Homeಕರ್ನಾಟಕಏಕಾಏಕಿ ಎತ್ತಂಗಡಿ: ಬೆಂಗಳೂರಿನಲ್ಲಿ ನೆಲೆಯಿಲ್ಲದೆ ಅಲೆಯುತ್ತಿರುವ 15 ಬಡ ಕುಟುಂಬಗಳು

ಏಕಾಏಕಿ ಎತ್ತಂಗಡಿ: ಬೆಂಗಳೂರಿನಲ್ಲಿ ನೆಲೆಯಿಲ್ಲದೆ ಅಲೆಯುತ್ತಿರುವ 15 ಬಡ ಕುಟುಂಬಗಳು

ಹೆಂಗಸರಿಗೆ ಶೌಚಕ್ಕೆ ಹೋಗಲು ಜಾಗವಿಲ್ಲ, 25 ಕ್ಕೂ ಹೆಚ್ಚು ಮಕ್ಕಳಿವೆ. ಇವನ್ನು ಕಟ್ಟಿಕೊಂಡು ನಾವು ಅಲೆದು ಅಲೆದು ಸುಸ್ತಾಗಿದ್ದೇವೆ. ದಯವಿಟ್ಟು ನಮಗೆ ಮಾಗಡಿ ರೋಡ್ ಟೋಲ್‌ ಗೇಟ್‌ ಬಳಿ ಬದುಕಲು ಅವಕಾಶ ನೀಡಿ..

- Advertisement -
- Advertisement -

ಬಲೂನ್ ಸೇರಿದಂತೆ ವಿವಧ ವಸ್ತುಗಳನ್ನು ವ್ಯಾಪಾರ ಮಾಡುತ್ತಾ ವಿಜಯನಗರ ಟೋಲ್‌ಗೇಟ್‌ ಮೆಟ್ರೋ ಕೆಳಗೆ ಟೆಂಟ್‌ಗಳಲ್ಲಿ ಜೀವನ ಸಾಗಿಸುತ್ತಿದ್ದ 15 ಬಡ ಕುಟುಂಬಗಳು ಈಗ ದಿಕ್ಕುಕಾಣದೇ ನೆಲೆಗಾಗಿ ಅಲೆಯುತ್ತಿದ್ದಾರೆ. ಹತ್ತಾರು ಮಕ್ಕಳನ್ನು ಕಟ್ಟಿಕೊಂಡು ಎಲ್ಲದರೂ ಉಳಿದುಕೊಳ್ಳಲು ಜಾಗ ಸಿಗುತ್ತದೆಯೇ ಎಂದು ಜಾತಕ ಪಕ್ಷಿಗಳಂತೆ ಹುಡುಕಾಡುತ್ತಿದ್ದಾರೆ.

ಮಧ್ಯಪ್ರದೇಶದಿಂದ ವಲಸೆ ಕಾರ್ಮಿಕರಾಗಿ ಬಂದ ಈ ಕುಟುಂಬಗಳು ಹಲವಾರು ವರ್ಷಗಳಿಂದ ಮೆಟ್ರೋ ಪಿಲ್ಲರ್‌ ಕೆಳಗೆ ಟೆಂಟ್‌ ಹಾಕಿಕೊಂಡು ಬದುಕುತ್ತಿದ್ದವು. ಬಲೂನ್ ಸೇರಿದಂತೆ ಸಣ್ಣ ಪುಟ್ಟ ವ್ಯಾಪಾರ ಮಾಡಿಕೊಂಡು ಹೊಟ್ಟೆ ಹೊರೆಯುತ್ತಿದ್ದರು. ಕೊರೊನಾ ಸಮಯಕ್ಕೆ ಹೇರಲಾದ ಲಾಕ್‌ಡೌನ್‌ ಸಮಯದಲ್ಲಿ ಕೆಲಸವಿಲ್ಲದೆ ಭಿಕ್ಷೆ ಬೇಡುವ ಪರಿಸ್ಥಿತಿಗೆ ದೂಕಲ್ಪಟ್ಟಿದ್ದರು. ನಂತರ ಕೆಸಿವಿಟಿ ಜನಸಹಾಯ ವತಿಯಿಂದ ಅವರಿಗೆ ರೇಷನ್ ಕಿಟ್ ನೀಡಿ, ಆರೋಗ್ಯ ತಪಾಸಣೆ ಮಾಡಲು ಮುಂದಾಗಿದ್ದರು. ಆದರೆ ಕಳೆದ 5-6 ದಿನಗಳ ಹಿಂದೆ ಪೊಲೀಸರು ನಮ್ಮನ್ನು ಏಕಾಏಕಿ ಎತ್ತಂಗಡಿ ಮಾಡಿದರು ಎಂದು ಆ ಬಡ ಕುಟುಂಬಗಳು ದೂರಿವೆ.

ಆ ಕುಟುಂಬಗಳು ಸದ್ಯಕ್ಕೆ ವೆಸ್ಟ್‌ ಆಫ್ ಕಾರ್ಡ್‌ ರೋಡ್‌ನಲ್ಲಿರುವ ದೋಬಿ ಘಾಟ್ ಸಿಗ್ನಲ್‌ನಲ್ಲಿ ಕಾಮಗಾರಿ ನಡೆಯುತ್ತಿರುವ ಫ್ಲೈ ಓವರ್‌ ಕೆಳಗೆ ಆಶ್ರಯ ಪಡೆದಿದ್ದಾರೆ. ಆದರೆ ಬಿಬಿಎಂಪಿಯ ಅಧಿಕಾರಿಗಳು ಅಲ್ಲಿಂದಲೂ ಎತ್ತಂಗಡಿ ಮಾಡಿಸಲು ಮುಂದಾಗಿದ್ದಾರೆ.. ಎಲ್ಲಾದರೂ ಹೋಗಿ 15 ದಿನ ಈ ಕಡೆ ಕಾಣಿಸಿಕೊಳ್ಳಬೇಡಿ ಎಂದು ಬೆದರಿಸಿದ್ದಾರೆ ಎಂದು ಆ ಕಾರ್ಮಿಕರು ಗೋಳು ತೋಡಿಕೊಂಡಿದ್ದಾರೆ.

ಈ ಲಾಕ್‌ಡೌನ್, ಕೊರೊನಾ ಹರಡುವ ಭಯದ ಸಂದರ್ಭದಲ್ಲಿ ಈ ಬಡಕುಟುಂಬಗಳು ಎಲ್ಲಿಗೆ ಹೋಗಲು ಸಾಧ್ಯ? ಅವರು ಮಾಡಿದ ಅಪರಾಧವಾದರೂ ಏನು? ಅವರಿಗೆ ಯಾಕೆ ಈ ಶಿಕ್ಷೆ ದಯವಿಟ್ಟು ಪೊಲೀಸರು ಮತ್ತು ಬಿಬಿಎಂಪಿಯವರು ಈ ಬಡಜನರಿಗೆ ತೊಂದರೆ ಕೊಡುವುದನ್ನು ನಿಲ್ಲಿಸಬೇಕು. ಮಾನವೀಯತೆಯ ದೃಷ್ಟಿಯಿಂದ ಆ ಜನರಿಗೆ ಕೂಡಲೇ ಸರ್ಕಾರದ ವತಿಯಿಂದ ತಾತ್ಕಾಲಿಕ ವ್ಯವಸ್ಥೆ ಮಾಡಬೇಕು. ಆಹಾರದ ಕಿಟ್‌ಗಳನ್ನು ಕೊಡಬೇಕು ಎಂಬ ಒತ್ತಾಯ ಕೇಳಿಬಂದಿದೆ.

ಗಂಡಸರನ್ನು ಜೈಲಿಗೆ ಹಾಕುತ್ತೇವೆ

ನಾವು 15 ವರ್ಷದಿಂದ ಟೋಲ್‌ಗೇಟ್‌ನಲ್ಲಿ ಬದುಕುತ್ತಿದ್ದೇವೆ. ನಮ್ಮ ಕುಟುಂಬಗಳ ಕೆಲವು ಮಕ್ಕಳು ಡಾನ್‌ ಬಾಸ್ಕೊ ಸೇರಿದಂತೆ ವಿವಿದೆಡೆ ಶಿಕ್ಷಣ ಪಡೆಯುತ್ತಿದ್ದಾರೆ.  ಹಾಗೆಯೇ ಟೋಲ್‌ಗೇಟ್‌ ಸುತ್ತಮುತ್ತಲ ಶಾಲೆಗಳಿಗೆ ನಮ್ಮ ಮಕ್ಕಳನ್ನು ಸೇರಿಸಿದ್ದೇವೆ. ಈಗ ಏಕಾಏಕಿ ನಮ್ಮನ್ನು ಎತ್ತಂಗಡಿ ಮಾಡಿದ್ದಾರೆ. ಇಲ್ಲಿ ನಮಗೆ ಕುಡಿಯುವ ನೀರು, ಶೌಚಾಲಯ ಏನೂ ಇಲ್ಲ. ಪೊಲೀಸರು ಬಂದು ಮಕ್ಕಳನ್ನು ಬಾಲಾಶ್ರಮಕ್ಕೆ, ಮಹಿಳೆಯರನ್ನು ಅನಾಥಶ್ರಮಕ್ಕೆ ಸೇರಿಸುತ್ತೇವೆ, ಗಂಡಸರನ್ನು ಜೈಲಿಗೆ ಕಳಿಸುತ್ತೇವೆ ಎಂದು ಬೆದರಿಸುತ್ತಿದ್ದಾರೆ. ನಮ್ಮಲ್ಲಿ ಕೆಲವರು ಹೆದರಿ ಊರಿಗೆ ಹೋಗಿದ್ದಾರೆ. ನಮಗೆ ಹೋಗಲು ಸಾಧ್ಯವಿಲ್ಲ ಎಂದು ಅಲ್ಲಿನಿ ನಿವಾಸಿ ಸುಮೇರ್ ಅಳಲು ತೋಡಿಕೊಂಡಿದ್ದಾರೆ.

ಹೆಂಗಸರಿಗೆ ಶೌಚಕ್ಕೆ ಹೋಗಲು ಜಾಗವಿಲ್ಲ, 25 ಕ್ಕೂ ಹೆಚ್ಚು ಮಕ್ಕಳಿವೆ. ಇವನ್ನು ಕಟ್ಟಿಕೊಂಡು ನಾವು ಅಲೆದು ಅಲೆದು ಸುಸ್ತಾಗಿದ್ದೇವೆ. ದಯವಿಟ್ಟು ನಮಗೆ ಮಾಗಡಿ ರೋಡ್ ಟೋಲ್‌ ಗೇಟ್‌ ಬಳಿ ಬದುಕಲು ಅವಕಾಶ ನೀಡಿ ಮಹಿಳೆಯರು ಮನವಿ ಮಾಡಿದ್ದಾರೆ.

ಕೂಡಲೇ ಬಿಬಿಎಂಪಿ ಅಧಿಕಾರಿಗಳು ಇತ್ತ ಗಮನಹರಿಸಿ ಈ ಬಡ ಕುಟುಂಬಗಳನ್ನು ರಕ್ಷಿಸಬೇಕಾಗಿದೆ.


ಇದನ್ನೂ ಓದಿ: ಖಾಸಗಿ ಆಸ್ಪತ್ರೆಗಳು ಹೊಟೇಲ್‌ಗಳ ಜೊತೆ ಸೇರಿ ಲಸಿಕೆ ಪ್ಯಾಕೇಜ್ ನೀಡುವಂತಿಲ್ಲ: ಕೇಂದ್ರ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...

ದಾವಣಗೆರೆ ಉಪ ಚುನಾವಣೆ ಅಡ್ಡ ಪರಿಣಾಮ: ಮುಸ್ಲಿಮ್ ಮುಖಂಡರ ಮೇಲೆ ಖರ್ಗೆ-ಡಿಕೆಶಿ ಶಿಸ್ತು ಪ್ರಹಾರ ಕಾಂಗ್ರೆಸ್‌ನ ಆತ್ಮಹತ್ಯಾತ್ಮಕ ರಾಜಕಾರಣ!!

ದಾವಣಗೆರೆ ದಕ್ಷಿಣ ಉಪ ಚುನಾವಣೆ ರಾಜ್ಯದ ಆಡಳಿತಾರೂಢ ಕಾಂಗ್ರೆಸ್‌ನ ಗದ್ದುಗೆ ಗುದ್ದಾಟಕ್ಕೆ ರೋಚಕ ಆಯಾಮ ನೀಡಿಬಿಟ್ಟಿದೆ. ಅಹಿಂದ ಸಮುದಾಯವೇ ಬಹುಜನರಾಗಿರುವ ದಾವಣಗೆರೆ ದಕ್ಷಿಣ ಅಸೆಂಬ್ಲಿ ಕ್ಷೇತ್ರದಲ್ಲಿ ಕಾಂಗ್ರೆಸ್ ನ್ಯಾಯವಾಗಿ ಆ ವರ್ಗದ ಅರ್ಹರೊಬ್ಬರಿಗೆ...

ನೀಟ್ ವಿವಾದ: ಪ್ರಶ್ನೆ ಪತ್ರಿಕೆ ಸೋರಿಕೆ ಜೊತೆಗೆ ಹೆಚ್ಚುತ್ತಿರುವ ವಿದ್ಯಾರ್ಥಿಗಳ ಆತ್ಮಹತ್ಯೆ

ರಾಜಸ್ಥಾನದಲ್ಲಿ ನಡೆದ ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ (ಸಿಬಿಐ) ತನಿಖೆ ವೇಗ ಪಡೆದುಕೊಂಡಿದೆ. ದೇಶದಾದ್ಯಂತ ಹಲವು ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ...

ಎಸ್‌ಐಆರ್‌ನಲ್ಲಿ ಮತದಾನದ ಹಕ್ಕು ಹೋಯ್ತು..ಈಗ ಸರ್ಕಾರಿ ಸೌಲಭ್ಯದ ಸರದಿ..ಮುಂದೆ ನಾಗರಿಕತ್ವ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುವುದು ಚುನಾವಣಾ ಆಯೋಗ ಭಾರತದ ಕೋಟ್ಯಾಂತರ ನಾಗರಿಕ ಅಮೂಲ್ಯವಾದ ಮತದಾನದ ಹಕ್ಕನ್ನು ಕಿತ್ತುಕೊಂಡ ಒಂದು ವ್ಯವಸ್ಥಿತ ಸಂಚು ಎನ್ನಬಹುದು. ಬಿಹಾರ, ಪಶ್ಚಿಮ ಬಂಗಾಳ, ತಮಿಳುನಾಡು,...

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...