ, ಪ್ರಧಾನಿ ಮೋದಿಗೂ ಒಂದಷ್ಟು ಮಾನಸಿಕ ಚಿಕಿತ್ಸೆಯ ಅಗತ್ಯವಿದೆ: ಕಾಂಗ್ರೆಸ್ ತೀವ್ರ ವಾಗ್ದಾಳಿ

ಸಭೆಯಲ್ಲಿ ಆರೋಗ್ಯ ಇಲಾಖೆ ಅಧಿಕಾರಿಗಳು 15 ದಿನಗಳ ಲಾಕ್‌ಡೌನ್ ಪ್ರಸ್ತಾಪಿಸಿದ್ದಾರೆ ಎಂದು ಸರ್ಕಾರಿ ಮೂಲಗಳು ತಿಳಿಸಿವೆ. ನಿಖರವಾದ ಅವಧಿ 15 ದಿನಗಳು ಅಥವಾ ಏಪ್ರಿಲ್ ಅಂತ್ಯದವರೆಗೂ ಲಾಕ್‌ಡೌನ್‌ ಸಾಧ್ಯತೆ ಇದೆ ಎನ್ನಲಾಗಿದೆ. ಮುಖ್ಯಮಂತ್ರಿ ಉದ್ದವ್ ಠಾಕ್ರೆ ರಾಜ್ಯ ಕೋವಿಡ್ ಕಾರ್ಯಪಡೆಯೊಂದಿಗೆ ಭೇಟಿಯಾದ ನಂತರ ಭಾನುವಾರ ಘೋಷಿಸುವ ಸಾಧ್ಯತೆಯಿದೆ. ಸೋಮವಾರ ಸಂಜೆ ಸಂಪೂರ್ಣ ಲಾಕ್‌ಡೌನ್ ಜಾರಿಗೆ ಬರಬಹುದು ಎಂದು ಮೂಲಗಳು ತಿಳಿಸಿವೆ.

ಮಹಾರಾಷ್ಟ್ರದಲ್ಲಿ ಶನಿವಾರ 55,411 ಹೊಸ ಕೊರೊನಾ ಪ್ರಕರಣಗಳು ದಾಖಲಾಗಿದ್ದು, ಮುಂಬೈನಲ್ಲಿ 9,330 ಪ್ರಕರಣಗಳು ದಾಖಲಾಗಿವೆ. ಈ ವಾರ ರಾಜ್ಯದಲ್ಲಿ ಕಟ್ಟುನಿಟ್ಟಿನ ನಿರ್ಬಂಧ ಹೇರಿದ್ದರಿಂದ ರಾಜ್ಯದಾದ್ಯಂತ ಹೊಸ ಪ್ರಕರಣಗಳಲ್ಲಿ ಅಲ್ಪ ಕುಸಿತ ಕಂಡಿದೆ. ರಾಜ್ಯದಲ್ಲಿ 5.36 ಲಕ್ಷ ಸಕ್ರಿಯ ಪ್ರಕರಣದಳಿವೆ. ಕಳೆದ ನಾಲ್ಕು ದಿನಗಳಿಂದ ರಾಜ್ಯದಲ್ಲಿ 300 ಕ್ಕೂ ಹೆಚ್ಚು ಜನರು ಕೊರೊನಾದಿಂದಾಗಿ ಮೃತಪಟ್ಟಿದ್ದಾರೆ.

ಇದನ್ನೂ ಓದಿ: ಬಂಗಾಳದಲ್ಲಿ ಐವರು ಟಿಎಂಸಿ ಕಾರ್ಯಕರ್ತರಿಗೆ ಗುಂಡಿಕ್ಕಿ ಹತ್ಯೆ-ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...