Homeಮುಖಪುಟದುಷ್ಕರ್ಮಿಗಳು ಅಪಹರಿಸಿ ಬೆಂಕಿ ಹಚ್ಚಿದ್ದ 15 ವರ್ಷದ ಬಾಲಕಿ ಸಾವು

ದುಷ್ಕರ್ಮಿಗಳು ಅಪಹರಿಸಿ ಬೆಂಕಿ ಹಚ್ಚಿದ್ದ 15 ವರ್ಷದ ಬಾಲಕಿ ಸಾವು

- Advertisement -
- Advertisement -

ಹದಿನೈದು ದಿನಗಳ ಹಿಂದೆ ಪುರಿ ಜಿಲ್ಲೆಯಲ್ಲಿ ಮೂವರು ಅಪರಿಚಿತ ದುಷ್ಕರ್ಮಿಗಳು ಅಪಹರಿಸಿ, ಬೆಂಕಿ ಹಚ್ಚಿದ್ದರು ಎನ್ನಲಾಗಿದ್ದ 15 ವರ್ಷದ ಬಾಲಕಿ ದೆಹಲಿಯ ಏಮ್ಸ್‌ನಲ್ಲಿ ಕೊನೆಯುಸಿರೆಳೆದಿದ್ದಾರೆ ಎಂದು ಒಡಿಶಾ ಮುಖ್ಯಮಂತ್ರಿ ಮೋಹನ್ ಚರಣ್ ಮಾಝಿ ಶನಿವಾರ (ಆ.2) ತಿಳಿಸಿದ್ದಾರೆ.

ಜುಲೈ 19ರಂದು ಬೆಳಿಗ್ಗೆ ಪುರಿ ಜಿಲ್ಲೆಯ ಭಾರ್ಗವಿ ನದಿಯ ದಡದಲ್ಲಿ ಮೂವರು ಅಪರಿಚಿತ ವ್ಯಕ್ತಿಗಳು ಬಾಲಕಿಯನ್ನು ಅಪಹರಿಸಿ ಬೆಂಕಿ ಹಚ್ಚಿದ್ದರು ಎಂದು ವರದಿಯಾಗಿತ್ತು.

ಬಾಲಕಿ ತನ್ನ ಸ್ನೇಹಿತೆಯನ್ನು ಭೇಟಿಯಾಗಿ ಮನೆಗೆ ಮರಳುತ್ತಿದ್ದಾಗ, ಮಾರ್ಗ ಮಧ್ಯೆ ಆಕೆಯನ್ನು ತಡೆದಿದ್ದ ಮೂವರು ವ್ಯಕ್ತಿಗಳು ಅಪಹರಿಸಿ ಭಾರ್ಗವಿ ನದಿಯ ದಡಕ್ಕೆ ಕರೆದೊಯ್ದಿದ್ದರು. ಅಲ್ಲಿ ಸೀಮೆ ಎಣ್ಣೆಯಂತಹ ವಸ್ತುವನ್ನು ಆಕೆಯ ದೇಹದ ಮೇಲೆ ಸುರಿದು ಬೆಂಕಿ ಹಚ್ಚಿದ್ದರು ಎಂದು ಬಾಲಕಿಯ ತಾಯಿ ಬಲಂಗಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ಶೇಕಡ 70ರಷ್ಟು ಸುಟ್ಟ ಗಾಯಗಳಿಂದ ಜೀವನ್ಮರಣ ಹೋರಾಟ ನಡೆಸುತ್ತಿದ್ದ ಬಾಲಕಿಯನ್ನು ಆರಂಭದಲ್ಲಿ ಸ್ಥಳೀಯ ಪಿಪಿಲಿ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆದೊಯ್ಯಲಾಗಿತ್ತು. ನಂತರ ಆ ದಿನವೇ ಆಕೆಯನ್ನು ಭುವನೇಶ್ವರದ ಏಮ್ಸ್ ಸ್ಥಳಾಂತರಿಸಲಾಗಿತ್ತು. ಅಲ್ಲಿಂದ ಮರುದಿನ ದೆಹಲಿಯ ಏಮ್ಸ್‌ಗೆ ಏರ್‌ಲಿಫ್ಟ್ ಮಾಡಲಾಗಿತ್ತು. ಅಲ್ಲಿ ಆಕೆಗೆ ಕನಿಷ್ಠ ಎರಡು ಶಸ್ತ್ರಚಿಕಿತ್ಸೆಗಳು ಮತ್ತು ಚರ್ಮ ಕಸಿ ಮಾಡಲಾಗಿತ್ತು.

ಶುಕ್ರವಾರ ದೆಹಲಿಯ ಏಮ್ಸ್‌ನಲ್ಲಿ ಮ್ಯಾಜಿಸ್ಟ್ರೇಟ್ ಸಮ್ಮುಖದಲ್ಲಿ ಒಡಿಶಾ ಪೊಲೀಸರು ಸಂತ್ರಸ್ತೆಯ ಹೇಳಿಕೆಯನ್ನು ದಾಖಲಿಸಿಕೊಂಡಿದ್ದರು.

“ಬಲಂಗಾ ಪ್ರದೇಶದ ಬಾಲಕಿಯ ಸಾವಿನ ಸುದ್ದಿ ಕೇಳಿ ನನಗೆ ತೀವ್ರ ಆಘಾತವಾಗಿದೆ. ಸರ್ಕಾರ ಮತ್ತು ದೆಹಲಿಯ ಏಮ್ಸ್‌ನ ತಜ್ಞ ವೈದ್ಯಕೀಯ ತಂಡದ ನಿರಂತರ ಪ್ರಯತ್ನಗಳ ಹೊರತಾಗಿಯೂ, ಆಕೆಯ ಜೀವವನ್ನು ಉಳಿಸಲು ಸಾಧ್ಯವಾಗಲಿಲ್ಲ. ಬಾಲಕಿಯ ಆತ್ಮಕ್ಕೆ ಶಾಂತಿ ಸಿಗಲಿ ಮತ್ತು ಆಕೆಯ ಕುಟುಂಬಕ್ಕೆ ದುಖಃ ಭರಿಸುವ ಶಕ್ತಿಯನ್ನು ನೀಡಲಿ ಎಂದು ದೇವರ ಮುಂದೆ ಪ್ರಾರ್ಥಿಸುತ್ತೇನೆ” ಎಂದು ಸಿಎಂ ಮಾಝಿ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ಒಡಿಶಾದ ಉಪಮುಖ್ಯಮಂತ್ರಿಗಳಾದ ಕೆ.ವಿ. ಸಿಂಗ್ ದೇವ್ ಮತ್ತು ಪ್ರವತಿ ಪರಿದಾ ಕೂಡ ಬಾಲಕಿಯ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.

ಬಿಜೆಡಿ ಅಧ್ಯಕ್ಷ ಮತ್ತು ವಿರೋಧ ಪಕ್ಷದ ನಾಯಕ ನವೀನ್ ಪಟ್ನಾಯಕ್ ಅವರು ಬಾಲಕಿಯ ನಿಧನಕ್ಕೆ ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ ಮತ್ತು ಆಕೆಯ ಕುಟುಂಬಕ್ಕೆ ಸಂತಾಪ ತಿಳಿಸಿದ್ದಾರೆ.

ರಾಜ್ಯಸಭಾ ಸದಸ್ಯ ಸಸ್ಮಿತ್ ಪಾತ್ರ ನೇತೃತ್ವದ ಬಿಜೆಡಿ ಸಂಸದರ ನಿಯೋಗವು ದೆಹಲಿಯ ಏಮ್ಸ್‌ಗೆ ಭೇಟಿ ನೀಡಿದೆ ಎಂದು ವರದಿಯಾಗಿದೆ.

ಒಡಿಶಾ ಪೊಲೀಸರು ಕೂಡ ಬಾಲಕಿಯ ಸಾವಿನ ಬಗ್ಗೆ ದುಃಖ ವ್ಯಕ್ತಪಡಿಸಿದ್ದು, ಆಕೆ ಸುಟ್ಟು ಕರಕಲಾದ ಘಟನೆಯ ತನಿಖೆ ಕೊನೆಯ ಹಂತಕ್ಕೆ ತಲುಪಿದೆ ಎಂದು ತಿಳಿಸಿದ್ದಾರೆ. ಈ ಪ್ರಕರಣದಲ್ಲಿ ಬೇರೆ ಯಾರೂ ಭಾಗಿಯಾಗಿಲ್ಲ ಎಂದು ಪೊಲೀಸರು ಹೇಳಿಕೊಂಡಿದ್ದು, ಈ ವಿಷಯದ ಬಗ್ಗೆ ಯಾವುದೇ ಪ್ರಚೋದನಕಾರಿ ಹೇಳಿಕೆ ನೀಡದಂತೆ ಮನವಿ ಮಾಡಿದ್ದಾರೆ.

ಒಡಿಶಾ ಪ್ರದೇಶ ಕಾಂಗ್ರೆಸ್ ಸಮಿತಿ (ಒಪಿಸಿಸಿ) ಅಧ್ಯಕ್ಷ ಭಕ್ತ ಚರಣ್ ದಾಸ್ ಕೂಡ ಬಾಲಕಿಯ ಕುಟುಂಬಕ್ಕೆ ಸಂತಾಪ ಸೂಚಿಸಿದ್ದಾರೆ. ಬಾಲಕಿಗೆ ಬೆಂಕಿ ಹಚ್ಚಿ ಕೊಂದ ಮೂವರು ದುಷ್ಕರ್ಮಿಗಳನ್ನು ವಾರದೊಳಗೆ ಬಂಧಿಸಬೇಕು. ಇಲ್ಲದಿದ್ದರೆ ನಾವು ಡಿಜಿಪಿ ಕಚೇರಿಗೆ ಮುತ್ತಿಗೆ ಹಾಕುತ್ತೇವೆ” ಎಂದು ದಾಸ್ ಹೇಳಿದ್ದಾರೆ.

ಬಾಲಕಿಗೆ ಬೆಂಕಿ ಹಚ್ಚಿ 15 ದಿನಗಳು ಕಳೆದಿದ್ದರೂ, ಪ್ರಕರಣದಲ್ಲಿ ಭಾಗಿಯಾಗಿರುವ ಯಾವುದೇ ಅಪರಾಧಿಗಳನ್ನು ಬಂಧಿಸಲು ಪೊಲೀಸರಿಗೆ ಸಾಧ್ಯವಾಗಿಲ್ಲ ಎಂದು ಅವರು ಹೇಳಿದ್ದಾರೆ.

ಆಗಸ್ಟ್ 2 ಅನ್ನು ‘ಕೆಟ್ಟ ಶನಿವಾರ’ ಎಂದು ದಾಸ್ ಬಣ್ಣಿಸಿದ್ದು, ಏಕೆಂದರೆ ಶನಿವಾರ (ಜುಲೈ 19) ಬಾಲಕಿಗೆ ಬೆಂಕಿ ಹಚ್ಚಲಾಗಿತ್ತು ಎಂದಿದ್ದಾರೆ.

ಈ ನಡುವೆ, ಪುರಿ ಪೊಲೀಸರು ಬಾಲಂಗದಲ್ಲಿರುವ ಮೃತ ಬಾಲಕಿಯ ಮನೆಯ ಬಳಿ ಕೆಲ ಸಿಬ್ಬಂದಿಯನ್ನು ನಿಯೋಜಿಸಿದ್ದಾರೆ ಎಂದು ವರದಿಯಾಗಿದೆ.

ಪ್ರಾಧ್ಯಾಪಕನ ಲೈಂಗಿಕ ಕಿರುಕುಳ ತಡೆಯಲಾರದೆ ಬಾಲಸೋರ್‌ನಲ್ಲಿ 20 ವರ್ಷದ ಕಾಲೇಜು ವಿದ್ಯಾರ್ಥಿನಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡ ಬೆನ್ನಲ್ಲೇ ಬಾಲಕಿಗೆ ಬೆಂಕಿ ಹಚ್ಚಿ ಕೊಂದಿರುವ ಈ ಘಟನೆ ನಡೆದಿದೆ. ಇದು ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.

ಅಸ್ಸಾಂನಲ್ಲಿ ಬಂಗಾಳಿ ಮಾತನಾಡುವ ಮುಸ್ಲಿಮರ ವಿರುದ್ಧ ದ್ವೇಷ ಮತ್ತು ಹಿಂಸಾಚಾರ ಹೆಚ್ಚಳ: ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...