Homeಮುಖಪುಟಎತ್ತಿನಹೊಳೆ ಯೋಜನೆಗೆ 15 ಹಳ್ಳಿಗಳ ಮುಳುಗಡೆ ಗ್ರಾಮಸ್ಥರ ಗೋಳು ಕೇಳೋರೇ ಇಲ್ಲ

ಎತ್ತಿನಹೊಳೆ ಯೋಜನೆಗೆ 15 ಹಳ್ಳಿಗಳ ಮುಳುಗಡೆ ಗ್ರಾಮಸ್ಥರ ಗೋಳು ಕೇಳೋರೇ ಇಲ್ಲ

- Advertisement -
- Advertisement -

ಎತ್ತಿನಹೊಳೆ ಪ್ರಾಜೆಕ್ಟ್ ಕುಂಟುತ್ತಾ ಸಾಗಿದೆ. ಕುಡಿಯುವ ನೀರಿನ ಯೋಜನೆಯ ಕಾಮಗಾರಿಗೆ ಮೂರು ಹಂತದಲ್ಲಿ ರಾಜ್ಯ ಸರ್ಕಾರ ಕಾಮಗಾರಿಗಾಗಿ 40 ಸಾವಿರ ಕೋಟಿ ರೂ.ಗಳನ್ನು ಬಿಡುಗಡೆ ಮಾಡಿದೆ. ಸಕಲೇಶಪುರದಿಂದ ಉದ್ದೇಶಿತ ಡ್ಯಾಂ ನಿರ್ಮಾಣದ ಪ್ರದೇಶದವರೆಗೂ ಅಲ್ಲಲ್ಲಿ ನಾಲೆ ನಿರ್ಮಾಣ ಕಾಮಗಾರಿಗಳು ನಡೆಯುತ್ತಿವೆ. ಆದರೆ ಡ್ಯಾಂ ನಿರ್ಮಾಣಕ್ಕೆ ಇದುವರೆಗೂ ಸರ್ಕಾರ ಅಧಿಸೂಚನೆಯನ್ನೇ ಹೊರಡಿಸಿಲ್ಲ. ಅಧಿಕಾರಿಗಳು ಗ್ರಾಮಕ್ಕೆ ಭೇಟಿ ನೀಡಿ ಮಾಹಿತಿ ನೀಡುತ್ತಿದ್ದಾರೆಯೇ ಹೊರತು ಸರ್ಕಾರ ಅಧಿಸೂಚನೆ ಹೊರಡಿಸಲು ವಿಳಂಬ ಮಾಡುತ್ತಿರುವುದೇಕೆ ಎಂಬ ಜನರ ಪ್ರಶ್ನೆಗೆ ಉತ್ತರಿಸುತ್ತಿಲ್ಲ.

ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕು ಬೈರಗೊಂಡ್ಲು, ಭೂಚನಹಳ್ಳಿ ಮತ್ತು ಗೊಲ್ಲರಹಟ್ಟಿ ಬಳಿ ಉದ್ದೇಶಿತ ಡ್ಯಾಂ ಏರಿ ನಿರ್ಮಾಣಕ್ಕೆಂದು ಸರ್ಕಾರ ಸ್ಥಳ ಗುರುತಿಸಿ ನೀಲನಕಾಶೆ ತಯಾರಿಸಿದೆ. ಡ್ಯಾಂ ನಿರ್ಮಾಣದಿಂದ ಕೊರಟಗೆರೆ ತಾಲ್ಲೂಕಿನ 2700 ಎಕರೆ ಮತ್ತು ದೊಡ್ಡಬಳ್ಳಾಪುರದ 2500 ಎಕರೆ ಸೇರಿ ಒಟ್ಟು ಆರು ಸಾವಿರ ಎಕರೆ ಫಲವತ್ತಾದ ಭೂಮಿ ಭೂಸ್ವಾಧೀನಪಡಿಸಿಕೊಳ್ಳಲು ಸರ್ಕಾರ ಉದ್ದೇಶಿಸಿದೆ. ಡ್ಯಾಂ ನಿರ್ಮಾಣ ಮಾಡುವುದಕ್ಕೆ ಜನರ ಅಡ್ಡಿಯಿಲ್ಲ. ಆದರೆ ಅಧಿಸೂಚನೆ ಹೊರಡಿಸುವುದು, ಎಷ್ಟು ಭೂಮಿ ಸ್ವಾಧೀನಪಡಿಸುತ್ತಾರೆ? ಇದರ ಪರಿಹಾರ ಮೊತ್ತ ಎಷ್ಟು ಎಂಬುದರ ಕುರಿತು ಗ್ರಾಮಸ್ಥರಿಗೆ ಸ್ಪಷ್ಟ ಮಾಹಿತಿ ದೊರೆಯದೆ ಆತಂಕದಲ್ಲಿದ್ದಾರೆ.

ಉದ್ದೇಶಿತ ಡ್ಯಾಂ ನಿರ್ಮಾಣದಿಂದ ಕೊರಟಗೆರೆ ತಾಲೂಕಿನ ಬೈರಗೊಂಡ್ಲು, ಭೂಚನಹಳ್ಳಿ, ಗೊಲ್ಲರಹಟ್ಟಿ, ಬೀರಸಾಗರ, ಗೆದ್ದೆಗೇನಳ್ಳಿ, ಲಕ್ಕಮುತ್ತನಹಳ್ಳಿ ಸೆರಿದಂತೆ 7 ಹಳ್ಳಿಗಳು ಪೂರ್ಣ ಮುಳುಗಡೆಯಾದರೆ, ಕಾಟೇನಹಳ್ಳಿ, ಪುರದಹಳ್ಳಿ, ವಡೇರಹಳ್ಳಿ, ಬೆಲ್ಲದಹಳ್ಳಿ ಭಾಗಶಃ ಮುಳುಗಡೆಯಾಗಲಿವೆ. ದೊಡ್ಡಬಳ್ಳಾಪುರ ತಾಲೂಕಿನ 2 ಹಳ್ಳಿಗಳು ಮುಳುಗಡೆಯಾದರೆ ಒಟ್ಟು 22 ಹಳ್ಳಿಗಳ ಜನರು ಡ್ಯಾಂ ನಿರ್ಮಾಣದಿಂದ ಬಾಧಿತರಾಗುತ್ತಾರೆ. ಅವರಿಗೆ ಮುಂದಿನ ದಾರಿ, ವಸತಿ, ಭೂಮಿ, ಪರಿಹಾರ ಯಾವುದರ ಬಗ್ಗೆಯೂ ಸರ್ಕಾರ ಚಕಾರ ಎತ್ತಿಲ್ಲ.

ಡ್ಯಾಂ ಸಂಬಂಧ ನೋಟಿಫಿಕೇಷನ್ ಹೊರಡಿಸಿಲ್ಲ. ಭೂಸ್ವಾಧೀನದ ಪ್ರಕ್ರಿಯೆಯೇ ಆರಂಭವಾಗಿಲ್ಲ. ಯೋಜನೆಯ ಅನುಮೋದನೆ ಮಾತ್ರ ಆಗಿದೆ. ಡ್ಯಾಂ ನಿರ್ಮಾಣದ ಕುರಿತು ಮಾಹಿತಿ ನೀಡದೇ ಇರುವುದು ಸ್ಥಳೀಯ ವಿರೋಧಕ್ಕೆ ಪ್ರಮುಖ ಕಾರಣವಾಗಿದೆ. ಡ್ಯಾಂ ನಿರ್ಮಾಣ ಪ್ರದೇಶದಲ್ಲಿ ಭೂಮಿ ಫಲವತ್ತಾಗಿದೆ. ಎಲ್ಲಿ ನೋಡಿದರೂ ಹಸಿರಿನಿಂದ ಕೂಡಿದೆ. ಸಾವಿರಾರು ತೋಟಗಳನ್ನು ಮಾಡಿಕೊಂಡು ಜನ ಒಂದಷ್ಟು ಲಾಭ ಗಳಿಸುತ್ತಿದ್ದಾರೆ. ಅಡಿಕೆ, ತೆಂಗಿನ ತೋಟಗಳು ನಳನಳಿಸುತ್ತಿವೆ. ಇಲ್ಲಿ ನೀರಿಗೂ ಬರವಿಲ್ಲ. 500 ಅಡಿ ಬೋರ್‍ವೆಲ್ ಕೊರೆದರೆ ಸಾಕು ನೀರು ಸಿಗುತ್ತದೆ. ಈ ಭಾಗದಲ್ಲಿ ಯಾವುದೇ ನದಿ, ಕೆರೆಗಳು ಇಲ್ಲ, ಹಾಗಿದ್ದರೂ ಬೆಳೆಗಳು ಹಚ್ಚಹಸುರಿನಿಂದ ಕೂಡಿವೆ. ಇಂಥ ಭೂಮಿಗೆ ಸರ್ಕಾರ ಕಣ್ಣು ಹಾಕಲು ಕಾರಣವೇನು ಎಂಬುದು ಚಿದಂಬರ ರಹಸ್ಯವಾಗಿದೆ.

ನಮಗೆ ಟೆಂಡರ್ ಆಗಿರುವುದು ಗೊತ್ತಿಲ್ಲ. ಕಾಮಗಾರಿ ಗುತ್ತಿಗೆ ಪಡೆದಿರುವವರು ಗ್ರಾಮಗಳಲ್ಲಿ ಬ್ರೋಕರ್‍ಗಳನ್ನು ಬಿಟ್ಟು ರೈತರಿಗೆ 10-20 ಸಾವಿರ ರೂಪಾಯಿ ನೀಡಿ ಅವರ ಭೂಮಿಯಲ್ಲಿ ನಾಲೆ ತೋಡುತ್ತಿದ್ದಾರೆ. ಸರ್ಕಾರ ಭೂಸ್ವಾಧೀನದ ಬಗ್ಗೆ ಇದುವರೆಗೂ ಜಾಹಿರಾತು ನೀಡಿಲ್ಲ. ಅಧಿಸೂಚನೆ ಹೊರಡಿಸಿಲ್ಲ. ಇಲ್ಲಿ ಡ್ಯಾಂ ನಿರ್ಮಿಸುತ್ತೇವೆ, ಇಂತಿಂಥವರ ಭೂಮಿಯಲ್ಲಿ ನಾಲೆ ಹಾದುಹೋಗುತ್ತದೆ, ಇಂತಿಷ್ಟು ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುತ್ತೇವೆ, ಇಷ್ಟು ಪರಿಹಾರ ನೀಡುತ್ತೇವೆ ಎಂಬ ಮಾಹಿತಿ ನೀಡುತ್ತಿಲ್ಲ. ಬದಲಾಗಿ ಬ್ರೋಕರ್‍ಗಳು ಜಮೀನು ಮಾಲಿಕರಿಗೆ ಕುಡಿಸಿ, ಒಂದಿಷ್ಟು ಹಣವನ್ನು ಕೈಗಿಟ್ಟು, ನಿಮ್ಮ ಹೊಲದಲ್ಲಿ ನಾಲೆ ತೋಡುತ್ತೇವೆ. ಐದು ಅಡಿ ಆಳಕ್ಕೆ ತೋಡಿ ಆಮೇಲೆ ಮುಚ್ಚುತ್ತೇವೆ. ನೀವು ನಿಮ್ಮ ಜಮೀನಿನಲ್ಲಿ ಎಂದಿನಂತೆ ಬೆಳೆ ಬೆಳೆದುಕೊಳ್ಳಬಹುದು ಎಂದು ಹೇಳುತ್ತಿದ್ದಾರೆ. ಇದು ನಮಗೂ ಅರ್ಥ ಆಗುತ್ತಿಲ್ಲ. ಮುಳುಗಡೆ ಜಾಗದಲ್ಲಿ ಚಾನಲ್ ಮಾಡಲು ಬಿಟ್ಟಿಲ್ಲ. ಅವರೂ ಬಂದಿಲ್ಲ ಎನ್ನುತ್ತಾರೆ ಎತ್ತಿನಹೊಳೆ ಯೋಜನೆಯ ರೈತ ಹಿತರಕ್ಷಣಾ ಸಮಿತಿ ಪ್ರಧಾನ ಕಾರ್ಯದರ್ಶಿ ಚಿಕ್ಕತಿಮ್ಮಯ್ಯ.

ಭೂಸ್ವಾಧೀನದ ಪರಿಹಾರ ಹಣ ನೀಡುವಲ್ಲಿ ತಾರತಮ್ಯ ಮಾಡುತ್ತಿರುವುದು ಕೂಡ ಗ್ರಾಮಗಳನ್ನು ಕಳೆದುಕೊಳ್ಳುತ್ತಿರುವ ಜನರ ಆಕ್ರೋಶಕ್ಕೆ ಕಾರಣವಾಗಿದೆ. ಕೊರಟಗೆರೆ ತಾಲೂಕು ಬೆಲ್ಲದಹಳ್ಳಿ ಗ್ರಾಮದ ವ್ಯಾಪ್ತಿಯ ಜಮೀನುಗಳಿಗೆ ಒಂದು ಎಕರೆ ತೋಟ ಇರುವ ಭೂಮಿಗೆ ಬರೀ ಮೂರು ಲಕ್ಷ ರೂ ಕೊಟ್ಟರೆ, ಅದೇ ದೊಡ್ಡಬಳ್ಳಾಪುರ ತಾಲೂಕಿಗೆ ಸೇರಿದ ತೋಟದ ಭೂಮಿಗೆ ಎಂಟು ಲಕ್ಷ ಕೊಡುತ್ತಿದ್ದಾರೆ. ಅಕ್ಕಪಕ್ಕದ ಜಮೀನುಗಳಿಗೆ ಪರಿಹಾರ ನೀಡುವುದರಲ್ಲಿ ತಾರತಮ್ಯ ಮಾಡಿರುವುದು ಎದ್ದು ಕಾಣುತ್ತದೆ ಎಂಬ ಆರೋಪಗಳು ಕೇಳಿಬಂದಿವೆ.

ಡ್ಯಾಂ ಏರಿ ಐದು ಕಿಲೋಮೀಟರ್ ಉದ್ದವಿರಲಿದೆ. ಮೂರು ಹಳ್ಳಿಗಳನ್ನು ಏರಿ ನುಂಗಲಿದೆ.  ಇಷ್ಟೋಂದು ಹಳ್ಳಿಗಳು ಮುಳುಗಡೆಯಾಗುವ ಸೂಚನೆಯಿದ್ದರೂ ಸರ್ಕಾರ ಮನೆ, ಭೂಮಿ, ಬದುಕು ಹೀಗೆ ಎಲ್ಲವನ್ನೂ ಕಳೆದುಕೊಳ್ಳುವ ಜನರಿಗೆ ಪರ್ಯಾಯ ವ್ಯವಸ್ಥೆ ಏನು ಮಾಡಿದೆ ಎಂದು ಕೇಳಿಕೊಂಡರೆ ಉತ್ತರ ಯಾರಿಗೂ ಗೊತ್ತಿಲ್ಲ. ಈಗಾಗಲೇ ಯೋಜನೆಯ ನಿರಾಶ್ರಿತರಾದವರಿಗೆ ಬೇರೆ ಕಡೆಗಳಲ್ಲಿ ಇದುವರೆಗೂ ಪರ್ಯಾಯ ವ್ಯವಸ್ಥೆಯನ್ನು ರೂಪಿಸಿಲ್ಲ. ಅವರಿಗೆ ಬಂದಂತಹ ಪರಿಸ್ಥಿತಿ ತುಮಕೂರು ಜನರಿಗೂ ಬಾರದೇ ಇರಲಿ ಎಂಬುದು ನಮ್ಮ ಆಶಯ.
ಸಿದ್ದಯ್ಯ ಕೆ.ಈ

ಈ ಮೊದಲು ಕಾಟೇನಹಳ್ಳಿ, ಬರಗೂರು ಸಮೀಪ ಡ್ಯಾಂ ನಿರ್ಮಾಣಕ್ಕೆ ಜಾಗ ಗುರುತಿಸಿತ್ತು. ಈ ಪ್ರದೇಶದಲ್ಲಿ ಎರಡೂ ಕಡೆ ಎತ್ತರದ ಗುಡ್ಡಗಳಿದ್ದು ನಡುವೆ ತಗ್ಗು ಪ್ರದೇಶವಿದೆ. ಈ ಎರಡು ಗುಡ್ಡಗಳಿಗೆ ಒಂದು ಕಿಲೋಮೀಟರ್ ಏರಿ ನಿರ್ಮಾಣ ಮಾಡಿದ್ದರೆ ಎತ್ತಿನಹೊಳೆಯಿಂದ ತರುವ ಎಲ್ಲ ನೀರನ್ನು ತುಂಬಿಸುವ ಸಾಧ್ಯತೆ ಇತ್ತು. ಇಲ್ಲಿ ಕಣಿವೆ ಇದ್ದಂತೆ ಇರುವುದರಿಂದ ನೀರು ನಿಲ್ಲಲು ಅನುಕೂಲವಾಗುತ್ತಿತ್ತು. ಆದರೆ ಸರ್ಕಾರ ವೈಜ್ಞಾನಿಕ ದೃಷ್ಟಿಕೋನದಿಂದ ಡ್ಯಾಂ ನಿರ್ಮಾಣಕ್ಕೆ ಮುಂದಾಗಿಲ್ಲ. ದುಡ್ಡು ಲೂಟಿ ಮಾಡುವ ಉದ್ದೇಶದಿಂದ ಡ್ಯಾಂ ನಿರ್ಮಾಣಕ್ಕೆ ತಯಾರಿ ನಡೆಯುತ್ತಿದೆ. ಬರಗೂರು-ಕಾಟೇನಹಳ್ಳಿ ವ್ಯಾಪ್ತಿಯಲ್ಲಿ ಡ್ಯಾಂ ನಿರ್ಮಿಸಿದ್ದರೆ ನೂರಾರು ಕೆರೆಗಳಿಗೆ ನೀರು ಕೊಡಲು ಅನುಕೂಲವಾಗುತ್ತಿತ್ತು. ಆದರೆ ಸರ್ಕಾರ ಬೇರೇನೋ ಉದ್ದೇಶವಿಟ್ಟುಕೊಂಡಿದೆ. ಇದು ನಿಲ್ಲಬೇಕು ಎಂಬುದು ಈ ಭಾಗದ ಜನರ ಅಭಿಮತ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...