Homeಮುಖಪುಟಎತ್ತಿನಹೊಳೆ ಯೋಜನೆಗೆ 15 ಹಳ್ಳಿಗಳ ಮುಳುಗಡೆ ಗ್ರಾಮಸ್ಥರ ಗೋಳು ಕೇಳೋರೇ ಇಲ್ಲ

ಎತ್ತಿನಹೊಳೆ ಯೋಜನೆಗೆ 15 ಹಳ್ಳಿಗಳ ಮುಳುಗಡೆ ಗ್ರಾಮಸ್ಥರ ಗೋಳು ಕೇಳೋರೇ ಇಲ್ಲ

- Advertisement -
- Advertisement -

ಎತ್ತಿನಹೊಳೆ ಪ್ರಾಜೆಕ್ಟ್ ಕುಂಟುತ್ತಾ ಸಾಗಿದೆ. ಕುಡಿಯುವ ನೀರಿನ ಯೋಜನೆಯ ಕಾಮಗಾರಿಗೆ ಮೂರು ಹಂತದಲ್ಲಿ ರಾಜ್ಯ ಸರ್ಕಾರ ಕಾಮಗಾರಿಗಾಗಿ 40 ಸಾವಿರ ಕೋಟಿ ರೂ.ಗಳನ್ನು ಬಿಡುಗಡೆ ಮಾಡಿದೆ. ಸಕಲೇಶಪುರದಿಂದ ಉದ್ದೇಶಿತ ಡ್ಯಾಂ ನಿರ್ಮಾಣದ ಪ್ರದೇಶದವರೆಗೂ ಅಲ್ಲಲ್ಲಿ ನಾಲೆ ನಿರ್ಮಾಣ ಕಾಮಗಾರಿಗಳು ನಡೆಯುತ್ತಿವೆ. ಆದರೆ ಡ್ಯಾಂ ನಿರ್ಮಾಣಕ್ಕೆ ಇದುವರೆಗೂ ಸರ್ಕಾರ ಅಧಿಸೂಚನೆಯನ್ನೇ ಹೊರಡಿಸಿಲ್ಲ. ಅಧಿಕಾರಿಗಳು ಗ್ರಾಮಕ್ಕೆ ಭೇಟಿ ನೀಡಿ ಮಾಹಿತಿ ನೀಡುತ್ತಿದ್ದಾರೆಯೇ ಹೊರತು ಸರ್ಕಾರ ಅಧಿಸೂಚನೆ ಹೊರಡಿಸಲು ವಿಳಂಬ ಮಾಡುತ್ತಿರುವುದೇಕೆ ಎಂಬ ಜನರ ಪ್ರಶ್ನೆಗೆ ಉತ್ತರಿಸುತ್ತಿಲ್ಲ.

ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕು ಬೈರಗೊಂಡ್ಲು, ಭೂಚನಹಳ್ಳಿ ಮತ್ತು ಗೊಲ್ಲರಹಟ್ಟಿ ಬಳಿ ಉದ್ದೇಶಿತ ಡ್ಯಾಂ ಏರಿ ನಿರ್ಮಾಣಕ್ಕೆಂದು ಸರ್ಕಾರ ಸ್ಥಳ ಗುರುತಿಸಿ ನೀಲನಕಾಶೆ ತಯಾರಿಸಿದೆ. ಡ್ಯಾಂ ನಿರ್ಮಾಣದಿಂದ ಕೊರಟಗೆರೆ ತಾಲ್ಲೂಕಿನ 2700 ಎಕರೆ ಮತ್ತು ದೊಡ್ಡಬಳ್ಳಾಪುರದ 2500 ಎಕರೆ ಸೇರಿ ಒಟ್ಟು ಆರು ಸಾವಿರ ಎಕರೆ ಫಲವತ್ತಾದ ಭೂಮಿ ಭೂಸ್ವಾಧೀನಪಡಿಸಿಕೊಳ್ಳಲು ಸರ್ಕಾರ ಉದ್ದೇಶಿಸಿದೆ. ಡ್ಯಾಂ ನಿರ್ಮಾಣ ಮಾಡುವುದಕ್ಕೆ ಜನರ ಅಡ್ಡಿಯಿಲ್ಲ. ಆದರೆ ಅಧಿಸೂಚನೆ ಹೊರಡಿಸುವುದು, ಎಷ್ಟು ಭೂಮಿ ಸ್ವಾಧೀನಪಡಿಸುತ್ತಾರೆ? ಇದರ ಪರಿಹಾರ ಮೊತ್ತ ಎಷ್ಟು ಎಂಬುದರ ಕುರಿತು ಗ್ರಾಮಸ್ಥರಿಗೆ ಸ್ಪಷ್ಟ ಮಾಹಿತಿ ದೊರೆಯದೆ ಆತಂಕದಲ್ಲಿದ್ದಾರೆ.

ಉದ್ದೇಶಿತ ಡ್ಯಾಂ ನಿರ್ಮಾಣದಿಂದ ಕೊರಟಗೆರೆ ತಾಲೂಕಿನ ಬೈರಗೊಂಡ್ಲು, ಭೂಚನಹಳ್ಳಿ, ಗೊಲ್ಲರಹಟ್ಟಿ, ಬೀರಸಾಗರ, ಗೆದ್ದೆಗೇನಳ್ಳಿ, ಲಕ್ಕಮುತ್ತನಹಳ್ಳಿ ಸೆರಿದಂತೆ 7 ಹಳ್ಳಿಗಳು ಪೂರ್ಣ ಮುಳುಗಡೆಯಾದರೆ, ಕಾಟೇನಹಳ್ಳಿ, ಪುರದಹಳ್ಳಿ, ವಡೇರಹಳ್ಳಿ, ಬೆಲ್ಲದಹಳ್ಳಿ ಭಾಗಶಃ ಮುಳುಗಡೆಯಾಗಲಿವೆ. ದೊಡ್ಡಬಳ್ಳಾಪುರ ತಾಲೂಕಿನ 2 ಹಳ್ಳಿಗಳು ಮುಳುಗಡೆಯಾದರೆ ಒಟ್ಟು 22 ಹಳ್ಳಿಗಳ ಜನರು ಡ್ಯಾಂ ನಿರ್ಮಾಣದಿಂದ ಬಾಧಿತರಾಗುತ್ತಾರೆ. ಅವರಿಗೆ ಮುಂದಿನ ದಾರಿ, ವಸತಿ, ಭೂಮಿ, ಪರಿಹಾರ ಯಾವುದರ ಬಗ್ಗೆಯೂ ಸರ್ಕಾರ ಚಕಾರ ಎತ್ತಿಲ್ಲ.

ಡ್ಯಾಂ ಸಂಬಂಧ ನೋಟಿಫಿಕೇಷನ್ ಹೊರಡಿಸಿಲ್ಲ. ಭೂಸ್ವಾಧೀನದ ಪ್ರಕ್ರಿಯೆಯೇ ಆರಂಭವಾಗಿಲ್ಲ. ಯೋಜನೆಯ ಅನುಮೋದನೆ ಮಾತ್ರ ಆಗಿದೆ. ಡ್ಯಾಂ ನಿರ್ಮಾಣದ ಕುರಿತು ಮಾಹಿತಿ ನೀಡದೇ ಇರುವುದು ಸ್ಥಳೀಯ ವಿರೋಧಕ್ಕೆ ಪ್ರಮುಖ ಕಾರಣವಾಗಿದೆ. ಡ್ಯಾಂ ನಿರ್ಮಾಣ ಪ್ರದೇಶದಲ್ಲಿ ಭೂಮಿ ಫಲವತ್ತಾಗಿದೆ. ಎಲ್ಲಿ ನೋಡಿದರೂ ಹಸಿರಿನಿಂದ ಕೂಡಿದೆ. ಸಾವಿರಾರು ತೋಟಗಳನ್ನು ಮಾಡಿಕೊಂಡು ಜನ ಒಂದಷ್ಟು ಲಾಭ ಗಳಿಸುತ್ತಿದ್ದಾರೆ. ಅಡಿಕೆ, ತೆಂಗಿನ ತೋಟಗಳು ನಳನಳಿಸುತ್ತಿವೆ. ಇಲ್ಲಿ ನೀರಿಗೂ ಬರವಿಲ್ಲ. 500 ಅಡಿ ಬೋರ್‍ವೆಲ್ ಕೊರೆದರೆ ಸಾಕು ನೀರು ಸಿಗುತ್ತದೆ. ಈ ಭಾಗದಲ್ಲಿ ಯಾವುದೇ ನದಿ, ಕೆರೆಗಳು ಇಲ್ಲ, ಹಾಗಿದ್ದರೂ ಬೆಳೆಗಳು ಹಚ್ಚಹಸುರಿನಿಂದ ಕೂಡಿವೆ. ಇಂಥ ಭೂಮಿಗೆ ಸರ್ಕಾರ ಕಣ್ಣು ಹಾಕಲು ಕಾರಣವೇನು ಎಂಬುದು ಚಿದಂಬರ ರಹಸ್ಯವಾಗಿದೆ.

ನಮಗೆ ಟೆಂಡರ್ ಆಗಿರುವುದು ಗೊತ್ತಿಲ್ಲ. ಕಾಮಗಾರಿ ಗುತ್ತಿಗೆ ಪಡೆದಿರುವವರು ಗ್ರಾಮಗಳಲ್ಲಿ ಬ್ರೋಕರ್‍ಗಳನ್ನು ಬಿಟ್ಟು ರೈತರಿಗೆ 10-20 ಸಾವಿರ ರೂಪಾಯಿ ನೀಡಿ ಅವರ ಭೂಮಿಯಲ್ಲಿ ನಾಲೆ ತೋಡುತ್ತಿದ್ದಾರೆ. ಸರ್ಕಾರ ಭೂಸ್ವಾಧೀನದ ಬಗ್ಗೆ ಇದುವರೆಗೂ ಜಾಹಿರಾತು ನೀಡಿಲ್ಲ. ಅಧಿಸೂಚನೆ ಹೊರಡಿಸಿಲ್ಲ. ಇಲ್ಲಿ ಡ್ಯಾಂ ನಿರ್ಮಿಸುತ್ತೇವೆ, ಇಂತಿಂಥವರ ಭೂಮಿಯಲ್ಲಿ ನಾಲೆ ಹಾದುಹೋಗುತ್ತದೆ, ಇಂತಿಷ್ಟು ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುತ್ತೇವೆ, ಇಷ್ಟು ಪರಿಹಾರ ನೀಡುತ್ತೇವೆ ಎಂಬ ಮಾಹಿತಿ ನೀಡುತ್ತಿಲ್ಲ. ಬದಲಾಗಿ ಬ್ರೋಕರ್‍ಗಳು ಜಮೀನು ಮಾಲಿಕರಿಗೆ ಕುಡಿಸಿ, ಒಂದಿಷ್ಟು ಹಣವನ್ನು ಕೈಗಿಟ್ಟು, ನಿಮ್ಮ ಹೊಲದಲ್ಲಿ ನಾಲೆ ತೋಡುತ್ತೇವೆ. ಐದು ಅಡಿ ಆಳಕ್ಕೆ ತೋಡಿ ಆಮೇಲೆ ಮುಚ್ಚುತ್ತೇವೆ. ನೀವು ನಿಮ್ಮ ಜಮೀನಿನಲ್ಲಿ ಎಂದಿನಂತೆ ಬೆಳೆ ಬೆಳೆದುಕೊಳ್ಳಬಹುದು ಎಂದು ಹೇಳುತ್ತಿದ್ದಾರೆ. ಇದು ನಮಗೂ ಅರ್ಥ ಆಗುತ್ತಿಲ್ಲ. ಮುಳುಗಡೆ ಜಾಗದಲ್ಲಿ ಚಾನಲ್ ಮಾಡಲು ಬಿಟ್ಟಿಲ್ಲ. ಅವರೂ ಬಂದಿಲ್ಲ ಎನ್ನುತ್ತಾರೆ ಎತ್ತಿನಹೊಳೆ ಯೋಜನೆಯ ರೈತ ಹಿತರಕ್ಷಣಾ ಸಮಿತಿ ಪ್ರಧಾನ ಕಾರ್ಯದರ್ಶಿ ಚಿಕ್ಕತಿಮ್ಮಯ್ಯ.

ಭೂಸ್ವಾಧೀನದ ಪರಿಹಾರ ಹಣ ನೀಡುವಲ್ಲಿ ತಾರತಮ್ಯ ಮಾಡುತ್ತಿರುವುದು ಕೂಡ ಗ್ರಾಮಗಳನ್ನು ಕಳೆದುಕೊಳ್ಳುತ್ತಿರುವ ಜನರ ಆಕ್ರೋಶಕ್ಕೆ ಕಾರಣವಾಗಿದೆ. ಕೊರಟಗೆರೆ ತಾಲೂಕು ಬೆಲ್ಲದಹಳ್ಳಿ ಗ್ರಾಮದ ವ್ಯಾಪ್ತಿಯ ಜಮೀನುಗಳಿಗೆ ಒಂದು ಎಕರೆ ತೋಟ ಇರುವ ಭೂಮಿಗೆ ಬರೀ ಮೂರು ಲಕ್ಷ ರೂ ಕೊಟ್ಟರೆ, ಅದೇ ದೊಡ್ಡಬಳ್ಳಾಪುರ ತಾಲೂಕಿಗೆ ಸೇರಿದ ತೋಟದ ಭೂಮಿಗೆ ಎಂಟು ಲಕ್ಷ ಕೊಡುತ್ತಿದ್ದಾರೆ. ಅಕ್ಕಪಕ್ಕದ ಜಮೀನುಗಳಿಗೆ ಪರಿಹಾರ ನೀಡುವುದರಲ್ಲಿ ತಾರತಮ್ಯ ಮಾಡಿರುವುದು ಎದ್ದು ಕಾಣುತ್ತದೆ ಎಂಬ ಆರೋಪಗಳು ಕೇಳಿಬಂದಿವೆ.

ಡ್ಯಾಂ ಏರಿ ಐದು ಕಿಲೋಮೀಟರ್ ಉದ್ದವಿರಲಿದೆ. ಮೂರು ಹಳ್ಳಿಗಳನ್ನು ಏರಿ ನುಂಗಲಿದೆ.  ಇಷ್ಟೋಂದು ಹಳ್ಳಿಗಳು ಮುಳುಗಡೆಯಾಗುವ ಸೂಚನೆಯಿದ್ದರೂ ಸರ್ಕಾರ ಮನೆ, ಭೂಮಿ, ಬದುಕು ಹೀಗೆ ಎಲ್ಲವನ್ನೂ ಕಳೆದುಕೊಳ್ಳುವ ಜನರಿಗೆ ಪರ್ಯಾಯ ವ್ಯವಸ್ಥೆ ಏನು ಮಾಡಿದೆ ಎಂದು ಕೇಳಿಕೊಂಡರೆ ಉತ್ತರ ಯಾರಿಗೂ ಗೊತ್ತಿಲ್ಲ. ಈಗಾಗಲೇ ಯೋಜನೆಯ ನಿರಾಶ್ರಿತರಾದವರಿಗೆ ಬೇರೆ ಕಡೆಗಳಲ್ಲಿ ಇದುವರೆಗೂ ಪರ್ಯಾಯ ವ್ಯವಸ್ಥೆಯನ್ನು ರೂಪಿಸಿಲ್ಲ. ಅವರಿಗೆ ಬಂದಂತಹ ಪರಿಸ್ಥಿತಿ ತುಮಕೂರು ಜನರಿಗೂ ಬಾರದೇ ಇರಲಿ ಎಂಬುದು ನಮ್ಮ ಆಶಯ.
ಸಿದ್ದಯ್ಯ ಕೆ.ಈ

ಈ ಮೊದಲು ಕಾಟೇನಹಳ್ಳಿ, ಬರಗೂರು ಸಮೀಪ ಡ್ಯಾಂ ನಿರ್ಮಾಣಕ್ಕೆ ಜಾಗ ಗುರುತಿಸಿತ್ತು. ಈ ಪ್ರದೇಶದಲ್ಲಿ ಎರಡೂ ಕಡೆ ಎತ್ತರದ ಗುಡ್ಡಗಳಿದ್ದು ನಡುವೆ ತಗ್ಗು ಪ್ರದೇಶವಿದೆ. ಈ ಎರಡು ಗುಡ್ಡಗಳಿಗೆ ಒಂದು ಕಿಲೋಮೀಟರ್ ಏರಿ ನಿರ್ಮಾಣ ಮಾಡಿದ್ದರೆ ಎತ್ತಿನಹೊಳೆಯಿಂದ ತರುವ ಎಲ್ಲ ನೀರನ್ನು ತುಂಬಿಸುವ ಸಾಧ್ಯತೆ ಇತ್ತು. ಇಲ್ಲಿ ಕಣಿವೆ ಇದ್ದಂತೆ ಇರುವುದರಿಂದ ನೀರು ನಿಲ್ಲಲು ಅನುಕೂಲವಾಗುತ್ತಿತ್ತು. ಆದರೆ ಸರ್ಕಾರ ವೈಜ್ಞಾನಿಕ ದೃಷ್ಟಿಕೋನದಿಂದ ಡ್ಯಾಂ ನಿರ್ಮಾಣಕ್ಕೆ ಮುಂದಾಗಿಲ್ಲ. ದುಡ್ಡು ಲೂಟಿ ಮಾಡುವ ಉದ್ದೇಶದಿಂದ ಡ್ಯಾಂ ನಿರ್ಮಾಣಕ್ಕೆ ತಯಾರಿ ನಡೆಯುತ್ತಿದೆ. ಬರಗೂರು-ಕಾಟೇನಹಳ್ಳಿ ವ್ಯಾಪ್ತಿಯಲ್ಲಿ ಡ್ಯಾಂ ನಿರ್ಮಿಸಿದ್ದರೆ ನೂರಾರು ಕೆರೆಗಳಿಗೆ ನೀರು ಕೊಡಲು ಅನುಕೂಲವಾಗುತ್ತಿತ್ತು. ಆದರೆ ಸರ್ಕಾರ ಬೇರೇನೋ ಉದ್ದೇಶವಿಟ್ಟುಕೊಂಡಿದೆ. ಇದು ನಿಲ್ಲಬೇಕು ಎಂಬುದು ಈ ಭಾಗದ ಜನರ ಅಭಿಮತ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...