Homeಮುಖಪುಟದುಷ್ಕರ್ಮಿಗಳು ಅಪಹರಿಸಿ ಬೆಂಕಿ ಹಚ್ಚಿದ್ದ 15 ವರ್ಷದ ಬಾಲಕಿ ಸಾವು

ದುಷ್ಕರ್ಮಿಗಳು ಅಪಹರಿಸಿ ಬೆಂಕಿ ಹಚ್ಚಿದ್ದ 15 ವರ್ಷದ ಬಾಲಕಿ ಸಾವು

- Advertisement -
- Advertisement -

ಹದಿನೈದು ದಿನಗಳ ಹಿಂದೆ ಪುರಿ ಜಿಲ್ಲೆಯಲ್ಲಿ ಮೂವರು ಅಪರಿಚಿತ ದುಷ್ಕರ್ಮಿಗಳು ಅಪಹರಿಸಿ, ಬೆಂಕಿ ಹಚ್ಚಿದ್ದರು ಎನ್ನಲಾಗಿದ್ದ 15 ವರ್ಷದ ಬಾಲಕಿ ದೆಹಲಿಯ ಏಮ್ಸ್‌ನಲ್ಲಿ ಕೊನೆಯುಸಿರೆಳೆದಿದ್ದಾರೆ ಎಂದು ಒಡಿಶಾ ಮುಖ್ಯಮಂತ್ರಿ ಮೋಹನ್ ಚರಣ್ ಮಾಝಿ ಶನಿವಾರ (ಆ.2) ತಿಳಿಸಿದ್ದಾರೆ.

ಜುಲೈ 19ರಂದು ಬೆಳಿಗ್ಗೆ ಪುರಿ ಜಿಲ್ಲೆಯ ಭಾರ್ಗವಿ ನದಿಯ ದಡದಲ್ಲಿ ಮೂವರು ಅಪರಿಚಿತ ವ್ಯಕ್ತಿಗಳು ಬಾಲಕಿಯನ್ನು ಅಪಹರಿಸಿ ಬೆಂಕಿ ಹಚ್ಚಿದ್ದರು ಎಂದು ವರದಿಯಾಗಿತ್ತು.

ಬಾಲಕಿ ತನ್ನ ಸ್ನೇಹಿತೆಯನ್ನು ಭೇಟಿಯಾಗಿ ಮನೆಗೆ ಮರಳುತ್ತಿದ್ದಾಗ, ಮಾರ್ಗ ಮಧ್ಯೆ ಆಕೆಯನ್ನು ತಡೆದಿದ್ದ ಮೂವರು ವ್ಯಕ್ತಿಗಳು ಅಪಹರಿಸಿ ಭಾರ್ಗವಿ ನದಿಯ ದಡಕ್ಕೆ ಕರೆದೊಯ್ದಿದ್ದರು. ಅಲ್ಲಿ ಸೀಮೆ ಎಣ್ಣೆಯಂತಹ ವಸ್ತುವನ್ನು ಆಕೆಯ ದೇಹದ ಮೇಲೆ ಸುರಿದು ಬೆಂಕಿ ಹಚ್ಚಿದ್ದರು ಎಂದು ಬಾಲಕಿಯ ತಾಯಿ ಬಲಂಗಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ಶೇಕಡ 70ರಷ್ಟು ಸುಟ್ಟ ಗಾಯಗಳಿಂದ ಜೀವನ್ಮರಣ ಹೋರಾಟ ನಡೆಸುತ್ತಿದ್ದ ಬಾಲಕಿಯನ್ನು ಆರಂಭದಲ್ಲಿ ಸ್ಥಳೀಯ ಪಿಪಿಲಿ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆದೊಯ್ಯಲಾಗಿತ್ತು. ನಂತರ ಆ ದಿನವೇ ಆಕೆಯನ್ನು ಭುವನೇಶ್ವರದ ಏಮ್ಸ್ ಸ್ಥಳಾಂತರಿಸಲಾಗಿತ್ತು. ಅಲ್ಲಿಂದ ಮರುದಿನ ದೆಹಲಿಯ ಏಮ್ಸ್‌ಗೆ ಏರ್‌ಲಿಫ್ಟ್ ಮಾಡಲಾಗಿತ್ತು. ಅಲ್ಲಿ ಆಕೆಗೆ ಕನಿಷ್ಠ ಎರಡು ಶಸ್ತ್ರಚಿಕಿತ್ಸೆಗಳು ಮತ್ತು ಚರ್ಮ ಕಸಿ ಮಾಡಲಾಗಿತ್ತು.

ಶುಕ್ರವಾರ ದೆಹಲಿಯ ಏಮ್ಸ್‌ನಲ್ಲಿ ಮ್ಯಾಜಿಸ್ಟ್ರೇಟ್ ಸಮ್ಮುಖದಲ್ಲಿ ಒಡಿಶಾ ಪೊಲೀಸರು ಸಂತ್ರಸ್ತೆಯ ಹೇಳಿಕೆಯನ್ನು ದಾಖಲಿಸಿಕೊಂಡಿದ್ದರು.

“ಬಲಂಗಾ ಪ್ರದೇಶದ ಬಾಲಕಿಯ ಸಾವಿನ ಸುದ್ದಿ ಕೇಳಿ ನನಗೆ ತೀವ್ರ ಆಘಾತವಾಗಿದೆ. ಸರ್ಕಾರ ಮತ್ತು ದೆಹಲಿಯ ಏಮ್ಸ್‌ನ ತಜ್ಞ ವೈದ್ಯಕೀಯ ತಂಡದ ನಿರಂತರ ಪ್ರಯತ್ನಗಳ ಹೊರತಾಗಿಯೂ, ಆಕೆಯ ಜೀವವನ್ನು ಉಳಿಸಲು ಸಾಧ್ಯವಾಗಲಿಲ್ಲ. ಬಾಲಕಿಯ ಆತ್ಮಕ್ಕೆ ಶಾಂತಿ ಸಿಗಲಿ ಮತ್ತು ಆಕೆಯ ಕುಟುಂಬಕ್ಕೆ ದುಖಃ ಭರಿಸುವ ಶಕ್ತಿಯನ್ನು ನೀಡಲಿ ಎಂದು ದೇವರ ಮುಂದೆ ಪ್ರಾರ್ಥಿಸುತ್ತೇನೆ” ಎಂದು ಸಿಎಂ ಮಾಝಿ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ಒಡಿಶಾದ ಉಪಮುಖ್ಯಮಂತ್ರಿಗಳಾದ ಕೆ.ವಿ. ಸಿಂಗ್ ದೇವ್ ಮತ್ತು ಪ್ರವತಿ ಪರಿದಾ ಕೂಡ ಬಾಲಕಿಯ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.

ಬಿಜೆಡಿ ಅಧ್ಯಕ್ಷ ಮತ್ತು ವಿರೋಧ ಪಕ್ಷದ ನಾಯಕ ನವೀನ್ ಪಟ್ನಾಯಕ್ ಅವರು ಬಾಲಕಿಯ ನಿಧನಕ್ಕೆ ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ ಮತ್ತು ಆಕೆಯ ಕುಟುಂಬಕ್ಕೆ ಸಂತಾಪ ತಿಳಿಸಿದ್ದಾರೆ.

ರಾಜ್ಯಸಭಾ ಸದಸ್ಯ ಸಸ್ಮಿತ್ ಪಾತ್ರ ನೇತೃತ್ವದ ಬಿಜೆಡಿ ಸಂಸದರ ನಿಯೋಗವು ದೆಹಲಿಯ ಏಮ್ಸ್‌ಗೆ ಭೇಟಿ ನೀಡಿದೆ ಎಂದು ವರದಿಯಾಗಿದೆ.

ಒಡಿಶಾ ಪೊಲೀಸರು ಕೂಡ ಬಾಲಕಿಯ ಸಾವಿನ ಬಗ್ಗೆ ದುಃಖ ವ್ಯಕ್ತಪಡಿಸಿದ್ದು, ಆಕೆ ಸುಟ್ಟು ಕರಕಲಾದ ಘಟನೆಯ ತನಿಖೆ ಕೊನೆಯ ಹಂತಕ್ಕೆ ತಲುಪಿದೆ ಎಂದು ತಿಳಿಸಿದ್ದಾರೆ. ಈ ಪ್ರಕರಣದಲ್ಲಿ ಬೇರೆ ಯಾರೂ ಭಾಗಿಯಾಗಿಲ್ಲ ಎಂದು ಪೊಲೀಸರು ಹೇಳಿಕೊಂಡಿದ್ದು, ಈ ವಿಷಯದ ಬಗ್ಗೆ ಯಾವುದೇ ಪ್ರಚೋದನಕಾರಿ ಹೇಳಿಕೆ ನೀಡದಂತೆ ಮನವಿ ಮಾಡಿದ್ದಾರೆ.

ಒಡಿಶಾ ಪ್ರದೇಶ ಕಾಂಗ್ರೆಸ್ ಸಮಿತಿ (ಒಪಿಸಿಸಿ) ಅಧ್ಯಕ್ಷ ಭಕ್ತ ಚರಣ್ ದಾಸ್ ಕೂಡ ಬಾಲಕಿಯ ಕುಟುಂಬಕ್ಕೆ ಸಂತಾಪ ಸೂಚಿಸಿದ್ದಾರೆ. ಬಾಲಕಿಗೆ ಬೆಂಕಿ ಹಚ್ಚಿ ಕೊಂದ ಮೂವರು ದುಷ್ಕರ್ಮಿಗಳನ್ನು ವಾರದೊಳಗೆ ಬಂಧಿಸಬೇಕು. ಇಲ್ಲದಿದ್ದರೆ ನಾವು ಡಿಜಿಪಿ ಕಚೇರಿಗೆ ಮುತ್ತಿಗೆ ಹಾಕುತ್ತೇವೆ” ಎಂದು ದಾಸ್ ಹೇಳಿದ್ದಾರೆ.

ಬಾಲಕಿಗೆ ಬೆಂಕಿ ಹಚ್ಚಿ 15 ದಿನಗಳು ಕಳೆದಿದ್ದರೂ, ಪ್ರಕರಣದಲ್ಲಿ ಭಾಗಿಯಾಗಿರುವ ಯಾವುದೇ ಅಪರಾಧಿಗಳನ್ನು ಬಂಧಿಸಲು ಪೊಲೀಸರಿಗೆ ಸಾಧ್ಯವಾಗಿಲ್ಲ ಎಂದು ಅವರು ಹೇಳಿದ್ದಾರೆ.

ಆಗಸ್ಟ್ 2 ಅನ್ನು ‘ಕೆಟ್ಟ ಶನಿವಾರ’ ಎಂದು ದಾಸ್ ಬಣ್ಣಿಸಿದ್ದು, ಏಕೆಂದರೆ ಶನಿವಾರ (ಜುಲೈ 19) ಬಾಲಕಿಗೆ ಬೆಂಕಿ ಹಚ್ಚಲಾಗಿತ್ತು ಎಂದಿದ್ದಾರೆ.

ಈ ನಡುವೆ, ಪುರಿ ಪೊಲೀಸರು ಬಾಲಂಗದಲ್ಲಿರುವ ಮೃತ ಬಾಲಕಿಯ ಮನೆಯ ಬಳಿ ಕೆಲ ಸಿಬ್ಬಂದಿಯನ್ನು ನಿಯೋಜಿಸಿದ್ದಾರೆ ಎಂದು ವರದಿಯಾಗಿದೆ.

ಪ್ರಾಧ್ಯಾಪಕನ ಲೈಂಗಿಕ ಕಿರುಕುಳ ತಡೆಯಲಾರದೆ ಬಾಲಸೋರ್‌ನಲ್ಲಿ 20 ವರ್ಷದ ಕಾಲೇಜು ವಿದ್ಯಾರ್ಥಿನಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡ ಬೆನ್ನಲ್ಲೇ ಬಾಲಕಿಗೆ ಬೆಂಕಿ ಹಚ್ಚಿ ಕೊಂದಿರುವ ಈ ಘಟನೆ ನಡೆದಿದೆ. ಇದು ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.

ಅಸ್ಸಾಂನಲ್ಲಿ ಬಂಗಾಳಿ ಮಾತನಾಡುವ ಮುಸ್ಲಿಮರ ವಿರುದ್ಧ ದ್ವೇಷ ಮತ್ತು ಹಿಂಸಾಚಾರ ಹೆಚ್ಚಳ: ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...

ಗೋಮಾಂಸ ಸೇವನೆ ಶಂಕೆಯಲ್ಲಿ ಮಾನಸಿಕ ಅಸ್ವಸ್ಥ ವ್ಯಕ್ತಿಯ ಮೇಲೆ ಕ್ರೂರ ಹಲ್ಲೆ : ಮೂವರು ದುಷ್ಕರ್ಮಿಗಳ ಬಂಧನ

ಸಾರ್ವಜನಿಕವಾಗಿ ಹಸುವನ್ನು ಕೊಂದು, ಅದರ ಮಾಂಸವನ್ನು ತಿಂದಿದ್ದಾರೆ ಎಂದು ಆರೋಪಿಸಿ ಮಾನಸಿಕ ಅಸ್ವಸ್ಥ ವ್ಯಕ್ತಿ ಮೇಲೆ ಸ್ವಘೋಷಿತ ಗೋರಕ್ಷಕರು ಕ್ರೂರವಾಗಿ ಹಲ್ಲೆ ನಡೆಸಿದ ಘಟನೆ ರಾಜಸ್ಥಾನದ ಝಾಲಾವರ್ ಜಿಲ್ಲೆಯ ಅಕ್ಲೇರಾ ತಾಲೂಕಿನ ಕಿಶನ್‌ಪುರ...

‘ನಿಮ್ಮನ್ನು ನಂಬಿ ಬಂದ ನಕ್ಸಲ್ ಕಾರ್ಯಕರ್ತರಿಗೆ ಕೊಟ್ಟ ಮಾತು ಉಳಿಸಿಕೊಳ್ಳಿ’: ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ ಶಾಂತಿಗಾಗಿ ನಾಗರೀಕ ವೇದಿಕೆ

ಬೆಂಗಳೂರು: ‘ಮುಖ್ಯವಾಹಿನಿಗೆ ಬಂದ ಏಳೂ ಜನ ನಕ್ಸಲೀಯರು ಜೈಲಿನಲ್ಲೇ ಇದ್ದಾರೆ. ಬಹಳ ಸೊರಗಿದ್ದಾರೆ. ತೀವ್ರ ದೈಹಿಕ ಹಾಗೂ ಮಾನಸಿಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅವರನ್ನು ಹೋಗಿ ಕಾಣುವುದೇ ನಮ್ಮ ಪಾಲಿಗೆ ದೊಡ್ಡ ಹಿಂಸೆಯಾಗಿದೆ ಎಂದು...

ಕೋಗಿಲು ಮನೆಗಳ ನೆಲಸಮ : ಪ್ರತಿಭಟಿಸಿದ ಹೋರಾಟಗಾರರ ಮೇಲೆ ಎಫ್‌ಐಆರ್

ಕೋಗಿಲು ಬಡಾವಣೆಯಲ್ಲಿ ಬಡವರ ಮನೆಗಳ ನೆಲಸಮ ವೇಳೆ ಬಿಗುವಿನ ವಾತಾವರಣ ಸೃಷ್ಟಿಸಿದ್ದಾರೆ ಎಂಬ ಆರೋಪದ ಮೇಲೆ ಹೋರಾಟಗಾರರ ವಿರುದ್ದ ಯಲಹಂಕ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಜನಪರ ವೇದಿಕೆಯ ಮುಖಂಡರಾದ ಗೌರಮ್ಮ ಮತ್ತು ಮನೋಹರ್,...

17 ವರ್ಷದ ಮಹಿಳಾ ಅಥ್ಲೀಟ್ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಮಾನತು

ಫರಿದಾಬಾದ್‌ನ ಹೋಟೆಲ್‌ನಲ್ಲಿ 17 ವರ್ಷದ ರಾಷ್ಟ್ರಮಟ್ಟದ ಮಹಿಳಾ ಶೂಟರ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಹರಿಯಾಣ ಪೊಲೀಸರು ಪ್ರಕರಣ ದಾಖಲಿಸಿದ ನಂತರ ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಂಕುಶ್ ಭಾರದ್ವಾಜ್ ಅವರನ್ನು...

ಸುಪ್ರೀಂ ಕೋರ್ಟ್‌ನಿಂದ ಜಾಮೀನು : ಗುಲ್ಫಿಶಾ ಫಾತಿಮಾ ಸೇರಿದಂತೆ ನಾಲ್ವರು ಜೈಲಿನಿಂದ ಬಿಡುಗಡೆ

ಈಶಾನ್ಯ ದೆಹಲಿಯ 2020ರ ಗಲಭೆ ಪಿತೂರಿ ಆರೋಪದಲ್ಲಿ ಬಂಧಿತರಾಗಿದ್ದ ನಾಲ್ವರು ವಿದ್ಯಾರ್ಥಿ ಹೋರಾಟಗಾರರು ಬುಧವಾರ (ಜ.7) ಜೈಲಿನಿಂದ ಹೊರ ಬಂದಿದ್ದಾರೆ. ಗುಲ್ಫಿಶಾ ಫಾತಿಮಾ, ಮೀರಾನ್ ಹೈದರ್, ಶಿಫಾ ಉರ್ ರೆಹಮಾನ್ ಮತ್ತು ಮೊಹಮ್ಮದ್ ಸಲೀಮ್...

ಖ್ಯಾತ ಪರಿಸರ ವಿಜ್ಞಾನಿ ಮಾಧವ ಗಾಡ್ಗೀಳ್ ನಿಧನ

ಖ್ಯಾತ ಪರಿಸರ ವಿಜ್ಞಾನಿ ಮಾಧವ ಗಾಡ್ಗೀಳ್ (82 ವರ್ಷ) ಅವರು ಬುಧವಾರ (ಜನವರಿ 7, 2026) ತಡರಾತ್ರಿ ಪುಣೆಯಲ್ಲಿರುವ ತಮ್ಮ ಮನೆಯಲ್ಲಿ ಅಲ್ಪಕಾಲದ ಅನಾರೋಗ್ಯದ ನಂತರ ನಿಧನರಾದರು. ಈ ಕುರಿತು ಗಾಡ್ಗೀಳ್ ಅವರ...

ಅಪರಾಧದ ಸ್ವರೂಪ ಏನೇ ಇರಲಿ, ತ್ವರಿತ ವಿಚಾರಣೆಯ ಹಕ್ಕು ಅನ್ವಯಿಸುತ್ತದೆ: ಸುಪ್ರೀಂ ಕೋರ್ಟ್

ಸಂವಿಧಾನದ 21 ನೇ ವಿಧಿಯ ಅಡಿಯಲ್ಲಿ ತ್ವರಿತ ವಿಚಾರಣೆಯ ಹಕ್ಕು ಅಪರಾಧದ ಗಂಭೀರತೆ ಅಥವಾ ಸ್ವರೂಪವನ್ನು ಲೆಕ್ಕಿಸದೆ ಅನ್ವಯಿಸುತ್ತದೆ ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಪುನರುಚ್ಚರಿಸಿದೆ. 2002 ರ ಹಣ ವರ್ಗಾವಣೆ ತಡೆ ಕಾಯ್ದೆಯ...