Homeಕರ್ನಾಟಕಏಕಾಏಕಿ ಎತ್ತಂಗಡಿ: ಬೆಂಗಳೂರಿನಲ್ಲಿ ನೆಲೆಯಿಲ್ಲದೆ ಅಲೆಯುತ್ತಿರುವ 15 ಬಡ ಕುಟುಂಬಗಳು

ಏಕಾಏಕಿ ಎತ್ತಂಗಡಿ: ಬೆಂಗಳೂರಿನಲ್ಲಿ ನೆಲೆಯಿಲ್ಲದೆ ಅಲೆಯುತ್ತಿರುವ 15 ಬಡ ಕುಟುಂಬಗಳು

ಹೆಂಗಸರಿಗೆ ಶೌಚಕ್ಕೆ ಹೋಗಲು ಜಾಗವಿಲ್ಲ, 25 ಕ್ಕೂ ಹೆಚ್ಚು ಮಕ್ಕಳಿವೆ. ಇವನ್ನು ಕಟ್ಟಿಕೊಂಡು ನಾವು ಅಲೆದು ಅಲೆದು ಸುಸ್ತಾಗಿದ್ದೇವೆ. ದಯವಿಟ್ಟು ನಮಗೆ ಮಾಗಡಿ ರೋಡ್ ಟೋಲ್‌ ಗೇಟ್‌ ಬಳಿ ಬದುಕಲು ಅವಕಾಶ ನೀಡಿ..

- Advertisement -
- Advertisement -

ಬಲೂನ್ ಸೇರಿದಂತೆ ವಿವಧ ವಸ್ತುಗಳನ್ನು ವ್ಯಾಪಾರ ಮಾಡುತ್ತಾ ವಿಜಯನಗರ ಟೋಲ್‌ಗೇಟ್‌ ಮೆಟ್ರೋ ಕೆಳಗೆ ಟೆಂಟ್‌ಗಳಲ್ಲಿ ಜೀವನ ಸಾಗಿಸುತ್ತಿದ್ದ 15 ಬಡ ಕುಟುಂಬಗಳು ಈಗ ದಿಕ್ಕುಕಾಣದೇ ನೆಲೆಗಾಗಿ ಅಲೆಯುತ್ತಿದ್ದಾರೆ. ಹತ್ತಾರು ಮಕ್ಕಳನ್ನು ಕಟ್ಟಿಕೊಂಡು ಎಲ್ಲದರೂ ಉಳಿದುಕೊಳ್ಳಲು ಜಾಗ ಸಿಗುತ್ತದೆಯೇ ಎಂದು ಜಾತಕ ಪಕ್ಷಿಗಳಂತೆ ಹುಡುಕಾಡುತ್ತಿದ್ದಾರೆ.

ಮಧ್ಯಪ್ರದೇಶದಿಂದ ವಲಸೆ ಕಾರ್ಮಿಕರಾಗಿ ಬಂದ ಈ ಕುಟುಂಬಗಳು ಹಲವಾರು ವರ್ಷಗಳಿಂದ ಮೆಟ್ರೋ ಪಿಲ್ಲರ್‌ ಕೆಳಗೆ ಟೆಂಟ್‌ ಹಾಕಿಕೊಂಡು ಬದುಕುತ್ತಿದ್ದವು. ಬಲೂನ್ ಸೇರಿದಂತೆ ಸಣ್ಣ ಪುಟ್ಟ ವ್ಯಾಪಾರ ಮಾಡಿಕೊಂಡು ಹೊಟ್ಟೆ ಹೊರೆಯುತ್ತಿದ್ದರು. ಕೊರೊನಾ ಸಮಯಕ್ಕೆ ಹೇರಲಾದ ಲಾಕ್‌ಡೌನ್‌ ಸಮಯದಲ್ಲಿ ಕೆಲಸವಿಲ್ಲದೆ ಭಿಕ್ಷೆ ಬೇಡುವ ಪರಿಸ್ಥಿತಿಗೆ ದೂಕಲ್ಪಟ್ಟಿದ್ದರು. ನಂತರ ಕೆಸಿವಿಟಿ ಜನಸಹಾಯ ವತಿಯಿಂದ ಅವರಿಗೆ ರೇಷನ್ ಕಿಟ್ ನೀಡಿ, ಆರೋಗ್ಯ ತಪಾಸಣೆ ಮಾಡಲು ಮುಂದಾಗಿದ್ದರು. ಆದರೆ ಕಳೆದ 5-6 ದಿನಗಳ ಹಿಂದೆ ಪೊಲೀಸರು ನಮ್ಮನ್ನು ಏಕಾಏಕಿ ಎತ್ತಂಗಡಿ ಮಾಡಿದರು ಎಂದು ಆ ಬಡ ಕುಟುಂಬಗಳು ದೂರಿವೆ.

ಆ ಕುಟುಂಬಗಳು ಸದ್ಯಕ್ಕೆ ವೆಸ್ಟ್‌ ಆಫ್ ಕಾರ್ಡ್‌ ರೋಡ್‌ನಲ್ಲಿರುವ ದೋಬಿ ಘಾಟ್ ಸಿಗ್ನಲ್‌ನಲ್ಲಿ ಕಾಮಗಾರಿ ನಡೆಯುತ್ತಿರುವ ಫ್ಲೈ ಓವರ್‌ ಕೆಳಗೆ ಆಶ್ರಯ ಪಡೆದಿದ್ದಾರೆ. ಆದರೆ ಬಿಬಿಎಂಪಿಯ ಅಧಿಕಾರಿಗಳು ಅಲ್ಲಿಂದಲೂ ಎತ್ತಂಗಡಿ ಮಾಡಿಸಲು ಮುಂದಾಗಿದ್ದಾರೆ.. ಎಲ್ಲಾದರೂ ಹೋಗಿ 15 ದಿನ ಈ ಕಡೆ ಕಾಣಿಸಿಕೊಳ್ಳಬೇಡಿ ಎಂದು ಬೆದರಿಸಿದ್ದಾರೆ ಎಂದು ಆ ಕಾರ್ಮಿಕರು ಗೋಳು ತೋಡಿಕೊಂಡಿದ್ದಾರೆ.

ಈ ಲಾಕ್‌ಡೌನ್, ಕೊರೊನಾ ಹರಡುವ ಭಯದ ಸಂದರ್ಭದಲ್ಲಿ ಈ ಬಡಕುಟುಂಬಗಳು ಎಲ್ಲಿಗೆ ಹೋಗಲು ಸಾಧ್ಯ? ಅವರು ಮಾಡಿದ ಅಪರಾಧವಾದರೂ ಏನು? ಅವರಿಗೆ ಯಾಕೆ ಈ ಶಿಕ್ಷೆ ದಯವಿಟ್ಟು ಪೊಲೀಸರು ಮತ್ತು ಬಿಬಿಎಂಪಿಯವರು ಈ ಬಡಜನರಿಗೆ ತೊಂದರೆ ಕೊಡುವುದನ್ನು ನಿಲ್ಲಿಸಬೇಕು. ಮಾನವೀಯತೆಯ ದೃಷ್ಟಿಯಿಂದ ಆ ಜನರಿಗೆ ಕೂಡಲೇ ಸರ್ಕಾರದ ವತಿಯಿಂದ ತಾತ್ಕಾಲಿಕ ವ್ಯವಸ್ಥೆ ಮಾಡಬೇಕು. ಆಹಾರದ ಕಿಟ್‌ಗಳನ್ನು ಕೊಡಬೇಕು ಎಂಬ ಒತ್ತಾಯ ಕೇಳಿಬಂದಿದೆ.

ಗಂಡಸರನ್ನು ಜೈಲಿಗೆ ಹಾಕುತ್ತೇವೆ

ನಾವು 15 ವರ್ಷದಿಂದ ಟೋಲ್‌ಗೇಟ್‌ನಲ್ಲಿ ಬದುಕುತ್ತಿದ್ದೇವೆ. ನಮ್ಮ ಕುಟುಂಬಗಳ ಕೆಲವು ಮಕ್ಕಳು ಡಾನ್‌ ಬಾಸ್ಕೊ ಸೇರಿದಂತೆ ವಿವಿದೆಡೆ ಶಿಕ್ಷಣ ಪಡೆಯುತ್ತಿದ್ದಾರೆ.  ಹಾಗೆಯೇ ಟೋಲ್‌ಗೇಟ್‌ ಸುತ್ತಮುತ್ತಲ ಶಾಲೆಗಳಿಗೆ ನಮ್ಮ ಮಕ್ಕಳನ್ನು ಸೇರಿಸಿದ್ದೇವೆ. ಈಗ ಏಕಾಏಕಿ ನಮ್ಮನ್ನು ಎತ್ತಂಗಡಿ ಮಾಡಿದ್ದಾರೆ. ಇಲ್ಲಿ ನಮಗೆ ಕುಡಿಯುವ ನೀರು, ಶೌಚಾಲಯ ಏನೂ ಇಲ್ಲ. ಪೊಲೀಸರು ಬಂದು ಮಕ್ಕಳನ್ನು ಬಾಲಾಶ್ರಮಕ್ಕೆ, ಮಹಿಳೆಯರನ್ನು ಅನಾಥಶ್ರಮಕ್ಕೆ ಸೇರಿಸುತ್ತೇವೆ, ಗಂಡಸರನ್ನು ಜೈಲಿಗೆ ಕಳಿಸುತ್ತೇವೆ ಎಂದು ಬೆದರಿಸುತ್ತಿದ್ದಾರೆ. ನಮ್ಮಲ್ಲಿ ಕೆಲವರು ಹೆದರಿ ಊರಿಗೆ ಹೋಗಿದ್ದಾರೆ. ನಮಗೆ ಹೋಗಲು ಸಾಧ್ಯವಿಲ್ಲ ಎಂದು ಅಲ್ಲಿನಿ ನಿವಾಸಿ ಸುಮೇರ್ ಅಳಲು ತೋಡಿಕೊಂಡಿದ್ದಾರೆ.

ಹೆಂಗಸರಿಗೆ ಶೌಚಕ್ಕೆ ಹೋಗಲು ಜಾಗವಿಲ್ಲ, 25 ಕ್ಕೂ ಹೆಚ್ಚು ಮಕ್ಕಳಿವೆ. ಇವನ್ನು ಕಟ್ಟಿಕೊಂಡು ನಾವು ಅಲೆದು ಅಲೆದು ಸುಸ್ತಾಗಿದ್ದೇವೆ. ದಯವಿಟ್ಟು ನಮಗೆ ಮಾಗಡಿ ರೋಡ್ ಟೋಲ್‌ ಗೇಟ್‌ ಬಳಿ ಬದುಕಲು ಅವಕಾಶ ನೀಡಿ ಮಹಿಳೆಯರು ಮನವಿ ಮಾಡಿದ್ದಾರೆ.

ಕೂಡಲೇ ಬಿಬಿಎಂಪಿ ಅಧಿಕಾರಿಗಳು ಇತ್ತ ಗಮನಹರಿಸಿ ಈ ಬಡ ಕುಟುಂಬಗಳನ್ನು ರಕ್ಷಿಸಬೇಕಾಗಿದೆ.


ಇದನ್ನೂ ಓದಿ: ಖಾಸಗಿ ಆಸ್ಪತ್ರೆಗಳು ಹೊಟೇಲ್‌ಗಳ ಜೊತೆ ಸೇರಿ ಲಸಿಕೆ ಪ್ಯಾಕೇಜ್ ನೀಡುವಂತಿಲ್ಲ: ಕೇಂದ್ರ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...