Homeಕರ್ನಾಟಕಏಕಾಏಕಿ ಎತ್ತಂಗಡಿ: ಬೆಂಗಳೂರಿನಲ್ಲಿ ನೆಲೆಯಿಲ್ಲದೆ ಅಲೆಯುತ್ತಿರುವ 15 ಬಡ ಕುಟುಂಬಗಳು

ಏಕಾಏಕಿ ಎತ್ತಂಗಡಿ: ಬೆಂಗಳೂರಿನಲ್ಲಿ ನೆಲೆಯಿಲ್ಲದೆ ಅಲೆಯುತ್ತಿರುವ 15 ಬಡ ಕುಟುಂಬಗಳು

ಹೆಂಗಸರಿಗೆ ಶೌಚಕ್ಕೆ ಹೋಗಲು ಜಾಗವಿಲ್ಲ, 25 ಕ್ಕೂ ಹೆಚ್ಚು ಮಕ್ಕಳಿವೆ. ಇವನ್ನು ಕಟ್ಟಿಕೊಂಡು ನಾವು ಅಲೆದು ಅಲೆದು ಸುಸ್ತಾಗಿದ್ದೇವೆ. ದಯವಿಟ್ಟು ನಮಗೆ ಮಾಗಡಿ ರೋಡ್ ಟೋಲ್‌ ಗೇಟ್‌ ಬಳಿ ಬದುಕಲು ಅವಕಾಶ ನೀಡಿ..

- Advertisement -
- Advertisement -

ಬಲೂನ್ ಸೇರಿದಂತೆ ವಿವಧ ವಸ್ತುಗಳನ್ನು ವ್ಯಾಪಾರ ಮಾಡುತ್ತಾ ವಿಜಯನಗರ ಟೋಲ್‌ಗೇಟ್‌ ಮೆಟ್ರೋ ಕೆಳಗೆ ಟೆಂಟ್‌ಗಳಲ್ಲಿ ಜೀವನ ಸಾಗಿಸುತ್ತಿದ್ದ 15 ಬಡ ಕುಟುಂಬಗಳು ಈಗ ದಿಕ್ಕುಕಾಣದೇ ನೆಲೆಗಾಗಿ ಅಲೆಯುತ್ತಿದ್ದಾರೆ. ಹತ್ತಾರು ಮಕ್ಕಳನ್ನು ಕಟ್ಟಿಕೊಂಡು ಎಲ್ಲದರೂ ಉಳಿದುಕೊಳ್ಳಲು ಜಾಗ ಸಿಗುತ್ತದೆಯೇ ಎಂದು ಜಾತಕ ಪಕ್ಷಿಗಳಂತೆ ಹುಡುಕಾಡುತ್ತಿದ್ದಾರೆ.

ಮಧ್ಯಪ್ರದೇಶದಿಂದ ವಲಸೆ ಕಾರ್ಮಿಕರಾಗಿ ಬಂದ ಈ ಕುಟುಂಬಗಳು ಹಲವಾರು ವರ್ಷಗಳಿಂದ ಮೆಟ್ರೋ ಪಿಲ್ಲರ್‌ ಕೆಳಗೆ ಟೆಂಟ್‌ ಹಾಕಿಕೊಂಡು ಬದುಕುತ್ತಿದ್ದವು. ಬಲೂನ್ ಸೇರಿದಂತೆ ಸಣ್ಣ ಪುಟ್ಟ ವ್ಯಾಪಾರ ಮಾಡಿಕೊಂಡು ಹೊಟ್ಟೆ ಹೊರೆಯುತ್ತಿದ್ದರು. ಕೊರೊನಾ ಸಮಯಕ್ಕೆ ಹೇರಲಾದ ಲಾಕ್‌ಡೌನ್‌ ಸಮಯದಲ್ಲಿ ಕೆಲಸವಿಲ್ಲದೆ ಭಿಕ್ಷೆ ಬೇಡುವ ಪರಿಸ್ಥಿತಿಗೆ ದೂಕಲ್ಪಟ್ಟಿದ್ದರು. ನಂತರ ಕೆಸಿವಿಟಿ ಜನಸಹಾಯ ವತಿಯಿಂದ ಅವರಿಗೆ ರೇಷನ್ ಕಿಟ್ ನೀಡಿ, ಆರೋಗ್ಯ ತಪಾಸಣೆ ಮಾಡಲು ಮುಂದಾಗಿದ್ದರು. ಆದರೆ ಕಳೆದ 5-6 ದಿನಗಳ ಹಿಂದೆ ಪೊಲೀಸರು ನಮ್ಮನ್ನು ಏಕಾಏಕಿ ಎತ್ತಂಗಡಿ ಮಾಡಿದರು ಎಂದು ಆ ಬಡ ಕುಟುಂಬಗಳು ದೂರಿವೆ.

ಆ ಕುಟುಂಬಗಳು ಸದ್ಯಕ್ಕೆ ವೆಸ್ಟ್‌ ಆಫ್ ಕಾರ್ಡ್‌ ರೋಡ್‌ನಲ್ಲಿರುವ ದೋಬಿ ಘಾಟ್ ಸಿಗ್ನಲ್‌ನಲ್ಲಿ ಕಾಮಗಾರಿ ನಡೆಯುತ್ತಿರುವ ಫ್ಲೈ ಓವರ್‌ ಕೆಳಗೆ ಆಶ್ರಯ ಪಡೆದಿದ್ದಾರೆ. ಆದರೆ ಬಿಬಿಎಂಪಿಯ ಅಧಿಕಾರಿಗಳು ಅಲ್ಲಿಂದಲೂ ಎತ್ತಂಗಡಿ ಮಾಡಿಸಲು ಮುಂದಾಗಿದ್ದಾರೆ.. ಎಲ್ಲಾದರೂ ಹೋಗಿ 15 ದಿನ ಈ ಕಡೆ ಕಾಣಿಸಿಕೊಳ್ಳಬೇಡಿ ಎಂದು ಬೆದರಿಸಿದ್ದಾರೆ ಎಂದು ಆ ಕಾರ್ಮಿಕರು ಗೋಳು ತೋಡಿಕೊಂಡಿದ್ದಾರೆ.

ಈ ಲಾಕ್‌ಡೌನ್, ಕೊರೊನಾ ಹರಡುವ ಭಯದ ಸಂದರ್ಭದಲ್ಲಿ ಈ ಬಡಕುಟುಂಬಗಳು ಎಲ್ಲಿಗೆ ಹೋಗಲು ಸಾಧ್ಯ? ಅವರು ಮಾಡಿದ ಅಪರಾಧವಾದರೂ ಏನು? ಅವರಿಗೆ ಯಾಕೆ ಈ ಶಿಕ್ಷೆ ದಯವಿಟ್ಟು ಪೊಲೀಸರು ಮತ್ತು ಬಿಬಿಎಂಪಿಯವರು ಈ ಬಡಜನರಿಗೆ ತೊಂದರೆ ಕೊಡುವುದನ್ನು ನಿಲ್ಲಿಸಬೇಕು. ಮಾನವೀಯತೆಯ ದೃಷ್ಟಿಯಿಂದ ಆ ಜನರಿಗೆ ಕೂಡಲೇ ಸರ್ಕಾರದ ವತಿಯಿಂದ ತಾತ್ಕಾಲಿಕ ವ್ಯವಸ್ಥೆ ಮಾಡಬೇಕು. ಆಹಾರದ ಕಿಟ್‌ಗಳನ್ನು ಕೊಡಬೇಕು ಎಂಬ ಒತ್ತಾಯ ಕೇಳಿಬಂದಿದೆ.

ಗಂಡಸರನ್ನು ಜೈಲಿಗೆ ಹಾಕುತ್ತೇವೆ

ನಾವು 15 ವರ್ಷದಿಂದ ಟೋಲ್‌ಗೇಟ್‌ನಲ್ಲಿ ಬದುಕುತ್ತಿದ್ದೇವೆ. ನಮ್ಮ ಕುಟುಂಬಗಳ ಕೆಲವು ಮಕ್ಕಳು ಡಾನ್‌ ಬಾಸ್ಕೊ ಸೇರಿದಂತೆ ವಿವಿದೆಡೆ ಶಿಕ್ಷಣ ಪಡೆಯುತ್ತಿದ್ದಾರೆ.  ಹಾಗೆಯೇ ಟೋಲ್‌ಗೇಟ್‌ ಸುತ್ತಮುತ್ತಲ ಶಾಲೆಗಳಿಗೆ ನಮ್ಮ ಮಕ್ಕಳನ್ನು ಸೇರಿಸಿದ್ದೇವೆ. ಈಗ ಏಕಾಏಕಿ ನಮ್ಮನ್ನು ಎತ್ತಂಗಡಿ ಮಾಡಿದ್ದಾರೆ. ಇಲ್ಲಿ ನಮಗೆ ಕುಡಿಯುವ ನೀರು, ಶೌಚಾಲಯ ಏನೂ ಇಲ್ಲ. ಪೊಲೀಸರು ಬಂದು ಮಕ್ಕಳನ್ನು ಬಾಲಾಶ್ರಮಕ್ಕೆ, ಮಹಿಳೆಯರನ್ನು ಅನಾಥಶ್ರಮಕ್ಕೆ ಸೇರಿಸುತ್ತೇವೆ, ಗಂಡಸರನ್ನು ಜೈಲಿಗೆ ಕಳಿಸುತ್ತೇವೆ ಎಂದು ಬೆದರಿಸುತ್ತಿದ್ದಾರೆ. ನಮ್ಮಲ್ಲಿ ಕೆಲವರು ಹೆದರಿ ಊರಿಗೆ ಹೋಗಿದ್ದಾರೆ. ನಮಗೆ ಹೋಗಲು ಸಾಧ್ಯವಿಲ್ಲ ಎಂದು ಅಲ್ಲಿನಿ ನಿವಾಸಿ ಸುಮೇರ್ ಅಳಲು ತೋಡಿಕೊಂಡಿದ್ದಾರೆ.

ಹೆಂಗಸರಿಗೆ ಶೌಚಕ್ಕೆ ಹೋಗಲು ಜಾಗವಿಲ್ಲ, 25 ಕ್ಕೂ ಹೆಚ್ಚು ಮಕ್ಕಳಿವೆ. ಇವನ್ನು ಕಟ್ಟಿಕೊಂಡು ನಾವು ಅಲೆದು ಅಲೆದು ಸುಸ್ತಾಗಿದ್ದೇವೆ. ದಯವಿಟ್ಟು ನಮಗೆ ಮಾಗಡಿ ರೋಡ್ ಟೋಲ್‌ ಗೇಟ್‌ ಬಳಿ ಬದುಕಲು ಅವಕಾಶ ನೀಡಿ ಮಹಿಳೆಯರು ಮನವಿ ಮಾಡಿದ್ದಾರೆ.

ಕೂಡಲೇ ಬಿಬಿಎಂಪಿ ಅಧಿಕಾರಿಗಳು ಇತ್ತ ಗಮನಹರಿಸಿ ಈ ಬಡ ಕುಟುಂಬಗಳನ್ನು ರಕ್ಷಿಸಬೇಕಾಗಿದೆ.


ಇದನ್ನೂ ಓದಿ: ಖಾಸಗಿ ಆಸ್ಪತ್ರೆಗಳು ಹೊಟೇಲ್‌ಗಳ ಜೊತೆ ಸೇರಿ ಲಸಿಕೆ ಪ್ಯಾಕೇಜ್ ನೀಡುವಂತಿಲ್ಲ: ಕೇಂದ್ರ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...

ಕೊಲ್ಕತ್ತಾದ 26 ಲಕ್ಷ ಮತದಾರರ ಹೆಸರು 2002 ರ ಪಟ್ಟಿಗೆ ಹೊಂದಿಕೆಯಾಗುತ್ತಿಲ್ಲ: ಮುಖ್ಯ ಚುನಾವಣಾ ಅಧಿಕಾರಿ

ಕೋಲ್ಕತ್ತಾ ಮತ್ತು ಸುತ್ತಮುತ್ತಲಿನ ಹಲವಾರು ವಿಧಾನಸಭಾ ಕ್ಷೇತ್ರಗಳ ಮತದಾರರ ಹೆಸರುಗಳು 2002 ರ ಮತದಾರರ ಪಟ್ಟಿಯಲ್ಲಿರುವ ನಮೂದುಗಳಿಗೆ ಹೊಂದಿಕೆಯಾಗುತ್ತಿಲ್ಲ ಎಂದು ಮುಖ್ಯ ಚುನಾವಣಾ ಅಧಿಕಾರಿ ಮನೋಜ್ ಕುಮಾರ್ ಅಗರ್ವಾಲ್ ಕಚೇರಿಯ ಅಧಿಕಾರಿಗಳು ತಿಳಿಸಿದ್ದಾರೆ...

ಮೊದಲ ಪತ್ನಿಗೆ ಮುಸ್ಲಿಂ ಪತಿ ಜೀವನಾಂಶ ನಿರಾಕರಿಸುವಂತಿಲ್ಲ: ಕೇರಳ ಹೈಕೋರ್ಟ್

ಎರಡನೇ ಪತ್ನಿಯ ಮೇಲಿನ ಆರ್ಥಿಕ ಜವಾಬ್ದಾರಿ ಕುರಿತ ಮಹತ್ವದ ತೀರ್ಪಿನಲ್ಲಿ, ಮುಸ್ಲಿಂ ಪುರುಷನು ತನ್ನ ಮೊದಲ ಪತ್ನಿಗೆ ಜೀವನಾಂಶ ಪಾವತಿಸುವುದನ್ನು ತಪ್ಪಿಸಲು ಸಾಧ್ಯವಿಲ್ಲ ಎಂದು ಕೇರಳ ಹೈಕೋರ್ಟ್ ಹೇಳಿದೆ. ಎಲ್ಲ ಪತ್ನಿಯರನ್ನು ಸಮಾನವಾಗಿ...

ಆಸ್ಪತ್ರೆಗಳು ಕಡ್ಡಾಯವಾಗಿ ದರಪಟ್ಟಿ ಪ್ರದರ್ಶಿಸಬೇಕು, ಹಣ ಪಾವತಿಸದ ಕಾರಣ ತುರ್ತು ಆರೈಕೆ ನಿರಾಕರಿಸುವಂತಿಲ್ಲ : ಕಾನೂನು ಎತ್ತಿ ಹಿಡಿದ ಹೈಕೋರ್ಟ್

ಕೇರಳ ವೈದ್ಯಕೀಯ ಸಂಸ್ಥೆಗಳ ಕಾಯ್ದೆ ಮತ್ತು ನಿಬಂಧನೆಗಳನ್ನು ಎತ್ತಿಹಿಡಿದ ಹೈಕೋರ್ಟ್‌ನ ಏಕ ಸದಸ್ಯ ಪೀಠದ ಆದೇಶದ ವಿರುದ್ಧ ಭಾರತೀಯ ವೈದ್ಯಕೀಯ ಸಂಘ (ಐಎಂಎ) ಮತ್ತು ಕೇರಳ ಖಾಸಗಿ ಆಸ್ಪತ್ರೆಗಳ ಸಂಘ ಸಲ್ಲಿಸಿದ್ದ ಮೇಲ್ಮನವಿಗಳನ್ನು...

ಎಸ್‌ಐಆರ್‌ನ ನಿಜವಾದ ಉದ್ದೇಶ ಎನ್‌ಆರ್‌ಸಿ : ಮಮತಾ ಬ್ಯಾನರ್ಜಿ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್‌) ಹಿಂದಿನ ಕೇಂದ್ರ ಸರ್ಕಾರದ ನಿಜವಾದ ಉದ್ದೇಶ ರಾಷ್ಟ್ರೀಯ ನಾಗರಿಕರ ನೋಂದಣಿ (ಎನ್‌ಆರ್‌ಸಿ) ಮಾಡುವುದು ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ (ನವೆಂಬರ್...