Homeಕರ್ನಾಟಕಏಕಾಏಕಿ ಎತ್ತಂಗಡಿ: ಬೆಂಗಳೂರಿನಲ್ಲಿ ನೆಲೆಯಿಲ್ಲದೆ ಅಲೆಯುತ್ತಿರುವ 15 ಬಡ ಕುಟುಂಬಗಳು

ಏಕಾಏಕಿ ಎತ್ತಂಗಡಿ: ಬೆಂಗಳೂರಿನಲ್ಲಿ ನೆಲೆಯಿಲ್ಲದೆ ಅಲೆಯುತ್ತಿರುವ 15 ಬಡ ಕುಟುಂಬಗಳು

ಹೆಂಗಸರಿಗೆ ಶೌಚಕ್ಕೆ ಹೋಗಲು ಜಾಗವಿಲ್ಲ, 25 ಕ್ಕೂ ಹೆಚ್ಚು ಮಕ್ಕಳಿವೆ. ಇವನ್ನು ಕಟ್ಟಿಕೊಂಡು ನಾವು ಅಲೆದು ಅಲೆದು ಸುಸ್ತಾಗಿದ್ದೇವೆ. ದಯವಿಟ್ಟು ನಮಗೆ ಮಾಗಡಿ ರೋಡ್ ಟೋಲ್‌ ಗೇಟ್‌ ಬಳಿ ಬದುಕಲು ಅವಕಾಶ ನೀಡಿ..

- Advertisement -
- Advertisement -

ಬಲೂನ್ ಸೇರಿದಂತೆ ವಿವಧ ವಸ್ತುಗಳನ್ನು ವ್ಯಾಪಾರ ಮಾಡುತ್ತಾ ವಿಜಯನಗರ ಟೋಲ್‌ಗೇಟ್‌ ಮೆಟ್ರೋ ಕೆಳಗೆ ಟೆಂಟ್‌ಗಳಲ್ಲಿ ಜೀವನ ಸಾಗಿಸುತ್ತಿದ್ದ 15 ಬಡ ಕುಟುಂಬಗಳು ಈಗ ದಿಕ್ಕುಕಾಣದೇ ನೆಲೆಗಾಗಿ ಅಲೆಯುತ್ತಿದ್ದಾರೆ. ಹತ್ತಾರು ಮಕ್ಕಳನ್ನು ಕಟ್ಟಿಕೊಂಡು ಎಲ್ಲದರೂ ಉಳಿದುಕೊಳ್ಳಲು ಜಾಗ ಸಿಗುತ್ತದೆಯೇ ಎಂದು ಜಾತಕ ಪಕ್ಷಿಗಳಂತೆ ಹುಡುಕಾಡುತ್ತಿದ್ದಾರೆ.

ಮಧ್ಯಪ್ರದೇಶದಿಂದ ವಲಸೆ ಕಾರ್ಮಿಕರಾಗಿ ಬಂದ ಈ ಕುಟುಂಬಗಳು ಹಲವಾರು ವರ್ಷಗಳಿಂದ ಮೆಟ್ರೋ ಪಿಲ್ಲರ್‌ ಕೆಳಗೆ ಟೆಂಟ್‌ ಹಾಕಿಕೊಂಡು ಬದುಕುತ್ತಿದ್ದವು. ಬಲೂನ್ ಸೇರಿದಂತೆ ಸಣ್ಣ ಪುಟ್ಟ ವ್ಯಾಪಾರ ಮಾಡಿಕೊಂಡು ಹೊಟ್ಟೆ ಹೊರೆಯುತ್ತಿದ್ದರು. ಕೊರೊನಾ ಸಮಯಕ್ಕೆ ಹೇರಲಾದ ಲಾಕ್‌ಡೌನ್‌ ಸಮಯದಲ್ಲಿ ಕೆಲಸವಿಲ್ಲದೆ ಭಿಕ್ಷೆ ಬೇಡುವ ಪರಿಸ್ಥಿತಿಗೆ ದೂಕಲ್ಪಟ್ಟಿದ್ದರು. ನಂತರ ಕೆಸಿವಿಟಿ ಜನಸಹಾಯ ವತಿಯಿಂದ ಅವರಿಗೆ ರೇಷನ್ ಕಿಟ್ ನೀಡಿ, ಆರೋಗ್ಯ ತಪಾಸಣೆ ಮಾಡಲು ಮುಂದಾಗಿದ್ದರು. ಆದರೆ ಕಳೆದ 5-6 ದಿನಗಳ ಹಿಂದೆ ಪೊಲೀಸರು ನಮ್ಮನ್ನು ಏಕಾಏಕಿ ಎತ್ತಂಗಡಿ ಮಾಡಿದರು ಎಂದು ಆ ಬಡ ಕುಟುಂಬಗಳು ದೂರಿವೆ.

ಆ ಕುಟುಂಬಗಳು ಸದ್ಯಕ್ಕೆ ವೆಸ್ಟ್‌ ಆಫ್ ಕಾರ್ಡ್‌ ರೋಡ್‌ನಲ್ಲಿರುವ ದೋಬಿ ಘಾಟ್ ಸಿಗ್ನಲ್‌ನಲ್ಲಿ ಕಾಮಗಾರಿ ನಡೆಯುತ್ತಿರುವ ಫ್ಲೈ ಓವರ್‌ ಕೆಳಗೆ ಆಶ್ರಯ ಪಡೆದಿದ್ದಾರೆ. ಆದರೆ ಬಿಬಿಎಂಪಿಯ ಅಧಿಕಾರಿಗಳು ಅಲ್ಲಿಂದಲೂ ಎತ್ತಂಗಡಿ ಮಾಡಿಸಲು ಮುಂದಾಗಿದ್ದಾರೆ.. ಎಲ್ಲಾದರೂ ಹೋಗಿ 15 ದಿನ ಈ ಕಡೆ ಕಾಣಿಸಿಕೊಳ್ಳಬೇಡಿ ಎಂದು ಬೆದರಿಸಿದ್ದಾರೆ ಎಂದು ಆ ಕಾರ್ಮಿಕರು ಗೋಳು ತೋಡಿಕೊಂಡಿದ್ದಾರೆ.

ಈ ಲಾಕ್‌ಡೌನ್, ಕೊರೊನಾ ಹರಡುವ ಭಯದ ಸಂದರ್ಭದಲ್ಲಿ ಈ ಬಡಕುಟುಂಬಗಳು ಎಲ್ಲಿಗೆ ಹೋಗಲು ಸಾಧ್ಯ? ಅವರು ಮಾಡಿದ ಅಪರಾಧವಾದರೂ ಏನು? ಅವರಿಗೆ ಯಾಕೆ ಈ ಶಿಕ್ಷೆ ದಯವಿಟ್ಟು ಪೊಲೀಸರು ಮತ್ತು ಬಿಬಿಎಂಪಿಯವರು ಈ ಬಡಜನರಿಗೆ ತೊಂದರೆ ಕೊಡುವುದನ್ನು ನಿಲ್ಲಿಸಬೇಕು. ಮಾನವೀಯತೆಯ ದೃಷ್ಟಿಯಿಂದ ಆ ಜನರಿಗೆ ಕೂಡಲೇ ಸರ್ಕಾರದ ವತಿಯಿಂದ ತಾತ್ಕಾಲಿಕ ವ್ಯವಸ್ಥೆ ಮಾಡಬೇಕು. ಆಹಾರದ ಕಿಟ್‌ಗಳನ್ನು ಕೊಡಬೇಕು ಎಂಬ ಒತ್ತಾಯ ಕೇಳಿಬಂದಿದೆ.

ಗಂಡಸರನ್ನು ಜೈಲಿಗೆ ಹಾಕುತ್ತೇವೆ

ನಾವು 15 ವರ್ಷದಿಂದ ಟೋಲ್‌ಗೇಟ್‌ನಲ್ಲಿ ಬದುಕುತ್ತಿದ್ದೇವೆ. ನಮ್ಮ ಕುಟುಂಬಗಳ ಕೆಲವು ಮಕ್ಕಳು ಡಾನ್‌ ಬಾಸ್ಕೊ ಸೇರಿದಂತೆ ವಿವಿದೆಡೆ ಶಿಕ್ಷಣ ಪಡೆಯುತ್ತಿದ್ದಾರೆ.  ಹಾಗೆಯೇ ಟೋಲ್‌ಗೇಟ್‌ ಸುತ್ತಮುತ್ತಲ ಶಾಲೆಗಳಿಗೆ ನಮ್ಮ ಮಕ್ಕಳನ್ನು ಸೇರಿಸಿದ್ದೇವೆ. ಈಗ ಏಕಾಏಕಿ ನಮ್ಮನ್ನು ಎತ್ತಂಗಡಿ ಮಾಡಿದ್ದಾರೆ. ಇಲ್ಲಿ ನಮಗೆ ಕುಡಿಯುವ ನೀರು, ಶೌಚಾಲಯ ಏನೂ ಇಲ್ಲ. ಪೊಲೀಸರು ಬಂದು ಮಕ್ಕಳನ್ನು ಬಾಲಾಶ್ರಮಕ್ಕೆ, ಮಹಿಳೆಯರನ್ನು ಅನಾಥಶ್ರಮಕ್ಕೆ ಸೇರಿಸುತ್ತೇವೆ, ಗಂಡಸರನ್ನು ಜೈಲಿಗೆ ಕಳಿಸುತ್ತೇವೆ ಎಂದು ಬೆದರಿಸುತ್ತಿದ್ದಾರೆ. ನಮ್ಮಲ್ಲಿ ಕೆಲವರು ಹೆದರಿ ಊರಿಗೆ ಹೋಗಿದ್ದಾರೆ. ನಮಗೆ ಹೋಗಲು ಸಾಧ್ಯವಿಲ್ಲ ಎಂದು ಅಲ್ಲಿನಿ ನಿವಾಸಿ ಸುಮೇರ್ ಅಳಲು ತೋಡಿಕೊಂಡಿದ್ದಾರೆ.

ಹೆಂಗಸರಿಗೆ ಶೌಚಕ್ಕೆ ಹೋಗಲು ಜಾಗವಿಲ್ಲ, 25 ಕ್ಕೂ ಹೆಚ್ಚು ಮಕ್ಕಳಿವೆ. ಇವನ್ನು ಕಟ್ಟಿಕೊಂಡು ನಾವು ಅಲೆದು ಅಲೆದು ಸುಸ್ತಾಗಿದ್ದೇವೆ. ದಯವಿಟ್ಟು ನಮಗೆ ಮಾಗಡಿ ರೋಡ್ ಟೋಲ್‌ ಗೇಟ್‌ ಬಳಿ ಬದುಕಲು ಅವಕಾಶ ನೀಡಿ ಮಹಿಳೆಯರು ಮನವಿ ಮಾಡಿದ್ದಾರೆ.

ಕೂಡಲೇ ಬಿಬಿಎಂಪಿ ಅಧಿಕಾರಿಗಳು ಇತ್ತ ಗಮನಹರಿಸಿ ಈ ಬಡ ಕುಟುಂಬಗಳನ್ನು ರಕ್ಷಿಸಬೇಕಾಗಿದೆ.


ಇದನ್ನೂ ಓದಿ: ಖಾಸಗಿ ಆಸ್ಪತ್ರೆಗಳು ಹೊಟೇಲ್‌ಗಳ ಜೊತೆ ಸೇರಿ ಲಸಿಕೆ ಪ್ಯಾಕೇಜ್ ನೀಡುವಂತಿಲ್ಲ: ಕೇಂದ್ರ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಿರುವನಂತಪುರಂ | 20 ಬಿಜೆಪಿ ಕೌನ್ಸಿಲರ್‌ಗಳ ಪ್ರಮಾಣವಚನ ಅಸಿಂಧು : ಹೈಕೋರ್ಟ್ ಮಹತ್ವದ ಆದೇಶ

ತಿರುವನಂತಪುರಂ ಮಹಾನಗರ ಪಾಲಿಕೆಯ 20 ಬಿಜೆಪಿ ಕೌನ್ಸಿಲರ್‌ಗಳಿಗೆ ನಾಲ್ಕು ವಾರಗಳ ಒಳಗೆ ಮತ್ತೊಮ್ಮೆ ಪ್ರಮಾಣವಚನ ಸ್ವೀಕರಿಸುವಂತೆ ಕೇರಳ ಹೈಕೋರ್ಟ್ ಬುಧವಾರ (ಜೂ.24) ಆದೇಶಿಸಿದೆ. ಜನವರಿ ತಿಂಗಳಲ್ಲಿ ಕೌನ್ಸಿಲರ್‌ಗಳ ಪ್ರಮಾಣವಚನ ನಡೆದಿತ್ತು. ಡೆಪ್ಯುಟಿ ಮೇಯರ್...

ಎಸ್‌ಐಆರ್‌ನಿಂದ ಹೊರಗಿಡಲಾದ ಜನರಿಗೆ ಪಡಿತರ ನಿರಾಕರಣೆ ಪ್ರಶ್ನಿಸಿದ ಅರ್ಜಿ ತಿರಸ್ಕರಿಸಿದ ಸುಪ್ರೀಂ; ಕಲ್ಕತ್ತಾ ಹೈಕೋರ್ಟ್‌ಗೆ ಹೋಗಲು ಸೂಚನೆ

ನವದೆಹಲಿ: ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಡಲಾದ ವ್ಯಕ್ತಿಗಳಿಗೆ ಸಾರ್ವಜನಿಕ ವಿತರಣಾ ವ್ಯವಸ್ಥೆಯ (ಪಿಡಿಎಸ್) ಪಡಿತರ ಸೌಲಭ್ಯ ಸೇರಿದಂತೆ ಇತರೆ ಕಲ್ಯಾಣ ಯೋಜನೆಗಳನ್ನು ನಿರಾಕರಿಸುತ್ತಿರುವ ಪಶ್ಚಿಮ ಬಂಗಾಳ...

ಪಶ್ಚಿಮ ಬಂಗಾಳ: ಸರ್ಕಾರಿ ಶಾಲಾ ಬಿಸಿಯೂಟದ ಜವಾಬ್ದಾರಿ ಇಸ್ಕಾನ್‌ಗೆ, ಊಟದಿಂದ ‘ಮೊಟ್ಟೆ’ ಔಟ್

ಪಶ್ಚಿಮ ಬಂಗಾಳದ ಸರ್ಕಾರಿ ಶಾಲೆಗಳ ಬಿಸಿಯೂಟದ ಮೆನುವಿನಲ್ಲಿ ಇನ್ಮೇಲೆ ಮೊಟ್ಟೆಗಳು ಇರುವುದಿಲ್ಲ. ಅವುಗಳ ಬದಲಿಗೆ ಮಕ್ಕಳಿಗೆ ಪನೀರ್ ಮತ್ತು ರಾಜ್ಮಾವನ್ನು ನೀಡಲಾಗುತ್ತದೆ. ಕೋಲ್ಕತ್ತಾ ಮಹಾನಗರ ಪಾಲಿಕೆ ವ್ಯಾಪ್ತಿಯ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ...

ಕಿರಣ್ ರಿಜಿಜು ‘ಸೇಫ್‌’ವಾದ ಅಲ್ಲಗಳೆದ ಸರಣಿ ಮುಸ್ಲಿಂ ವಿರೋಧಿ ಹಿಂಸಾಚಾರಾಗಳು

ಜೂನ್ 15, 2026ರಂದು ಪ್ರಕಟಗೊಂಡ ಇಂಡಿಯನ್ ಎಕ್ಸ್‌ಪ್ರೆಸ್‌ನ 'ಐಡಿಯಾ ಎಕ್ಸ್‌ಚೇಂಜ್' ಕಾರ್ಯಕ್ರಮದ ಸಂದರ್ಶನವೊಂದರಲ್ಲಿ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು, “ಭಾರತದಲ್ಲಿ ಮುಸ್ಲಿಮರು ಸುರಕ್ಷಿತವಾಗಿಲ್ಲ ಎಂದು ಹೇಳುವ ಮೂಲಕ ನೀವು ದೇಶದ ಚಾರಿತ್ರ್ಯಕ್ಕೆ...

ರಾಮ ಮಂದಿರ ದೇಣಿಗೆ ದುರುಪಯೋಗ ವಿವಾದ; ಪ್ರಾಥಮಿಕ ವರದಿ ಸಲ್ಲಿಸಿದ ಎಸ್‌ಐಟಿ

ಅಯೋಧ್ಯೆಯ ರಾಮ ಮಂದಿರದಲ್ಲಿ ಸ್ವೀಕರಿಸಿದ ದೇಣಿಗೆಯ ದುರುಪಯೋಗದ ಆರೋಪದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಜೂನ್ 23 ಮಂಗಳವಾರ ಉತ್ತರ ಪ್ರದೇಶ ಸರ್ಕಾರಕ್ಕೆ ತನ್ನ ಪ್ರಾಥಮಿಕ ತನಿಖಾ ವರದಿಯನ್ನು ಸಲ್ಲಿಸಿದೆ...

ಮುಖ್ಯಮಂತ್ರಿ ಸುವೇಂದು ಅಧಿಕಾರಿಗೆ ನೋಟಿಸ್ ಜಾರಿ ಮಾಡಿದ ಕಲ್ಕತ್ತಾ ಹೈಕೋರ್ಟ್

ಭವಾನಿಪುರ ವಿಧಾನಸಭಾ ಕ್ಷೇತ್ರದ ಇತ್ತೀಚಿನ ಚುನಾವಣೆಯಲ್ಲಿ ಸುವೇಂದು ಅಧಿಕಾರಿ ಅವರ ಆಯ್ಕೆಯನ್ನು ಪ್ರಶ್ನಿಸಿ ಮಾಜಿ ಮುಖ್ಯಮಂತ್ರಿ ಹಾಗೂ ಟಿಎಂಸಿ (TMC) ನಾಯಕಿ ಮಮತಾ ಬ್ಯಾನರ್ಜಿ ಸಲ್ಲಿಕೆ ಮಾಡಿರುವ ಚುನಾವಣಾ ಅರ್ಜಿಗೆ ಸಂಬಂಧಿಸಿದಂತೆ ಕಲ್ಕತ್ತಾ...

TMC ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿಯನ್ನು ಉಚ್ಚಾಟಿಸಿದ ತೃಣಮೂಲ ಬಂಡಾಯ ಶಾಸಕರು

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣಾ ಸೋಲಿನ ಬೆನ್ನಲ್ಲೇ ತೃಣಮೂಲ ಕಾಂಗ್ರೆಸ್ ಪಕ್ಷವು ಇತಿಹಾಸದಲ್ಲೇ ಕಾಣದ ಅತ್ಯಂತ ದೊಡ್ಡ ಬಂಡಾಯಕ್ಕೆ ಸಾಕ್ಷಿಯಾಗಿದೆ. ಬಂಡಾಯ ಶಾಸಕರ ನೇತೃತ್ವ ವಹಿಸಿರುವ ಋತಬ್ರತಾ ಬ್ಯಾನರ್ಜಿ ಸೋಮವಾರ ಮಮತಾ ಬ್ಯಾನರ್ಜಿ...

ಯುಪಿ: ಮೊಹರಂ ಮೆರವಣಿಗೆಯಲ್ಲಿ ಪಿತೂರಿ: ಪಾಕ್ ಪರ ಘೋಷಣೆಯ ಸುಳ್ಳು ವಿಡಿಯೋ ಹರಿಬಿಟ್ಟ ಇಬ್ಬರು ಹಿಂದುತ್ವವಾದಿಗಳ ಬಂಧನ 

ಬರೇಲಿ (ಉತ್ತರ ಪ್ರದೇಶ): ಮೊಹರಂ ಮೆರವಣಿಗೆಯೊಂದರಲ್ಲಿ "ಪಾಕಿಸ್ತಾನ್ ಜಿಂದಾಬಾದ್" ಎಂದು ದೇಶವಿರೋಧಿ ಘೋಷಣೆ ಕೂಗಲಾಗಿದೆ ಎಂಬ ನಕಲಿ ವೀಡಿಯೋ ಸೃಷ್ಟಿಸಿ, ಮುಸ್ಲಿಂ ಸಮುದಾಯದ ಮೇಲೆ ಸುಳ್ಳು ಆರೋಪ ಹೊರಿಸಲು ಯತ್ನಿಸಿದ ಇಬ್ಬರು ಹಿಂದುತ್ವವಾದಿ...

ಮಕ್ಕಳಿಗೆ ಆರ್‌ಎಸ್‌ಎಸ್‌ ತರಬೇತಿ ನೀಡುವುದನ್ನು ಟೀಕಿಸಿ ವಿಡಿಯೋ ಹಂಚಿಕೆ : ಯುವಕನನ್ನು ವಶಕ್ಕೆ ಪಡೆದ ಪೊಲೀಸರು!

ರಾಜಸ್ಥಾನದ ಜುಂಜುನು ಜಿಲ್ಲೆಯ ನವೀನ್ ಚೌಧರಿ ಎಂಬ 25 ವರ್ಷದ ಯುವಕ, ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್‌) ಕುರಿತು ಸಾಮಾಜಿಕ ಜಾಲತಾಣ ಇನ್‌ಸ್ಟಾಗ್ರಾಮ್‌ನಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿದ್ದರು. 'ಜುಂಜುನು ಎಕ್ಸ್‌ಪ್ರೆಸ್' ಎಂಬ ಇನ್‌ಸ್ಟಾಗ್ರಾಮ್ ಪೇಜ್‌ನಲ್ಲಿ...

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...