Homeಕರ್ನಾಟಕಏಕಾಏಕಿ ಎತ್ತಂಗಡಿ: ಬೆಂಗಳೂರಿನಲ್ಲಿ ನೆಲೆಯಿಲ್ಲದೆ ಅಲೆಯುತ್ತಿರುವ 15 ಬಡ ಕುಟುಂಬಗಳು

ಏಕಾಏಕಿ ಎತ್ತಂಗಡಿ: ಬೆಂಗಳೂರಿನಲ್ಲಿ ನೆಲೆಯಿಲ್ಲದೆ ಅಲೆಯುತ್ತಿರುವ 15 ಬಡ ಕುಟುಂಬಗಳು

ಹೆಂಗಸರಿಗೆ ಶೌಚಕ್ಕೆ ಹೋಗಲು ಜಾಗವಿಲ್ಲ, 25 ಕ್ಕೂ ಹೆಚ್ಚು ಮಕ್ಕಳಿವೆ. ಇವನ್ನು ಕಟ್ಟಿಕೊಂಡು ನಾವು ಅಲೆದು ಅಲೆದು ಸುಸ್ತಾಗಿದ್ದೇವೆ. ದಯವಿಟ್ಟು ನಮಗೆ ಮಾಗಡಿ ರೋಡ್ ಟೋಲ್‌ ಗೇಟ್‌ ಬಳಿ ಬದುಕಲು ಅವಕಾಶ ನೀಡಿ..

- Advertisement -
- Advertisement -

ಬಲೂನ್ ಸೇರಿದಂತೆ ವಿವಧ ವಸ್ತುಗಳನ್ನು ವ್ಯಾಪಾರ ಮಾಡುತ್ತಾ ವಿಜಯನಗರ ಟೋಲ್‌ಗೇಟ್‌ ಮೆಟ್ರೋ ಕೆಳಗೆ ಟೆಂಟ್‌ಗಳಲ್ಲಿ ಜೀವನ ಸಾಗಿಸುತ್ತಿದ್ದ 15 ಬಡ ಕುಟುಂಬಗಳು ಈಗ ದಿಕ್ಕುಕಾಣದೇ ನೆಲೆಗಾಗಿ ಅಲೆಯುತ್ತಿದ್ದಾರೆ. ಹತ್ತಾರು ಮಕ್ಕಳನ್ನು ಕಟ್ಟಿಕೊಂಡು ಎಲ್ಲದರೂ ಉಳಿದುಕೊಳ್ಳಲು ಜಾಗ ಸಿಗುತ್ತದೆಯೇ ಎಂದು ಜಾತಕ ಪಕ್ಷಿಗಳಂತೆ ಹುಡುಕಾಡುತ್ತಿದ್ದಾರೆ.

ಮಧ್ಯಪ್ರದೇಶದಿಂದ ವಲಸೆ ಕಾರ್ಮಿಕರಾಗಿ ಬಂದ ಈ ಕುಟುಂಬಗಳು ಹಲವಾರು ವರ್ಷಗಳಿಂದ ಮೆಟ್ರೋ ಪಿಲ್ಲರ್‌ ಕೆಳಗೆ ಟೆಂಟ್‌ ಹಾಕಿಕೊಂಡು ಬದುಕುತ್ತಿದ್ದವು. ಬಲೂನ್ ಸೇರಿದಂತೆ ಸಣ್ಣ ಪುಟ್ಟ ವ್ಯಾಪಾರ ಮಾಡಿಕೊಂಡು ಹೊಟ್ಟೆ ಹೊರೆಯುತ್ತಿದ್ದರು. ಕೊರೊನಾ ಸಮಯಕ್ಕೆ ಹೇರಲಾದ ಲಾಕ್‌ಡೌನ್‌ ಸಮಯದಲ್ಲಿ ಕೆಲಸವಿಲ್ಲದೆ ಭಿಕ್ಷೆ ಬೇಡುವ ಪರಿಸ್ಥಿತಿಗೆ ದೂಕಲ್ಪಟ್ಟಿದ್ದರು. ನಂತರ ಕೆಸಿವಿಟಿ ಜನಸಹಾಯ ವತಿಯಿಂದ ಅವರಿಗೆ ರೇಷನ್ ಕಿಟ್ ನೀಡಿ, ಆರೋಗ್ಯ ತಪಾಸಣೆ ಮಾಡಲು ಮುಂದಾಗಿದ್ದರು. ಆದರೆ ಕಳೆದ 5-6 ದಿನಗಳ ಹಿಂದೆ ಪೊಲೀಸರು ನಮ್ಮನ್ನು ಏಕಾಏಕಿ ಎತ್ತಂಗಡಿ ಮಾಡಿದರು ಎಂದು ಆ ಬಡ ಕುಟುಂಬಗಳು ದೂರಿವೆ.

ಆ ಕುಟುಂಬಗಳು ಸದ್ಯಕ್ಕೆ ವೆಸ್ಟ್‌ ಆಫ್ ಕಾರ್ಡ್‌ ರೋಡ್‌ನಲ್ಲಿರುವ ದೋಬಿ ಘಾಟ್ ಸಿಗ್ನಲ್‌ನಲ್ಲಿ ಕಾಮಗಾರಿ ನಡೆಯುತ್ತಿರುವ ಫ್ಲೈ ಓವರ್‌ ಕೆಳಗೆ ಆಶ್ರಯ ಪಡೆದಿದ್ದಾರೆ. ಆದರೆ ಬಿಬಿಎಂಪಿಯ ಅಧಿಕಾರಿಗಳು ಅಲ್ಲಿಂದಲೂ ಎತ್ತಂಗಡಿ ಮಾಡಿಸಲು ಮುಂದಾಗಿದ್ದಾರೆ.. ಎಲ್ಲಾದರೂ ಹೋಗಿ 15 ದಿನ ಈ ಕಡೆ ಕಾಣಿಸಿಕೊಳ್ಳಬೇಡಿ ಎಂದು ಬೆದರಿಸಿದ್ದಾರೆ ಎಂದು ಆ ಕಾರ್ಮಿಕರು ಗೋಳು ತೋಡಿಕೊಂಡಿದ್ದಾರೆ.

ಈ ಲಾಕ್‌ಡೌನ್, ಕೊರೊನಾ ಹರಡುವ ಭಯದ ಸಂದರ್ಭದಲ್ಲಿ ಈ ಬಡಕುಟುಂಬಗಳು ಎಲ್ಲಿಗೆ ಹೋಗಲು ಸಾಧ್ಯ? ಅವರು ಮಾಡಿದ ಅಪರಾಧವಾದರೂ ಏನು? ಅವರಿಗೆ ಯಾಕೆ ಈ ಶಿಕ್ಷೆ ದಯವಿಟ್ಟು ಪೊಲೀಸರು ಮತ್ತು ಬಿಬಿಎಂಪಿಯವರು ಈ ಬಡಜನರಿಗೆ ತೊಂದರೆ ಕೊಡುವುದನ್ನು ನಿಲ್ಲಿಸಬೇಕು. ಮಾನವೀಯತೆಯ ದೃಷ್ಟಿಯಿಂದ ಆ ಜನರಿಗೆ ಕೂಡಲೇ ಸರ್ಕಾರದ ವತಿಯಿಂದ ತಾತ್ಕಾಲಿಕ ವ್ಯವಸ್ಥೆ ಮಾಡಬೇಕು. ಆಹಾರದ ಕಿಟ್‌ಗಳನ್ನು ಕೊಡಬೇಕು ಎಂಬ ಒತ್ತಾಯ ಕೇಳಿಬಂದಿದೆ.

ಗಂಡಸರನ್ನು ಜೈಲಿಗೆ ಹಾಕುತ್ತೇವೆ

ನಾವು 15 ವರ್ಷದಿಂದ ಟೋಲ್‌ಗೇಟ್‌ನಲ್ಲಿ ಬದುಕುತ್ತಿದ್ದೇವೆ. ನಮ್ಮ ಕುಟುಂಬಗಳ ಕೆಲವು ಮಕ್ಕಳು ಡಾನ್‌ ಬಾಸ್ಕೊ ಸೇರಿದಂತೆ ವಿವಿದೆಡೆ ಶಿಕ್ಷಣ ಪಡೆಯುತ್ತಿದ್ದಾರೆ.  ಹಾಗೆಯೇ ಟೋಲ್‌ಗೇಟ್‌ ಸುತ್ತಮುತ್ತಲ ಶಾಲೆಗಳಿಗೆ ನಮ್ಮ ಮಕ್ಕಳನ್ನು ಸೇರಿಸಿದ್ದೇವೆ. ಈಗ ಏಕಾಏಕಿ ನಮ್ಮನ್ನು ಎತ್ತಂಗಡಿ ಮಾಡಿದ್ದಾರೆ. ಇಲ್ಲಿ ನಮಗೆ ಕುಡಿಯುವ ನೀರು, ಶೌಚಾಲಯ ಏನೂ ಇಲ್ಲ. ಪೊಲೀಸರು ಬಂದು ಮಕ್ಕಳನ್ನು ಬಾಲಾಶ್ರಮಕ್ಕೆ, ಮಹಿಳೆಯರನ್ನು ಅನಾಥಶ್ರಮಕ್ಕೆ ಸೇರಿಸುತ್ತೇವೆ, ಗಂಡಸರನ್ನು ಜೈಲಿಗೆ ಕಳಿಸುತ್ತೇವೆ ಎಂದು ಬೆದರಿಸುತ್ತಿದ್ದಾರೆ. ನಮ್ಮಲ್ಲಿ ಕೆಲವರು ಹೆದರಿ ಊರಿಗೆ ಹೋಗಿದ್ದಾರೆ. ನಮಗೆ ಹೋಗಲು ಸಾಧ್ಯವಿಲ್ಲ ಎಂದು ಅಲ್ಲಿನಿ ನಿವಾಸಿ ಸುಮೇರ್ ಅಳಲು ತೋಡಿಕೊಂಡಿದ್ದಾರೆ.

ಹೆಂಗಸರಿಗೆ ಶೌಚಕ್ಕೆ ಹೋಗಲು ಜಾಗವಿಲ್ಲ, 25 ಕ್ಕೂ ಹೆಚ್ಚು ಮಕ್ಕಳಿವೆ. ಇವನ್ನು ಕಟ್ಟಿಕೊಂಡು ನಾವು ಅಲೆದು ಅಲೆದು ಸುಸ್ತಾಗಿದ್ದೇವೆ. ದಯವಿಟ್ಟು ನಮಗೆ ಮಾಗಡಿ ರೋಡ್ ಟೋಲ್‌ ಗೇಟ್‌ ಬಳಿ ಬದುಕಲು ಅವಕಾಶ ನೀಡಿ ಮಹಿಳೆಯರು ಮನವಿ ಮಾಡಿದ್ದಾರೆ.

ಕೂಡಲೇ ಬಿಬಿಎಂಪಿ ಅಧಿಕಾರಿಗಳು ಇತ್ತ ಗಮನಹರಿಸಿ ಈ ಬಡ ಕುಟುಂಬಗಳನ್ನು ರಕ್ಷಿಸಬೇಕಾಗಿದೆ.


ಇದನ್ನೂ ಓದಿ: ಖಾಸಗಿ ಆಸ್ಪತ್ರೆಗಳು ಹೊಟೇಲ್‌ಗಳ ಜೊತೆ ಸೇರಿ ಲಸಿಕೆ ಪ್ಯಾಕೇಜ್ ನೀಡುವಂತಿಲ್ಲ: ಕೇಂದ್ರ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...