Homeಕರ್ನಾಟಕಏಕಾಏಕಿ ಎತ್ತಂಗಡಿ: ಬೆಂಗಳೂರಿನಲ್ಲಿ ನೆಲೆಯಿಲ್ಲದೆ ಅಲೆಯುತ್ತಿರುವ 15 ಬಡ ಕುಟುಂಬಗಳು

ಏಕಾಏಕಿ ಎತ್ತಂಗಡಿ: ಬೆಂಗಳೂರಿನಲ್ಲಿ ನೆಲೆಯಿಲ್ಲದೆ ಅಲೆಯುತ್ತಿರುವ 15 ಬಡ ಕುಟುಂಬಗಳು

ಹೆಂಗಸರಿಗೆ ಶೌಚಕ್ಕೆ ಹೋಗಲು ಜಾಗವಿಲ್ಲ, 25 ಕ್ಕೂ ಹೆಚ್ಚು ಮಕ್ಕಳಿವೆ. ಇವನ್ನು ಕಟ್ಟಿಕೊಂಡು ನಾವು ಅಲೆದು ಅಲೆದು ಸುಸ್ತಾಗಿದ್ದೇವೆ. ದಯವಿಟ್ಟು ನಮಗೆ ಮಾಗಡಿ ರೋಡ್ ಟೋಲ್‌ ಗೇಟ್‌ ಬಳಿ ಬದುಕಲು ಅವಕಾಶ ನೀಡಿ..

- Advertisement -
- Advertisement -

ಬಲೂನ್ ಸೇರಿದಂತೆ ವಿವಧ ವಸ್ತುಗಳನ್ನು ವ್ಯಾಪಾರ ಮಾಡುತ್ತಾ ವಿಜಯನಗರ ಟೋಲ್‌ಗೇಟ್‌ ಮೆಟ್ರೋ ಕೆಳಗೆ ಟೆಂಟ್‌ಗಳಲ್ಲಿ ಜೀವನ ಸಾಗಿಸುತ್ತಿದ್ದ 15 ಬಡ ಕುಟುಂಬಗಳು ಈಗ ದಿಕ್ಕುಕಾಣದೇ ನೆಲೆಗಾಗಿ ಅಲೆಯುತ್ತಿದ್ದಾರೆ. ಹತ್ತಾರು ಮಕ್ಕಳನ್ನು ಕಟ್ಟಿಕೊಂಡು ಎಲ್ಲದರೂ ಉಳಿದುಕೊಳ್ಳಲು ಜಾಗ ಸಿಗುತ್ತದೆಯೇ ಎಂದು ಜಾತಕ ಪಕ್ಷಿಗಳಂತೆ ಹುಡುಕಾಡುತ್ತಿದ್ದಾರೆ.

ಮಧ್ಯಪ್ರದೇಶದಿಂದ ವಲಸೆ ಕಾರ್ಮಿಕರಾಗಿ ಬಂದ ಈ ಕುಟುಂಬಗಳು ಹಲವಾರು ವರ್ಷಗಳಿಂದ ಮೆಟ್ರೋ ಪಿಲ್ಲರ್‌ ಕೆಳಗೆ ಟೆಂಟ್‌ ಹಾಕಿಕೊಂಡು ಬದುಕುತ್ತಿದ್ದವು. ಬಲೂನ್ ಸೇರಿದಂತೆ ಸಣ್ಣ ಪುಟ್ಟ ವ್ಯಾಪಾರ ಮಾಡಿಕೊಂಡು ಹೊಟ್ಟೆ ಹೊರೆಯುತ್ತಿದ್ದರು. ಕೊರೊನಾ ಸಮಯಕ್ಕೆ ಹೇರಲಾದ ಲಾಕ್‌ಡೌನ್‌ ಸಮಯದಲ್ಲಿ ಕೆಲಸವಿಲ್ಲದೆ ಭಿಕ್ಷೆ ಬೇಡುವ ಪರಿಸ್ಥಿತಿಗೆ ದೂಕಲ್ಪಟ್ಟಿದ್ದರು. ನಂತರ ಕೆಸಿವಿಟಿ ಜನಸಹಾಯ ವತಿಯಿಂದ ಅವರಿಗೆ ರೇಷನ್ ಕಿಟ್ ನೀಡಿ, ಆರೋಗ್ಯ ತಪಾಸಣೆ ಮಾಡಲು ಮುಂದಾಗಿದ್ದರು. ಆದರೆ ಕಳೆದ 5-6 ದಿನಗಳ ಹಿಂದೆ ಪೊಲೀಸರು ನಮ್ಮನ್ನು ಏಕಾಏಕಿ ಎತ್ತಂಗಡಿ ಮಾಡಿದರು ಎಂದು ಆ ಬಡ ಕುಟುಂಬಗಳು ದೂರಿವೆ.

ಆ ಕುಟುಂಬಗಳು ಸದ್ಯಕ್ಕೆ ವೆಸ್ಟ್‌ ಆಫ್ ಕಾರ್ಡ್‌ ರೋಡ್‌ನಲ್ಲಿರುವ ದೋಬಿ ಘಾಟ್ ಸಿಗ್ನಲ್‌ನಲ್ಲಿ ಕಾಮಗಾರಿ ನಡೆಯುತ್ತಿರುವ ಫ್ಲೈ ಓವರ್‌ ಕೆಳಗೆ ಆಶ್ರಯ ಪಡೆದಿದ್ದಾರೆ. ಆದರೆ ಬಿಬಿಎಂಪಿಯ ಅಧಿಕಾರಿಗಳು ಅಲ್ಲಿಂದಲೂ ಎತ್ತಂಗಡಿ ಮಾಡಿಸಲು ಮುಂದಾಗಿದ್ದಾರೆ.. ಎಲ್ಲಾದರೂ ಹೋಗಿ 15 ದಿನ ಈ ಕಡೆ ಕಾಣಿಸಿಕೊಳ್ಳಬೇಡಿ ಎಂದು ಬೆದರಿಸಿದ್ದಾರೆ ಎಂದು ಆ ಕಾರ್ಮಿಕರು ಗೋಳು ತೋಡಿಕೊಂಡಿದ್ದಾರೆ.

ಈ ಲಾಕ್‌ಡೌನ್, ಕೊರೊನಾ ಹರಡುವ ಭಯದ ಸಂದರ್ಭದಲ್ಲಿ ಈ ಬಡಕುಟುಂಬಗಳು ಎಲ್ಲಿಗೆ ಹೋಗಲು ಸಾಧ್ಯ? ಅವರು ಮಾಡಿದ ಅಪರಾಧವಾದರೂ ಏನು? ಅವರಿಗೆ ಯಾಕೆ ಈ ಶಿಕ್ಷೆ ದಯವಿಟ್ಟು ಪೊಲೀಸರು ಮತ್ತು ಬಿಬಿಎಂಪಿಯವರು ಈ ಬಡಜನರಿಗೆ ತೊಂದರೆ ಕೊಡುವುದನ್ನು ನಿಲ್ಲಿಸಬೇಕು. ಮಾನವೀಯತೆಯ ದೃಷ್ಟಿಯಿಂದ ಆ ಜನರಿಗೆ ಕೂಡಲೇ ಸರ್ಕಾರದ ವತಿಯಿಂದ ತಾತ್ಕಾಲಿಕ ವ್ಯವಸ್ಥೆ ಮಾಡಬೇಕು. ಆಹಾರದ ಕಿಟ್‌ಗಳನ್ನು ಕೊಡಬೇಕು ಎಂಬ ಒತ್ತಾಯ ಕೇಳಿಬಂದಿದೆ.

ಗಂಡಸರನ್ನು ಜೈಲಿಗೆ ಹಾಕುತ್ತೇವೆ

ನಾವು 15 ವರ್ಷದಿಂದ ಟೋಲ್‌ಗೇಟ್‌ನಲ್ಲಿ ಬದುಕುತ್ತಿದ್ದೇವೆ. ನಮ್ಮ ಕುಟುಂಬಗಳ ಕೆಲವು ಮಕ್ಕಳು ಡಾನ್‌ ಬಾಸ್ಕೊ ಸೇರಿದಂತೆ ವಿವಿದೆಡೆ ಶಿಕ್ಷಣ ಪಡೆಯುತ್ತಿದ್ದಾರೆ.  ಹಾಗೆಯೇ ಟೋಲ್‌ಗೇಟ್‌ ಸುತ್ತಮುತ್ತಲ ಶಾಲೆಗಳಿಗೆ ನಮ್ಮ ಮಕ್ಕಳನ್ನು ಸೇರಿಸಿದ್ದೇವೆ. ಈಗ ಏಕಾಏಕಿ ನಮ್ಮನ್ನು ಎತ್ತಂಗಡಿ ಮಾಡಿದ್ದಾರೆ. ಇಲ್ಲಿ ನಮಗೆ ಕುಡಿಯುವ ನೀರು, ಶೌಚಾಲಯ ಏನೂ ಇಲ್ಲ. ಪೊಲೀಸರು ಬಂದು ಮಕ್ಕಳನ್ನು ಬಾಲಾಶ್ರಮಕ್ಕೆ, ಮಹಿಳೆಯರನ್ನು ಅನಾಥಶ್ರಮಕ್ಕೆ ಸೇರಿಸುತ್ತೇವೆ, ಗಂಡಸರನ್ನು ಜೈಲಿಗೆ ಕಳಿಸುತ್ತೇವೆ ಎಂದು ಬೆದರಿಸುತ್ತಿದ್ದಾರೆ. ನಮ್ಮಲ್ಲಿ ಕೆಲವರು ಹೆದರಿ ಊರಿಗೆ ಹೋಗಿದ್ದಾರೆ. ನಮಗೆ ಹೋಗಲು ಸಾಧ್ಯವಿಲ್ಲ ಎಂದು ಅಲ್ಲಿನಿ ನಿವಾಸಿ ಸುಮೇರ್ ಅಳಲು ತೋಡಿಕೊಂಡಿದ್ದಾರೆ.

ಹೆಂಗಸರಿಗೆ ಶೌಚಕ್ಕೆ ಹೋಗಲು ಜಾಗವಿಲ್ಲ, 25 ಕ್ಕೂ ಹೆಚ್ಚು ಮಕ್ಕಳಿವೆ. ಇವನ್ನು ಕಟ್ಟಿಕೊಂಡು ನಾವು ಅಲೆದು ಅಲೆದು ಸುಸ್ತಾಗಿದ್ದೇವೆ. ದಯವಿಟ್ಟು ನಮಗೆ ಮಾಗಡಿ ರೋಡ್ ಟೋಲ್‌ ಗೇಟ್‌ ಬಳಿ ಬದುಕಲು ಅವಕಾಶ ನೀಡಿ ಮಹಿಳೆಯರು ಮನವಿ ಮಾಡಿದ್ದಾರೆ.

ಕೂಡಲೇ ಬಿಬಿಎಂಪಿ ಅಧಿಕಾರಿಗಳು ಇತ್ತ ಗಮನಹರಿಸಿ ಈ ಬಡ ಕುಟುಂಬಗಳನ್ನು ರಕ್ಷಿಸಬೇಕಾಗಿದೆ.


ಇದನ್ನೂ ಓದಿ: ಖಾಸಗಿ ಆಸ್ಪತ್ರೆಗಳು ಹೊಟೇಲ್‌ಗಳ ಜೊತೆ ಸೇರಿ ಲಸಿಕೆ ಪ್ಯಾಕೇಜ್ ನೀಡುವಂತಿಲ್ಲ: ಕೇಂದ್ರ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...