Homeಮುಖಪುಟಎತ್ತಿನಹೊಳೆ ಯೋಜನೆಗೆ 15 ಹಳ್ಳಿಗಳ ಮುಳುಗಡೆ ಗ್ರಾಮಸ್ಥರ ಗೋಳು ಕೇಳೋರೇ ಇಲ್ಲ

ಎತ್ತಿನಹೊಳೆ ಯೋಜನೆಗೆ 15 ಹಳ್ಳಿಗಳ ಮುಳುಗಡೆ ಗ್ರಾಮಸ್ಥರ ಗೋಳು ಕೇಳೋರೇ ಇಲ್ಲ

- Advertisement -
- Advertisement -

ಎತ್ತಿನಹೊಳೆ ಪ್ರಾಜೆಕ್ಟ್ ಕುಂಟುತ್ತಾ ಸಾಗಿದೆ. ಕುಡಿಯುವ ನೀರಿನ ಯೋಜನೆಯ ಕಾಮಗಾರಿಗೆ ಮೂರು ಹಂತದಲ್ಲಿ ರಾಜ್ಯ ಸರ್ಕಾರ ಕಾಮಗಾರಿಗಾಗಿ 40 ಸಾವಿರ ಕೋಟಿ ರೂ.ಗಳನ್ನು ಬಿಡುಗಡೆ ಮಾಡಿದೆ. ಸಕಲೇಶಪುರದಿಂದ ಉದ್ದೇಶಿತ ಡ್ಯಾಂ ನಿರ್ಮಾಣದ ಪ್ರದೇಶದವರೆಗೂ ಅಲ್ಲಲ್ಲಿ ನಾಲೆ ನಿರ್ಮಾಣ ಕಾಮಗಾರಿಗಳು ನಡೆಯುತ್ತಿವೆ. ಆದರೆ ಡ್ಯಾಂ ನಿರ್ಮಾಣಕ್ಕೆ ಇದುವರೆಗೂ ಸರ್ಕಾರ ಅಧಿಸೂಚನೆಯನ್ನೇ ಹೊರಡಿಸಿಲ್ಲ. ಅಧಿಕಾರಿಗಳು ಗ್ರಾಮಕ್ಕೆ ಭೇಟಿ ನೀಡಿ ಮಾಹಿತಿ ನೀಡುತ್ತಿದ್ದಾರೆಯೇ ಹೊರತು ಸರ್ಕಾರ ಅಧಿಸೂಚನೆ ಹೊರಡಿಸಲು ವಿಳಂಬ ಮಾಡುತ್ತಿರುವುದೇಕೆ ಎಂಬ ಜನರ ಪ್ರಶ್ನೆಗೆ ಉತ್ತರಿಸುತ್ತಿಲ್ಲ.

ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕು ಬೈರಗೊಂಡ್ಲು, ಭೂಚನಹಳ್ಳಿ ಮತ್ತು ಗೊಲ್ಲರಹಟ್ಟಿ ಬಳಿ ಉದ್ದೇಶಿತ ಡ್ಯಾಂ ಏರಿ ನಿರ್ಮಾಣಕ್ಕೆಂದು ಸರ್ಕಾರ ಸ್ಥಳ ಗುರುತಿಸಿ ನೀಲನಕಾಶೆ ತಯಾರಿಸಿದೆ. ಡ್ಯಾಂ ನಿರ್ಮಾಣದಿಂದ ಕೊರಟಗೆರೆ ತಾಲ್ಲೂಕಿನ 2700 ಎಕರೆ ಮತ್ತು ದೊಡ್ಡಬಳ್ಳಾಪುರದ 2500 ಎಕರೆ ಸೇರಿ ಒಟ್ಟು ಆರು ಸಾವಿರ ಎಕರೆ ಫಲವತ್ತಾದ ಭೂಮಿ ಭೂಸ್ವಾಧೀನಪಡಿಸಿಕೊಳ್ಳಲು ಸರ್ಕಾರ ಉದ್ದೇಶಿಸಿದೆ. ಡ್ಯಾಂ ನಿರ್ಮಾಣ ಮಾಡುವುದಕ್ಕೆ ಜನರ ಅಡ್ಡಿಯಿಲ್ಲ. ಆದರೆ ಅಧಿಸೂಚನೆ ಹೊರಡಿಸುವುದು, ಎಷ್ಟು ಭೂಮಿ ಸ್ವಾಧೀನಪಡಿಸುತ್ತಾರೆ? ಇದರ ಪರಿಹಾರ ಮೊತ್ತ ಎಷ್ಟು ಎಂಬುದರ ಕುರಿತು ಗ್ರಾಮಸ್ಥರಿಗೆ ಸ್ಪಷ್ಟ ಮಾಹಿತಿ ದೊರೆಯದೆ ಆತಂಕದಲ್ಲಿದ್ದಾರೆ.

ಉದ್ದೇಶಿತ ಡ್ಯಾಂ ನಿರ್ಮಾಣದಿಂದ ಕೊರಟಗೆರೆ ತಾಲೂಕಿನ ಬೈರಗೊಂಡ್ಲು, ಭೂಚನಹಳ್ಳಿ, ಗೊಲ್ಲರಹಟ್ಟಿ, ಬೀರಸಾಗರ, ಗೆದ್ದೆಗೇನಳ್ಳಿ, ಲಕ್ಕಮುತ್ತನಹಳ್ಳಿ ಸೆರಿದಂತೆ 7 ಹಳ್ಳಿಗಳು ಪೂರ್ಣ ಮುಳುಗಡೆಯಾದರೆ, ಕಾಟೇನಹಳ್ಳಿ, ಪುರದಹಳ್ಳಿ, ವಡೇರಹಳ್ಳಿ, ಬೆಲ್ಲದಹಳ್ಳಿ ಭಾಗಶಃ ಮುಳುಗಡೆಯಾಗಲಿವೆ. ದೊಡ್ಡಬಳ್ಳಾಪುರ ತಾಲೂಕಿನ 2 ಹಳ್ಳಿಗಳು ಮುಳುಗಡೆಯಾದರೆ ಒಟ್ಟು 22 ಹಳ್ಳಿಗಳ ಜನರು ಡ್ಯಾಂ ನಿರ್ಮಾಣದಿಂದ ಬಾಧಿತರಾಗುತ್ತಾರೆ. ಅವರಿಗೆ ಮುಂದಿನ ದಾರಿ, ವಸತಿ, ಭೂಮಿ, ಪರಿಹಾರ ಯಾವುದರ ಬಗ್ಗೆಯೂ ಸರ್ಕಾರ ಚಕಾರ ಎತ್ತಿಲ್ಲ.

ಡ್ಯಾಂ ಸಂಬಂಧ ನೋಟಿಫಿಕೇಷನ್ ಹೊರಡಿಸಿಲ್ಲ. ಭೂಸ್ವಾಧೀನದ ಪ್ರಕ್ರಿಯೆಯೇ ಆರಂಭವಾಗಿಲ್ಲ. ಯೋಜನೆಯ ಅನುಮೋದನೆ ಮಾತ್ರ ಆಗಿದೆ. ಡ್ಯಾಂ ನಿರ್ಮಾಣದ ಕುರಿತು ಮಾಹಿತಿ ನೀಡದೇ ಇರುವುದು ಸ್ಥಳೀಯ ವಿರೋಧಕ್ಕೆ ಪ್ರಮುಖ ಕಾರಣವಾಗಿದೆ. ಡ್ಯಾಂ ನಿರ್ಮಾಣ ಪ್ರದೇಶದಲ್ಲಿ ಭೂಮಿ ಫಲವತ್ತಾಗಿದೆ. ಎಲ್ಲಿ ನೋಡಿದರೂ ಹಸಿರಿನಿಂದ ಕೂಡಿದೆ. ಸಾವಿರಾರು ತೋಟಗಳನ್ನು ಮಾಡಿಕೊಂಡು ಜನ ಒಂದಷ್ಟು ಲಾಭ ಗಳಿಸುತ್ತಿದ್ದಾರೆ. ಅಡಿಕೆ, ತೆಂಗಿನ ತೋಟಗಳು ನಳನಳಿಸುತ್ತಿವೆ. ಇಲ್ಲಿ ನೀರಿಗೂ ಬರವಿಲ್ಲ. 500 ಅಡಿ ಬೋರ್‍ವೆಲ್ ಕೊರೆದರೆ ಸಾಕು ನೀರು ಸಿಗುತ್ತದೆ. ಈ ಭಾಗದಲ್ಲಿ ಯಾವುದೇ ನದಿ, ಕೆರೆಗಳು ಇಲ್ಲ, ಹಾಗಿದ್ದರೂ ಬೆಳೆಗಳು ಹಚ್ಚಹಸುರಿನಿಂದ ಕೂಡಿವೆ. ಇಂಥ ಭೂಮಿಗೆ ಸರ್ಕಾರ ಕಣ್ಣು ಹಾಕಲು ಕಾರಣವೇನು ಎಂಬುದು ಚಿದಂಬರ ರಹಸ್ಯವಾಗಿದೆ.

ನಮಗೆ ಟೆಂಡರ್ ಆಗಿರುವುದು ಗೊತ್ತಿಲ್ಲ. ಕಾಮಗಾರಿ ಗುತ್ತಿಗೆ ಪಡೆದಿರುವವರು ಗ್ರಾಮಗಳಲ್ಲಿ ಬ್ರೋಕರ್‍ಗಳನ್ನು ಬಿಟ್ಟು ರೈತರಿಗೆ 10-20 ಸಾವಿರ ರೂಪಾಯಿ ನೀಡಿ ಅವರ ಭೂಮಿಯಲ್ಲಿ ನಾಲೆ ತೋಡುತ್ತಿದ್ದಾರೆ. ಸರ್ಕಾರ ಭೂಸ್ವಾಧೀನದ ಬಗ್ಗೆ ಇದುವರೆಗೂ ಜಾಹಿರಾತು ನೀಡಿಲ್ಲ. ಅಧಿಸೂಚನೆ ಹೊರಡಿಸಿಲ್ಲ. ಇಲ್ಲಿ ಡ್ಯಾಂ ನಿರ್ಮಿಸುತ್ತೇವೆ, ಇಂತಿಂಥವರ ಭೂಮಿಯಲ್ಲಿ ನಾಲೆ ಹಾದುಹೋಗುತ್ತದೆ, ಇಂತಿಷ್ಟು ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುತ್ತೇವೆ, ಇಷ್ಟು ಪರಿಹಾರ ನೀಡುತ್ತೇವೆ ಎಂಬ ಮಾಹಿತಿ ನೀಡುತ್ತಿಲ್ಲ. ಬದಲಾಗಿ ಬ್ರೋಕರ್‍ಗಳು ಜಮೀನು ಮಾಲಿಕರಿಗೆ ಕುಡಿಸಿ, ಒಂದಿಷ್ಟು ಹಣವನ್ನು ಕೈಗಿಟ್ಟು, ನಿಮ್ಮ ಹೊಲದಲ್ಲಿ ನಾಲೆ ತೋಡುತ್ತೇವೆ. ಐದು ಅಡಿ ಆಳಕ್ಕೆ ತೋಡಿ ಆಮೇಲೆ ಮುಚ್ಚುತ್ತೇವೆ. ನೀವು ನಿಮ್ಮ ಜಮೀನಿನಲ್ಲಿ ಎಂದಿನಂತೆ ಬೆಳೆ ಬೆಳೆದುಕೊಳ್ಳಬಹುದು ಎಂದು ಹೇಳುತ್ತಿದ್ದಾರೆ. ಇದು ನಮಗೂ ಅರ್ಥ ಆಗುತ್ತಿಲ್ಲ. ಮುಳುಗಡೆ ಜಾಗದಲ್ಲಿ ಚಾನಲ್ ಮಾಡಲು ಬಿಟ್ಟಿಲ್ಲ. ಅವರೂ ಬಂದಿಲ್ಲ ಎನ್ನುತ್ತಾರೆ ಎತ್ತಿನಹೊಳೆ ಯೋಜನೆಯ ರೈತ ಹಿತರಕ್ಷಣಾ ಸಮಿತಿ ಪ್ರಧಾನ ಕಾರ್ಯದರ್ಶಿ ಚಿಕ್ಕತಿಮ್ಮಯ್ಯ.

ಭೂಸ್ವಾಧೀನದ ಪರಿಹಾರ ಹಣ ನೀಡುವಲ್ಲಿ ತಾರತಮ್ಯ ಮಾಡುತ್ತಿರುವುದು ಕೂಡ ಗ್ರಾಮಗಳನ್ನು ಕಳೆದುಕೊಳ್ಳುತ್ತಿರುವ ಜನರ ಆಕ್ರೋಶಕ್ಕೆ ಕಾರಣವಾಗಿದೆ. ಕೊರಟಗೆರೆ ತಾಲೂಕು ಬೆಲ್ಲದಹಳ್ಳಿ ಗ್ರಾಮದ ವ್ಯಾಪ್ತಿಯ ಜಮೀನುಗಳಿಗೆ ಒಂದು ಎಕರೆ ತೋಟ ಇರುವ ಭೂಮಿಗೆ ಬರೀ ಮೂರು ಲಕ್ಷ ರೂ ಕೊಟ್ಟರೆ, ಅದೇ ದೊಡ್ಡಬಳ್ಳಾಪುರ ತಾಲೂಕಿಗೆ ಸೇರಿದ ತೋಟದ ಭೂಮಿಗೆ ಎಂಟು ಲಕ್ಷ ಕೊಡುತ್ತಿದ್ದಾರೆ. ಅಕ್ಕಪಕ್ಕದ ಜಮೀನುಗಳಿಗೆ ಪರಿಹಾರ ನೀಡುವುದರಲ್ಲಿ ತಾರತಮ್ಯ ಮಾಡಿರುವುದು ಎದ್ದು ಕಾಣುತ್ತದೆ ಎಂಬ ಆರೋಪಗಳು ಕೇಳಿಬಂದಿವೆ.

ಡ್ಯಾಂ ಏರಿ ಐದು ಕಿಲೋಮೀಟರ್ ಉದ್ದವಿರಲಿದೆ. ಮೂರು ಹಳ್ಳಿಗಳನ್ನು ಏರಿ ನುಂಗಲಿದೆ.  ಇಷ್ಟೋಂದು ಹಳ್ಳಿಗಳು ಮುಳುಗಡೆಯಾಗುವ ಸೂಚನೆಯಿದ್ದರೂ ಸರ್ಕಾರ ಮನೆ, ಭೂಮಿ, ಬದುಕು ಹೀಗೆ ಎಲ್ಲವನ್ನೂ ಕಳೆದುಕೊಳ್ಳುವ ಜನರಿಗೆ ಪರ್ಯಾಯ ವ್ಯವಸ್ಥೆ ಏನು ಮಾಡಿದೆ ಎಂದು ಕೇಳಿಕೊಂಡರೆ ಉತ್ತರ ಯಾರಿಗೂ ಗೊತ್ತಿಲ್ಲ. ಈಗಾಗಲೇ ಯೋಜನೆಯ ನಿರಾಶ್ರಿತರಾದವರಿಗೆ ಬೇರೆ ಕಡೆಗಳಲ್ಲಿ ಇದುವರೆಗೂ ಪರ್ಯಾಯ ವ್ಯವಸ್ಥೆಯನ್ನು ರೂಪಿಸಿಲ್ಲ. ಅವರಿಗೆ ಬಂದಂತಹ ಪರಿಸ್ಥಿತಿ ತುಮಕೂರು ಜನರಿಗೂ ಬಾರದೇ ಇರಲಿ ಎಂಬುದು ನಮ್ಮ ಆಶಯ.
ಸಿದ್ದಯ್ಯ ಕೆ.ಈ

ಈ ಮೊದಲು ಕಾಟೇನಹಳ್ಳಿ, ಬರಗೂರು ಸಮೀಪ ಡ್ಯಾಂ ನಿರ್ಮಾಣಕ್ಕೆ ಜಾಗ ಗುರುತಿಸಿತ್ತು. ಈ ಪ್ರದೇಶದಲ್ಲಿ ಎರಡೂ ಕಡೆ ಎತ್ತರದ ಗುಡ್ಡಗಳಿದ್ದು ನಡುವೆ ತಗ್ಗು ಪ್ರದೇಶವಿದೆ. ಈ ಎರಡು ಗುಡ್ಡಗಳಿಗೆ ಒಂದು ಕಿಲೋಮೀಟರ್ ಏರಿ ನಿರ್ಮಾಣ ಮಾಡಿದ್ದರೆ ಎತ್ತಿನಹೊಳೆಯಿಂದ ತರುವ ಎಲ್ಲ ನೀರನ್ನು ತುಂಬಿಸುವ ಸಾಧ್ಯತೆ ಇತ್ತು. ಇಲ್ಲಿ ಕಣಿವೆ ಇದ್ದಂತೆ ಇರುವುದರಿಂದ ನೀರು ನಿಲ್ಲಲು ಅನುಕೂಲವಾಗುತ್ತಿತ್ತು. ಆದರೆ ಸರ್ಕಾರ ವೈಜ್ಞಾನಿಕ ದೃಷ್ಟಿಕೋನದಿಂದ ಡ್ಯಾಂ ನಿರ್ಮಾಣಕ್ಕೆ ಮುಂದಾಗಿಲ್ಲ. ದುಡ್ಡು ಲೂಟಿ ಮಾಡುವ ಉದ್ದೇಶದಿಂದ ಡ್ಯಾಂ ನಿರ್ಮಾಣಕ್ಕೆ ತಯಾರಿ ನಡೆಯುತ್ತಿದೆ. ಬರಗೂರು-ಕಾಟೇನಹಳ್ಳಿ ವ್ಯಾಪ್ತಿಯಲ್ಲಿ ಡ್ಯಾಂ ನಿರ್ಮಿಸಿದ್ದರೆ ನೂರಾರು ಕೆರೆಗಳಿಗೆ ನೀರು ಕೊಡಲು ಅನುಕೂಲವಾಗುತ್ತಿತ್ತು. ಆದರೆ ಸರ್ಕಾರ ಬೇರೇನೋ ಉದ್ದೇಶವಿಟ್ಟುಕೊಂಡಿದೆ. ಇದು ನಿಲ್ಲಬೇಕು ಎಂಬುದು ಈ ಭಾಗದ ಜನರ ಅಭಿಮತ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಮತಾ ಬ್ಯಾನರ್ಜಿಗೆ ಬಿಗ್ ಶಾಕ್: ನೇಮಕಗೊಂಡ ತಿಂಗಳಲ್ಲೇ ಟಿಎಂಸಿ ರಾಜ್ಯಾಧ್ಯಕ್ಷೆ ಚಂದ್ರಿಮಾ ಭಟ್ಟಾಚಾರ್ಯ ರಾಜೀನಾಮೆ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಹೀನಾಯ ಸೋಲಿನ ಹಿನ್ನೆಲೆಯಲ್ಲಿ, ಅತ್ಯಂತ ನಿರ್ಣಾಯಕವಾದ ಸಾಂಸ್ಥಿಕ ಜವಾಬ್ದಾರಿಗೆ ನೇಮಕಗೊಂಡ ಕೇವಲ ಒಂದು ತಿಂಗಳ ಒಳಗಾಗಿಯೇ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ರಾಜ್ಯ ಘಟಕದ ಅಧ್ಯಕ್ಷೆ ಚಂದ್ರಿಮಾ...

ಜಿಲ್ಲಾ ನ್ಯಾಯಾಧೀಶೆ ತಬಸ್ಸುಮ್ ಖಾನ್‌ಗೆ ಬಲಪಂಥೀಯರಿಂದ ಬೆದರಿಕೆ : ಗಂಭೀರವಾಗಿ ಪರಿಗಣಿಸಿದ ಹೈಕೋರ್ಟ್

ನರ್ಮದಾಪುರಂ ಜಿಲ್ಲಾ ನ್ಯಾಯಾಧೀಶರಾದ ತಬಸ್ಸುಮ್ ಖಾನ್ ಅವರು ತಮ್ಮ ಕರ್ತವ್ಯ ನಿರ್ವಹಣೆಯ ಕಾರಣಕ್ಕಾಗಿ ಬೆದರಿಕೆ ಮತ್ತು ನಿಂದನೆಗೆ ಒಳಗಾಗಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಮಧ್ಯಪ್ರದೇಶ ಹೈಕೋರ್ಟ್, ಅವರಿಗೆ ಸೂಕ್ತ ರಕ್ಷಣೆ ನೀಡುವಂತೆ ಮತ್ತು ಅಪರಾಧಿಗಳನ್ನು ಪತ್ತೆಹಚ್ಚಲು ಕೈಗೊಂಡಿರುವ...

ಎಸ್ಐಆರ್ ಪ್ರಕ್ರಿಯೆಯಲ್ಲಿ ಚುನಾವಣಾ ಆಯೋಗದ ಪಕ್ಷಪಾತದ ಬಗ್ಗೆ ಸಿಜೆಐಗೆ ಪ್ರತಿಪಕ್ಷಗಳಿಂದ ಪತ್ರ: ‘ಪ್ರಜಾಪ್ರಭುತ್ವ ಅಪಾಯದಲ್ಲಿದೆ’ ಎಂದು ಆರೋಪ

ದೇಶದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರತೀಯ ಚುನಾವಣಾ ಆಯೋಗವು (ECI) ಪಕ್ಷಪಾತ ಧೋರಣೆ ತಳೆದಿದೆ ಎಂದು ಆರೋಪಿಸಿ, 24 ವಿರೋಧ ಪಕ್ಷಗಳ ನಾಯಕರು ಹಾಗೂ ಒಬ್ಬರು ಸ್ವತಂತ್ರ...

ಬೆಂಗಳೂರು| ಕೆ.ಆರ್. ವೃತ್ತದ ಬಳಿ ಬಿಎಂಟಿಸಿ ಬಸ್‌ಗಳ ನಡುವೆ ಅಪಘಾತ; ಹಲವರಿಗೆ ಗಾಯ

ಇಂದು ಬೆಳಿಗ್ಗೆ ವಿಧಾನಸೌಧದಿಂದ ಸ್ವಲ್ಪ ದೂರದಲ್ಲಿರುವ ಜನನಿಬಿಡ ಕೆ.ಆರ್. ವೃತ್ತ ಜಂಕ್ಷನ್ ಬಳಿ ಎರಡು ಬಿಎಂಟಿಸಿ ಬಸ್‌ಗಳು ಡಿಕ್ಕಿ ಹೊಡೆದ ಪರಿಣಾಮ ಹಲವಾರು ಪ್ರಯಾಣಿಕರು ಗಾಯಗೊಂಡರು. ಡಿಕ್ಕಿಯ ಪರಿಣಾಮ ಬಸ್ಸಿನೊಳಗೆ ಹಲವಾರು ಪ್ರಯಾಣಿಕರು...

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಲೋಪ ಆರೋಪ; ಕೋಲಾರ-ಮೈಸೂರಿನ ಅಧಿಕಾರಿಗಳಿಗೆ ನೋಟಿಸ್ ಜಾರಿ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್)ಗೆ ಸಂಬಂಧಿಸಿದಂತೆ, ಕೋಲಾರ ಮತ್ತು ಮೈಸೂರಿನಲ್ಲಿ ನಡೆದ ಕಾರ್ಯವಿಧಾನದಲ್ಲಿ ನಿಯಮ ಉಲ್ಲಂಘನೆ ಆರೋಪ ಕೇಳಿಬಂದೆ. ಕೋಲಾರದಲ್ಲಿ, ಪರಿಷ್ಕರಣಾ ಕಾರ್ಯದ ಸಮಯದಲ್ಲಿ ಕರ್ತವ್ಯ...

ಸೂರತ್ ಧ್ವಂಸ ಕಾರ್ಯಾಚರಣೆ ಸಂಪೂರ್ಣ ‘ಕಾನೂನುಬಾಹಿರ’: 100 ನಿರಾಶ್ರಿತ ಕುಟುಂಬಗಳ ಪುನರ್ವಸತಿಗೆ ಗುಜರಾತ್ ಹೈಕೋರ್ಟ್ ಆದೇಶ

ಅಹಮದಾಬಾದ್: ಗುಜರಾತ್‌ನ ಸೂರತ್‌ನ ನಾಸಿರ್ ನಗರದಲ್ಲಿ ನಡೆದ ಮನೆಗಳ ಧ್ವಂಸ ಕಾರ್ಯಾಚರಣೆಯನ್ನು ತೀವ್ರವಾಗಿ ಖಂಡಿಸಿರುವ ಗುಜರಾತ್ ಹೈಕೋರ್ಟ್, ಇದನ್ನು "ಸಂಪೂರ್ಣ ಕಾನೂನುಬಾಹಿರ" ಎಂದು ಕರೆದಿದೆ. ಮೇ 30 ರಂದು ನಡೆದ ಈ "ಅನಧಿಕೃತ"...

ವಿದ್ಯುತ್ ಖಾಸಗೀಕರಣ ವಿರುದ್ದದ ಹೋರಾಟಕ್ಕೆ ಗೆಲುವು: ಅರ್ಜಿ ಹಿಂಪಡೆದ ಟಾಟಾ ಪವರ್ ಕಂಪನಿ

ರಾಜ್ಯದಲ್ಲಿ ವಿದ್ಯುತ್ ಕ್ಷೇತ್ರದಲ್ಲಿ ಖಾಸಗೀಕರಣದ ಹೆಜ್ಜೆ ಇಡಲು ಮುಂದಾಗಿದ್ದ ಟಾಟಾ ಪವರ್ ಕಂಪನಿಗೆ ಭಾರಿ ಹಿನ್ನಡೆಯಾಗಿದೆ. ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗದ (KERC) ಮುಂದೆ ರಾಜ್ಯದ 19 ಕಂದಾಯ ಜಿಲ್ಲೆಗಳಿಗೆ ಸಂಬಂಧಿಸಿದಂತೆ ತಾನು...

SIR: ಮತದಾರರ ಮನೆಗೆ ಹೋಗದೆ ಕಚೇರಿಯಲ್ಲೇ ಕುಳಿತು ಫಾರ್ಮ್ ವಿತರಣೆ ಆರೋಪ, BLO ಗಳಿಗೆ ಎಚ್ಚರಿಕೆ ನೀಡಿದ ಆಯೋಗ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಂದ ವ್ಯಾಪಕ ದೂರುಗಳು ಕೇಳಿಬಂದ ಬೆನ್ನಲ್ಲೇ, ರಾಜ್ಯ ಚುನಾವಣಾ ಆಯೋಗವು ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಮತದಾರರ ಮನೆ-ಮನೆಗೆ ಭೇಟಿ...

ಅಳುವ ಕಂದಮ್ಮಗಳನ್ನು ವಾಷಿಂಗ್ ಮೆಷಿನ್‌ನಲ್ಲಿ ಕೂಡಿಹಾಕ್ತಿದ್ದ ಇಬ್ಬರು ಕೇರ್‌ಟೇಕರ್ ಅರೆಸ್ಟ್

ಸಿಲಿಕಾನ್ ಸಿಟಿಯ ಬ್ರೂಕ್‌ಫೀಲ್ಡ್‌ನಲ್ಲಿರುವ ಪ್ರಮುಖ ಐಟಿ ಸಂಸ್ಥೆ 'ಕ್ಯಾಪ್‌ಜೆಮಿನಿ' ಕ್ಯಾಂಪಸ್‌ನ ಡೇ-ಕೇರ್ ಸೆಂಟರ್‌ನಲ್ಲಿ ಪುಟ್ಟ ಕಂದಮ್ಮಗಳನ್ನು ಬಾತ್‌ರೂಮ್ ಹಾಗೂ ವಾಷಿಂಗ್ ಮೆಷಿನ್‌ಗಳಲ್ಲಿ ಕೂಡಿಹಾಕಿ ವಿಕೃತಿ ಮೆರೆದಿದ್ದ ಪ್ರಕರಣದಲ್ಲಿ ಪೊಲೀಸರು ಭರ್ಜರಿ ಬೇಟೆಯಾಡಿದ್ದಾರೆ. ಪ್ರಕರಣದ...

“ನಾಗರಿಕರು ಸರ್ಕಾರದ ಗುಲಾಮರಲ್ಲ”: ಸಿಎಎ, ಜ್ಞಾನವಾಪಿ ವಿರೋಧಿ ಪ್ರತಿಭಟನೆ ಸಂಬಂಧ ಎಸ್‌ಡಿಪಿಐ ನಾಯಕನ ಗಡಿಪಾರು ಪ್ರಶ್ನಿಸಿದ ಬಾಂಬೆ ಹೈಕೋರ್ಟ್

“ದೇಶದ ನಾಗರಿಕರು ಸರ್ಕಾರದ ಗುಲಾಮರಲ್ಲ. ಕೇವಲ ಸರ್ಕಾರದ ನಿರ್ಧಾರಗಳನ್ನು ವಿರೋಧಿಸುವುದು ಅಥವಾ ಆಡಳಿತ ವ್ಯವಸ್ಥೆಯ ವಿರುದ್ಧ ಘೋಷಣೆಗಳನ್ನು ಕೂಗುವುದು ಒಬ್ಬ ನಾಗರಿಕನನ್ನು ಗಡಿಪಾರು ಮಾಡಲು ಕಾನೂನಾತ್ಮಕ ಕಾರಣವಾಗಲಾರದು,” ಎಂದು ಬಾಂಬೆ ಹೈಕೋರ್ಟ್‌ ಐತಿಹಾಸಿಕ...