Homeಕರ್ನಾಟಕಏಕಾಏಕಿ ಎತ್ತಂಗಡಿ: ಬೆಂಗಳೂರಿನಲ್ಲಿ ನೆಲೆಯಿಲ್ಲದೆ ಅಲೆಯುತ್ತಿರುವ 15 ಬಡ ಕುಟುಂಬಗಳು

ಏಕಾಏಕಿ ಎತ್ತಂಗಡಿ: ಬೆಂಗಳೂರಿನಲ್ಲಿ ನೆಲೆಯಿಲ್ಲದೆ ಅಲೆಯುತ್ತಿರುವ 15 ಬಡ ಕುಟುಂಬಗಳು

ಹೆಂಗಸರಿಗೆ ಶೌಚಕ್ಕೆ ಹೋಗಲು ಜಾಗವಿಲ್ಲ, 25 ಕ್ಕೂ ಹೆಚ್ಚು ಮಕ್ಕಳಿವೆ. ಇವನ್ನು ಕಟ್ಟಿಕೊಂಡು ನಾವು ಅಲೆದು ಅಲೆದು ಸುಸ್ತಾಗಿದ್ದೇವೆ. ದಯವಿಟ್ಟು ನಮಗೆ ಮಾಗಡಿ ರೋಡ್ ಟೋಲ್‌ ಗೇಟ್‌ ಬಳಿ ಬದುಕಲು ಅವಕಾಶ ನೀಡಿ..

- Advertisement -
- Advertisement -

ಬಲೂನ್ ಸೇರಿದಂತೆ ವಿವಧ ವಸ್ತುಗಳನ್ನು ವ್ಯಾಪಾರ ಮಾಡುತ್ತಾ ವಿಜಯನಗರ ಟೋಲ್‌ಗೇಟ್‌ ಮೆಟ್ರೋ ಕೆಳಗೆ ಟೆಂಟ್‌ಗಳಲ್ಲಿ ಜೀವನ ಸಾಗಿಸುತ್ತಿದ್ದ 15 ಬಡ ಕುಟುಂಬಗಳು ಈಗ ದಿಕ್ಕುಕಾಣದೇ ನೆಲೆಗಾಗಿ ಅಲೆಯುತ್ತಿದ್ದಾರೆ. ಹತ್ತಾರು ಮಕ್ಕಳನ್ನು ಕಟ್ಟಿಕೊಂಡು ಎಲ್ಲದರೂ ಉಳಿದುಕೊಳ್ಳಲು ಜಾಗ ಸಿಗುತ್ತದೆಯೇ ಎಂದು ಜಾತಕ ಪಕ್ಷಿಗಳಂತೆ ಹುಡುಕಾಡುತ್ತಿದ್ದಾರೆ.

ಮಧ್ಯಪ್ರದೇಶದಿಂದ ವಲಸೆ ಕಾರ್ಮಿಕರಾಗಿ ಬಂದ ಈ ಕುಟುಂಬಗಳು ಹಲವಾರು ವರ್ಷಗಳಿಂದ ಮೆಟ್ರೋ ಪಿಲ್ಲರ್‌ ಕೆಳಗೆ ಟೆಂಟ್‌ ಹಾಕಿಕೊಂಡು ಬದುಕುತ್ತಿದ್ದವು. ಬಲೂನ್ ಸೇರಿದಂತೆ ಸಣ್ಣ ಪುಟ್ಟ ವ್ಯಾಪಾರ ಮಾಡಿಕೊಂಡು ಹೊಟ್ಟೆ ಹೊರೆಯುತ್ತಿದ್ದರು. ಕೊರೊನಾ ಸಮಯಕ್ಕೆ ಹೇರಲಾದ ಲಾಕ್‌ಡೌನ್‌ ಸಮಯದಲ್ಲಿ ಕೆಲಸವಿಲ್ಲದೆ ಭಿಕ್ಷೆ ಬೇಡುವ ಪರಿಸ್ಥಿತಿಗೆ ದೂಕಲ್ಪಟ್ಟಿದ್ದರು. ನಂತರ ಕೆಸಿವಿಟಿ ಜನಸಹಾಯ ವತಿಯಿಂದ ಅವರಿಗೆ ರೇಷನ್ ಕಿಟ್ ನೀಡಿ, ಆರೋಗ್ಯ ತಪಾಸಣೆ ಮಾಡಲು ಮುಂದಾಗಿದ್ದರು. ಆದರೆ ಕಳೆದ 5-6 ದಿನಗಳ ಹಿಂದೆ ಪೊಲೀಸರು ನಮ್ಮನ್ನು ಏಕಾಏಕಿ ಎತ್ತಂಗಡಿ ಮಾಡಿದರು ಎಂದು ಆ ಬಡ ಕುಟುಂಬಗಳು ದೂರಿವೆ.

ಆ ಕುಟುಂಬಗಳು ಸದ್ಯಕ್ಕೆ ವೆಸ್ಟ್‌ ಆಫ್ ಕಾರ್ಡ್‌ ರೋಡ್‌ನಲ್ಲಿರುವ ದೋಬಿ ಘಾಟ್ ಸಿಗ್ನಲ್‌ನಲ್ಲಿ ಕಾಮಗಾರಿ ನಡೆಯುತ್ತಿರುವ ಫ್ಲೈ ಓವರ್‌ ಕೆಳಗೆ ಆಶ್ರಯ ಪಡೆದಿದ್ದಾರೆ. ಆದರೆ ಬಿಬಿಎಂಪಿಯ ಅಧಿಕಾರಿಗಳು ಅಲ್ಲಿಂದಲೂ ಎತ್ತಂಗಡಿ ಮಾಡಿಸಲು ಮುಂದಾಗಿದ್ದಾರೆ.. ಎಲ್ಲಾದರೂ ಹೋಗಿ 15 ದಿನ ಈ ಕಡೆ ಕಾಣಿಸಿಕೊಳ್ಳಬೇಡಿ ಎಂದು ಬೆದರಿಸಿದ್ದಾರೆ ಎಂದು ಆ ಕಾರ್ಮಿಕರು ಗೋಳು ತೋಡಿಕೊಂಡಿದ್ದಾರೆ.

ಈ ಲಾಕ್‌ಡೌನ್, ಕೊರೊನಾ ಹರಡುವ ಭಯದ ಸಂದರ್ಭದಲ್ಲಿ ಈ ಬಡಕುಟುಂಬಗಳು ಎಲ್ಲಿಗೆ ಹೋಗಲು ಸಾಧ್ಯ? ಅವರು ಮಾಡಿದ ಅಪರಾಧವಾದರೂ ಏನು? ಅವರಿಗೆ ಯಾಕೆ ಈ ಶಿಕ್ಷೆ ದಯವಿಟ್ಟು ಪೊಲೀಸರು ಮತ್ತು ಬಿಬಿಎಂಪಿಯವರು ಈ ಬಡಜನರಿಗೆ ತೊಂದರೆ ಕೊಡುವುದನ್ನು ನಿಲ್ಲಿಸಬೇಕು. ಮಾನವೀಯತೆಯ ದೃಷ್ಟಿಯಿಂದ ಆ ಜನರಿಗೆ ಕೂಡಲೇ ಸರ್ಕಾರದ ವತಿಯಿಂದ ತಾತ್ಕಾಲಿಕ ವ್ಯವಸ್ಥೆ ಮಾಡಬೇಕು. ಆಹಾರದ ಕಿಟ್‌ಗಳನ್ನು ಕೊಡಬೇಕು ಎಂಬ ಒತ್ತಾಯ ಕೇಳಿಬಂದಿದೆ.

ಗಂಡಸರನ್ನು ಜೈಲಿಗೆ ಹಾಕುತ್ತೇವೆ

ನಾವು 15 ವರ್ಷದಿಂದ ಟೋಲ್‌ಗೇಟ್‌ನಲ್ಲಿ ಬದುಕುತ್ತಿದ್ದೇವೆ. ನಮ್ಮ ಕುಟುಂಬಗಳ ಕೆಲವು ಮಕ್ಕಳು ಡಾನ್‌ ಬಾಸ್ಕೊ ಸೇರಿದಂತೆ ವಿವಿದೆಡೆ ಶಿಕ್ಷಣ ಪಡೆಯುತ್ತಿದ್ದಾರೆ.  ಹಾಗೆಯೇ ಟೋಲ್‌ಗೇಟ್‌ ಸುತ್ತಮುತ್ತಲ ಶಾಲೆಗಳಿಗೆ ನಮ್ಮ ಮಕ್ಕಳನ್ನು ಸೇರಿಸಿದ್ದೇವೆ. ಈಗ ಏಕಾಏಕಿ ನಮ್ಮನ್ನು ಎತ್ತಂಗಡಿ ಮಾಡಿದ್ದಾರೆ. ಇಲ್ಲಿ ನಮಗೆ ಕುಡಿಯುವ ನೀರು, ಶೌಚಾಲಯ ಏನೂ ಇಲ್ಲ. ಪೊಲೀಸರು ಬಂದು ಮಕ್ಕಳನ್ನು ಬಾಲಾಶ್ರಮಕ್ಕೆ, ಮಹಿಳೆಯರನ್ನು ಅನಾಥಶ್ರಮಕ್ಕೆ ಸೇರಿಸುತ್ತೇವೆ, ಗಂಡಸರನ್ನು ಜೈಲಿಗೆ ಕಳಿಸುತ್ತೇವೆ ಎಂದು ಬೆದರಿಸುತ್ತಿದ್ದಾರೆ. ನಮ್ಮಲ್ಲಿ ಕೆಲವರು ಹೆದರಿ ಊರಿಗೆ ಹೋಗಿದ್ದಾರೆ. ನಮಗೆ ಹೋಗಲು ಸಾಧ್ಯವಿಲ್ಲ ಎಂದು ಅಲ್ಲಿನಿ ನಿವಾಸಿ ಸುಮೇರ್ ಅಳಲು ತೋಡಿಕೊಂಡಿದ್ದಾರೆ.

ಹೆಂಗಸರಿಗೆ ಶೌಚಕ್ಕೆ ಹೋಗಲು ಜಾಗವಿಲ್ಲ, 25 ಕ್ಕೂ ಹೆಚ್ಚು ಮಕ್ಕಳಿವೆ. ಇವನ್ನು ಕಟ್ಟಿಕೊಂಡು ನಾವು ಅಲೆದು ಅಲೆದು ಸುಸ್ತಾಗಿದ್ದೇವೆ. ದಯವಿಟ್ಟು ನಮಗೆ ಮಾಗಡಿ ರೋಡ್ ಟೋಲ್‌ ಗೇಟ್‌ ಬಳಿ ಬದುಕಲು ಅವಕಾಶ ನೀಡಿ ಮಹಿಳೆಯರು ಮನವಿ ಮಾಡಿದ್ದಾರೆ.

ಕೂಡಲೇ ಬಿಬಿಎಂಪಿ ಅಧಿಕಾರಿಗಳು ಇತ್ತ ಗಮನಹರಿಸಿ ಈ ಬಡ ಕುಟುಂಬಗಳನ್ನು ರಕ್ಷಿಸಬೇಕಾಗಿದೆ.


ಇದನ್ನೂ ಓದಿ: ಖಾಸಗಿ ಆಸ್ಪತ್ರೆಗಳು ಹೊಟೇಲ್‌ಗಳ ಜೊತೆ ಸೇರಿ ಲಸಿಕೆ ಪ್ಯಾಕೇಜ್ ನೀಡುವಂತಿಲ್ಲ: ಕೇಂದ್ರ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...