Homeಮುಖಪುಟಎತ್ತಿನಹೊಳೆ ಯೋಜನೆಗೆ 15 ಹಳ್ಳಿಗಳ ಮುಳುಗಡೆ ಗ್ರಾಮಸ್ಥರ ಗೋಳು ಕೇಳೋರೇ ಇಲ್ಲ

ಎತ್ತಿನಹೊಳೆ ಯೋಜನೆಗೆ 15 ಹಳ್ಳಿಗಳ ಮುಳುಗಡೆ ಗ್ರಾಮಸ್ಥರ ಗೋಳು ಕೇಳೋರೇ ಇಲ್ಲ

- Advertisement -
- Advertisement -

ಎತ್ತಿನಹೊಳೆ ಪ್ರಾಜೆಕ್ಟ್ ಕುಂಟುತ್ತಾ ಸಾಗಿದೆ. ಕುಡಿಯುವ ನೀರಿನ ಯೋಜನೆಯ ಕಾಮಗಾರಿಗೆ ಮೂರು ಹಂತದಲ್ಲಿ ರಾಜ್ಯ ಸರ್ಕಾರ ಕಾಮಗಾರಿಗಾಗಿ 40 ಸಾವಿರ ಕೋಟಿ ರೂ.ಗಳನ್ನು ಬಿಡುಗಡೆ ಮಾಡಿದೆ. ಸಕಲೇಶಪುರದಿಂದ ಉದ್ದೇಶಿತ ಡ್ಯಾಂ ನಿರ್ಮಾಣದ ಪ್ರದೇಶದವರೆಗೂ ಅಲ್ಲಲ್ಲಿ ನಾಲೆ ನಿರ್ಮಾಣ ಕಾಮಗಾರಿಗಳು ನಡೆಯುತ್ತಿವೆ. ಆದರೆ ಡ್ಯಾಂ ನಿರ್ಮಾಣಕ್ಕೆ ಇದುವರೆಗೂ ಸರ್ಕಾರ ಅಧಿಸೂಚನೆಯನ್ನೇ ಹೊರಡಿಸಿಲ್ಲ. ಅಧಿಕಾರಿಗಳು ಗ್ರಾಮಕ್ಕೆ ಭೇಟಿ ನೀಡಿ ಮಾಹಿತಿ ನೀಡುತ್ತಿದ್ದಾರೆಯೇ ಹೊರತು ಸರ್ಕಾರ ಅಧಿಸೂಚನೆ ಹೊರಡಿಸಲು ವಿಳಂಬ ಮಾಡುತ್ತಿರುವುದೇಕೆ ಎಂಬ ಜನರ ಪ್ರಶ್ನೆಗೆ ಉತ್ತರಿಸುತ್ತಿಲ್ಲ.

ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕು ಬೈರಗೊಂಡ್ಲು, ಭೂಚನಹಳ್ಳಿ ಮತ್ತು ಗೊಲ್ಲರಹಟ್ಟಿ ಬಳಿ ಉದ್ದೇಶಿತ ಡ್ಯಾಂ ಏರಿ ನಿರ್ಮಾಣಕ್ಕೆಂದು ಸರ್ಕಾರ ಸ್ಥಳ ಗುರುತಿಸಿ ನೀಲನಕಾಶೆ ತಯಾರಿಸಿದೆ. ಡ್ಯಾಂ ನಿರ್ಮಾಣದಿಂದ ಕೊರಟಗೆರೆ ತಾಲ್ಲೂಕಿನ 2700 ಎಕರೆ ಮತ್ತು ದೊಡ್ಡಬಳ್ಳಾಪುರದ 2500 ಎಕರೆ ಸೇರಿ ಒಟ್ಟು ಆರು ಸಾವಿರ ಎಕರೆ ಫಲವತ್ತಾದ ಭೂಮಿ ಭೂಸ್ವಾಧೀನಪಡಿಸಿಕೊಳ್ಳಲು ಸರ್ಕಾರ ಉದ್ದೇಶಿಸಿದೆ. ಡ್ಯಾಂ ನಿರ್ಮಾಣ ಮಾಡುವುದಕ್ಕೆ ಜನರ ಅಡ್ಡಿಯಿಲ್ಲ. ಆದರೆ ಅಧಿಸೂಚನೆ ಹೊರಡಿಸುವುದು, ಎಷ್ಟು ಭೂಮಿ ಸ್ವಾಧೀನಪಡಿಸುತ್ತಾರೆ? ಇದರ ಪರಿಹಾರ ಮೊತ್ತ ಎಷ್ಟು ಎಂಬುದರ ಕುರಿತು ಗ್ರಾಮಸ್ಥರಿಗೆ ಸ್ಪಷ್ಟ ಮಾಹಿತಿ ದೊರೆಯದೆ ಆತಂಕದಲ್ಲಿದ್ದಾರೆ.

ಉದ್ದೇಶಿತ ಡ್ಯಾಂ ನಿರ್ಮಾಣದಿಂದ ಕೊರಟಗೆರೆ ತಾಲೂಕಿನ ಬೈರಗೊಂಡ್ಲು, ಭೂಚನಹಳ್ಳಿ, ಗೊಲ್ಲರಹಟ್ಟಿ, ಬೀರಸಾಗರ, ಗೆದ್ದೆಗೇನಳ್ಳಿ, ಲಕ್ಕಮುತ್ತನಹಳ್ಳಿ ಸೆರಿದಂತೆ 7 ಹಳ್ಳಿಗಳು ಪೂರ್ಣ ಮುಳುಗಡೆಯಾದರೆ, ಕಾಟೇನಹಳ್ಳಿ, ಪುರದಹಳ್ಳಿ, ವಡೇರಹಳ್ಳಿ, ಬೆಲ್ಲದಹಳ್ಳಿ ಭಾಗಶಃ ಮುಳುಗಡೆಯಾಗಲಿವೆ. ದೊಡ್ಡಬಳ್ಳಾಪುರ ತಾಲೂಕಿನ 2 ಹಳ್ಳಿಗಳು ಮುಳುಗಡೆಯಾದರೆ ಒಟ್ಟು 22 ಹಳ್ಳಿಗಳ ಜನರು ಡ್ಯಾಂ ನಿರ್ಮಾಣದಿಂದ ಬಾಧಿತರಾಗುತ್ತಾರೆ. ಅವರಿಗೆ ಮುಂದಿನ ದಾರಿ, ವಸತಿ, ಭೂಮಿ, ಪರಿಹಾರ ಯಾವುದರ ಬಗ್ಗೆಯೂ ಸರ್ಕಾರ ಚಕಾರ ಎತ್ತಿಲ್ಲ.

ಡ್ಯಾಂ ಸಂಬಂಧ ನೋಟಿಫಿಕೇಷನ್ ಹೊರಡಿಸಿಲ್ಲ. ಭೂಸ್ವಾಧೀನದ ಪ್ರಕ್ರಿಯೆಯೇ ಆರಂಭವಾಗಿಲ್ಲ. ಯೋಜನೆಯ ಅನುಮೋದನೆ ಮಾತ್ರ ಆಗಿದೆ. ಡ್ಯಾಂ ನಿರ್ಮಾಣದ ಕುರಿತು ಮಾಹಿತಿ ನೀಡದೇ ಇರುವುದು ಸ್ಥಳೀಯ ವಿರೋಧಕ್ಕೆ ಪ್ರಮುಖ ಕಾರಣವಾಗಿದೆ. ಡ್ಯಾಂ ನಿರ್ಮಾಣ ಪ್ರದೇಶದಲ್ಲಿ ಭೂಮಿ ಫಲವತ್ತಾಗಿದೆ. ಎಲ್ಲಿ ನೋಡಿದರೂ ಹಸಿರಿನಿಂದ ಕೂಡಿದೆ. ಸಾವಿರಾರು ತೋಟಗಳನ್ನು ಮಾಡಿಕೊಂಡು ಜನ ಒಂದಷ್ಟು ಲಾಭ ಗಳಿಸುತ್ತಿದ್ದಾರೆ. ಅಡಿಕೆ, ತೆಂಗಿನ ತೋಟಗಳು ನಳನಳಿಸುತ್ತಿವೆ. ಇಲ್ಲಿ ನೀರಿಗೂ ಬರವಿಲ್ಲ. 500 ಅಡಿ ಬೋರ್‍ವೆಲ್ ಕೊರೆದರೆ ಸಾಕು ನೀರು ಸಿಗುತ್ತದೆ. ಈ ಭಾಗದಲ್ಲಿ ಯಾವುದೇ ನದಿ, ಕೆರೆಗಳು ಇಲ್ಲ, ಹಾಗಿದ್ದರೂ ಬೆಳೆಗಳು ಹಚ್ಚಹಸುರಿನಿಂದ ಕೂಡಿವೆ. ಇಂಥ ಭೂಮಿಗೆ ಸರ್ಕಾರ ಕಣ್ಣು ಹಾಕಲು ಕಾರಣವೇನು ಎಂಬುದು ಚಿದಂಬರ ರಹಸ್ಯವಾಗಿದೆ.

ನಮಗೆ ಟೆಂಡರ್ ಆಗಿರುವುದು ಗೊತ್ತಿಲ್ಲ. ಕಾಮಗಾರಿ ಗುತ್ತಿಗೆ ಪಡೆದಿರುವವರು ಗ್ರಾಮಗಳಲ್ಲಿ ಬ್ರೋಕರ್‍ಗಳನ್ನು ಬಿಟ್ಟು ರೈತರಿಗೆ 10-20 ಸಾವಿರ ರೂಪಾಯಿ ನೀಡಿ ಅವರ ಭೂಮಿಯಲ್ಲಿ ನಾಲೆ ತೋಡುತ್ತಿದ್ದಾರೆ. ಸರ್ಕಾರ ಭೂಸ್ವಾಧೀನದ ಬಗ್ಗೆ ಇದುವರೆಗೂ ಜಾಹಿರಾತು ನೀಡಿಲ್ಲ. ಅಧಿಸೂಚನೆ ಹೊರಡಿಸಿಲ್ಲ. ಇಲ್ಲಿ ಡ್ಯಾಂ ನಿರ್ಮಿಸುತ್ತೇವೆ, ಇಂತಿಂಥವರ ಭೂಮಿಯಲ್ಲಿ ನಾಲೆ ಹಾದುಹೋಗುತ್ತದೆ, ಇಂತಿಷ್ಟು ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುತ್ತೇವೆ, ಇಷ್ಟು ಪರಿಹಾರ ನೀಡುತ್ತೇವೆ ಎಂಬ ಮಾಹಿತಿ ನೀಡುತ್ತಿಲ್ಲ. ಬದಲಾಗಿ ಬ್ರೋಕರ್‍ಗಳು ಜಮೀನು ಮಾಲಿಕರಿಗೆ ಕುಡಿಸಿ, ಒಂದಿಷ್ಟು ಹಣವನ್ನು ಕೈಗಿಟ್ಟು, ನಿಮ್ಮ ಹೊಲದಲ್ಲಿ ನಾಲೆ ತೋಡುತ್ತೇವೆ. ಐದು ಅಡಿ ಆಳಕ್ಕೆ ತೋಡಿ ಆಮೇಲೆ ಮುಚ್ಚುತ್ತೇವೆ. ನೀವು ನಿಮ್ಮ ಜಮೀನಿನಲ್ಲಿ ಎಂದಿನಂತೆ ಬೆಳೆ ಬೆಳೆದುಕೊಳ್ಳಬಹುದು ಎಂದು ಹೇಳುತ್ತಿದ್ದಾರೆ. ಇದು ನಮಗೂ ಅರ್ಥ ಆಗುತ್ತಿಲ್ಲ. ಮುಳುಗಡೆ ಜಾಗದಲ್ಲಿ ಚಾನಲ್ ಮಾಡಲು ಬಿಟ್ಟಿಲ್ಲ. ಅವರೂ ಬಂದಿಲ್ಲ ಎನ್ನುತ್ತಾರೆ ಎತ್ತಿನಹೊಳೆ ಯೋಜನೆಯ ರೈತ ಹಿತರಕ್ಷಣಾ ಸಮಿತಿ ಪ್ರಧಾನ ಕಾರ್ಯದರ್ಶಿ ಚಿಕ್ಕತಿಮ್ಮಯ್ಯ.

ಭೂಸ್ವಾಧೀನದ ಪರಿಹಾರ ಹಣ ನೀಡುವಲ್ಲಿ ತಾರತಮ್ಯ ಮಾಡುತ್ತಿರುವುದು ಕೂಡ ಗ್ರಾಮಗಳನ್ನು ಕಳೆದುಕೊಳ್ಳುತ್ತಿರುವ ಜನರ ಆಕ್ರೋಶಕ್ಕೆ ಕಾರಣವಾಗಿದೆ. ಕೊರಟಗೆರೆ ತಾಲೂಕು ಬೆಲ್ಲದಹಳ್ಳಿ ಗ್ರಾಮದ ವ್ಯಾಪ್ತಿಯ ಜಮೀನುಗಳಿಗೆ ಒಂದು ಎಕರೆ ತೋಟ ಇರುವ ಭೂಮಿಗೆ ಬರೀ ಮೂರು ಲಕ್ಷ ರೂ ಕೊಟ್ಟರೆ, ಅದೇ ದೊಡ್ಡಬಳ್ಳಾಪುರ ತಾಲೂಕಿಗೆ ಸೇರಿದ ತೋಟದ ಭೂಮಿಗೆ ಎಂಟು ಲಕ್ಷ ಕೊಡುತ್ತಿದ್ದಾರೆ. ಅಕ್ಕಪಕ್ಕದ ಜಮೀನುಗಳಿಗೆ ಪರಿಹಾರ ನೀಡುವುದರಲ್ಲಿ ತಾರತಮ್ಯ ಮಾಡಿರುವುದು ಎದ್ದು ಕಾಣುತ್ತದೆ ಎಂಬ ಆರೋಪಗಳು ಕೇಳಿಬಂದಿವೆ.

ಡ್ಯಾಂ ಏರಿ ಐದು ಕಿಲೋಮೀಟರ್ ಉದ್ದವಿರಲಿದೆ. ಮೂರು ಹಳ್ಳಿಗಳನ್ನು ಏರಿ ನುಂಗಲಿದೆ.  ಇಷ್ಟೋಂದು ಹಳ್ಳಿಗಳು ಮುಳುಗಡೆಯಾಗುವ ಸೂಚನೆಯಿದ್ದರೂ ಸರ್ಕಾರ ಮನೆ, ಭೂಮಿ, ಬದುಕು ಹೀಗೆ ಎಲ್ಲವನ್ನೂ ಕಳೆದುಕೊಳ್ಳುವ ಜನರಿಗೆ ಪರ್ಯಾಯ ವ್ಯವಸ್ಥೆ ಏನು ಮಾಡಿದೆ ಎಂದು ಕೇಳಿಕೊಂಡರೆ ಉತ್ತರ ಯಾರಿಗೂ ಗೊತ್ತಿಲ್ಲ. ಈಗಾಗಲೇ ಯೋಜನೆಯ ನಿರಾಶ್ರಿತರಾದವರಿಗೆ ಬೇರೆ ಕಡೆಗಳಲ್ಲಿ ಇದುವರೆಗೂ ಪರ್ಯಾಯ ವ್ಯವಸ್ಥೆಯನ್ನು ರೂಪಿಸಿಲ್ಲ. ಅವರಿಗೆ ಬಂದಂತಹ ಪರಿಸ್ಥಿತಿ ತುಮಕೂರು ಜನರಿಗೂ ಬಾರದೇ ಇರಲಿ ಎಂಬುದು ನಮ್ಮ ಆಶಯ.
ಸಿದ್ದಯ್ಯ ಕೆ.ಈ

ಈ ಮೊದಲು ಕಾಟೇನಹಳ್ಳಿ, ಬರಗೂರು ಸಮೀಪ ಡ್ಯಾಂ ನಿರ್ಮಾಣಕ್ಕೆ ಜಾಗ ಗುರುತಿಸಿತ್ತು. ಈ ಪ್ರದೇಶದಲ್ಲಿ ಎರಡೂ ಕಡೆ ಎತ್ತರದ ಗುಡ್ಡಗಳಿದ್ದು ನಡುವೆ ತಗ್ಗು ಪ್ರದೇಶವಿದೆ. ಈ ಎರಡು ಗುಡ್ಡಗಳಿಗೆ ಒಂದು ಕಿಲೋಮೀಟರ್ ಏರಿ ನಿರ್ಮಾಣ ಮಾಡಿದ್ದರೆ ಎತ್ತಿನಹೊಳೆಯಿಂದ ತರುವ ಎಲ್ಲ ನೀರನ್ನು ತುಂಬಿಸುವ ಸಾಧ್ಯತೆ ಇತ್ತು. ಇಲ್ಲಿ ಕಣಿವೆ ಇದ್ದಂತೆ ಇರುವುದರಿಂದ ನೀರು ನಿಲ್ಲಲು ಅನುಕೂಲವಾಗುತ್ತಿತ್ತು. ಆದರೆ ಸರ್ಕಾರ ವೈಜ್ಞಾನಿಕ ದೃಷ್ಟಿಕೋನದಿಂದ ಡ್ಯಾಂ ನಿರ್ಮಾಣಕ್ಕೆ ಮುಂದಾಗಿಲ್ಲ. ದುಡ್ಡು ಲೂಟಿ ಮಾಡುವ ಉದ್ದೇಶದಿಂದ ಡ್ಯಾಂ ನಿರ್ಮಾಣಕ್ಕೆ ತಯಾರಿ ನಡೆಯುತ್ತಿದೆ. ಬರಗೂರು-ಕಾಟೇನಹಳ್ಳಿ ವ್ಯಾಪ್ತಿಯಲ್ಲಿ ಡ್ಯಾಂ ನಿರ್ಮಿಸಿದ್ದರೆ ನೂರಾರು ಕೆರೆಗಳಿಗೆ ನೀರು ಕೊಡಲು ಅನುಕೂಲವಾಗುತ್ತಿತ್ತು. ಆದರೆ ಸರ್ಕಾರ ಬೇರೇನೋ ಉದ್ದೇಶವಿಟ್ಟುಕೊಂಡಿದೆ. ಇದು ನಿಲ್ಲಬೇಕು ಎಂಬುದು ಈ ಭಾಗದ ಜನರ ಅಭಿಮತ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...